Crime: ಅಪರಿಚಿತ ವ್ಯಕ್ತಿಗಳಿಂದ ವೃದ್ದೆಗೆ ಮೋಸ; ಮನೆ ಬಾಡಿಗೆ ಪಡೆದು ಚಿನ್ನಾಭರಣ ದೋಚಿ ಪರಾರಿ


Team Udayavani, Sep 20, 2023, 8:03 AM IST

Crime: ಅಪರಿಚಿತ ವ್ಯಕ್ತಿಗಳಿಂದ ವೃದ್ದೆಗೆ ಮೋಸ; ಮನೆ ಬಾಡಿಗೆ ಪಡೆದು ಚಿನ್ನಾಭರಣ ದೋಚಿ ಪರಾರಿ

ಕುಣಿಗಲ್ : ಅಪರಿಚಿತ ವ್ಯಕ್ತಿಗಳು ತರಕಾರಿ ವ್ಯಾಪಾರಿಗಳೆಂದು ವೃದ್ದೆಯನ್ನು ನಂಬಿಸಿ, ಆಕೆಯ ಮನೆಯನ್ನು ಬಾಡಿಗೆ ಪಡೆದು, ಮೂರು ದಿನದ ಬಳಿಕ ವೃದ್ದೆಯ ಬಳಿ ಇದ್ದ ಲಕ್ಷಾಂತರೂ ಮೌಲ್ಯದ ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ತಾಲೂಕು ಹುಲಿಯೂರುದುರ್ಗ ಟೌನ್ ಹೊಸಪೇಟೆಯಲ್ಲಿ ನಡೆದಿದೆ.

ಹುಲಿಯೂರುದುರ್ಗ ಹಳೇವೂರು ರಸ್ತೆ ಹೊಸಪೇಟೆಯ ಜಯಲಕ್ಷ್ಮಮ್ಮ  (80) ವಡವೆ ಕಳೆದುಕೊಂಡ ವೃದ್ದೆ.

ಘಟನೆ ವಿವರ :  ವೃದ್ದೆ ಜಯಲಕ್ಷ್ಮಮ್ಮ ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು ಒಬ್ಬ ಮಗಳು ಬೆಂಗಳೂರು ಮತೊಬ್ಬ ಮಗಳು  ಮೈಸೂರಿನಲ್ಲಿ ವಾಸವಾಗಿದ್ದಾರೆ. ಜಯಲಕ್ಷ್ಮಮ್ಮಒಬ್ಬರೇ ಹುಲಿಯೂರುದುರ್ಗ ಟೌನ್ ಹೊಸಪೇಟೆಯಲ್ಲಿ ವಾಸವಾಗಿದ್ದಾರೆ. ಮೂರು ದಿನದ ಹಿಂದೆ ಅಪರಿಚಿತ ತಾಯಿ, ಮಗ ಜಯಲಕ್ಷ್ಮಮ್ಮ ಅವರ ಮನೆಗೆ ಹೋಗಿ ನಾವು ಬಡವರು ನಾವು ತರಕಾರಿ ವ್ಯಾಪಾರ ಮಾಡುತ್ತಿದ್ದೇವೆ. ಹೀಗಾಗಿ ನಿಮ್ಮ ಮನೆ ಪಕ್ಕದಲ್ಲಿ ಇರುವ ಮನೆಯನ್ನು ಬಾಡಿಗೆ ನೀಡುವಂತೆ ಅಜ್ಜಿಯನ್ನು ನಂಬಿಸಿ ಹತ್ತು ಸಾವಿರ ರೂ.ಗಳನ್ನು ಮುಂಗಡವಾಗಿ ನೀಡಿ ಮನೆಗೆ ಸೇರಿಕೊಂಡರ., ಕಳೆದ ಮೂರು ದಿನಗಳಿಂದ ಮನೆಯಲ್ಲಿ ವಾಸವಾಗಿದ್ದ ಅಪರಿಚಿತರು ರಾತ್ರಿ ಅಜ್ಜಿ ಜೊತೆಯೊಂದಿಗೆ ಊಟ ಮಾಡಿದರು. ಅಜ್ಜಿ ಮಲಗಿದ ಬಳಿಕ ಅಪರಿಚಿತರು ಅಜ್ಜಿಯ ಮನೆಯ ಮತ್ತೊಂದು ಬಾಗಿಲು ಮೂಲಕ ಮನೆ ಒಳಗೆ ಪ್ರವೇಶಿಸಿ ಮನೆಯಲ್ಲಿ ಇದ್ದ ಸುಮಾರು ನಾಲ್ಕು ಲಕ್ಷ ರೂ ಬೆಲೆ ಬಾಳುವ ಬಂಗಾರದ ಒಡವೆಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಅಜ್ಜಿ ಜಯಲಕ್ಷ್ಮಿಮ್ಮ ಬೆಳಗ್ಗೆ ಎದ್ದು ನೋಡಿದಾಗ, ಅಪರಿಚಿತ ತಾಯಿ ಮಗ ಇಬ್ಬರು ಮನೆಯಲ್ಲಿ ಇರಲಿಲ್ಲ. ಗಾಬರಿಗೊಂಡ ಜಯಲಕ್ಷ್ಮಮ್ಮ ತನ್ನ ಮನೆ  ಒಳಗೆ ಹೋಗಿ ಒಡವೆ ನೋಡಿದಾಗ ಒಡವೆಗಳು ಕಳವಾಗಿದ್ದವು.

ಜಯಲಕ್ಷ್ಮಮ್ಮ ಹುಲಿಯೂರುದುರ್ಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ,

ಎಚ್ಚರ ವಹಿಸಿ ಪಿಎಸ್‌ಐ : ಗುರುತು ಪರಿಚಯ ಇಲ್ಲದವರಿಗೆ ಮನೆ ಬಾಡಿಗೆ ಕೊಡಬಾರದು ಅವರಿಂದ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಮೊದಲಾದ ದಾಖಲೆಗಳನ್ನು ಪಡೆದು ಪರಿಶೀಲಿಸಿ ಮನೆ ಬಾಡಿಗೆಗೆ ನೀಡಬೇಕು ಇಲ್ಲವಾದಲ್ಲಿ ಅಪರಿಚಿತ ವ್ಯಕ್ತಿಗಳು ನಂಬಿಸಿ ಮೋಸ ಮಾಡಲಿದ್ದಾರೆ. ಸಾರ್ವಜನಿಕರು ಈ ಸಂಬಂಧ ಎಚ್ಚರ ವಹಿಸುವಂತೆ ಪಿಎಸ್‌ಐ ಸುನೀಲ್‌ಕುಮಾರ್ ಸಾರ್ವಜನಿಕರಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

1-imek

ನಮ್ಮ ‘ಐಮೆಕ್‌’ ಪ್ರಾಜೆಕ್ಟ್ ಗೆ ಜಿ7 ನಾಯಕರ ಬೆಂಬಲ!

vande bharat

ಜೂ.20ಕ್ಕೆ ಬೆಂಗಳೂರು-ಮಧುರೈ ವಂದೇ ಭಾರತ್‌: ಕರ್ನಾಟಕಕ್ಕೆ 9ನೇ ರೈಲು

1-sugopi

ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಚಿವ ಅನ್ನೋದೆ ನಿಮಗೆ ಇನ್ನೂ ಗೊತ್ತಿಲ್ಲ ಅನಿಸುತ್ತಿದೆ: ಜಿ. ಪರಮೇಶ್ವರ್‌

ನಾನು ಸಚಿವ ಅನ್ನೋದೆ ನಿಮಗೆ ಇನ್ನೂ ಗೊತ್ತಿಲ್ಲ ಅನಿಸುತ್ತಿದೆ: ಜಿ. ಪರಮೇಶ್ವರ್‌

1-sadasd

Tumakuru ಕ್ಷೇತ್ರ ಅಭಿವೃದ್ಧಿ ಪಡಿಸುವುದೇ ನನ್ನ ಗುರಿ: ಕೇಂದ್ರ ಸಚಿವ ವಿ.ಸೋಮಣ್ಣ

5-

ಕೇಂದ್ರ ಮಂತ್ರಿಯಾಗಿ ಕ್ಷೇತ್ರಕ್ಕೆ ಬಂದ ಮೊದಲ ದಿನವೇ ಸೋಮಣ್ಣ ಡಿಸಿ, ಅಧಿಕಾರಿಗಳಿಗೆ ತರಾಟೆ

1-aaa

Kunigal; ಕಾರಿನಿಂದ ಬೈಕ್‌ಗೆ ಗುದ್ದಿ ಯುವಕನ ಕೊಲೆ: ಐವರ ಬಂಧನ

2-tumkur

Tumkur: ಕಲುಷಿತ ನೀರು ಕುಡಿದು ಮತ್ತಿಬ್ಬರು ಸಾವು; ಮೃತರ ಸಂಖ್ಯೆ ಮೂರಕ್ಕೆ ಏರಿಕೆ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

police crime

ಗೇಮಿಂಗ್‌ ಜೋನ್‌ ದುರಂತ: ಇನ್ನೂ ಇಬ್ಬರು ಪೊಲೀಸ್‌ ವಶಕ್ಕೆ

police USA

ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್‌: ಇಬ್ಬರು ಸಾವು

arrested

ಸಲ್ಮಾನ್‌ ಮನೆ ಹೊರಗೆ ಗುಂಡಿನ ದಾಳಿ: ರಾಜಸ್ಥಾನದ ವ್ಯಕ್ತಿ ಸೆರೆ

baby

UP ಕ್ಷುಲ್ಲಕ ಕಾರಣಕ್ಕೆ 2 ವರ್ಷದ ಮಗಳನ್ನು ಕಾಲುವೆಗೆಸೆದ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.