Cauvery issue: ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದ ತೀರ್ಥಹಳ್ಳಿ ಕರವೇ ಘಟಕ
ಕಾವೇರಿ ನೀರಿಗಾಗಿ ಪ್ರತಿಭಟನೆ ; ಉಗ್ರ ಹೋರಾಟದ ಎಚ್ಚರಿಕೆ
Team Udayavani, Sep 25, 2023, 4:10 PM IST
ತೀರ್ಥಹಳ್ಳಿ: ಕಾವೇರಿ ನೀರನ್ನು ತಮಿಳುನಾಡಿಗೆ ಬಿಟ್ಟ ಹಿನ್ನೆಲೆ ತೀರ್ಥಹಳ್ಳಿ ಘಟಕದ ಕರವೇ ಕಾರ್ಯಕರ್ತರಿಂದ ರಸ್ತೆ ತಡೆದು ಪ್ರತಿಭಟನೆ ಮಾಡಲಾಯಿತು.
ಕರವೇ ಕಾರ್ಯಕರ್ತರು ತಾಲೂಕು ಕಚೇರಿಯ ಎದುರಿನ ಮುಖ್ಯರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಘಟಕದ ಕರವೇ ಅಧ್ಯಕ್ಷ ಯಡೂರು ಸುರೇಂದ್ರ ಮಾತನಾಡಿ, ಕಾವೇರಿ ನೀರನ್ನು ರಾತ್ರಿ ಹಗಲು ಎನ್ನದೇ ಬಿಟ್ಟಿದ್ದಾರೆ. ರಾಜ್ಯ ಸರ್ಕಾರದವರು ಮಲಗಿದ್ದರೋ ಏನೋ ಗೊತ್ತಿಲ್ಲ, ನಮ್ಮ ರೈತರಿಗೆ, ಬೆಂಗಳೂರಿನ ಜನರಿಗೆ ಕುಡಿಯಲು ನೀರಿಲ್ಲದ ಪರಿಸ್ಥಿತಿ ಆಗಿದೆ. ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ನಂತರ ಮಾತನಾಡಿದ ವೆಂಕಟೇಶ್ ಹೆಗಡೆ, ಇಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವೈಫಲ್ಯ ಹೊಂದಿದೆ. ತಾಲೂಕು ಕಚೇರಿ ಮುತ್ತಿಗೆ ಹಾಕುತ್ತೇವೆ ಎಂದು ಮೊದಲೇ ತಿಳಿಸಿದ್ದರು ಕೂಡ ಯಾರು ಕೂಡ ಇರಲಿಲ್ಲ. ರಾಜ್ಯದ ಹಾಗೂ ಕೇಂದ್ರದ ಗುಪ್ತಚರ ಇಲಾಖೆ ಕೂಡ ಸಂಪೂರ್ಣ ವೈಫಲ್ಯ ಹೊಂದಿದೆ. ಕರ್ನಾಟಕದ ಪರಿಸ್ಥಿತಿಯನ್ನು ಗುಪ್ತಚರ ಇಲಾಖೆ ಮಾಹಿತಿ ನೀಡಬೇಕಿತ್ತು. ಈ ಮೊದಲು ಸುಪ್ರೀಂ ಕೋರ್ಟ್ ತೀರ್ಪು ನೀಡಿದಾಗ ಬಂಗಾರಪ್ಪನವರು ನೀರನ್ನು ಬಿಟ್ಟಿರಲಿಲ್ಲ. ಈಗಲೂ ಮುಖ್ಯಮಂತ್ರಿಗಳು ಅದೇ ರೀತಿಯಲ್ಲಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಹೇಳಿದರು.
ಜ್ಯೋತಿ ದೀಲಿಪ್ ಮಾತನಾಡಿ, ಮಳೆ ನೀರಿಗಾಗಿ ಕಾಯುವ ಪರಿಸ್ಥಿತಿ ನಮ್ಮಲ್ಲಿದೆ. ಆದರೆ ಇರುವ ನೀರನ್ನು ಕೂಡ ಮತ್ತೊಬ್ಬರಿಗೆ ಕೊಡುವುದು ಸರಿಯಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ
Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!
Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ
Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ
BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು