Karnataka Bandh: ಸೆ.29ರಂದು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ರಜೆ
Team Udayavani, Sep 28, 2023, 8:54 PM IST
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವ ವಿಚಾರದಲ್ಲಿ ಕನ್ನಡ ಒಕ್ಕೂಟ ಕರ್ನಾಟಕ ಬಂದ್ಗೆ ಕರೆ ನೀಡಿದ್ದು, ಆ ಹಿನ್ನೆಲೆಯಲ್ಲಿ ಸೆ.29ರಂದು ಬನ್ನೇರುಘಟ್ಟದ ಜೈವಿಕ ಉದ್ಯಾನವನಕ್ಕೆ ರಜೆ ನೀಡಲಾಗಿದೆ.
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಸಾರ್ವಜನಿಕ ಸೇವೆಗಳು ಸಹ ಬಂದ್ ಆಗಲಿವೆ.
ಈ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದ ವೀಕ್ಷಣೆ ಬರುವ ಸಾರ್ವಜನಿಕರಿಗೆ ಅನಾನುಕೂಲ ಆಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಜೈವಿಕ ಉದ್ಯಾನವನದ ಕಾರ್ಯ ನಿರ್ವಾಹಕ ನಿರ್ದೇಶಕರು ಈ ತೀರ್ಮಾನ ಕೈಗೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಮೃಗಾಲಯ, ಸಿಂಹ, ಹುಲಿ, ಕರಡಿ, ಸಸ್ಯಹಾರಿ ಸಫಾರಿಗಳು ಮತ್ತು ಚಿಟ್ಟೆ ಉದ್ಯಾನವನ ಸೇರಿದಂತೆ ಇತ್ಯಾದಿ ಸೇವೆಗಳು ಸಾರ್ವಜನಿಕರ ದರ್ಶನಕ್ಕೆ ಇರುವುದಿಲ್ಲ. ಅ.3ರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಜೈವಿಕ ಉದ್ಯಾನವನ ತೆರೆದಿರಲಿದೆ ಎಂದು ಪ್ರಕಟಣೆ ತಿಳಿಸಿದೆ.