IMBD ಟಾಪ್ 10 ಜನಪ್ರಿಯ ತಾರೆಯರ ಪಟ್ಟಿಯಲ್ಲಿ ಸ್ಥಾನ ಪಡೆದ ಕನ್ನಡತಿ ಆದ್ಯಾ ಆನಂದ್


Team Udayavani, Sep 17, 2023, 5:39 PM IST

IMBD ಟಾಪ್ 10 ಜನಪ್ರಿಯ ತಾರೆಯರ ಪಟ್ಟಿಯಲ್ಲಿ ಸ್ಥಾನ ಪಡೆದ ಕನ್ನಡತಿ ಆದ್ಯಾ ಆನಂದ್

ಬೆಂಗಳೂರು: ಟಾಪ್ 10 ಜನಪ್ರಿಯ ತಾರೆಗಳ ಪಟ್ಟಿಯನ್ನು ಇಂದು ಐಎಂಡಿಬಿ ಬಿಡುಗಡೆ ಮಾಡಿದೆ. ಬಾಲಿವುಡ್ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದ ‘ಜವಾನ್’ನ ನಯನತಾರಾ ಜನಪ್ರಿಯರ ಪಟ್ಟಿಯಲ್ಲಿ ಟಾಪ್ 1 ಸ್ಥಾನ ಪಡೆದರೆ, ಕನ್ನಡತಿ ಆದ್ಯಾ ಆನಂದ್ ಹತ್ತಾರು ಬಾಲಿವುಡ್ ತಾರೆಯರನ್ನೂ ಹಿಂದಿಕ್ಕಿ ಟಾಪ್ 8ನೇ ಸ್ಥಾನ ಪಡೆದುಕೊಂಡಿದ್ದಾರೆ.

ಇಂಟರ್ನೆಟ್ ಮೂವಿ ಡಾಟಾಬೇಸ್ (ಐಎಂಡಿಬಿ) ಪ್ರತಿ ವಾರವೂ ಜನಪ್ರಿಯ ತಾರೆಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತದೆ. ಸರಿಸುಮಾರು 200 ಮಿಲಿಯನ್ ವೆಬ್‌ಸೈಟ್ ಭೇಟಿಗಳ ಮಾಹಿತಿ ಸಂಗ್ರಹಿಸಿ ಮತ್ತು ಸಾಪ್ತಾಹಿಕ ಡೇಟಾವನ್ನು ಆಧರಿಸಿ ಐಎಂಡಿಬಿ ಈ ಪಟ್ಟಿಯನ್ನ ಬಿಡುಗಡೆ ಮಾಡುತ್ತದೆ. ಅದರಂತೆ ಈ ವಾರದ ಟಾಪ್ 10 ಜನಪ್ರಿಯ ತಾರೆಗಳ ಪಟ್ಟಿಯಲ್ಲಿ ಐದು ಸ್ಥಾನ ಜವಾನ್ ಸಿನೇಮಾಕ್ಕೆ ಸಿಕ್ಕಿದೆ.

ನಯನತಾರಾ ಟಾಪ್ 1ರಲ್ಲಿದ್ದರೆ, ಶಾರುಕ್ ಖಾನ್ ಟಾಪ್ 2, ಅಟ್ಲೀಕುಮಾರ್ ಟಾಪ್ 3ರಲ್ಲಿದ್ದಾರೆ. ವಿಶೇಷವೆಂದ್ರೆ, ನೆಟ್ ಫ್ಲಿಕ್ಸ್ ನ ಫ್ರೈಡೇ ನೈಟ್ ಮೂವಿಯಲ್ಲಿ ನಟಿಸಿದ್ದ ಕನ್ನಡತಿ ಆದ್ಯಾ ಆನಂದ್ ಕೂಡ ಈ ಬಾರಿಯ ಐಎಂಡಿಬಿ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಟಾಪ್ 8ನೇ ಸ್ಥಾನದಲ್ಲಿ ಆದ್ಯಾ ಸ್ಥಾನ ಗಳಿಸಿಕೊಳ್ಳುವ ಮೂಲಕ ಬಾಲಿವುಡ್ ನ ಅಗ್ರಗಣ್ಯ ತಾರೆಯರ ಸಾಲಿನಲ್ಲಿ ಕಾಣಿಸಿಕೊಂಡಿದ್ದು, ಆದ್ಯಾಳ ಬಳಿಕ ಉಳಿದ ಕೊನೆಯ ಎರಡು ಸ್ಥಾನಗಳಲ್ಲಿ ವಿಜಯ್ ಸೇತುಪತಿ ಹಾಗೂ ರಿಧಿ ಡೋಗ್ರಾ ಇದ್ದಾರೆ.

ಬಾಲಿವುಡ್ ನಲ್ಲಿ ಕನ್ನಡತಿಯ ಕಮಾಲ್

ಸದ್ಯ ಬಾಲಿವುಡ್ ಸಿನೇಮಾಗಳಲ್ಲಿ ದಕ್ಷಿಣದ ತಾರೆಯರ ವೈಭವ ಶುರುವಾಗಿದೆ. ದಕ್ಷಿಣದ ಸ್ಯಾಂಡಲ್ ವುಡ್, ಟಾಲಿವುಡ್, ಕಾಲಿವುಡ್,‌ ಮಾಲಿವುಡ್ ಸಿನೆಮಾಗಳು ಇತ್ತೀಚಿಗೆ ಬಾಲಿವುಡ್ ನ್ನೂ ಮೀರಿ‌ ಜನಪ್ರಿಯತೆಯನ್ನ ಗಳಿಸುತ್ತಿರುವುದು ಒಂದೆಡೆಯಾದರೆ, ಇಲ್ಲಿನ ನಟ- ನಟಿಯರು ಬಾಲಿವುಡ್ ನಲ್ಲಿ ಹೊಸ ಶಕೆ ಆರಂಭಿಸಿರುವುದು ಮತ್ತೊಂದು ಮೈಲಿಗಲ್ಲಾಗಿದೆ.

ಕನ್ನಡದ ಅನೇಕ ನಟಿಯರು ಈಗಾಗಲೇ ಬಾಲಿವುಡ್ ನಲ್ಲಿ ಮಿಂಚಿ, ಸಾಕಷ್ಟು ಹೆಸರು ಗಳಿಸಿದ್ದಾರೆ. ಇವರ ಸಾಲಿನಲ್ಲೀಗ ಆದ್ಯಾ ಆನಂದ್ ಕೂಡ ಸೇರಿಕೊಂಡಿದ್ದಾರೆ. ಅತಿ‌ ಕಿರಿಯ ವಯಸ್ಸಿನಲ್ಲೇ ಬಾಲಿವುಡ್ ನ ಸ್ಪರ್ಧಾ ಜಗತ್ತಿಗೆ ಕಾಲಿರಿಸಿ ಹತ್ತಾರು ತಾರೆಯರನ್ನೂ ಮೀರಿ ಆದ್ಯಾ ಬೆಳೆಯುತ್ತಿರುವುದು ನಿಜಕ್ಕೂ ಕನ್ನಡಿಗರಿಗೆ ಹೆಮ್ಮೆಯ ವಿಷಯವೇ ಸರಿ.

ಮಡಿಕೇರಿಯಲ್ಲಿ ಹುಟ್ಟಿ ಸಿಂಗಾಪುರದಲ್ಲಿ ಬೆಳೆದ ಆದ್ಯಾ, 2021ರ ಮಾರ್ಚ್ ನಲ್ಲಿ ‘ನೆಟ್‌ಫ್ಲಿಕ್ಸ್’ನ ‘ಬಾಂಬೇ ಬೇಗಮ್ಸ್’ ವೆಬ್ ಸಿರೀಸ್‌, 2022ರಲ್ಲಿ ‘ಬ್ರೇವ್‌ಹಾರ್ಟ್’  ಸಿರೀಸ್‌, ಅಮೇಜಾನ್ ಮಿನಿ ಟಿವಿಯಲ್ಲಿ ಬಿಡುಗಡೆಯಾದ ‘ಕೃಶ್ಡ್’ ಸಿರೀಸ್ ನಲ್ಲಿ ನಟಿಸಿದ್ದರು. ‘ಇಂಡಿಯನ್ ಕೃಶ್’ ಬಿರುದನ್ನು ಕೂಡ ಪಡೆದುಕೊಂಡಿದ್ದ ಆದ್ಯಾ, ಸೆ.1ರಂದು ಬಿಡುಗಡೆಯಾದ ‘ಫ್ರೈಡೇ ನೈಟ್ ಪ್ಲಾನ್’ನಲ್ಲಿ ನಿತ್ಯಾ- ನೀತ್ಸ್ ಸಭರ್ವಾಲ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ಆದ್ಯಾ ಕೇವಲ ಸಿನಿ ರಂಗದಲ್ಲಷ್ಟೇ ಅಲ್ಲದೇ, ಕೋರ್ನೆಟೊ, ರೆಸಾರ್ಟ್ಸ್ ವರ್ಲ್ಡ್ ಸೆಂಟೋಸಾ, ಸೆನ್ಸೋಡೈನ್, ಟಿವಿಎಸ್ ಜ್ಯುಪಿಟರ್‌ನಂಥ ಬ್ರಾಂಡ್‌ಗಳ ಜಾಹೀರಾತುಗಳಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲದೇ ಇಸ್ರೇಲ್‌ನ ಫಾಕ್ಸ್ ಫ್ಯಾಶನ್‌ನ ಮುಖಪುಟದಲ್ಲೂ ಆದ್ಯಾ ಮಿಂಚಿದ್ದರು.

ಸಣ್ಣ ವಯಸ್ಸಿನಲ್ಲೇ ಇಷ್ಟೊಂದು ಹೆಸರು ಗಳಿಸಲು ಹಿಂದಿ ಸಿನೇಮಾ ಇಂಡಸ್ಟ್ರಿ ಅವಕಾಶ ಮಾಡಿಕೊಟ್ಟಿದ್ದಕ್ಕೆ ನಾನು ಚಿರ ಋಣಿ. ನನ್ನ ಮಾತೃ ಭಾಷೆ ಕನ್ನಡದಲ್ಲೂ ನಟಿಸಬೇಕೆಂಬ ಹಂಬಲವಿದೆ; ನನಗೆ ಒಪ್ಪುವಂಥ ಸೂಕ್ತ ಕಥೆಗಳು ಸಿಕ್ಕಲ್ಲಿ ಖಂಡಿತ ಸ್ಯಾಂಡಲ್ ವುಡ್ ನಲ್ಲೂ ನಟಿಸುವೆ ಎನ್ನುತ್ತಾರೆ ಆದ್ಯಾ .

ದೇವರಾಜ ನಾಯ್ಕ,ಕಾರವಾರ

ಟಾಪ್ ನ್ಯೂಸ್

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Cannes‌ Film Festival: ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿದೆ ಭಾರತದ ಈ 7 ಸಿನಿಮಾಗಳು

11

ಹೃದಯ ಸಂಬಂಧಿ ಕಾಯಿಲೆ: ಬಿಗ್‌ ಬಾಸ್‌ ಖ್ಯಾತಿ, ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲು

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Bollywood: ಜೂನ್‌ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್‌ ಭರಾಟೆ

Bollywood: ಜೂನ್‌ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್‌ ಭರಾಟೆ

Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್‌  ʼಬಾರ್ಡರ್‌ -2ʼ ರಿಲೀಸ್?‌

Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್‌ ʼಬಾರ್ಡರ್‌ -2ʼ ರಿಲೀಸ್?‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.