ICC World Cup; ಭಾರತಕ್ಕೆ ಬರಲು ಪಾಕ್ ಕ್ರಿಕೆಟ್ ತಂಡಕ್ಕೆ ವೀಸಾ ಸಮಸ್ಯೆ; ಪ್ರಯಾಣ ವಿಳಂಬ
Team Udayavani, Sep 23, 2023, 1:19 PM IST
ಇಸ್ಲಮಾಬಾದ್: ಭಾರತದಲ್ಲಿ ಇನ್ನು ಕೆಲವೇ ದಿನಗಳಲ್ಲಿ ಆರಂಭವಾಗಲಿರುವ ಐಸಿಸಿ ಏಕದಿನ ವಿಶ್ವಕಪ್ ಗೆ ಬರಲು ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಸಮಸ್ಯೆ ಎದುರಾಗಿದೆ. ಬಾಬರ್ ಅಜಂ ಪಡೆಗೆ ವೀಸಾ ಸಮಸ್ಯೆ ತಲೆದೋರಿದ್ದು, ಭಾರತ ಪ್ರಯಾಣ ವಿಳಂಬವಾಗಿದೆ.
ಪಾಕಿಸ್ತಾನ ತನ್ನ ಮೊದಲ ಅಭ್ಯಾಸ ಪಂದ್ಯವನ್ನು ಹೈದರಾಬಾದ್ ನಲ್ಲಿ ಸೆಪ್ಟೆಂಬರ್ 29 ರಂದು ನ್ಯೂಜಿಲ್ಯಾಂಡ್ ವಿರುದ್ಧ ಆಡಲಿದೆ. ವರದಿಯ ಪ್ರಕಾರ, ಪಾಕಿಸ್ತಾನ ತಂಡವು ಅಲ್ಲಿಂದ ಹೈದರಾಬಾದ್ ಗೆ ತೆರಳುವ ಮೊದಲು ತಂಡ ಅಭ್ಯಾಸಕ್ಕಾಗಿ ಮುಂದಿನ ವಾರದ ಆರಂಭದಲ್ಲಿ ದುಬೈಗೆ ಪ್ರಯಾಣಿಸಬೇಕಿತ್ತು.
ಈಗ, ವೀಸಾ ಕ್ಲಿಯರೆನ್ಸ್ ಪಡೆಯುವಲ್ಲಿ ವಿಳಂಬವಾದ ನಂತರ, ಅವರು ಬುಧವಾರ ಮುಂಜಾನೆ ಲಾಹೋರ್ ನಿಂದ ಮೊದಲು ದೆಹಲಿಗೆ ಪ್ರಯಾಣಿಸುತ್ತಾರೆ ಎಂದು ವರದಿಯಾಗಿದೆ. ವೀಸಾಗಳಿಗಾಗಿ ಅರ್ಜಿಯನ್ನು ಒಂದು ವಾರದ ಹಿಂದೆ ಸಲ್ಲಿಸಲಾಗಿದೆ ಎಂದು ವರದಿಯಾಗಿದೆ.
ಏಕದಿನ ವಿಶ್ವಕಪ್ ಗಾಗಿ ಭಾರತಕ್ಕೆ ಬಂದಿಳಿಯಲಿರುವ ಒಂಬತ್ತು ತಂಡಗಳಲ್ಲಿ ಪಾಕಿಸ್ತಾನ ಮಾತ್ರ ವೀಸಾಗಾಗಿ ಕಾಯುತ್ತಿದೆ ಎಂದು ತಿಳಿದು ಬಂದಿದೆ. ಆಸ್ಟ್ರೇಲಿಯನ್ ಕ್ರಿಕೆಟ್ ತಂಡವು ವಿಶ್ವಕಪ್ ಆಡಲು ಈಗಾಗಲೇ ಭಾರತದಲ್ಲಿದ್ದು, ಉಳಿದ ತಂಡಗಳು ದೇಶವನ್ನು ಪ್ರವೇಶಿಸಲು ಅನುಮತಿಯನ್ನು ಪಡೆದಿವೆ. ಮುಂಬರುವ ವಾರದಲ್ಲಿ ಭಾರತವನ್ನು ತಲುಪಲಿವೆ.
ಇದೀಗ ಮೊದಲ ಅಭ್ಯಾಸ ಪಂದ್ಯಕ್ಕೆ ಕೇವಲ ಎರಡು ದಿನ ಮೊದಲು ಬಾಬರ್ ಪಡೆ ಹೈದರಾಬಾದ್ ಗೆ ತಲುಪಲಿದೆ. ಒಂದು ದಿನ ಮುಂಚಿತವಾಗಿ ಬರುವ ಧಾರ್ಮಿಕ ಹಬ್ಬಗಳ ಹಿನ್ನೆಲೆಯಲ್ಲಿ ಪ್ರವಾಸಿ ತಂಡಗಳಿಗೆ ಸಂಪೂರ್ಣ ಭದ್ರತೆಯನ್ನು ಒದಗಿಸಲು ವಿಫಲವಾದ ಬಗ್ಗೆ ಹೈದರಾಬಾದ್ ಪೊಲೀಸರು ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ಗೆ ತಿಳಿಸಿದ್ದರಿಂದ ಪಾಕಿಸ್ತಾನ ಮತ್ತು ನ್ಯೂಜಿಲ್ಯಾಂಡ್ ನಡುವಿನ ಅಭ್ಯಾಸವು ಖಾಲಿ ಸ್ಟೇಡಿಯಂನಲ್ಲಿ ನಡೆಯಲಿದೆ. ಪಾಕಿಸ್ತಾನವು ತನ್ನ ಮೊದಲ ವಿಶ್ವಕಪ್ ಪಂದ್ಯವನ್ನು ನೆದರ್ಲ್ಯಾಂಡ್ಸ್ ವಿರುದ್ಧ ಅಕ್ಟೋಬರ್ 6 ರಂದು ಹೈದರಾಬಾದ್ ನಲ್ಲಿ ಆಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್
Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ
Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ
ಇನ್ಸ್ಪೆಕ್ಟರ್ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್ ಸೆರೆ
Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ