BIG NEWS; ದೇಶದ ಹೆಸರು ಬದಲಾವಣೆಗೆ ಮುಂದಾಯಿತಾ ಕೇಂದ್ರ? ವಿಶೇಷ ಅಧಿವೇಶನದ ಅಜೆಂಡಾ ಬಯಲು
Team Udayavani, Sep 5, 2023, 12:42 PM IST
ಹೊಸದಿಲ್ಲಿ: ಕೇಂದ್ರ ಸರ್ಕಾರವು ಸೆ.18ರಿಂದ ಐದು ದಿನಗಳ ವಿಶೇಷ ಸಂಸತ್ ಅಧಿವೇಶನ ಕರೆದಿದೆ. ಆದರೆ ಇದುವರೆಗೂ ಈ ಅಧಿವೇಶನದ ಉದ್ದೇಶವನ್ನು ತಿಳಿಸಲಾಗಿಲ್ಲ. ಆದರೆ ದೇಶದ ಹೆಸರನ್ನು ಬದಲಾವಣೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ.
ದೇಶದ ಹೆಸರನ್ನು ಇಂಡಿಯಾದಿಂದ ಭಾರತ ಎಂದು ಬದಲಾವಣೆ ಮಾಡಲಾಗುವುದು ಎಂದು ವರದಿಯಾಗುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ವಾರಾಂತ್ಯದಲ್ಲಿ ಜಿ20 ಶೃಂಗಸಭೆಯಲ್ಲಿ ಭಾಗವಹಿಸುವ ರಾಷ್ಟ್ರಗಳ ಮುಖ್ಯಸ್ಥರಿಗೆ ಅಧಿಕೃತ ಆಹ್ವಾನದಲ್ಲಿ “ಭಾರತದ ಅಧ್ಯಕ್ಷ” ಪದವನ್ನು ಮೊದಲ ಬಾರಿಗೆ ಸಾಂಪ್ರದಾಯಿಕ “ಇಂಡಿಯಾದ ಅಧ್ಯಕ್ಷ” ಬದಲಿಗೆ ಬಳಸಲಾಗಿದೆ.
ದೇಶವು ಮೆಗಾ ಈವೆಂಟನ್ನು ಆಯೋಜಿಸುವುದರಿಂದ ಇದು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ನಾಮಕರಣದಲ್ಲಿ ಗಮನಾರ್ಹ ಬದಲಾವಣೆ ಸಾಧ್ಯತೆಯನ್ನು ಸೂಚಿಸುತ್ತದೆ.
“ಭಾರತ್” ಎಂಬ ಪದವು ಸಂವಿಧಾನದಲ್ಲಿಯೂ ಇದೆ ಎಂದು ಅಧಿಕಾರಿಗಳು ಗಮನ ಸೆಳೆದಿದ್ದಾರೆ. “ಇಂಡಿಯಾ, ಅದು ಭಾರತ, ರಾಜ್ಯಗಳ ಒಕ್ಕೂಟವಾಗಿರುತ್ತದೆ” ಎಂದು ಅದು ಆರ್ಟಿಕಲ್ 1 ರಲ್ಲಿ ಹೇಳುತ್ತದೆ.
“ಇಂಡಿಯಾವೆಂಬ ಭಾರತದಲ್ಲಿ, ಆಡಳಿತದಲ್ಲಿ ಜನರ ಒಪ್ಪಿಗೆಯನ್ನು ತೆಗೆದುಕೊಳ್ಳುವುದು ಆರಂಭಿಕ ದಾಖಲಿತ ಇತಿಹಾಸದಿಂದಲೂ ಜೀವನದ ಭಾಗವಾಗಿದೆ” ಎಂದು ಬರೆಯಲಾಗಿದೆ.
ಇದನ್ನೂ ಓದಿ:Tirupati temple: ಮಗಳೊಂದಿಗೆ ತಿರುಪತಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ಶಾರುಖ್ ಖಾನ್
ದೊಡ್ಡ ಬದಲಾವಣೆಗೆ ಉತ್ತೇಜನ ನೀಡಿದವರಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮೊದಲಿಗರು. “ರಿಪಬ್ಲಿಕ್ ಆಫ್ ಭಾರತ್ – ನಮ್ಮ ನಾಗರೀಕತೆಯು ಅಮೃತ ಕಾಲದ ಕಡೆಗೆ ಧೈರ್ಯದಿಂದ ಮುನ್ನಡೆಯುತ್ತಿರುವುದಕ್ಕೆ ಸಂತೋಷ ಮತ್ತು ಹೆಮ್ಮೆಯಿದೆ” ಎಂದು ಅವರು ಎಕ್ಸ್ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.
ಕಾಂಗ್ರೆಸ್ ನಾಯಕ ಜೈರಾಂ ರಮೇಶ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, “ಹಾಗಾದ್ರೆ ಈ ಸುದ್ದಿ ನಿಜಕ್ಕೂ ನಿಜ. ರಾಷ್ಟ್ರಪತಿ ಭವನವು ಸೆ.9 ರಂದು ಜಿ20 ಔತಣಕೂಟಕ್ಕೆ ಸಾಮಾನ್ಯ ‘ಇಂಡಿಯಾದ ರಾಷ್ಟ್ರಪತಿ’ ಬದಲಿಗೆ ‘ಭಾರತದ ಅಧ್ಯಕ್ಷ’ ಎಂಬ ಹೆಸರಿನಲ್ಲಿ ಆಹ್ವಾನವನ್ನು ಕಳುಹಿಸಿದೆ. ಈಗ, ಸಂವಿಧಾನದ 1 ನೇ ವಿಧಿಯು ಹೀಗೆ ಓದಬಹುದು: ‘ಭಾರತ, ಅದು ಇಂಡಿಯಾಗಿತ್ತು, ರಾಜ್ಯಗಳ ಒಕ್ಕೂಟವಾಗಿರುತ್ತದೆ’ ಆದರೆ ಈಗ ಈ “ರಾಜ್ಯಗಳ ಒಕ್ಕೂಟ” ಕೂಡ ಆಕ್ರಮಣಕ್ಕೆ ಒಳಗಾಗಿದೆ” ಎಂದು ಅವರು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ
Covishield ಲಸಿಕೆಯಿಂದ ಮತ್ತೊಂದು ಸೈಡ್ಎಫೆಕ್ಟ್!
MUST WATCH
ಹೊಸ ಸೇರ್ಪಡೆ
Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ
Sandalwood: ದರ್ಶನ್ ʼಡೆವಿಲ್ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್ ಪೋಸ್ಟರ್ ಔಟ್
Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ