G-20 ಶೃಂಗಕ್ಕೆ ಹೊಸ ಭಾಷ್ಯ ಬರೆಯಲು ಭಾರತ ಸನ್ನದ್ಧ


Team Udayavani, Sep 8, 2023, 11:43 PM IST

G 20

ಭಾರತದಲ್ಲಿ ಇದೇ ಮೊದಲ ಬಾರಿಗೆ ಜಿ 20 ರಾಷ್ಟ್ರಗಳ ಶೃಂಗಸಭೆ ರಾಜಧಾನಿ ಹೊಸದಿಲ್ಲಿಯಲ್ಲಿ ಶನಿವಾರ ಮತ್ತು ರವಿವಾರಗಳಂದು ನಡೆಯಲಿದೆ. ಶುಕ್ರವಾರವೇ ಜಿ20 ರಾಷ್ಟ್ರಗಳು ಮತ್ತು ಅತಿಥಿ ರಾಷ್ಟ್ರಗಳ ನಾಯಕರು ಹೊಸದಿಲ್ಲಿಗೆ ಬಂದಿಳಿದಿದ್ದಾರೆ.

ಪ್ರಪ್ರಥಮ ಬಾರಿಗೆ ಜಿ20 ರಾಷ್ಟ್ರಗಳ ಅಧ್ಯಕ್ಷತೆಯನ್ನು ವಹಿಸಿಕೊಂಡಿರುವ ಭಾರತ ಕಳೆದ 10 ತಿಂಗಳುಗಳ ಅವಧಿಯಲ್ಲಿ ದೇಶದ ಮೂಲೆಮೂಲೆಗಳಿಗೆ ಜಿ20 ರಾಷ್ಟ್ರಗಳ ಪ್ರತಿನಿಧಿಗಳನ್ನು ಕರೆದೊಯ್ದು ಅಲ್ಲಿನ ಇತಿಹಾಸ, ಸಂಸ್ಕೃತಿಯನ್ನು ಪರಿಚಯಿಸಿದೆ. ಈಗ ತನ್ನ ಅಧ್ಯಕ್ಷತೆಯ ಜಿ20 ಶೃಂಗಸಭೆಯನ್ನು ಅತ್ಯಂತ ಅದ್ದೂರಿಯಿಂದ ಮತ್ತು ಅಷ್ಟೇ ಮಹತ್ವಪೂರ್ಣ ಚರ್ಚೆ, ಸಮಾಲೋಚನೆಗಳು ನಡೆದು ಐತಿಹಾಸಿಕ ನಿರ್ಣಯಗಳನ್ನು ಕೈಗೊಳ್ಳುವ ರೂಪರೇಖೆಗಳೊಂದಿಗೆ ಸಜ್ಜಾಗಿ ನಿಂತಿದೆ.

ಜಿ20 ಅಧ್ಯಕ್ಷತೆಯನ್ನು ಕೇವಲ ರಾಜತಾಂತ್ರಿಕ ಪ್ರಕ್ರಿಯೆಯ ಭಾಗ ಎಂದು ಭಾವಿಸದೆ ಪ್ರತಿಯೊಂದೂ ಹಂತದಲ್ಲೂ ಜಾಗತಿಕ ಸಮುದಾಯವನ್ನು ತನ್ನತ್ತ ಆಕರ್ಷಿಸುವಲ್ಲಿ ಸಫ‌ಲವಾಗಿದೆ. “ವಸುಧೈವ ಕುಟುಂಬಕಂ; ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ’ ಎಂಬ ಧ್ಯೇಯವಾಕ್ಯದೊಂದಿಗೆ ಜಿ20 ರಾಷ್ಟ್ರಗಳ ಅಧ್ಯಕ್ಷಗಿರಿಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದೆ. ಈಗ ಈ ಎಲ್ಲ ಯಶಸ್ಸಿನ ಗೋಪುರಕ್ಕೆ ಜಿ20 ಶೃಂಗಸಭೆಯ ಸ್ವರ್ಣ ಕಲಶವನ್ನಿಡಲು ಮುಹೂರ್ತ ಕೂಡಿಬಂದಿದೆ.

ಜಿ20 ಶೃಂಗ ಸಭೆಯಲ್ಲಿ ರಷ್ಯಾ-ಉಕ್ರೇನ್‌ ಸಮರ, ಕೆಲವೊಂದು ದೇಶಗಳ ವಿಸ್ತರಣಾವಾದ, ಭಯೋತ್ಪಾದನೆ, ಜಾಗತಿಕ ಆರ್ಥಿಕ ಬಿಕ್ಕಟ್ಟು, ಹವಾಮಾನ ಬದಲಾವಣೆ, ಪರಿಸರ ಸ್ನೇಹಿ ಇಂಧನ ಬಳಕೆ ಸಹಿತ ವಿವಿಧ ಜಾಗತಿಕ ಸಮಸ್ಯೆಗಳು ಮತ್ತು ಆದ್ಯತೆಯ ವಿಷಯಗಳ ಕುರಿತಂತೆ ವಿಶ್ವದ ಪ್ರಮುಖ ರಾಷ್ಟ್ರಗಳ ನಾಯಕರು ಚರ್ಚಿಸಲಿದ್ದಾರೆ. ಇವೆಲ್ಲದರ ನೇತೃತ್ವವನ್ನು ಸ್ವತಃ ಭಾರತವೇ ವಹಿಸಲಿದೆ ಎಂಬುದು ದೇಶವಾಸಿಗಳಾದ ನಮಗೆಲ್ಲರಿಗೂ ಹೆಮ್ಮೆಯ ಮತ್ತು ಗೌರವದ ವಿಷಯ.

ಇದೇ ವೇಳೆ ಜಿ20 ಶೃಂಗಸಭೆಗೆ ಆಗಮಿಸಿರುವ ವಿವಿಧ ರಾಷ್ಟ್ರಗಳ ನಾಯಕರ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ದ್ವಿಪಕ್ಷೀಯ ಮಾತುಕತೆಯನ್ನೂ ನಡೆಸಲಿದ್ದಾರೆ. ಶುಕ್ರವಾರದ ಸಂಜೆಯಿಂದಲೇ ಪ್ರಧಾನಿ ಅವರು ಈ ಮಾತುಕತೆ ಸರಣಿಗೆ ಚಾಲನೆ ನೀಡಿದ್ದು ವಿವಿಧ ದೇಶಗಳೊಂದಿಗಿನ ಬಾಂಧವ್ಯ ವೃದ್ಧಿಗೆ ಸಂಬಂಧಿಸಿದಂತೆ ಮಹತ್ವದ ಒಪ್ಪಂದ, ನಿರ್ಣಯಗಳಿಗೆ ಅಂಕಿತ ಹಾಕುವ ನಿರೀಕ್ಷೆ ಇದೆ.

ಇಡೀ ವಿಶ್ವದ ಶಾಂತಿ, ಅಭಿವೃದ್ಧಿ ಮತ್ತು ಭವಿಷ್ಯದ ದೃಷ್ಟಿಕೋನದಲ್ಲಿ ಭಾರತ ಜಿ20 ಶೃಂಗದ ಅಧ್ಯಕ್ಷತೆಯ ಹೊಣೆಗಾರಿಕೆಯನ್ನು ನಿಭಾಯಿಸಲು ಆರಂಭದಲ್ಲಿಯೇ ಸಂಕಲ್ಪ ತೊಟ್ಟಿತ್ತು. ಅದರಂತೆ ತನ್ನ ಜವಾಬ್ದಾರಿಯನ್ನು ಈವರೆಗೆ ಸಮರ್ಥವಾಗಿ ನಿಭಾಯಿಸಿರುವ ಭಾರತ, ತನ್ನ ಅಧ್ಯಕ್ಷತೆಯ ಕೊನೆಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯನ್ನು ಮಾದರಿಯಾಗಿ ನಡೆಸಲು ಮತ್ತು ಶೃಂಗಕ್ಕೆ ಹೊಸಭಾಷ್ಯ ಬರೆಯಲು ಮುಂದಾಗಿದೆ. ಇದೇ ವೇಳೆ ಭಾರತ ತನ್ನ ಸಾರ್ವಭೌಮತೆ, ಘನತೆಗೆ ಎಲ್ಲೂ ಕುಂದುಂಟಾಗದಂತೆ ಎಚ್ಚರಿಕೆಯ ಹೆಜ್ಜೆ ಇಡುವ ಜತೆಯಲ್ಲಿ ದೇಶವನ್ನು ಪ್ರಗತಿ ಪಥದಲ್ಲಿ ಮುನ್ನಡೆಸಲು ಇದನ್ನೊಂದು ಅವಕಾಶವನ್ನಾಗಿ ಪರಿವರ್ತಿಸಿಕೊಂಡುದುದು ಶ್ಲಾಘನೀಯ.

ಟಾಪ್ ನ್ಯೂಸ್

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

ಪಿಒಕೆ

Editorial; ಪಿಒಕೆ: ಭುಗಿಲೆದ್ದ ಜನಾಕ್ರೋಶ ಇಕ್ಕಟ್ಟಿಗೆ ಸಿಲುಕಿದ ಪಾಕಿಸ್ಥಾನ

1—–ewqeq

Health; ರೋಗಮುಕ್ತ ಸಮಾಜಕ್ಕಾಗಿ ಆರೋಗ್ಯಯುತ ಆಹಾರ ಕ್ರಮ

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.