ಬೆಳಗಾವಿಯಲ್ಲಿ ಅ. 2ರಂದು ಶೆಫರ್ಡ್ಸ್ ಇಂಡಿಯಾ ಇಂಟರ್ನ್ಯಾಶನಲ್ 9ನೇ ಅಧಿವೇಶನ: ಎಚ್. ವಿಶ್ವನಾಥ


Team Udayavani, Sep 4, 2023, 3:43 PM IST

ಬೆಳಗಾವಿಯಲ್ಲಿ ಅ. 2ರಂದು ಶೆಫರ್ಡ್ಸ್ ಇಂಡಿಯಾ ಇಂಟರ್ನ್ಯಾಶನಲ್ 9ನೇ ಅಧಿವೇಶನ: ಎಚ್. ವಿಶ್ವನಾಥ

ಗದಗ: ಕುಂದಾ ನಗರಿ ಬೆಳಗಾವಿಯಲ್ಲಿ ಅ. 2 ಮತ್ತು 3ರಂದು ಎರಡು ದಿನಗಳ ಕಾಲ ಶೆಫರ್ಡ್ಸ್ ಇಂಡಿಯಾ ಇಂಟರ್ ನ್ಯಾಶನಲ್ 9ನೇ ಅಧಿವೇಶನ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುರುಬ ಸಮುದಾಯವು ದೇಶದಲ್ಲಿ 12 ಕೋಟಿಗೂ ಅಧಿಕ ಸಂಖ್ಯೆಯಲ್ಲಿ ದ್ದು, ವಿವಿಧ ರಾಜ್ಯಗಳಲ್ಲಿ ವಿವಿಧ ಹೆಸರುಗಳಿಂದ ಕರೆಯಲ್ಪಡುತ್ತಿದ್ದಾರೆ. ಒಂದು ಸಾಮಾನ್ಯ ಹೆಸರಿನಲ್ಲಿ ಕರೆಯಬೇಕು ಎಂಬ ಹಿನ್ನೆಲೆಯಲ್ಲಿ ಶೆಫರ್ಡ್ಸ್ ಇಂಡಿಯಾ ಇಂಟರ್ ನ್ಯಾಶನಲ್ ಸಂಘಟನೆಯನ್ನು ಸ್ಥಾಪನೆ ಮಾಡಲಾಗಿದೆ ಎಂದರು.

ಸಿಎಂ ಸಿದ್ದರಾಮಯ್ಯ, ಹರಿಯಾಣದ ರಾಜ್ಯಪಾಲ ಭಂಡಾರು ದತ್ತಾತ್ರೇಯ, ಯುಪಿ ಸಚಿವ ಆದಿತ್ಯ ಪಾಲ್ ಸೇರಿ ಸಮಾಜದ ಕೇಂದ್ರ ಸಚಿವರು ಹಾಗೂ ದೇಶೀಯ ನಾಯಕರು ಪಾಲ್ಗೊಳ್ಳಲಿದ್ದಾರೆ. ಅಧಿವೇಶನದ ನಂತರ ಅ. 3ರಂದು ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ಮಹಾತ್ಮ ಗಾಂಧಿ ಅವರ ಪ್ರಮುಖ ಆಹಾರವಾಗಿ ಆಡಿನ(ಕುರಿ) ಹಾಲು ಸೇವಿಸುತ್ತಿದ್ದ ಹಿನ್ನೆಲೆಯಲ್ಲಿಅವರ ಜನ್ಮದಿನವಾದ ಅ. 2ರಂದು‌ ಶೆಫರ್ಡ್ಸ್ ಇಂಡಿಯಾ ಇಂಟರ್ ನ್ಯಾಶನಲ್ 9ನೇ ಅಧಿವೇಶನ ಹಮ್ಮಿಕೊಳ್ಳಲಾಗಿದೆ ಎಂದರು.

ಪ್ರತಿ ಸಮಾಜಕ್ಕೂ ರಾಜಕಾರಣ ಬೇಕು. ಯಾವ ಕಾರಣಕ್ಕೂ ಯಾರನ್ನೂ ಅಲ್ಲಗಳೆಯಬಾರದು. ಕುರುಬ ಸಮುದಾಯವು ಆರ್ಥಿಕ ಹಾಗೂ ರಾಜಕೀಯವಾಗಿ ಮುಂದೆ ಬರಬೇಕು ಎನ್ನುವ ನಿಟ್ಡಿನಲ್ಲಿ, ದೇಶಾದ್ಯಂತ ಸಂಘಟನೆಯಾಗುತ್ತಿದೆ ಎಂದು ವಿವರಿಸಿದರು.

ಮಾಜಿ ಸಚಿವ ಎಚ್.ಎಂ. ರೇವಣ್ಣ ಮಾತನಾಡಿ, ಶೆಫರ್ಡ್ಸ್ ಇಂಡಿಯಾ ಇಂಟರನ್ಯಾಶನಲ್ ಸ್ಥಾಪಿತ ಅಧ್ಯಕ್ಷ ಎಚ್. ವಿಶ್ವನಾಥ ಅವರಾಗಿದ್ದಾರೆ. ಇಡೀ ಭಾರತದಲ್ಲಿ ಒಂದೊಂದು ರಾಜ್ಯದಲ್ಲಿ ಒಂದೊಂದು ಹೆಸರಿನಲ್ಲಿ ಕರೆಯಲ್ಪಡುವ ಕುರುಬ ಸಮಾಜದ ಸಮಾವೇಶದಲ್ಲಿ ರಾಜ್ಯದ ಅನೇಕ ಕಡೆಗಳಲ್ಲಿ ಸಮಾವೇಶ ಹಮ್ಮಿಕೊಂಡು ಒಗ್ಗಟ್ಟು ಪ್ರದರ್ಶನ ಮಾಡಲಾಗುತ್ತಿದೆ. ಜನತೆ ಒಗ್ಗೂಡಬೇಕು. ಸಮಾಜ ಎಲ್ಲ ಪ್ರಕಾರಗಳಲ್ಲಿ ಮುಂದೆ ಬರಬೇಕು ಎನ್ನುವ ನಿಟ್ಟಿನಲ್ಲಿ ಸಂಘಟನೆ ಮಾಡಲಾಗುತ್ತಿದೆ. ಅಧಿವೇಶನದಲ್ಲಿ ದೇಶದೆಕ್ಕೆಡೆ ಇರುವ ಸಮುದಾಯದ ಸಚಿವರು, ಸಂಸದರು, ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ನಾಗರಾಜ್, ವೈ.ಎನ್. ಗೌಡರ, ಫಕ್ಕೀರಪ್ಪ ಹೆಬಸೂರ, ವಾಸಣ್ಣ ಕುರಡಗಿ, ಬಾಬು ಡಿಗ್ಗಿಮನಿ, ಮಂಜುನಾಥ ಮುನವಳ್ಳಿ, ಶೇಖಣ್ಣ ಕಾಳೆ ಇದ್ದರು.

ಸಂಸದ ಸ್ಥಾನಕ್ಕೆ ಸ್ಪರ್ಧಿಸುವ ಬಯಕೆಯಿದೆ: ನಾನು ಹಿಂದೆ ಕೂಡ ಸಂಸದನಾಗಿದ್ದೆ, ಮುಂದೆ ಕೂಡ ಸಂಸದನಾಗುವ ಬಯಕೆ ಹೊಂದಿದ್ದೇನೆ. ಅವಕಾಶ ಸಿಕ್ಕರೆ ಮೈಸೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ ಹೇಳಿದರು.

ಮೈಸೂರು ಲೋಕಸಭೆ ಕ್ಷೇತ್ರಕ್ಕೆ ಯತೀಂದ್ರ ಸಿದ್ದರಾಮಯ್ಯ ಅವರ ಹೆಸರು ಕೂಡ ಕೇಳಿ ಬರುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಯತೀಂದ್ರ ಅವರು ಯುವಕರಾಗಿದ್ದು, ಅವರು ಸ್ಪರ್ಧಿಸುವುದಕ್ಕೆ ನನ್ನ ಅಭ್ಯಂತರವಿಲ್ಲ ಎಂಬುದಾಗಿಯೂ ತಿಳಿಸಿದರು.

ಟಾಪ್ ನ್ಯೂಸ್

Jayant Sinha: ಬಿಜೆಪಿ ನೀಡಿದ ಶೋಕಾಸ್ ನೋಟಿಸ್ ಗೆ ಸಂಸದ ಜಯಂತ್‌ ಸಿನ್ಹಾ ಹೇಳಿದ್ದೇನು?

Jayant Sinha: ಬಿಜೆಪಿ ನೀಡಿದ ಶೋಕಾಸ್ ನೋಟಿಸ್ ಗೆ ಸಂಸದ ಜಯಂತ್‌ ಸಿನ್ಹಾ ಹೇಳಿದ್ದೇನು?

ATM: 5000 ಬದಲು 4040… ಇಂಡಿಯಾ ಎಟಿಎಂ ನಲ್ಲಿ ಹಣ ಡ್ರಾ ಮಾಡಿದ ಶಿಕ್ಷಕಿಗೆ ಶಾಕ್ !

ಡ್ರಾ ಮಾಡಿದ್ದು 5000 ಬಂದಿದ್ದು 4040; ಇಂಡಿಯಾ ATM ನಲ್ಲಿ ಹಣ ಡ್ರಾ ಮಾಡಿದ ಶಿಕ್ಷಕಿಗೆ ಶಾಕ್

Pawan Singh: ಮಾಜಿ ಸಚಿವ ಉಪೇಂದ್ರ ವಿರುದ್ಧ ಸ್ಪರ್ಧೆ: ಬಿಜೆಪಿ ಮುಖಂಡ ಪವನ್‌ ವಜಾ

Pawan Singh: ಮಾಜಿ ಸಚಿವ ಉಪೇಂದ್ರ ವಿರುದ್ಧ ಸ್ಪರ್ಧೆ: ಬಿಜೆಪಿ ಮುಖಂಡ ಪವನ್‌ ವಜಾ

Lok Sabha Polls: ಮೇ 25ರಂದು ಹಂತ 6ರ ಮತದಾನ: ಇಂದು ಬಹಿರಂಗ ಪ್ರಚಾರ ಅಂತ್ಯ

Lok Sabha Polls: ಮೇ 25ರಂದು ಹಂತ 6ರ ಮತದಾನ: ಇಂದು ಬಹಿರಂಗ ಪ್ರಚಾರ ಅಂತ್ಯ

SRH ಸ್ಫೋಟಕ ಆಟ ಮುಂದುವರಿಸಲಿದೆ: ಸಿಮೋನ್‌ ಹೆಲ್ಮೋಟ್‌

SRH ಸ್ಫೋಟಕ ಆಟ ಮುಂದುವರಿಸಲಿದೆ: ಸಿಮೋನ್‌ ಹೆಲ್ಮೋಟ್‌

Archery World Cup: ಆರ್ಚರಿ ವಿಶ್ವಕಪ್‌ ಸ್ಟೇಜ್‌-2: ವನಿತಾ ಕಾಂಪೌಂಡ್‌ ತಂಡ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ಸ್ಟೇಜ್‌-2: ವನಿತಾ ಕಾಂಪೌಂಡ್‌ ತಂಡ ಫೈನಲ್‌ಗೆ

Malaysia Masters 2024: ದ್ವಿತೀಯ ಸುತ್ತು ತಲುಪಿದ ಪಿ.ವಿ.ಸಿಂಧು

Malaysia Masters 2024: ದ್ವಿತೀಯ ಸುತ್ತು ತಲುಪಿದ ಪಿ.ವಿ.ಸಿಂಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RTO ಅಧಿಕಾರಿಗಳಿಂದ ಹೆದ್ದಾರಿಯಲ್ಲೇ ಬಸ್ ಸೀಜ್… ಗದಗದಲ್ಲಿ ಆಂಧ್ರ ಪ್ರವಾಸಿಗರ ಪರದಾಟ!

RTO ಅಧಿಕಾರಿಗಳಿಂದ ಬಸ್ ಸೀಜ್… ಗದಗದಲ್ಲಿ ಆಂಧ್ರ ಪ್ರವಾಸಿಗರ ಪರದಾಟ!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Jayant Sinha: ಬಿಜೆಪಿ ನೀಡಿದ ಶೋಕಾಸ್ ನೋಟಿಸ್ ಗೆ ಸಂಸದ ಜಯಂತ್‌ ಸಿನ್ಹಾ ಹೇಳಿದ್ದೇನು?

Jayant Sinha: ಬಿಜೆಪಿ ನೀಡಿದ ಶೋಕಾಸ್ ನೋಟಿಸ್ ಗೆ ಸಂಸದ ಜಯಂತ್‌ ಸಿನ್ಹಾ ಹೇಳಿದ್ದೇನು?

4-bidar

Bidar: ಲಿಂಗಾಯತ ಮಹಾಮಠದ ಪೀಠಾಧ್ಯಕ್ಷರಾದ‌ ಅಕ್ಕ ಅನ್ನಪೂರ್ಣ ತಾಯಿ ನಿಧನ

ATM: 5000 ಬದಲು 4040… ಇಂಡಿಯಾ ಎಟಿಎಂ ನಲ್ಲಿ ಹಣ ಡ್ರಾ ಮಾಡಿದ ಶಿಕ್ಷಕಿಗೆ ಶಾಕ್ !

ಡ್ರಾ ಮಾಡಿದ್ದು 5000 ಬಂದಿದ್ದು 4040; ಇಂಡಿಯಾ ATM ನಲ್ಲಿ ಹಣ ಡ್ರಾ ಮಾಡಿದ ಶಿಕ್ಷಕಿಗೆ ಶಾಕ್

Pawan Singh: ಮಾಜಿ ಸಚಿವ ಉಪೇಂದ್ರ ವಿರುದ್ಧ ಸ್ಪರ್ಧೆ: ಬಿಜೆಪಿ ಮುಖಂಡ ಪವನ್‌ ವಜಾ

Pawan Singh: ಮಾಜಿ ಸಚಿವ ಉಪೇಂದ್ರ ವಿರುದ್ಧ ಸ್ಪರ್ಧೆ: ಬಿಜೆಪಿ ಮುಖಂಡ ಪವನ್‌ ವಜಾ

Lok Sabha Polls: ಮೇ 25ರಂದು ಹಂತ 6ರ ಮತದಾನ: ಇಂದು ಬಹಿರಂಗ ಪ್ರಚಾರ ಅಂತ್ಯ

Lok Sabha Polls: ಮೇ 25ರಂದು ಹಂತ 6ರ ಮತದಾನ: ಇಂದು ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.