Chamarajanagar: 1.34 ಕೋಟಿ ಮೌಲ್ಯದ ವಸ್ತುಗಳು ವಾರಸುದಾರರಿಗೆ ವಾಪಸ್‌


Team Udayavani, Sep 6, 2023, 5:27 PM IST

Chamarajanagar: 1.34 ಕೋಟಿ ಮೌಲ್ಯದ ವಸ್ತುಗಳು ವಾರಸುದಾರರಿಗೆ ವಾಪಸ್‌

ಚಾಮರಾಜನಗರ: ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ 2023ನೇ ಸಾಲಿನಲ್ಲಿ ಇದುವರೆಗೆ ನಡೆದ ಕಳ್ಳತನ ಪ್ರಕರಣಗಳಲ್ಲಿ ವಶಪಡಿಸಿಕೊಂಡ ಚಿನ್ನ, ಬೆಳ್ಳಿಯ ಆಭರಣಗಳು, ನಗದು ಸೇರಿ 1.34 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಾರಸುದಾರರಿಗೆ ಹಿಂದಿರುಗಿಸಲಾಯಿತು.

ನಗರದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 2023ನೇ ಸಾಲಿನಲ್ಲಿ ನಡೆದ ಪ್ರಾಪರ್ಟಿ ಪೆರೇಡ್‌ ಕಾರ್ಯಕ್ರಮದಲ್ಲಿ ಎಸ್ಪಿ ಪದ್ಮಿನಿ ಸಾಹು ನೇತೃತ್ವದಲ್ಲಿ ವಿವಿಧ ಠಾಣೆಗಳ ಪೊಲೀಸರು ವಶಪಡಿಸಿಕೊಂಡ ವಸ್ತುಗಳನ್ನು ಕಳೆದುಕೊಂಡವರಿಗೆ ನೀಡಿದರು.

ತಮ್ಮ ಬೆಲೆ ಬಾಳುವ ಆಭರಣಗಳು, ವಸ್ತುಗಳನ್ನು ಕಳೆದುಕೊಂಡಿದ್ದ ವಾರಸುದಾರರು ಇದರಿಂದ ಸಂತಸ ಪಟ್ಟರು. ಕಳವು ಪ್ರಕರಣಗಳನ್ನು ಬೇಧಿಸಿ ತಮ್ಮ ಅಮೂಲ್ಯವಾದ ವಸ್ತುಗಳನ್ನು ವಾಪಸ್‌ ನೀಡಿದ ಪೊಲೀಸರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಎಸ್ಪಿ ಪದ್ಮಿನಿ ಸಾಹು ಮಾತನಾಡಿ, ಜಿಲ್ಲೆಯ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ 70 ಕಳವು ಪ್ರಕರಣಗಳ ಪೈಕಿ 44 ಪ್ರಕರಣಗಳನ್ನು ಬೇಧಿಸಲಾಗಿದ್ದು 1,34,46,261 ರೂ.ಗಳ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. 44 ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಅನುಮತಿ ಪಡೆದು ವಾರಸುದಾರರಿಗೆ ವಸ್ತುಗಳನ್ನು ವಾಪಸ್‌ ಕೊಡಲಾಗಿದೆ ಎಂದರು.

ಈ ವೇಳೆ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಉದೇಶ, ಕೊಳ್ಳೇಗಾಲ ಡಿವೈಎಸ್ಪಿ ಸೋಮೇಗೌಡ ಸೇರಿದಂತೆ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳ ಸರ್ಕಲ್‌ ಇನ್ಸ್‌ಪೆಕ್ಟರ್‌, ಸಬ್‌ ಇನ್ಸ್‌ ಪೆಕ್ಟರ್‌ ಹಾಗೂ ಸಿಬ್ಬಂದಿ ಹಾಜರಿದ್ದರು.

2 ಕೆ.ಜಿ. ಚಿನ್ನಾಭರಣ, 5 ಕೆ.ಜಿ. ಬೆಳ್ಳಿ ಆಬರಣ ಜಪ್ತಿ: 20 ಪ್ರಕರಣಗಳಲ್ಲಿ 1.05 ಕೋಟಿ ರೂ. ಮೌಲ್ಯದ 1 ಕೆ.ಜಿ 957.5 ಗ್ರಾಂ ಚಿನ್ನದ ಆಭರಣಗಳು ಹಾಗೂ 3,93,260 ರೂ. ಮೌಲ್ಯದ 5 ಕೆ.ಜಿ 618 ಗ್ರಾಂ ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಅಲ್ಲದೇ 9 ಪ್ರಕರಣಗಳಲ್ಲಿ 3.20 ಲಕ್ಷ ಮೌಲ್ಯದ 9 ಮೋಟಾರ್‌ ಸೈಕಲ್‌(2 ವೀಲರ್‌), 2 ಪ್ರಕರಣಗಳಲ್ಲಿ 7.65 ಲಕ್ಷ ಮೌಲ್ಯದ 5 ಮೋಟಾರ್‌ ವಾಹನಗಳು, 4 ಪ್ರಕರಣಗಳಲ್ಲಿ 10,20,501 ರೂ. ಮೌಲ್ಯದ ನಗದು ಹಣ ವಶಪಡಿಸಿಕೊಳ್ಳಲಾಗಿತ್ತು ಎಂದು ಎಸ್ಪಿ ತಿಳಿಸದರು.

9 ಪ್ರಕರಣಗಳಲ್ಲಿ 3.77 ಲಕ್ಷ ಮೌಲ್ಯದ ಬ್ಯಾಟರಿ, ಎಲೆಕ್ಟ್ರಿಕಲ್‌ ವಸ್ತುಗಳು, ತಾಮ್ರ, ಕಂಚಿನ ವಸ್ತುಗಳು ಸೇರಿದಂತೆ ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿತ್ತು. ಒಟ್ಟು. 1.34 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಾರಸುದಾರರಿಗೆ ವಾಪಸ್‌ ನೀಡಲಾಗಿದೆ. ಪ್ರಕರಣ ಬೇಧಿಸುವಲ್ಲಿ ಶ್ರಮವಹಿಸಿದ್ದ ಇಲಾಖೆಯ ಅಧಿಕಾರಿ ಗಳು ಹಾಗೂ ಸಿಬ್ಬಂದಿಗೆ ಧನ್ಯವಾದಗಳನ್ನು ತಿಳಿಸಿದರು.

ಟಾಪ್ ನ್ಯೂಸ್

8-uv-fusion

Smile: ನಗುವೇ  ನೆಮ್ಮದಿಗೆ ಸ್ಫೂರ್ತಿ, ಗೆಲುವಿನ ಶಕ್ತಿ

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ

7-uv-fusion

Cleanliness: ಪ್ರವಾಸಿ ತಾಣ ನಮ್ಮ ಆಸ್ತಿ: ಸ್ವಚ್ಛವಾಗಿರಿಸೋಣ

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-qeqwqew

Gundlupete: ಕೊಳೆತ ಸ್ಥಿತಿಯಲ್ಲಿ ಹುಲಿಯ ಮೃತ ದೇಹ ಪತ್ತೆ

1-wqewqe

Gundlupete; ಓವರ್ ಟೇಕ್ ಭರದಲ್ಲಿ ಅಪಘಾತ: ಬೈಕ್ ಸವಾರ ಮೃತ್ಯು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

8-uv-fusion

Smile: ನಗುವೇ  ನೆಮ್ಮದಿಗೆ ಸ್ಫೂರ್ತಿ, ಗೆಲುವಿನ ಶಕ್ತಿ

one year for siddaramaiah govt

ಗ್ಯಾರಂಟಿ ಸರಕಾರಕ್ಕೆ ವರ್ಷದ ಗೋರಂಟಿ!; ಹಲವು ಸವಾಲುಗಳ ನಡುವೆಯೂ ಭರವಸೆ ಈಡೇರಿಸಿದ ಸರಕಾರ

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ

7-uv-fusion

Cleanliness: ಪ್ರವಾಸಿ ತಾಣ ನಮ್ಮ ಆಸ್ತಿ: ಸ್ವಚ್ಛವಾಗಿರಿಸೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.