Karnataka: ಲೋಕಾಗೆ ಸಕ್ಷಮ ಪ್ರಾಧಿಕಾರದ ಅನುಮತಿ ನೀಡಲು ಸೂಚನೆ
Team Udayavani, Sep 3, 2023, 8:47 PM IST
ಬೆಂಗಳೂರು: ಸರ್ಕಾರಿ ನೌಕರರ ವಿರುದ್ಧ ಶಿಸ್ತುಕ್ರಮ ಜರುಗಿಸುವಲ್ಲಿ ಆಗುವ ವಿಳಂಬ ತಡೆಗಟ್ಟುವ ನಿಟ್ಟಿನಲ್ಲಿ ಲೋಕಾಯುಕ್ತ ಸಂಸ್ಥೆಗೆ ವಿಚಾರಣೆ ವಹಿಸುವ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರದ ಹಂತದಲ್ಲಿ ಇಲಾಖಾ ವಿಚಾರಣೆ ನಡೆಸಿರುವ ಬಗ್ಗೆ ಪರಿಶೀಲಿಸುವುದು ಸೇರಿ ಕೆಲವೊಂದು ಕ್ರಮ ಅನುಸರಿಸುವಂತೆ ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸುತ್ತೋಲೆ ಹೊರಡಿಸಿದೆ.
ಲೋಕಾಯುಕ್ತ ಸಂಸ್ಥೆಯಿಂದ ಸರ್ಕಾರಿ ನೌಕರರ ವಿರುದ್ಧ ಭ್ರಷ್ಟಾಚಾರ ಹಾಗೂ ಇತರೆ ಆರೋಪಗಳ ಕುರಿತಂತೆ ವಿಚಾರಣೆ ನಡೆಸಲು ಲೋಕಾಯುಕ್ತ ಸಂಸ್ಥೆಗೆ ವಹಿಸುವ ಸಂದರ್ಭದಲ್ಲಿ ಅದೇ ಆರೋಪಗಳಿಗೆ ಸಂಬಂಧಿಸಿದಂತೆ ಈಗಾಗಲೇ ಇಲಾಖಾ ವಿಚಾರಣೆ ನಡೆಯುತ್ತಿದ್ದರೆ ಅಥವಾ ಮುಕ್ತಾಯಗೊಂಡಿದ್ದರೆ ಅಂತಹ ಪ್ರಕರಣಗಳನ್ನು ಪರಿಶೀಲನೆ ನಡೆಸದೆ ಯಾಂತ್ರಿಕವಾಗಿ ಲೋಕಾಯುಕ್ತ ಸಂಸ್ಥೆಗೆ ವಹಿಸುತ್ತಿರುವುದು ಕಂಡು ಬಂದಿರುವುದಾಗಿ ಲೋಕಾಯುಕ್ತ ಸಂಸ್ಥೆಯು ಸ್ಪಷ್ಟಪಡಿಸಿದೆ. ಹೀಗಾಗಿ ಕೆಲವೊಂದು ಕ್ರಮ ಅನುಸರಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಅನುಸರಿಸಬೇಕಾದ ಕ್ರಮಗಳೇನು ?
ಇಲಾಖಾ ವಿಚಾರಣೆಯನ್ನು ಕರ್ನಾಟಕ ಲೋಕಾಯುಕ್ತ ಸಂಸ್ಥೆಗೆ ವಹಿಸುವ ಪೂರ್ವದಲ್ಲಿ ನೌಕರರ ವಿರುದ್ಧ ಲೋಕಾಯುಕ್ತದ 12(3)ರ ತನಿಖಾ ವರದಿಯಲ್ಲಿರುವ ಆಪಾದನೆಗಳಿಗೆ ಸಂಬಂಧಿಸಿದಂತೆ ಈಗಾಗಲೇ ಸಕ್ಷಮ ಪ್ರಾಧಿಕಾರದ ಹಂತದಲ್ಲಿಯೇ ಇಲಾಖಾ ವಿಚಾರಣೆ ನಡೆದಿದೆಯೇ, ಇಲ್ಲವೆ ಎಂಬುದನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ಸಕ್ಷಮ ಪ್ರಾಧಿಕಾರದ ಹಂತದಲ್ಲಿಯೇ ಇಲಾಖಾ ವಿಚಾರಣೆ ನಡೆದಿದ್ದರೆ ಅದರ ಸಂಬಂಧ ಹೊರಡಿಸಿರುವ ಅಂತಿಮ ಆದೇಶದ ಪ್ರತಿಯನ್ನು ಲಗತ್ತಿಸಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಗೆ ಮಾಹಿತಿ ಒದಗಿಸಬೇಕು. ಸಕ್ಷಮ ಪ್ರಾಧಿಕಾರದ ಹಂತದಲ್ಲಿ ಇಲಾಖಾ ವಿಚಾರಣೆ ಆರಂಭಗೊಂಡು ಇತ್ಯರ್ಥವಾಗದೇ ಇದ್ದ ಸಂದರ್ಭದಲ್ಲಿ ಇಲಾಖಾ ವಿಚಾರಣೆಯ ಪ್ರಸ್ತುತ ಹಂತದ ಮಾಹಿತಿ ತಿಳಿಸಬೇಕು. ಒಂದು ವೇಳೆ ಸಕ್ಷಮ ಪ್ರಾಧಿಕಾರದ ಹಂತದಲ್ಲಿಯೇ ಇಲಾಖೆ ವಿಚಾರಣೆ ನಡೆಯುತ್ತಿದ್ದಲ್ಲಿ ಹಾಗೂ ಸರ್ಕಾರವು ಈ ವಿಚಾರಣೆ ಲೋಕಾಯುಕ್ತ ಸಂಸ್ಥೆಗೆ ವಹಿಸಬೇಕೆಂದು ನಿರ್ಧರಿಸಿದಲ್ಲಿ ಇಲಾಖಾ ವಿಚಾರಣೆ ಮುಕ್ತಾಯಗೊಳಿಸಿ ಆದೇಶಿಸುವುದು. ಆ ಬಳಿಕವಷ್ಟೇ ವಿಚಾರಣೆ ಲೋಕಾಯುಕ್ತ ಸಂಸ್ಥೆಗೆ ವಹಿಸಿ ಆದೇಶ ಹೊರಡಿಸಬೇಕು. ಈ ಅಂಶಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಖಚಿತಪಡಿಸಿಕೊಂಡ ನಂತರವಷ್ಟೇ ಪ್ರಕರಣವನ್ನು ಕರ್ನಾಟಕ ಲೋಕಾಯುಕ್ತ ಸಂಸ್ಥೆಗೆ ವಹಿಸಲು ಕ್ರಮ ವಹಿಸುವಂತೆ ೂಚಿಸಲಾಗಿದೆ.
ಇಲಾಖಾ ವಿಚಾರಣೆ ವಿಳಂಬ:
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಇಲಾಖಾ ವಿಚಾರಣೆ ಪ್ರಾರಂಭಿಸಿ ನಿಗಧಿತ ಅವಧಿಯಲ್ಲಿ ಮುಕ್ತಾಯಗೊಳಿಸದಿರುವುದರಿಂದ ನೌಕರರಿಗೆ ಸಿಗಬೇಕಾದ ಮುಂಬಡ್ತಿ, ಕಾಲಮಿತಿ ವೇತನ ಬಡ್ತಿ, ವೇತನ ಬಾಕಿ ಮುಂತಾದ ಸೇವಾ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಇಲಾಖಾ ವಿಚಾರಣೆಗಳನ್ನು ಪೂರ್ಣಗೊಳಿಸಲು 9 ತಿಂಗಳುಗಳ ಕಾಲಮಿತಿ ನಿಗಧಿಪಡಿಸಿರುವುದರಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿಯೂ ಸಹ ಎಲ್ಲ ಇಲಾಖಾ ವಿಚಾರಣೆಗಳನ್ನು ನಿಗಧಿತ ಸಮಯದಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದವರು ಸರ್ಕಾರದ ಗಮನಕ್ಕೆ ತಂದಿದ್ದಾರೆ. ತನಿಖಾ ವರದಿ ಸಲ್ಲಿಸಿದ ನಂತರ ಸರ್ಕಾರವು ತನಿಖಾ ವರದಿಯನ್ನು ಪರಿಶೀಲಿಸಿ ಆರೋಪದ ಗಂಭೀರತೆ ಪರಿಗಣಿಸಿ ಲಘು ದಂಡನೆ ವಿಧಿಸಬಹುದಾದ ಪ್ರಕರಣವಾಗಿದ್ದಲ್ಲಿ ಇಲಾಖಾ ವಿಚಾರಣೆ ಮಾಡಲು ಲೋಕಾಯುಕ್ತ ಅಥವಾ ಉಪ ಲೋಕಾಯುಕ್ತರಿಗೆ ವಹಿಸುವಂತೆ ಸಕ್ಷಮ ಪ್ರಾಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ
Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ
Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!
Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ