Horticultural crop: ತೋಟಗಾರಿಕಾ ಬೆಳೆಗಳಿಗೆ ತೇವಾಂಶದ ಭೀತಿ!


Team Udayavani, Sep 28, 2023, 1:44 PM IST

tdy-6

ಕೋಲಾರ: ವರ್ಷಾರಂಭದಿಂದಲೂ ತುಂತುರು ಮಳೆ ಹನಿಗಳನ್ನೇ ನೋಡಿದ್ದ ಜಿಲ್ಲೆಯ ರೈತಾಪಿ ವರ್ಗ ಕಳೆದ ಏಳು ದಿನಗಳಲ್ಲಿ ಸುರಿದಿರುವ ಮಳೆಯಿಂದ ಸಂತೋಷಗೊಂಡಿದೆಯಾದರೂ, ಆಗಸ್ಟ್‌ ತಿಂಗಳ ಸರಾಸರಿ ಮಳೆಯಲ್ಲಿ ಕೊರತೆ ಮುಂದುವರಿದಿದೆ.

ಸಂಪೂರ್ಣ ಮಳೆಯಾಧಾರಿತವಾಗಿಯೇ ಕೃಷಿ ತೋಟಗಾರಿಕೆ ಚಟುವಟಿಕೆ ನಡೆಸುತ್ತಿರುವ ಜಿಲ್ಲೆಯಲ್ಲಿ ಮಳೆ ಕೊರತೆ ಆಧಾರದ ಮೇಲೆಯೇ ಇಡೀ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದೆ. ಆಗಸ್ಟ್‌ ಮಾಸಾಂತ್ಯದಲ್ಲಿ ಬರಪೀಡಿತ ಪ್ರದೇಶ ಘೋಷಣೆ ಪ್ರಕಟಗೊಂಡ ನಂತರ ಸೆಪ್ಟೆಂಬರ್‌ 2ನೇ ವಾರದಲ್ಲಿ ಸುರಿದಿರುವ ಮಳೆಯ ಪ್ರಮಾಣವು ತೀರಾ ಒಣಗುತ್ತಿದ್ದ ಕೃಷಿ ತೋಟಗಾರಿಕೆ ಬೆಳೆಗಳಿಗೆ ಕೊಂಚ ಜೀವ ಬರುವಂತೆ ಮಾಡಿದೆ.

ಆಗಸ್ಟ್‌ನಲ್ಲಿ ಶೇ.76ರಷ್ಟು ಕೊರತೆ: ಜಿಲ್ಲೆ ಯಲ್ಲಿ ಆಗಸ್ಟ್‌ ತಿಂಗಳಿನಲ್ಲಿ 94 ಮಿ.ಮೀ. ಮಳೆ ಸುರಿಯಬೇಕಾಗಿತ್ತು. ಆದರೆ, ಕೇವಲ 23 ಮಿ.ಮೀ. ಮಳೆ ಮಾತ್ರವೇ ಸುರಿದಿದ್ದು, ಇನ್ನೂ ಶೇ.76ರಷ್ಟು ಮಳೆ ಕೊರತೆಯಾಗಿದೆ. ಮಳೆ ಕೊರತೆ ಜಿಲ್ಲೆಯ ಆರು ತಾಲೂಕುಗಳಲ್ಲಿ ದಾಖಲಾಗಿರುವುದು ವಿಶೇಷ. ಬಂಗಾರಪೇಟೆಯಲ್ಲಿ ಶೇ.68, ಕೋಲಾರದಲ್ಲಿ ಶೇ.90, ಮಾಲೂರಿನಲ್ಲಿ ಶೇ.77, ಮುಳಬಾಗಿಲಿನಲ್ಲಿ ಶೇ.76, ಶ್ರೀನಿವಾಸಪುರದಲ್ಲಿ ಶೇ.70 ಮತ್ತು ಕೆಜಿಎಫ್‌ನಲ್ಲಿ ಶೇ.77 ಮಳೆ ಕೊರತೆ ಕಂಡು ಬಂದಿದೆ. ಆಗಸ್ಟ್‌ ತಿಂಗಳಿನಲ್ಲಿ ಬಂಗಾರಪೇಟೆಯಲ್ಲಿ 22.7 ಮಿ.ಮೀ., ಕೋಲಾರದಲ್ಲಿ 10.7 ಮಿ.ಮೀ., ಮಾಲೂರಿನಲ್ಲಿ 23.8 ಮಿಮೀ., ಮುಳಬಾಗಿಲಿನಲ್ಲಿ 26.6 ಮಿ. ಮೀ., ಶ್ರೀನಿವಾಸಪುರದಲ್ಲಿ 27.2 ಮಿ.ಮೀ., ಮತ್ತು ಕೆಜಿಎಫ್‌ನಲ್ಲಿ 23.4 ಮಿ.ಮೀ. ಮಳೆ ಸುರಿದಿದೆ. ಜಿಲ್ಲೆಯಲ್ಲಿ ಬರಪೀಡಿತ ವಾತಾವರಣ: ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಆರಂಭವಾಗುವ ಮುಂಗಾರು ಮಳೆಯ ಅವಧಿ ಶುರುವಾದ ಜೂ.1ರಿಂದ ಈವರೆಗೂ 377 ಮಿ.ಮೀ. ಮಳೆ ಸುರಿ ಯಬೇಕಾಗಿತ್ತು, ಆದರೆ, 350 ಮಿ.ಮೀ. ಮಳೆ ಸುರಿದಿದ್ದು, ಶೇ.7ರಷ್ಟು ಕೊರತೆ ಕಂಡು ಬಂದಿದೆ.

ಆದರೆ, 2023 ಜನವರಿ 1ರಿಂದ ಇಡೀ ಜಿಲ್ಲೆಯಲ್ಲಿ ಸರಾಸರಿ 494 ಮಿ.ಮೀ. ಮಳೆ ಸುರಿಯಬೇಕಾಗಿತ್ತು, 564 ಮಿ.ಮೀ. ಮಳೆ ಸುರಿದು ಶೇ.14ರಷ್ಟು ಹೆಚ್ಚು ಮಳೆ ದಾಖಲಾಗಿದೆ. ಕೃಷಿಚಟುವಟಿಕೆಗಳಿಗೆ ಈ ಮಳೆ ಪೂರಕವಾಗಿ ಸುರಿಯದೆ ಅಕಾಲಿಕವಾಗಿ ಸುರಿದಿ ರುವುದರಿಂದ ಕೋಲಾರ ಜಿಲ್ಲೆಯಲ್ಲಿ ಬರಪೀಡಿತ ವಾತಾವರಣವಿದೆ.

ಬೆಳೆ ಪೋಷಕಾಂಶ, ರೋಗ ನಿರ್ವಹಣೆಗೆ ಕ್ರಮ: ತೋಟಗಾರಿಕಾ ಬೆಳೆಗಳಲ್ಲಿ ಪೋಷಕಾಂಶ ಮತ್ತು ರೋಗಗಳ ನಿರ್ವಹಣೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಕೃಷಿ ಹವಾಮಾನ ಘಟಕವು ಕೆಲವು ಸಲಹೆ ನೀಡಿದೆ.

ಮಳೆ ಬಿಡುವು ಕೊಟ್ಟಾಗ ಅಥವಾ ನಿಂತ ನಂತರ ತರಕಾರಿ ಬೆಳೆಗಳು ಮೊದಲ ಬೆಳವಣಿಗೆ ಹಂತದಲ್ಲಿದ್ದರೆ, 19:19:19 ರಸಗೊಬ್ಬರವನ್ನು ಪ್ರತಿ ಲೀಟರ್‌ ನೀರಿಗೆ 2-5 ಗ್ರಾಂ.ನಂತೆ ಬೆರೆಸಿ ಸಿಂಪಡಿಸಬೇಕು ಅಥವಾ ನ್ಯಾನೋ ಯೂರಿಯಾ 4 ಮಿ.ಲೀ ಪ್ರತಿ ಲೀಟರ್‌ ನೀರಿಗೆ ಬೆರೆಸಿ ಸಿಂಪಡಿಸಿ.

ತರಕಾರಿ ಬೆಳೆ ಹೂವು ಬಿಡುವ ಹಂತದ ಬೆಳೆಯಾದರೆ, ಕ್ಯಾಲ್ಸಿಯಂ ನೈಟ್ರೈಟ್‌ ಅನ್ನು 5 ಗ್ರಾಂ. ಪ್ರತಿ ಲೀಟರ್‌ ನೀರಿಗೆ ಮತ್ತು ಬೋರಿಕ್‌ ಆಮ್ಲ 2 ಗ್ರಾಂ. ಪ್ರತಿ ಲೀಟರ್‌ ನೀರಿಗೆ ಬೇರಿಸಿ ಸಿಂಪಡಣೆ ಮಾಬೇಕು. ಇದರಿಂದ ಕಾಯಿ ಕಚ್ಚುವ ಪ್ರಮಾಣ ಹೆಚ್ಚಾಗುತ್ತದೆ.

ಬಹುವಾರ್ಷಿಕ ಬೆಳೆಗಳಲ್ಲಿ ಕೊಟ್ಟಿಗೆ ಗೊಬ್ಬರ ಉಪಯೋಗಿಸುವಾಗ, ಗೊಣ್ಣೆ ಹುಳು ಕಂಡುಬಂದಲ್ಲಿ ತಕ್ಷಣಕ್ಕೆ ಗೊಬ್ಬರವನ್ನು ಉಪಯೊಗಿಸದೆ ನೇರಳಲ್ಲಿ ಒಣಗಿಸಿ ಉಪಯೋಗಿಸಬೇಕು. ಇಲ್ಲದ ಪಕ್ಷದಲ್ಲಿ ಗೊಣ್ಣೆ ಹುಳು ಗಿಡದ ಬೇರನ್ನು ಬಾಧಿಸುತ್ತದೆ.

ಟೊಮೆಟೋ ಮತ್ತು ಬಳ್ಳಿ ತರಕಾರಿ ಎತ್ತಿ ಕಟ್ಟುವಾಗ ಗಿಡಗಳ ಮಧ್ಯ ಸಾಕಷ್ಟು ಗಾಳಿ ಮತ್ತು ಬೆಳಕು ಆಡುವಂತೆ ಇರಬೇಕು. ಕಳೆನಾಶಕ ಸಿಂಪರಣೆ ಮಾಡುವಾಗ, ಹೆಚ್ಚಿನ ಮುತುವರ್ಜಿ ತೆಗೆದುಕೊಳ್ಳಬೇಕು. ಮಣ್ಣಿನಲ್ಲಿ ತೇವಾಂಶ ಹೆಚ್ಚಾಗಿರುವದರಿಂದ ಬೆಳೆಗಳನ್ನು ಬಾಧಿಸಬಹುದು ಎಂದು ಸಲಹೆ ನೀಡಿದೆ.

ಯಾವುದೇ ತರಕಾರಿ ಬೆಳೆಯಾದರು, ಲಘು ಪೋಷಕಾಂಶಗಳ ಮಿಶ್ರಣವನ್ನು 2-3 ಬಾರಿ ಸಿಂಪರಣೆ ಮಾಡಿದಾಗ ಮಾತ್ರ ಗಿಡದ ಬೆಳವಣಿಗೆಯನ್ನು ಸುಧಾರಿ ಸಲು ಸಾಧ್ಯ. ಹ್ಯೂಮಿಕ್‌ ಆಮ್ಲವನ್ನು ಪ್ರತಿ ಲೀ. ನೀರಿಗೆ 2 ಮಿ.ಲೀ. ಬೆರೆಸಿ ಸಿಂಪ ಡಿಸುವದರಿಂದ ತೇವಾಂಶದಲ್ಲೂ ಬೇರಿನ ಚಟುವಟಿಕೆಗೆ ಸಹಾಯವಾಗುತ್ತದೆ.

ಹೂವಿನ ಬೆಳೆಗಳಲ್ಲಿ ಗಿಡದ ಆಯ್ದ ರಂಬೆಗಳು ಸಂಪೂರ್ಣವಾಗಿ ಕೊಳೆತ್ತಿದ್ದರೆ, ರೆಂಬೆಗಳನ್ನು ಗಿಡಕ್ಕೆ ಹಾನಿಯಾಗದಂತೆ ಕತ್ತರಿಸಿ ತೆಗೆಯಬೇಕು. ಮಳೆಯಿಂದ ಅತಿಯಾಗಿ ಬಾಧಿತ ಹೂಗಳನ್ನು ಚಿವುಟುವುದರಿಂದ, ತದನಂತರದ ಹಂತದಲ್ಲಿ ಬರುವ ಶಿಲೀಂದ್ರ ರೋಗಗಳ ಪ್ರಮಾಣ ಕಡಿಮೆಯಾಗುತ್ತದೆ.

ವಾರದಲ್ಲಿ ಉತ್ತಮ ಮಳೆ ದಾಖಲು: ಕೋಲಾರ ಜಿಲ್ಲಾದ್ಯಂತ ಕಳೆದ ಏಳು ದಿನಗಳಲ್ಲಿ 44 ಮಿ.ಮೀ. ಮಳೆ ಸುರಿಯಬೇಕಾಗಿತ್ತು ಆದರೆ, 81 ಮಿ.ಮೀ. ಮಳೆ ಸುರಿಯುವ ಮೂಲಕ ಸರಾಸರಿಗಿಂತಲೂ ಹೆಚ್ಚಿನ ಮಳೆ ದಾಖಲಾಗಿದೆ. ಬಂಗಾರಪೇಟೆಯಲ್ಲಿ 45.3 ಮಿ.ಮೀ., ಕೋಲಾರದಲ್ಲಿ 96.5ಮಿ.ಮೀ., ಮಾಲೂರಿನಲ್ಲಿ 71.2 ಮಿ.ಮೀ., ಮುಳಬಾಗಿಲಿ ನಲ್ಲಿ 98.2 ಮಿ.ಮೀ., ಶ್ರೀನಿವಾಸಪುರದಲ್ಲಿ 79.7 ಮಿ.ಮೀ. ಕೆಜಿಎಫ್‌ನಲ್ಲಿ 64.6 ಮಿ.ಮೀ. ಮಳೆ ಸುರಿದಿರುವುದು ರೈತರು ಮತ್ತು ಜಿಲ್ಲೆಯ ಜನರ ಸಂತಸಕ್ಕೆ ಕಾರಣವಾಗಿದೆ.

ತೋಟದಲ್ಲಿ ನೀರು ನಿಂತಿದ್ದರೆ ಹೊರ ಹಾಕಬೇಕು. ತೇವಾಂಶ ಕಡಿಮೆ ಮಾಡಬೇಕು. ಒಣಗುವ ತನಕ ನೀರಾವರಿ ಅಥವಾ ರಸಾವರಿ ಮೂಲಕ ಗೊಬ್ಬರ ಕೊಡ ಬಾರದು. ಪೋಷಕಾಂಶಗಳ ಸಿಂಪರಣೆ ಮಾಡು ವುದರಿಂದ ಮಳೆಯಿಂದ ಪೋಷಕಾಂಶಗಳ ಕೊರತೆ ನೀಗಿಸುವುದರ ಜತೆಗೆ ಇಳುವರಿ ಕುಂಠಿತ ತಡೆಯಲು ಸಾಧ್ಯವಾಗುತ್ತದೆ. -ಜಿ.ಆರ್‌. ಸ್ವಾತಿ, ಕೃಷಿ ಹವಾಮಾನ ತಜ್ಞರು, ಜಿಲ್ಲಾ ಕೃಷಿ ಹವಾಮಾನ ಘಟಕ, ಕೋಲಾರ.

-ಕೆ.ಎಸ್‌.ಗಣೇಶ್‌

 

ಟಾಪ್ ನ್ಯೂಸ್

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Revant Reddy

TG; ತೆಲಂಗಾಣದ ಸಂಕ್ಷಿಪ್ತ ರೂಪ ಇನ್ನು ಮುಂದೆ ‘ಟಿಎಸ್‌’ ಅಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

ಸಾಲ ತೀರಿಸಲು 3 ತಿಂಗಳ ಮಗುವನ್ನೇ ಮಾರಿದ ಅಪ್ಪ!

ಸಾಲ ತೀರಿಸಲು 3 ತಿಂಗಳ ಮಗುವನ್ನೇ ಮಾರಿದ ಅಪ್ಪ!

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.