Dharwad: ಮರಳಿ ಒಂದಾದ 19 ದಂಪತಿ; 30 ವರ್ಷಗಳ ಸುದೀರ್ಘ‌ ವ್ಯಾಜ್ಯ ಅಂತ್ಯ


Team Udayavani, Sep 18, 2023, 4:24 PM IST

Dharwad: ಮರಳಿ ಒಂದಾದ 19 ದಂಪತಿ; 30 ವರ್ಷಗಳ ಸುದೀರ್ಘ‌ ವ್ಯಾಜ್ಯ ಅಂತ್ಯ

ಧಾರವಾಡ: ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ವಿವಾಹ ವಿಚ್ಛೇದನ ಬಯಸಿ ಅರ್ಜಿ ಸಲ್ಲಿಸಿದ್ದ ಒಟ್ಟು 19 ದಂಪತಿಗಳಲ್ಲಿ ರಾಜಿ ಮಾಡಿಸಿ, ಮತ್ತೆ ಒಂದುಗೂಡಿಸುವಲ್ಲಿ ಸೆ.9ರಂದು ಜರುಗಿದ ರಾಷ್ಟ್ರೀಯ ಲೋಕ ಅದಾಲತ್‌ ಯಶಸ್ವಿಯಾಗಿದೆ. ಇದರ ಜತೆಗೆ ಒಟ್ಟು 70,599 ಪ್ರಕರಣಗಳಲ್ಲಿ ರಾಜಿ ಸಂಧಾನ ಕೈಗೊಂಡು 60,87,357 ರೂ. ಮೊತ್ತ ವಸೂಲು ಮಾಡಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಕೆ.ಜಿ. ಶಾಂತಿ ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡದಲ್ಲಿ-15 ಪೀಠಗಳನ್ನು, ಹುಬ್ಬಳ್ಳಿಯಲ್ಲಿ-18 ಪೀಠಗಳನ್ನು, ಕುಂದಗೋಳ-2, ನವಲಗುಂದ-2 ಮತ್ತು ಕಲಘಟಗಿಯಲ್ಲಿ-2 ಸೇರಿ ಒಟ್ಟು 39 ಪೀಠಗಳನ್ನು ಲೋಕ ಅದಾಲತ್‌ಗಾಗಿ ಸ್ಥಾಪಿಸಲಾಗಿತ್ತು.

ಈ ಪೀಠಗಳಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ರಾಜಿ ಆಗಬಹುದಾದಂತಹ 18,864 ಪ್ರಕರಣಗಳನ್ನು
ತೆಗೆದುಕೊಂಡು ಅವುಗಳ ಪೈಕಿ 13,589 ಪ್ರಕರಣಗಳನ್ನು ಹಾಗೂ 65,600 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ತೆಗೆದುಕೊಂಡು
ಅವುಗಳ ಪೈಕಿ 57,010 ಪ್ರಕರಣಗಳನ್ನು ಸೇರಿ ಒಟ್ಟು 70,599 ರಾಜಿ ಸಂಧಾನ ಮಾಡಿಸಿ ಒಟ್ಟು 60,87,39,357 ಮೊತ್ತವನ್ನು ವಸೂಲು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಧಾರವಾಡದ ಪ್ರಧಾನ ಹಿರಿಯ ಸಿವಿಲ್‌ ಮತ್ತು ಸಿಜೆಎಂ ನ್ಯಾಯಾಧೀಶರಾದ ಸಂಜಯ ಪಿ. ಗುಡಗುಡಿ ಮತ್ತು ಸಂಧಾನಕಾರರಾದ ಬಿ.ಡಿ. ನರಸಗೌಡ ಅವರನ್ನೊಳಗೊಂಡ ಲೋಕ ಅದಾಲತ್‌ ಪೀಠದಲ್ಲಿ 96 ವರ್ಷದ ಹಿರಿಯ ನಾಗರಿಕ ಬಸನಗೌಡ ಯಲ್ಲಪ್ಪಗೌಡ ಮರಿಯಪ್ಪಗೌಡ ಅವರು ವಿಭಾಗದ ದಾವೆಯಲ್ಲಿ ತಮ್ಮ ಆಸ್ತಿಯನ್ನು ಸಂತೋಷದಿಂದ ತಮ್ಮ ಮಗನಿಗೆ ಬಿಟ್ಟು ಕೊಡುವ ಮೂಲಕ ತಮ್ಮ ದೊಡ್ಡತನ ಮೆರೆದು ಕುಟುಂಬದವರೆಲ್ಲರ ಗೌರವಕ್ಕೆ ಪಾತ್ರರಾಗಿದ್ದಾರೆ.

ಧಾರವಾಡದ 1ನೇ ಅಧಿಕ ಹಿರಿಯ ಸಿವಿಲ್‌ ನ್ಯಾಯಾ ಧೀಶರಾದ ವಿಜಯಲಕ್ಷ್ಮೀ ಗಣಾಪುರ ಮತ್ತು ಸಂಧಾನಕಾರರಾದ ಕಸ್ತೂರಿ ಗಡಾದ ಅವರನ್ನೊಳಗೊಂಡ ಲೋಕ ಅದಾಲತ್‌ ಪೀಠದಲ್ಲಿ 30 ಜನ ಪಕ್ಷಗಾರರಿದ್ದ ಆಸ್ತಿ ವಿಭಾಗದ ದಾವೆಯು ಸಹ ರಾಜಿ
ಆಗಿದ್ದು, ಅದರಲ್ಲಿ ಹಿರಿಯ ನಾಗರಿಕರು ಸಹ ಭಾಗಿಯಾಗಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

30 ವರ್ಷಗಳ ಸುದೀರ್ಘ‌ ವ್ಯಾಜ್ಯ ಅಂತ್ಯ
ಧಾರವಾಡದ 3ನೇ ಅಧಿಕ ಹಿರಿಯ ಸಿವಿಲ್‌ ನ್ಯಾಯಾಧೀಶರಾದ ಮಹೇಶ ಚಂದ್ರಕಾಂತ ಅವರು ಮತ್ತು ಸಂಧಾನಕಾರರಾದ ಗಿರೀಶ್‌ಕುಮಾರ ಕನಸೋಗಿ ಅವರನ್ನೊಳಗೊಂಡ ಲೋಕ ಅದಾಲತ್‌ ಪೀಠದಲ್ಲಿ 1980ರ ಕ್ರಯದ ಕರಾರು ಪತ್ರದ ಆಧಾರದ ಮೇಲೆ ನೋಂದಣಿ ಕ್ರಯಪತ್ರ ಬರೆದುಕೊಡಲು ಆದೇಶಿಸುವಂತೆ 1994ರಲ್ಲಿ ಸಲ್ಲಿಸಿದ್ದ ದಾವೆ ಯಶಸ್ವಿಯಾಗಿ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಂಡ ಕಕ್ಷಿದಾರರು ತಮ್ಮ 30 ವರ್ಷಗಳ ಸುದೀರ್ಘ‌ ವ್ಯಾಜ್ಯಕ್ಕೆ ಮಂಗಳ ಹಾಡಿದ್ದಾರೆ.

ಇದೇ ನ್ಯಾಯಾಲಯದಲ್ಲಿ ಧಾರವಾಡ ಲೈನ್‌ ಬಜಾರದ ಹನುಮಂತ ದೇವಸ್ಥಾನದ ವ್ಯಾಜ್ಯವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಂಡ ಕಕ್ಷಿದಾರರು ಪಾಳೆ ಪ್ರಕಾರ ದೇವಸ್ಥಾನದ ಪೂಜೆ ಮಾಡಲು ಸಂತೋಷದಿಂದ ಒಪ್ಪಿಕೊಂಡಿದ್ದಾರೆ.

ಟಾಪ್ ನ್ಯೂಸ್

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

1-sadsaasd

Gurdwara: ಪ್ರಸಾದ ತಯಾರಿಸಿ, ಭಕ್ತರಿಗೆ ಬಡಿಸಿದ ಪಿಎಂ ಮೋದಿ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Siddapura ವಾರಾಹಿಯಲ್ಲಿ ನೀರಿನ ಕೊರತೆ

Siddapura ವಾರಾಹಿಯಲ್ಲಿ ನೀರಿನ ಕೊರತೆ

Natural Disaster ಮುಂಜಾಗ್ರತ ಸಭೆ; ವಿವಿಧೆಡೆ ಎಸಿ ಭೇಟಿ, ಪರಿಶೀಲನೆ

Natural Disaster ಮುಂಜಾಗ್ರತ ಸಭೆ; ವಿವಿಧೆಡೆ ಎಸಿ ಭೇಟಿ, ಪರಿಶೀಲನೆ

Kota Srinivas Poojary ರಾಜ್ಯ ಕಾಂಗ್ರೆಸ್‌ ಸರಕಾರ ದಿವಾಳಿ

Kota Srinivas Poojary ರಾಜ್ಯ ಕಾಂಗ್ರೆಸ್‌ ಸರಕಾರ ದಿವಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Rain ರಾಜ್ಯದ 5 ಜಿಲ್ಲೆಗಳಲ್ಲಿ ಕೃತ್ತಿಕಾ ಮಳೆ ಅಬ್ಬರ

Karnataka Rain ರಾಜ್ಯದ 5 ಜಿಲ್ಲೆಗಳಲ್ಲಿ ಕೃತ್ತಿಕಾ ಮಳೆ ಅಬ್ಬರ

1-eqwewqeqwe

ಅಗ್ನಿ ದೇವರು ಎನ್ನುವವರು ಅದರ ಜತೆ ಮಲಗುತ್ತಿರಾ ಎಂದಿದ್ದ ಬಸವಣ್ಣ : ನಿಜಗುಣಾನಂದ ಶ್ರೀ

1-wqewqwewq

Rain; ಬೆಳಗಾವಿ, ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಶ್ರದ್ಧಾ ಕೇಂದ್ರಗಳು ಸಹಿಷ್ಣುತೆಯ ಪಾಠ ಶಾಲೆಯಾಗಲಿ

ಶ್ರದ್ಧಾ ಕೇಂದ್ರಗಳು ಸಹಿಷ್ಣುತೆಯ ಪಾಠ ಶಾಲೆಯಾಗಲಿ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

1-sadsaasd

Gurdwara: ಪ್ರಸಾದ ತಯಾರಿಸಿ, ಭಕ್ತರಿಗೆ ಬಡಿಸಿದ ಪಿಎಂ ಮೋದಿ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.