49.50 ಕೋ.ರೂ ಯೋಜನೆಗೆ ಶೀಘ್ರ ಅನುಮೋದನೆ: ಸಚಿವ ದಿನೇಶ್ ಗುಂಡೂರಾವ್
3ನೇ ಹಂತದ ಮೀನುಗಾರಿಕೆ ಜೆಟ್ಟಿ ಅಭಿವೃದ್ಧಿ
Team Udayavani, Sep 12, 2023, 12:46 AM IST
ಮಂಗಳೂರು: ನಗರದ ಮೀನುಗಾರಿಕೆ ಬಂದರಿನ 3ನೇ ಹಂತದ ಅಭಿವೃದ್ಧಿಗೆ 49.50 ಕೋಟಿ ರೂ. ವೆಚ್ಚದ ಅಂದಾಜು ಪಟ್ಟಿ ತಯಾರಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಸದ್ಯದಲ್ಲೇ ಸಚಿವ ಸಂಪುಟದಲ್ಲಿ ಅನುಮೋದನೆ ದೊರೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸರಕಾರ ಅಸ್ತಿತ್ವಕ್ಕೆ ಬಂದು 100 ದಿನಗಳಲ್ಲಿಯೇ ನುಡಿದಂತೆ ನಡೆದಿದ್ದೇವೆ. ಮೀನುಗಾರರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ಸೀಮೆಎಣ್ಣೆ ಎಂಜಿನ್ ಮೀನುಗಾರಿಕೆ ದೋಣಿಗಳನ್ನು ಪೆಟ್ರೋಲ್/ಡೀಸೆಲ್ ಎಂಜಿನ್ಗಳಾಗಿ ಬದಲಾಯಿಸಲು 50 ಸಾವಿರ ರೂ. ಸಹಾಯಧನ, ಪ್ರಸಕ್ತ ಸಾಲಿನಲ್ಲಿ 4 ಸಾವಿರ ಸೀಮೆಎಣ್ಣೆ ಎಂಜಿನ್ಗಳ ಬದಲಾವಣೆಗೆ 20 ಕೋಟಿ ರೂ. ಸಹಾಯಧನ ಒದಗಿಸಲಾಗಿದೆ ಎಂದರು.
ಮೀನುಗಾರ ಮಹಿಳೆಯರಿಗೆ ಬಡ್ಡಿರಹಿತ ಸಾಲದ ಮಿತಿಯನ್ನು 50 ಸಾವಿರ ರೂ.ಗಳಿಂದ 3 ಲಕ್ಷ ರೂ.ಗೆ ಏರಿಸಲಾಗಿದೆ. ಮೀನುಗಾರಿಕೆ ದೋಣಿಗಳಿಗೆ ನೀಡಲಾಗುತ್ತಿದ್ದ ಕರ ರಹಿತ ಡೀಸೆಲನ್ನು 1.50 ಲಕ್ಷ ಕಿ.ಲೀಟರ್ನಿಂದ 2 ಲಕ್ಷ ಕಿ. ಲೀಟರ್ಗೆ ಹೆಚ್ಚಿಸಲಾಗಿದ್ದು ದ.ಕ. ಜಿಲ್ಲೆಯ 3,400ಕ್ಕೂ ಅಧಿಕ ಮೀನುಗಾರ ದೋಣಿಗಳಿಗೆ ಇದರ ಪ್ರಯೋಜನ ಲಭಿಸಲಿದೆ. ಕೈಗಾರಿಕಾ ಸೀಮೆಎಣ್ಣೆ ಖರೀದಿಸುವ ನಾಡದೋಣಿ ಮಾಲಕರಿಗೆ ಲೀಟರ್ಗೆ 35 ರೂ. ರಿಯಾಯಿತಿ ದೊರೆಯಲಿದೆ ಎಂದು ಸಚಿವರು ಹೇಳಿದರು.
ಮೀನುಗಾರಿಕಾ ಬಂದರಿನ ವಾಫ್ì ಮತ್ತು ಅಳಿವೆ ಬಾಗಿಲಿನಲ್ಲಿ ಹೂಳೆತ್ತುವ ಕಾಮಗಾರಿಗೆ 3.90 ಕೋಟಿ ರೂ. ಒದಗಿಸಲಾಗಿದೆ. ಈ ತಿಂಗಳಲ್ಲಿ ಹೂಳೆತ್ತುವ ಕಾಮಗಾರಿ ಆರಂಭಿಸಲಾಗುತ್ತದೆ. ಉಳ್ಳಾಲ ಕೋಡಿಯಲ್ಲಿ ನಾಡದೋಣಿಗಳಿಗೆ ಜೆಟ್ಟಿ ನಿರ್ಮಿಸಲು 6.50 ಕೋಟಿ ರೂ. ವೆಚ್ಚದ ಅಂದಾಜು ಪಟ್ಟಿ ತಯಾರಿಸಲಾಗಿದೆ ಎಂದು ಹೇಳಿದರು. ಮಾಜಿ ಮೇಯರ್ಗಳಾದ ಎಂ.ಶಶಿಧರ ಹೆಗ್ಡೆ, ಭಾಸ್ಕರ್ ಕೆ., ಮನಪಾ ಸದಸ್ಯ ಎ.ಸಿ. ವಿನಯ್ರಾಜ್ ಉಪಸ್ಥಿತರಿದ್ದರು.
ಮಂಗಳೂರಿನಲ್ಲಿ ಐಟಿ ಪಾರ್ಕ್
ದೇರೆಬೈಲ್ನಲ್ಲಿ ಕಿಯೋನಿಕ್ಸ್ ಗೆ ಸೇರಿದ 3 ಎಕರೆಗೂ ಅಧಿಕ ಜಾಗದಲ್ಲಿ ಪಿಪಿಪಿ ಮಾದರಿಯಲ್ಲಿ ಐಟಿ ಪಾರ್ಕ್ ಅಭಿವೃದ್ಧಿ ಪಡಿಸಲು ಸರಕಾರದಿಂದ ಅನುಮೋದನೆ ಪಡೆಯಲಾಗಿದೆ. 2 ತಿಂಗಳೊಳಗೆ ಐಟಿ ಪಾರ್ಕ್ಗೆ ಆರ್ಎಫ್ಪಿ ಸಿದ್ಧವಾಗಲಿದ್ದು, ಗುತ್ತಿಗೆ ಅವಧಿಯನ್ನು ಈಗಿರುವ 30 ವರ್ಷಗಳಿಂದ 60 ವರ್ಷಗಳಿಗೆ ಹೆಚ್ಚಿನ ನಿಟ್ಟಿನಲ್ಲಿ ಪರಿಶೀಲಿಸಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್