Women’s Hockey : ಸಂಗೀತಾ ಹ್ಯಾಟ್ರಿಕ್‌; ಸಿಂಗಾಪುರ ವಿರುದ್ಧ 13-0 ಗೆಲುವು


Team Udayavani, Sep 27, 2023, 11:40 PM IST

1-ssad

ಹ್ಯಾಂಗ್‌ಝೂ: ಯುವ ಸ್ಟ್ರೈಕರ್‌ ಸಂಗೀತಾ ಕುಮಾರಿ ಅವರ ಹ್ಯಾಟ್ರಿಕ್‌ ಹಾಗೂ ಇತರ ಆಟಗಾರ್ತಿಯರ ಅಮೋಘ ಪ್ರದರ್ಶನದ ನೆರವಿನಿಂದ ಏಷ್ಯಾಡ್‌ ವನಿತಾ ಹಾಕಿ ಪಂದ್ಯಾವಳಿಯ ತನ್ನ ಮೊದಲ ಮುಖಾಮುಖೀಯಲ್ಲಿ ಭಾರತ 13-0 ಗೋಲುಗಳಿಂದ ಸಿಂಗಾಪುರವನ್ನು ಕೆಡವಿತು.

ಭಾರತ ಮೊದಲೆರಡು ಕ್ವಾರ್ಟರ್‌ಗಳಲ್ಲೇ 8 ಗೋಲು ಸಿಡಿಸಿ ತಾಕತ್ತು ತೋರಿತು. ಅರ್ಧ ಹಾದಿಯ ಬಳಿಕ ಸಿಂಗಾಪುರ ಒಂದಿಷ್ಟು ಚೇತರಿಕೆ ಕಂಡಿತಾದರೂ ಒಂದೇ ಒಂದು ಗೋಲು ಬಾರಿಸಲು ಸಾಧ್ಯವಾಗಲಿಲ್ಲ.

ಸಂಗೀತಾ ಕುಮಾರಿ ಪಂದ್ಯದ 23ನೇ, 47ನೇ ಹಾಗೂ 56ನೇ ನಿಮಿಷದಲ್ಲಿ ಗೋಲು ಬಾರಿಸಿದರು. ನವನೀತ್‌ ಕೌರ್‌ 14ನೇ ನಿಮಿಷದಲ್ಲಿ ಬಡಬಡನೆ 2 ಗೋಲು ಸಿಡಿಸಿದರು. ಉಳಿದಂತೆ ಉದಿತಾ (6ನೇ ನಿಮಿಷ), ಸುಶೀಲಾ ಚಾನು (8ನೇ ನಿಮಿಷ), ದೀಪಿಕಾ (11ನೇ ನಿಮಿಷ), ದೀಪ್‌ ಗ್ರೇಸ್‌ ಎಕ್ಕಾ (17ನೇ ನಿಮಿಷ), ನೇಹಾ (19ನೇ ನಿಮಿಷ), ಸಲೀಮಾ ಟೇಟೆ (35ನೇ ನಿಮಿಷ), ಮೋನಿಕಾ (52ನೇ ನಿಮಿಷ) ಮತ್ತು ವಂದನಾ ಕಟಾರಿಯಾ (56ನೇ ನಿಮಿಷ) ಒಂದೊಂದು ಗೋಲು ಹೊಡೆದರು.

“ಎ’ ವಿಭಾಗದಲ್ಲಿರುವ ಭಾರತ ತನ್ನ ಮುಂದಿನ ಪಂದ್ಯವನ್ನು ಶುಕ್ರವಾರ ಮಲೇಷ್ಯಾ ವಿರುದ್ಧ ಆಡಲಿದೆ.

ಬಾಸ್ಕೆಟ್‌ಬಾಲ್‌ : ಭಾರತ ಕ್ವಾರ್ಟರ್‌ ಫೈನಲ್‌ಗೆ

ಹ್ಯಾಂಗ್‌ಝೂ: ಭಾರತದ ಪುರುಷರ ತಂಡ 3/3 ಬಾಸ್ಕೆಟ್‌ಬಾಲ್‌ ಪಂದ್ಯಾವಳಿಯ ಕ್ವಾರ್ಟರ್‌ ಫೈನಲ್‌ ತಲುಪಿದೆ. ಬುಧವಾರ ನಡೆದ “ಸಿ’ ವಿಭಾಗದ ಪಂದ್ಯದಲ್ಲಿ ಮಕಾವೊ ವಿರುದ್ಧ ಭಾರತ 21-12 ಅಂತರದ ಗೆಲುವು ಸಾಧಿಸಿತು.ಸಹೇಜ್‌ ಪ್ರತಾಪ್‌ ಸಿಂಗ್‌ ಭಾರತದ ಜಯದಲ್ಲಿ ಪ್ರಮುಖ ಪಾತ್ರ ವಹಿಸಿದರು. ಅವರು 10 ಅಂಕ ಗಳಿಸಿದರು. ಮಕಾವೊ ಪರ ಹೌ ಇನ್‌ ಹೊ 5 ಅಂಕ ಗಳಿಸಿ ಕೊಟ್ಟರು. ಭಾರತ ಮೊದಲ ಪಂದ್ಯದಲ್ಲಿ ಮಲೇಷ್ಯಾವನ್ನು ಮಣಿಸಿತ್ತು. ಆದರೆ ಕ್ವಾರ್ಟರ್‌ ಫೈನಲ್‌ನಲ್ಲಿ ಹಾಲಿ ಚಾಂಪಿಯನ್‌ ಹಾಗೂ ಆತಿಥೇಯ ಚೀನದ ಕಠಿನ ಸವಾಲು ಭಾರತಕ್ಕೆ ಎದುರಾಗಲಿದೆ.

ಟೆನಿಸ್‌: ಸುಮಿತ್‌, ಅಂಕಿತಾ ಪರಾಭವ
ಹ್ಯಾಂಗ್‌ಝೂ: ಏಷ್ಯಾಡ್‌ ಟೆನಿಸ್‌ ಸಿಂಗಲ್ಸ್‌ನಲ್ಲಿ ಭಾರತ ಪದಕರಹಿತ ಸ್ಥಿತಿಯನ್ನು ತಂದುಕೊಂಡಿದೆ. ನೆಚ್ಚಿನ ಆಟಗಾರರಾದ ಸುಮಿತ್‌ ನಾಗಲ್‌, ಅಂಕಿತಾ ರೈನಾ ಇಬ್ಬರೂ ಕ್ವಾರ್ಟರ್‌ ಫೈನಲ್‌ನಲ್ಲಿ ಸೋತು ನಿರಾಸೆ ಮೂಡಿಸಿದರು.

ಸುಮಿತ್‌ ನಾಗಲ್‌ ಅವರನ್ನು ಚೀನದ ಜೀಜೆನ್‌ ಜಾಂಗ್‌ 6-7 (3), 6-1, 6-2ರಿಂದ ಮಣಿಸಿದರು. ಕಳೆದ ಸಲ ಕಂಚಿನ ಪದಕ ಜಯಿಸಿದ್ದ ಅಂಕಿತಾ ರೈನಾ ಜಪಾನ್‌ನ ಹಾರುಕಾ ರಾಜಿ ವಿರುದ್ಧ 3 ಸೆಟ್‌ಗಳ ಹೋರಾಟದ ಬಳಿಕ 6-3, 4-6, 4-6ರಿಂದ ಪರಾಭವಗೊಂಡರು.
ಇದಕ್ಕೂ ಮುನ್ನ ರಾಮ್‌ಕುಮಾರ್‌ ರಾಮನಾಥನ್‌ ಮತ್ತು ಋತುಜಾ ಭೋಂಸ್ಲೆ ಕ್ರಮವಾಗಿ 3ನೇ ಹಾಗೂ 2ನೇ ಸುತ್ತಿನಲ್ಲಿ ಪರಾಭವಗೊಂಡಿದ್ದರು.

ಪದಕವೊಂದು ಖಾತ್ರಿ
ಸುಮಿತ್‌, ಅಂಕಿತಾ ನಿರ್ಗಮನದ ಹೊರತಾಗಿಯೂ ಭಾರತಕ್ಕೆ ಟೆನಿಸ್‌ ಪದಕವೊಂದು ಖಾತ್ರಿಯಾಗಿದೆ. ರಾಮ್‌ಕುಮಾರ್‌ ರಾಮನಾಥನ್‌-ಸಾಕೇತ್‌ ಮೈನೆನಿ ಪುರುಷರ ಡಬಲ್ಸ್‌ನಲ್ಲಿ ಸೆಮಿಫೈನಲ್‌ ತಲುಪಿದ್ದು, ಯಾವ ಪದಕ ತರಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ದ್ವಿತೀಯ ಶ್ರೇಯಾಂಕದ ಭಾರತೀಯ ಜೋಡಿ ಕ್ವಾರ್ಟರ್‌ ಫೈನಲ್‌ನಲ್ಲಿ ಚೀನದ ಜಿಜೆನ್‌ ಜಾಂಗ್‌-ಯಿಬಿಂಗ್‌ ವು ವಿರುದ್ಧ 6-1, 7-6 (8) ಅಂತರದ ಗೆಲುವು ಸಾಧಿಸಿತು.

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

IPL 2024; ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

T20 World Cup: McGurk is Australia’s reserve player

T20 World Cup: ಮೆಕ್‌ಗರ್ಕ್‌ ಆಸ್ಟ್ರೇಲಿಯದ ಮೀಸಲು ಆಟಗಾರ

T20 World Cup; Dwayne Bravo is the Afghanistan bowling consultant

T20 World Cup; ಡ್ವೇನ್‌ಬ್ರಾವೊ ಅಫ್ಘಾನ್‌ ಬೌಲಿಂಗ್‌ ಸಲಹೆಗಾರ

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.