ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕುಗ್ರಾಮವಿದು ಜಲ್ಲಿಗುಡ್ಡೆ!


Team Udayavani, Sep 22, 2023, 6:35 PM IST

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕುಗ್ರಾಮವಿದು ಜಲ್ಲಿಗುಡ್ಡೆ!

ಮಹಾನಗರ: ಹದಗೆಟ್ಟ ರಸ್ತೆಗಳು, ಇಲ್ಲದ ಬಸ್‌ ನಿಲ್ದಾಣ, ಹೆಸರಿಗೆ ಮಾತ್ರ ಎನ್ನುವಂತಿರುವ ಬಸ್‌ ತಂಗುದಾಣ, ಇನ್ನೂ ನಿರ್ಮಾಣವಾಗದ ಒಳಚರಂಡಿ… ಇದು ಬಜಾಲ್‌ನ ಜಲ್ಲಿಗುಡ್ಡೆ ಪ್ರದೇಶದ ಸಮಸ್ಯೆಗಳ ಸಾರ.

2002ರಲ್ಲಿ ವಾರ್ಡ್‌ ವಿಸ್ತರಣೆ ಸಂದರ್ಭ ಈ ಪ್ರದೇಶ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರ್ಪಡೆಯಾಗಿತ್ತು. ಆದರೆ ಹೆಸರಿಗೆ ಮಾತ್ರ ನಗರವಾಗಿ, ಒಳ ಹೊಕ್ಕು ನೋಡಿದರೆ ಕುಗ್ರಾಮದಂತಿದೆ ಈ ಜಲ್ಲಿಗುಡ್ಡೆ ಪ್ರದೇಶ. ಪಾಲಿಕೆ ವ್ಯಾಪ್ತಿಯ ಅತ್ಯಂತ ಕಡೆಗಣಿಸಲ್ಪಟ್ಟ ಪ್ರದೇಶ ಎನ್ನಬಹುದು. ಸಮಗ್ರ ಅಭಿವೃದ್ಧಿಯ ಕುರಿತಂತೆ ಇಲ್ಲಿನ ಜನರ ಬಹುಕಾಲದ ಬೇಡಿಕೆ ಇನ್ನೂ ಈಡೇರಿಲ್ಲ. ಸಾವಿರಾರು ಸಂಖ್ಯೆಯಲ್ಲಿ ಜನ ವಸತಿ ಇರುವ ಈ ಪ್ರದೇಶವನ್ನು ಕಡೆಗಣಿಸಿರುವ ಬಗ್ಗೆ ಸ್ಥಳೀಯರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಜಲ್ಲಿಗುಡ್ಡೆಯನ್ನು ಸಂಪರ್ಕಿಸುವ ಮುಖ್ಯ ರಸ್ತೆ ಡಾಮರು ರಸ್ತೆಯಾಗಿದ್ದು, ಅಲ್ಲಲ್ಲಿ ಹೊಂಡ ಗುಂಡಿಗಳಿಂದ ಕೂಡಿದೆ. ಒಳ ರಸ್ತೆಗಳ ಕಥೆಯಂತೂ ಇನ್ನೂ ಶೋಚನೀಯವಾಗಿದೆ. ಜಯನಗರವನ್ನು ಸಂಪರ್ಕಿಸುವ ಡಾಮರು ರಸ್ತೆಯಲ್ಲಿ ವಾಹನ ಸಂಚಾರ ದುಸ್ತರವಾಗಿದೆ. ದೊಡ್ಡ ದೊಡ್ಡ ಹೊಂಡಗಳಿದ್ದು, ಕನಿಷ್ಠ ಹೊಂಡ ಮುಚ್ಚುವ ಕೆಲಸವೂ ಆಗಿಲ್ಲ. ಪಕ್ಕದ ಬಜಾಲ್‌ ಪ್ರದೇಶ ಸಾಕಷ್ಟು ಅಭಿವೃದ್ಧಿ ಕಾಣುತ್ತಿದ್ದು, ಜಲ್ಲಿಗುಡ್ಡೆ ಪ್ರದೇಶವನ್ನು ಕಡೆಗಣಿಸಲಾಗಿದೆ ಎನ್ನುವುದು ಸ್ಥಳೀಯರ ಮಾತು.

ನಗರದಿಂದ ಜಲ್ಲಿಗುಡ್ಡೆಗೆ ಆರು ಬಸ್‌ಗಳು ಟ್ರಿಪ್‌ ಮಾಡುತ್ತವೆ. ಆದರೆ ರಸ್ತೆ ಬದಿಯಲ್ಲಿ ಒಂದು ತಂಗುದಾಣವೂ ಕಂಡು ಬರುವುದಿಲ್ಲ. ಮಳೆ ಬಿಸಿಲಿಗೆ ರಸ್ತೆ ಬದಿಯ ಅಂಗಡಿಗಳ ಮುಂಭಾಗ ಅಥವಾ ರಸ್ತೆಯಲ್ಲೇ ನಿಂತು ಕಾಯಬೇಕಾಗುತ್ತದೆ. ಬಸ್ಸಿನ ಕೊನೆಯ ಸ್ಟಾಪ್‌ ಇರುವಲ್ಲಿ ಬಸ್‌ ನಿಲ್ದಾಣವಿದ್ದು, ಇಲ್ಲಿ ಬಸ್‌ಗಳು ಕೆಲವು ಹೊತ್ತು ನಿಲ್ಲುತ್ತವೆ. ಪ್ರಯಾಣಿಕರಿಗೆ
ಕುಳಿತುಕೊಳ್ಳಲು ಬಸ್‌ಗಳಿಗೆ ತಂಗಲು ಸೂಕ್ತ ವ್ಯವಸ್ಥೆಯಿಲ್ಲ. ಸಣ್ಣ ಮೈದಾನದಂತಹ ಜಾಗದಲ್ಲಿ ಬಸ್‌ಗಳನ್ನು ಚಾಲಕರು ನಿಲ್ಲಿಸುತ್ತಾರೆ.

ಒಳಚರಂಡಿ ಸಂಪರ್ಕವಿಲ್ಲ
ನಗರದ ಪ್ರದೇಶದಲ್ಲಿರಬೇಕಾದ ಪ್ರಮುಖ ಮೂಲ ಸೌಕರ್ಯಗಳಲ್ಲಿ ಒಂದು ಸಮರ್ಪಕ ಒಳಚರಂಡಿ ವ್ಯವಸ್ಥೆ. ಆದರೆ ಜಲ್ಲಿಗುಡ್ಡೆ ಪ್ರದೇಶದಲ್ಲಿ ಇನ್ನೂ ಒಳಚರಂಡಿ ಸೌಲಭ್ಯ ಕಲ್ಪಿಸಲಾಗಿಲ್ಲ. ಮನೆಯವರು ಪಿಟ್‌ ಬಳಸುತ್ತಿದ್ದು, ತುಂಬಿದ ಬಳಿಕ ಅದರ ವಿಲೇವಾರಿಯನ್ನೂ ಅವರೇ ದುಡ್ಡು ಹಾಕಿ ಮಾಡುವಂತಾಗಿದೆ. ಶೀಘ್ರ ಒಳಚರಂಡಿ ಜಾಲವನ್ನು ನಿರ್ಮಿಸಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ.

ಜಲ್ಲಿಗುಡ್ಡೆ ಪ್ರದೇಶದ ಅಭಿವೃದ್ಧಿಗೆ ಬದ್ಧ ಜಲ್ಲಿಗುಡ್ಡೆ ಪ್ರದೇಶದ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಯೋಜನೆಗಳಡಿ
ಅನುದಾನ ಪಡೆದು ಕೆಲಸ ಮಾಡಲಾಗಿದೆ. ಹದಗೆಟ್ಟಿರುವ ಜಯನಗರದ ಒಳರಸ್ತೆ ಸದ್ಯದಲ್ಲೇ ಡಾಮರು ಹಾಕಲಾಗುವುದು. ಮಳೆ ನಿಂತ ತತ್‌ ಕ್ಷಣ ಈ ಕೆಲಸ ಆರಂಭಿಸಲಾಗುವುದು. ಬಸ್‌ ನಿಲ್ದಾಣ ನಿರ್ಮಾಣಕ್ಕೆ ಸೂಕ್ತ ಸ್ಥಳದ ಕೊರತೆಯಿದ್ದು, ಸದ್ಯ ಖಾಸಗಿ ಸ್ಥಳದಲ್ಲಿ ಬಸ್‌ಗಳು ತಂಗುತ್ತವೆ. ಒಳ ಚರಂಡಿ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲೂ ಅಧಿಕಾರಿಗಳ ಮಟ್ಟದಲ್ಲಿ ಮಾತುಕತೆ ನಡೆಯುತ್ತಿದ್ದು, ಶೀಘ್ರ ಕಾಮಗಾರಿ ಆರಂಭಿಸುವ ಪ್ರಯತ್ನ ಮಾಡಲಾಗುವುದು.
ಅಶ್ರಫ್‌ ಬಜಾಲ್‌, ಕಾರ್ಪೋರೆಟರ್‌

*ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.