Politics: ಸಚಿವ ರಾಜಣ್ಣರಿಗೆ ನೋಟಿಸ್?
Team Udayavani, Sep 21, 2023, 11:25 PM IST
ಬೆಂಗಳೂರು: ಮೂರು ಉಪ ಮುಖ್ಯಮಂತ್ರಿಗಳನ್ನು ಮಾಡುವ ವಿಚಾರ ಹಾಗೂ ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರಕಾರ ವಿಸರ್ಜನೆ ಬಗ್ಗೆ ಹೇಳಿಕೆ ನೀಡಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರಿಗೆ ಅಖೀಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಗುರುವಾರ ಶೋಕಾಸ್ ನೋಟಿಸ್ ಜಾರಿಯಾಗುವ ಸಾಧ್ಯತೆಗಳಿವೆ.
ಪಕ್ಷದ ಶಿಸ್ತು ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಶೋಕಾಸ್ ನೋಟಿಸ್ ಜಾರಿಯಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ರಾಜಣ್ಣರಿಗೆ ನೋಟಿಸ್ ನೀಡಿದಲ್ಲಿ, ಕೇವಲ ಹತ್ತು ದಿನಗಳ ಅಂತರದಲ್ಲಿ ಕಾಂಗ್ರೆಸ್ ನೀಡುತ್ತಿರುವ ಎರಡನೇ ನೋಟಿಸ್ ಇದಾಗ ಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ಧಾಳಿ ನಡೆಸಿದ ಕಾರಣಕ್ಕೆ ಬಿ.ಕೆ. ಹರಿಪ್ರಸಾದ್ ಅವರಿಗೆ ಸೆ. 12ರಂದು ಎಐಸಿಸಿ ಶೋಕಾಸ್ ನೋಟಿಸ್ ನೀಡಿ, ಹತ್ತು ದಿನಗಳಲ್ಲಿ ಉತ್ತರ ನೀಡುವಂತೆ ಸೂಚಿಸಿತ್ತು.
ಸಮುದಾಯವಾರು ಮೂವರು ಉಪಮುಖ್ಯಮಂತ್ರಿ (ಡಿಸಿಎಂ)ಗಳನ್ನು ಮಾಡಬೇಕು. ಲೋಕಸಭಾ ಚುನಾವಣೆ ಗೆಲುವಿಗೆ ಈ ಕ್ರಮ ಬಹಳ ಪ್ರಮುಖವಾದುದು ಎಂದು ರಾಜಣ್ಣ ಹೇಳಿದ್ದರು. ಬಳಿಕ ಈ ವಿಚಾರ ಪಕ್ಷದಲ್ಲಿ ತೀವ್ರ ಚರ್ಚೆಗೀಡಾಗಿ ಪರ-ವಿರೋಧಗಳು ವ್ಯಕ್ತವಾಗಿದ್ದವು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಿಂದ ಈ ಮಾತನ್ನು ಹೇಳಿಸುತ್ತಿದ್ದಾರೆ ಎಂಬ ಮಾತೂ ಕೇಳಿ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮುಕ್ತ ವ್ಯಾಪಾರಕ್ಕೆ ಭಾರತ- ಮಾಲ್ದೀವ್ಸ್ ಒಪ್ಪಂದ
Gujarat; ಗೇಮಿಂಗ್ ಸೆಂಟರ್ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್ ವಿಚಾರಣೆ
Qatar ವಿಮಾನ ಆಗಸದಲ್ಲಿ ಓಲಾಡಿ 12 ಮಂದಿಗೆ ಗಾಯ
Bird hit; ಲೇಹ್ಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ: ದಿಲ್ಲಿಗೆ ವಾಪಸ್
Cyclone ಬಾಂಗ್ಲಾ ಕರಾವಳಿಗೆ ರೆಮಲ್; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ