Dasara: 600 ಕೆ.ಜಿ.ಹೊತ್ತು ತಾಲೀಮು ಆರಂಭಿಸಿದ ಕ್ಯಾಪ್ಟನ್‌


Team Udayavani, Sep 16, 2023, 10:32 AM IST

Dasara: 600 ಕೆ.ಜಿ.ಹೊತ್ತು ತಾಲೀಮು ಆರಂಭಿಸಿದ ಕ್ಯಾಪ್ಟನ್‌

ಮೈಸೂರು: ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಅಭಿಮನ್ಯು ನೇತೃತ್ವದ ಗಜಪಡೆಗೆ ಗುರುವಾರದಿಂದ ಭಾರ ಹೊರಿಸುವ ತಾಲೀಮು ಆರಂಭವಾಗಿದ್ದು, ಮೊದಲ ದಿನವೇ ಕ್ಯಾಪ್ಟನ್‌ ಅಭಿಮನ್ಯು 600 ಕೆ.ಜಿ.ಭಾರ ಹೊತ್ತು ಬನ್ನಿಮಂಟಪದವರೆಗೆ ನಿರಾಯಾಸವಾಗಿ ಹೆಜ್ಜೆ ಹಾಕಿದ.

ತಾಲೀಮು: ಅರಮನೆ ಆವರಣದ ಕೋಡಿ ಸೋಮೇಶ್ವರ ದೇವಾಲಯದ ಮುಂಭಾಗ ಗುರುವಾರ ಮಧ್ಯಾಹ್ನ 12.30ಕ್ಕೆ ಸಂಪ್ರದಾಯದಂತೆ ಆನೆಗಳ ಬೆನ್ನಿನ ಮೇಲೆ ಇಡುವ ಗಾದಿ, ನಮ್ದಾ ಹಾಗೂ ಅಭಿಮನ್ಯು, ವಿಜಯ ಮತ್ತು ವರಲಕ್ಷ್ಮೀ ಆನೆಗಳ ಪಾದ ತೊಳೆದು ಪೂಜೆ ಸಲ್ಲಿಸಲಾಯಿತು. ಈ ಸಂದರ್ಭ ಸಿಎಫ್ ಮಾಲತಿಪ್ರಿಯಾ ಆನೆಗಳಿಗೆ ಪುಷ್ಪಾರ್ಚನೆ ಮಾಡಿ, ಪಂಚಫ‌ಲದೊಂದಿಗೆ ಬೆಲ್ಲ ಮತ್ತು ಕಬ್ಬನ್ನು ನೀಡಿದರು. ನಂತರ 1 ಗಂಟೆಗೆ ಅಭಿಮನ್ಯು ಬೆನ್ನಿಗೆ 250 ಕೆ.ಜಿ. ತೂಕದ ಗಾದಿ ಮತ್ತು ನಮ್ದಾ ಬಿಗಿದು, ಅದರಲ್ಲಿ ಕಬ್ಬಿಣದ ತೊಟ್ಟಿಲನ್ನು ಇರಿಸಿ 350 ಕೆ.ಜಿ.ಮರಳು ಮೂಟೆ ಇಡಲಾಯಿತು. ಬಳಿಕ 3 ಆನೆಗಳನ್ನು ಅರಮನೆ ಬಳಿಯ ಅಂಬಾರಿ ಕಟ್ಟುವ ಜಾಗಕ್ಕೆ ಕರೆದೊಯ್ದು ತಾಲೀಮು ಆರಂಭಿಸಲಾಯಿತು.

ಮಧ್ಯಾಹ್ನ 2ಕ್ಕೆ ಅರಮನೆಯಿಂದ ರಾಜಮಾರ್ಗದಲ್ಲಿ 600 ಕೆ.ಜಿ. ಭಾರ ಹೊತ್ತು ಹೊರಟ ಕ್ಯಾಪ್ಟನ್‌ ಅಭಿಮನ್ಯುವನ್ನು ವಿಜಯ, ಧನಂಜಯ, ವರಲಕ್ಷ್ಮೀ, ಕಂಜನ್‌, ಭೀಮ, ಮಹೇಂದ್ರ, ಗೋಪಿ ಹಾಗೂ ಅರ್ಜುನ ಆನೆ ಹಿಂಬಾಲಿಸಿದವು.

ನಿರಾತಂಕವಾಗಿ ಸಾಗಿದ ಅಭಿಮನ್ಯು: ವಿಜಯದಶಮಿಯಂದು 750 ಕೆ.ಜಿ.ತೂಕದ ಚಿನ್ನದ ಅಂಬಾರಿಯನ್ನು ಅರಮನೆಯಿಂದ ಬನ್ನಿಮಂಟಪದವರೆಗೆ ಯಾವುದೇ ಸಮಸ್ಯೆ ಇಲ್ಲದೆ ನಿರಾಯಾಸವಾಗಿ ಹೊತ್ತೂಯ್ಯಲು ಅಂಬಾರಿ ಆನೆ ಅಭಿಮನ್ಯು ಸೇರಿ ಪ್ರಮುಖ ಆನೆಗಳಿಗೆ ಒಣ ತಾಲೀಮು, ಭಾರ ಹೊರುವ ತಾಲೀಮು ಹಾಗೂ ಮರದ ಅಂಬಾರಿ ಹೊರುವ ತಾಲೀಮನ್ನು ಹಂತ ಹಂತವಾಗಿ ನಡೆಸಲಾಗುತ್ತದೆ. ಶುಕ್ರವಾರ, ಅಭಿಮನ್ಯು ಬೆನ್ನಿನ ಮೇಲೆ 250 ಕೆ.ಜಿ.ತೂಕದ ಗಾದಿ, ನಮಾª ಹಾಗೂ 350 ಕೆ.ಜಿ. ತೂಕದ ಮರಳು ಮೂಟೆಯನ್ನಿಟ್ಟು ಭಾರ ಹೊರುವ ತಾಲೀಮು ಆರಂಭಿಸಲಾಯಿತು.

ಧನ್ಯತೆ ಮೆರೆದ ವ್ಯಾಪಾರಿಗಳು: ರಾಜಮಾರ್ಗದಲ್ಲಿ ಗಜಪಡೆ ತಾಲೀಮು ನಡೆಸುವಾಗ ರಸ್ತೆ ಬದಿಯಲ್ಲಿ ಹೂ, ಹಣ್ಣು ವ್ಯಾಪಾರಿಗಳು ಆನೆಗಳನ್ನು ಕಂಡು ಕೈಮುಗಿದು, ತಮ್ಮಲ್ಲಿರುವ ಹೂ, ಹಣ್ಣುಗಳನ್ನು ಆನೆಗಳಿಗೆ ನೀಡುವ ಮೂಲಕ ಧನ್ಯತೆ ಮೆರೆದ ದೃಶ್ಯ ಕಂಡು ಬಂದಿತು. ಸಿಎಫ್ ಮಾಲತಿಪ್ರಿಯಾ ಮಾತನಾಡಿ, ಅರ್ಜುನ ಬಿಟ್ಟು 5 ಗಂಡಾನೆಗಳಿಗೆ ಭಾರ ಹೊರಿಸುವ ತಾಲೀಮನ್ನು ರೊಟೇಷನ್‌ ಆಗಿ 5 ದಿನ ನಡೆಸಲಾಗುತ್ತದೆ. ಸೆಪ್ಟೆಂಬರ್‌ ಕೊನೆ ವಾರ 2ನೇ ಹಂತದಲ್ಲಿ 5 ಆನೆಗಳನ್ನು ಕರೆತರಲಾಗುತ್ತದೆ. ಹಂತ ಹಂತವಾಗಿ ಭಾರ ಹೆಚ್ಚಿಸಿದ ನಂತರ ಮರದ ಅಂಬಾರಿ ಕಟ್ಟಿ ತಾಲೀಮು ನಡೆಸಲಾಗುತ್ತದೆ ಎಂದು ತಿಳಿಸಿದರು.

ದಸರೆ ಜಂಬೂಸವಾರಿಗೆ ಇಲಾಖೆ ಎಲ್ಲಾ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಆನೆಗಳು ಉತ್ತಮ ಪ್ರದರ್ಶನ ನೀಡು ತ್ತಿವೆ. ಮೊದಲ ಬಾರಿಗೆ ಕರೆತಂದಿರುವ ಕಂಜನ್‌ ಆನೆ ನಗರ ವಾತಾವರಣಕ್ಕೆ ಒಗ್ಗಿಕೊಂಡಿದೆ. 2ನೇ ಹಂತದಲ್ಲಿ ರೋಹಿತ, ಲಕ್ಷ್ಮೀ ಹಾಗೂ ಹಿರಣ್ಯಾ ಎಂಬ ಹೊಸ ಆನೆ ಶೀಘ್ರ ತಂಡವನ್ನು ಸೇರಿಕೊಳ್ಳಲಿವೆ ಎಂದರು.

ನಗರದ ವಾತಾವರಣಕ್ಕೆ ಒಗ್ಗಿದ ಕಂಜನ್‌: ಇದೇ ಮೊದಲ ಬಾರಿಗೆ ದಸರಾ ಉತ್ಸವದಲ್ಲಿ ಪಾಲ್ಗೊಳ್ಳುತ್ತಿರುವ ಕಂಜನ್‌ ಆನೆ ನಗರ ಪರಿಸರಕ್ಕೆ ನಿಧಾನವಾಗಿ ಹೊಂದಿಕೊಳ್ಳುತ್ತಿದ್ದು, ಆನೆಗಳ ಜತೆಗೆ ಯಾವುದೇ ಭಯ, ಆತಂಕವಿಲ್ಲದೇ ತಾಲೀಮಿನಲ್ಲಿ ಭಾಗವಹಿಸುತ್ತಿದೆ. ತಾಲೀಮಿನ ವೇಳೆ ಪಕ್ಕದಲ್ಲಿ ಅಧಿಕಾರಿಗಳ ಕಾರು ಸೇರಿ ಏನೇ ಶಬ್ಧವಾದರೂ ಭಯಪಡದೆ ಧೈರ್ಯದಿಂದ ಹೆಜ್ಜೆ ಇಡುವ ಮೂಲಕ ಅಧಿಕಾರಿಗಳಲ್ಲಿ ಭರವಸೆ ಮೂಡಿಸಿದ್ದಾನೆ.

ಅ.24 ರಂದು ದಸರಾ ಜಂಬೂಸವಾರಿ:

ಮೈಸೂರು: ಐತಿಹಾಸಿಕ ಮೈಸೂರು ದಸರಾ ಉತ್ಸವದ ವಿಜಯದಶಮಿ ದಿನದ ಮೆರವಣಿ ಗೆಯ ನಂದೀ ಧ್ವಜ ಪೂಜೆ ಅ.24 ರ ಮಧ್ಯಾಹ್ನ 1.46 ರಿಂದ 2.08ರ ಮಕರ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ನೆರವೇರಲಿದೆ.

ನಂತರ ಸಂಜೆ 4.40 ರಿಂದ 5 ಗಂಟೆ ಶುಭ ಮೀನ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಇತರ ಗಣ್ಯರು ಚಿನ್ನದ ಅಂಬಾರಿಯಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ನೆರವೇರಿಸುವರು. ಅ.15 ರಂದು ಶರನ್ನವರಾತ್ರಿ ಪ್ರಾರಂಭವಾಗಲಿದೆ. ಶೈಲಾವೃತ, ಚಾಮುಂಡಿ ಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಗೆ ಪೂಜೆಯನ್ನು ಬೆಳಗ್ಗೆ 10.15 ರಿಂದ 10.36 ರ ಶುಭ ವೃಶ್ಚಿಕ ಲಗ್ನದಲ್ಲಿ ನೆರವೇರಿಸಲಾಗುವುದು. ಅ.16 ರಂದು ಬ್ರಹ್ಮಚಾರಿಣಿ, 17 ರಂದು ಚಂದ್ರಘಂಟಾ, 18 ರಂದು ಕೂಷ್ಮಾಂಡ, 19 ರಂದು ಸ್ಕಂದಮಾತಾ, 20 ರಂದು ಕಾತ್ಯಾಯಿನಿ – ಸರಸ್ವತಿ ಪೂಜೆ ನಡೆಯಲಿದೆ. ಅ.21 ರಂದು ಕಾಳರಾತ್ರಿ -ಮಹಿಷಾಸುರ ಸಂಹಾರ, 22 ರಂದು ದುರ್ಗಾಷ್ಟಮಿ – ಸಿದ್ದಿಧಾತ್ರಿ, 23 ರಂದು ಮಹಾನವಮಿ ಆಯುಧ ಪೂಜೆ, ಗಜಶ್ವಾದಿ ಪೂಜೆ ನಡೆಯಲಿದೆ. ಅ.26ರಂದು ಚಾಮುಂಡಿಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ರಥೋತ್ಸವ ಜರುಗಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೊದಲ ಹಂತವಾಗಿ ಅಭಿಮನ್ಯು ಆನೆಗೆ 350ಕೆ.ಜಿ. ತೂಕದ ಮರಳು ಮೂಟೆ ಸೇರಿ 600 ಕೆ.ಜಿ. ಭಾರ ಹೊರಿಸಿ ತಾಲೀಮು ನಡೆಸಲಾಗಿದೆ. ಹಂತ ಹಂತವಾಗಿ ತೂಕವನ್ನು ಹೆಚ್ಚಿಸಿ ಜಂಬೂ ಸವಾರಿ ವೇಳೆಗೆ 750ಕೆ.ಜಿ. ಭಾರ ಹೊರಲು ಗಜಪಡೆಯನ್ನು ಸಜ್ಜುಗೊಳಿಸಲಾಗುತ್ತದೆ. ಅದಕ್ಕಾಗಿ ಈಗಾಗಲೇ ಪೌಷ್ಟಿಕ ಆಹಾರ ನೀಡಲಾಗುತ್ತಿದೆ. ಮಾಲತಿಪ್ರಿಯಾ, ಸಿಎಫ್ ಮೈಸೂರು ವೃತ್ತ

ಟಾಪ್ ನ್ಯೂಸ್

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ. ಗುಡ್ಡಕಾಯು ನಿಧನ

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ ಗುಡ್ಡಕಾಯು ನಿಧನ

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

2-hunsur

Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ. ಗುಡ್ಡಕಾಯು ನಿಧನ

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ ಗುಡ್ಡಕಾಯು ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.