Wheelie: ವ್ಹೀಲಿಂಗ್ ಮಾಡುವಾಗ ಸ್ಕಿಡ್ ಆದ ಬೈಕ್… ತಮಿಳುನಾಡಿನ ಯೂಟ್ಯೂಬರ್ ಗೆ ಗಂಭೀರ ಗಾಯ
Team Udayavani, Sep 18, 2023, 11:00 AM IST
ತಮಿಳುನಾಡು: ತನ್ನ ಹೈ-ಸ್ಪೀಡ್ ಮೋಟಾರ್ಸೈಕಲ್ ರೈಡಿಂಗ್ ಹಾಗೂ ಸಾಹಸಗಳಿಗೆ ಹೆಸರುವಾಸಿಯಾಗಿರುವ ತಮಿಳುನಾಡಿನ ಜನಪ್ರಿಯ ಯೂಟ್ಯೂಬರ್ ಟಿಟಿಎಫ್ ವಾಸನ್ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ.
ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಾಲುಶೆಟ್ಟಿ ಛತ್ರಂ ಬಳಿ ಬೈಕ್ ನಲ್ಲಿ ತೆರಳುತ್ತಿದ್ದ ಅವರು ಬೈಕ್ ವ್ಹೀಲಿಂಗ್ ಮಾಡಲು ಯತ್ನಿಸಿ ಅಪಘಾತ ಸಂಭವಿಸಿದೆ.
ವಾಸನ್ ಅವರು ಪ್ರಖ್ಯಾತ ಯೂಟ್ಯೂಬರ್ ಆಗಿದ್ದು ಇವರಿಗೆ ಲಕ್ಷಾಂತರ ಮಂದಿ ಫ್ಯಾನ್ ಫಾಲೋವರ್ಸ್ ಗಳಿದ್ದಾರೆ, ಟ್ರಾವೆಲ್ ಬ್ಲಾಗ್ ನಿಂದಲೇ ಹೆಸರುವಾಸಿಯಾಗಿರುವ ಅವರು ಹೈ ಸ್ಪೀಡ್ ಬೈಕ್ ರೈಡಿಂಗ್ ಜೊತೆಗೆ ವ್ಹೀಲಿಂಗ್ ನಲ್ಲಿ ಹೆಸರುವಾಸಿಯಾಗಿದ್ದರು ಅದರಂತೆ ಭಾನುವಾರ ಚೆನ್ನೈ-ಬೆಂಗಳೂರು ಮಾರ್ಗದಲ್ಲಿ ಚಲಿಸುತ್ತಿದ್ದ ವೇಳೆ ವ್ಹೀಲಿಂಗ್ ಮಾಡಲು ಹೋದ ವೇಳೆ ಬೈಕ್ ನ ಮುಂಭಾಗ ಮೇಲಕ್ಕೆ ಎಬ್ಬಿಸಿದಾಗ ಹಿಂಬದಿಯ ಚಕ್ರ ಸ್ಕಿಡ್ ಆಗಿ ನಿಯಂತ್ರಣ ಕಳೆದುಕೊಂಡಿದೆ ಪರಿಣಾಮ ವೇಗವಾಗಿದ್ದ ಬೈಕ್ ರಸ್ತೆ ಬದಿಯಲ್ಲಿದ್ದ ಹೊಂಡಕ್ಕೆ ಬಿದ್ದು ಮೀಟರ್ ಗಳಷ್ಟು ದೂರ ಎಸೆಯಲ್ಪಟ್ಟಿದೆ.
ಕಾಂಚೀಪುರಂನ ಖಾಸಗಿ ಆಸ್ಪತ್ರೆಯಲ್ಲಿ ವಾಸನ್ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಅವರ ಕೈ ಮುರಿದಿದೆ. ಇದಲ್ಲದೇ ದೇಹದ ವಿವಿಧೆಡೆ ಗಾಯಗಳಾಗಿವೆ. ಅವರು ಅಪಘಾತಕ್ಕೀಡಾಗಿದ್ದಾರೆ ಎಂದು ಹೇಳುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: Yogi: ಯಮರಾಜ ನಿಮಗಾಗಿ ಕಾಯುತ್ತಿದ್ದಾನೆ: ಮಹಿಳೆಯರಿಗೆ ಕಿರುಕುಳ ನೀಡುವವರಿಗೆ ಯೋಗಿ ಎಚ್ಚರಿಕೆ
So many questions.. IN BOTH VIDEO #TTFVasan violated the traffic rules, which makes other guys to copy him. Why still no proper action taken against him. Dear youth don’t get influenced by this kind of stupid.
— A k (@JustMyTweetssss) September 18, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ
Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ
Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?
Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ
TG; ತೆಲಂಗಾಣದ ಸಂಕ್ಷಿಪ್ತ ರೂಪ ಇನ್ನು ಮುಂದೆ ‘ಟಿಎಸ್’ ಅಲ್ಲ!
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Borderline Personality Disorder: ಬಾರ್ಡರ್ಲೈನ್ ಪರ್ಸನಾಲಿಟಿ ಡಿಸಾರ್ಡರ್
Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿದೆ ನೂತನ ಡಾ|ರಾಮದಾಸ್ ಎಂ.ಪೈ ಬ್ಲಾಕ್
Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ
Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು