Sirsi:ಸೇತುವೆಯ ರಕ್ಷಣಾ ಗೋಡೆಗೆ ಢಿಕ್ಕಿ ಹೊಡೆದ ವಾಹನ; ಒಂದು ಜಾನುವಾರು ಸಾವು; ಇಬ್ಬರಿಗೆ ಗಾಯ
Team Udayavani, Sep 24, 2023, 11:31 AM IST
ಶಿರಸಿ: ಜಾನುವಾರು ತುಂಬಿಕೊಂಡು ಬಂದ ವಾಹನ ತಾಲೂಕಿನ ಬುಗುಡಿಕೊಪ್ಪ ಬಳಿ ಸೇತುವೆಯ ರಕ್ಷಣಾ ಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಸೆ.24ರ ಭಾನುವಾರ ನಡೆದಿದೆ.
ಚಾಲಕನ ನಿರ್ಲಕ್ಷ್ಯತನದಿಂದ ವಾಹನದಲ್ಲಿದ್ದ ಜಾನುವಾರಲ್ಲಿ ಒಂದು ಮೃತಪಟ್ಟಿದೆ.
ಗಾಯಗೊಂಡವರು ಹಾನಗಲ್ ಮೂಲದವರು ಎನ್ನಲಾಗಿದ್ದು, ಶಿರಸಿ ಅಗ್ನಿಶಾಮಕ ದಳ ಸಿಬಂದಿಗಳು ಬೆಳಗಿನ ಜಾವ 45 ನಿಮಿಷಗಳ ಕಾಲ ಕಾರ್ಯಾಚರಣೆ ಮಾಡಿ ಚಾಲಕ, ಸಹ ಪ್ರಯಾಣಿಕ ಹಾಗೂ ವಾಹನದಲ್ಲಿದ್ದ ಜಾನುವಾರುಗಳನ್ನು ಹೊರ ತೆಗೆದರು.
ಒಂದೇ ವಾಹನದಲ್ಲಿ ಆರು ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿರುವ ಬಗ್ಗೆ ಕೂಡ ಪೋಲಿಸರಿಂದ ತನಿಖೆ ಆರಂಭವಾಗಿದೆ.
ಬನವಾಸಿ ಠಾಣೆ ಪಿಎಸ್ಐ ಚಂದ್ರಕಲಾ ಪತ್ತಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ
Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ
Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ
ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ