World Cup;16 ಅಂಪೈರ್ ಗಳು- 4 ರೆಫ್ರಿಗಳನ್ನು ಹೆಸರಿಸಿದ ಐಸಿಸಿ; ಭಾರತೀಯರಿಬ್ಬರಿಗೆ ಸ್ಥಾನ


Team Udayavani, Sep 8, 2023, 6:06 PM IST

ICC announced Match officials for the World Cup 2023

ಮುಂಬೈ: ಮುಂಬರುವ ಏಕದಿನ ವಿಶ್ವಕಪ್ ಮೆಗಾ ಕೂಟಕ್ಕೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಅಂಪೈರ್ ಗಳು ಮತ್ತು ರೆಫ್ರಿಗಳ ತಂಡವನ್ನು ಹೆಸರಿಸಿದೆ. ಒಟ್ಟು 20 ಮ್ಯಾಚ್ ಅಫೀಶಯಲ್ ಗಳನ್ನು ಹೆಸರಿಸಲಾಗಿದ್ದು, ಇಬ್ಬರು ಭಾರತೀಯರು ಸ್ಥಾನ ಪಡೆದಿದ್ದಾರೆ.

16 ಮಂದಿ ಅಂಪೈರ್ ಗಳು ಮತ್ತು ನಾಲ್ಕು ಮ್ಯಾಚ್ ರೆಫ್ರಿಗಳಿದ್ದಾರೆ. ಅಂಪೈರ್ ಗಳ ಪಟ್ಟಿಯಲ್ಲಿ ಭಾರತದ ನಿತಿನ್ ಮೆನನ್ ಮತ್ತು ರೆಫ್ರಿಗಳ ಪಟ್ಟಿಯಲ್ಲಿ ಕನ್ನಡಿಗ ಜಾವಗಲ್ ಶ್ರೀನಾಥ್ ಇದ್ದಾರೆ.

12 ಮಂದಿ ಅಲೈಟ್ ಪ್ಯಾನೆಲ್ ಅಂಪೈರ್ ಗಳು ವಿಶ್ವಕಪ್ ಗೆ ಕಾರ್ಯ ನಿರ್ವಹಿಸಲಿದ್ದಾರೆ. ಅವರೆಂದರೆ ಕ್ರಿಸ್ಟೋಫರ್ ಗ್ಯಾಫ್ನಿ (ನ್ಯೂಜಿಲ್ಯಾಂಡ್), ಕುಮಾರ್ ಧರ್ಮಸೇನಾ (ಶ್ರೀಲಂಕಾ), ಮರೈಸ್ ಎರಾಸ್ಮಸ್ (ದಕ್ಷಿಣ ಆಫ್ರಿಕಾ), ಮೈಕೆಲ್ ಗಾಫ್ (ಇಂಗ್ಲೆಂಡ್), ನಿತಿನ್ ಮೆನನ್ (ಭಾರತ), ಪಾಲ್ ರೀಫೆಲ್ (ಆಸ್ಟ್ರೇಲಿಯಾ), ರಿಚರ್ಡ್ ಇಲ್ಲಿಂಗ್‌ವರ್ತ್ (ಇಂಗ್ಲೆಂಡ್), ರಿಚರ್ಡ್ ಕೆಟಲ್‌ಬರೋ ( ಇಂಗ್ಲೆಂಡ್), ರಾಡ್ನಿ ಟಕರ್ (ಆಸ್ಟ್ರೇಲಿಯಾ), ಜೋಯಲ್ ವಿಲ್ಸನ್ (ವೆಸ್ಟ್ ಇಂಡೀಸ್), ಎಹ್ಸನ್ ರಜಾ (ಪಾಕಿಸ್ತಾನ), ಮತ್ತು ಆಡ್ರಿಯನ್ ಹೋಲ್ಡ್ಸ್ಟಾಕ್ (ದಕ್ಷಿಣ ಆಫ್ರಿಕಾ).

ಇದನ್ನೂ ಓದಿ:Goa ; ಚಲನಚಿತ್ರ ನಿರ್ದೇಶಕರ ಕೆಮರಾ, ಚಿನ್ನದ ಸರ ಕಳವು: ಆರೋಪಿ ಬಂಧನ

ಉಳಿದ ನಾಲ್ವರು ಐಸಿಸಿ ಎಮರ್ಜಿಂಗ್ ಅಂಪೈರ್ ಪ್ಯಾನೆಲ್‌ ಗೆ ಸೇರಿದವರು. ಅವರಲ್ಲಿ ಶರ್ಫುದ್ದೌಲಾ ಇಬ್ನೆ ಶಾಹಿದ್ (ಬಾಂಗ್ಲಾದೇಶ), ಪಾಲ್ ವಿಲ್ಸನ್ (ಆಸ್ಟ್ರೇಲಿಯಾ), ಅಲೆಕ್ಸ್ ವಾರ್ಫ್ (ಇಂಗ್ಲೆಂಡ್) ಮತ್ತು ಕ್ರಿಸ್ ಬ್ರೌನ್ (ನ್ಯೂಜಿಲ್ಯಾಂಡ್) ಸೇರಿದ್ದಾರೆ.

2019ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಕಾರ್ಯ ನಿರ್ವಹಿಸಿದ ನಾಲ್ವರಲ್ಲಿ ಮೂವರು ಈ ಬಾರಿಯೂ ಕಾರ್ಯ ನಿರ್ವಹಿಸಲಿದ್ದಾರೆ. ಅವರೆಂದರೆ ಕುಮಾರ ಧರ್ಮಸೇನಾ, ಮರೈಸ್ ಎರಾಸ್ಮಸ್ ಮತ್ತು ರಾಡ್ನಿ ಟಕರ್. ಮತ್ತೋರ್ವ ಅಂಪೈರ್ ಅಲೀಂ ದಾರ್ ಅವರು ಐಸಿಸಿ ಎಲೈಟ್ ಪ್ಯಾನೆಲ್ ನಿಂದ ಕಳೆದ ಮಾರ್ಚ್ ನಿಂದ ಹೊರ ನಡೆದಿದ್ದಾರೆ.

ನಾಲ್ವರು ರೆಫ್ರಿಗಳು

ಎಮಿರೇಟ್ಸ್ ಐಸಿಸಿ ಎಲೈಟ್ ಪ್ಯಾನೆಲ್ ಆಫ್ ಮ್ಯಾಚ್ ರೆಫರಿಗಳಾದ ಜೆಫ್ ಕ್ರೋವ್ (ನ್ಯೂಜಿಲ್ಯಾಂಡ್), ಆಂಡಿ ಪೈಕ್ರಾಫ್ಟ್ (ಜಿಂಬಾಬ್ವೆ), ರಿಚಿ ರಿಚರ್ಡ್ಸನ್ (ವೆಸ್ಟ್ ಇಂಡೀಸ್) ಮತ್ತು ಜಾವಗಲ್ ಶ್ರೀನಾಥ್ (ಭಾರತ) ಅವರು ಏಕದಿನ ವಿಶ್ವಕಪ್ ನಲ್ಲಿ ರೆಫ್ರಿಗಳಾಗಿ ಕೆಲಸ ಮಾಡಲಿದ್ದಾರೆ.

ಅಕ್ಟೋಬರ್ 5 ರಂದು ನಡೆಯಲಿರುವ ಇಂಗ್ಲೆಂಡ್ ಮತ್ತು ನ್ಯೂಜಿಲ್ಯಾಂಡ್ ನಡುವಿನ ಪಂದ್ಯಾವಳಿಯ ಆರಂಭಿಕ ಪಂದ್ಯಕ್ಕೆ ಮ್ಯಾಚ್ ಅಫೀಶಿಯಲ್ ಗಳನ್ನು ಹೆಸರಿಸಲಾಗಿದೆ. ನಿತಿನ್ ಮೆನನ್ ಮತ್ತು ಧರ್ಮಸೇನಾ ಆನ್ ಫೀಲ್ಡ್ ಅಂಪೈರ್‌ಗಳಾಗಿ ಕಾರ್ಯನಿರ್ವಹಿಸಲಿದ್ದಾರೆ. ಪಾಲ್ ವಿಲ್ಸನ್ ಟಿವಿ ಅಂಪೈರ್ ಆಗಿದ್ದರೆ, ಶರ್ಫುದ್ದೌಲಾ ನಾಲ್ಕನೇ ಅಂಪೈರ್ ಆಗಲಿದ್ದಾರೆ. ಪೈಕ್ರಾಫ್ಟ್ ಮ್ಯಾಚ್ ರೆಫರಿಯಾಗಿರುತ್ತಾರೆ.

ಟಾಪ್ ನ್ಯೂಸ್

Untitled-1

Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Untitled-1

ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB (2)

RCB ಭವಿಷ್ಯ ಮಳೆಯ ಕೈಯಲ್ಲಿ

1-asdad

Cricket; ಭಾರತ ತಂಡಕ್ಕೆ ಗೌತಮ್‌ ಗಂಭೀರ್‌ ಕೋಚ್‌?

1-wewqwqe

Usain Bolt; ನನ್ನ ದಾಖಲೆಗಳಿಗೆ ಸದ್ಯ ಯಾವುದೇ ಗಂಡಾಂತರವಿಲ್ಲ

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

1-reee

Chess: ಸೋತ ಕಾರಣಕ್ಕೆ ಕಂಪ್ಯೂಟರ್‌ ಸ್ಕ್ರೀನ್‌ ಒಡೆದ ಕಾರ್ಲ್ಸನ್‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Untitled-1

Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Untitled-1

ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.