Sapta Sagaradaache Ello ಎರಡನೇ ಭಾಗ ಬಿಡುಗಡೆ ಮುಂದಕ್ಕೆ; ಒಟಿಟಿಗೆ ಬಂತು ಸೈಡ್ 1


Team Udayavani, Sep 29, 2023, 11:05 AM IST

Sapta Sagaradaache Ello second part release postponed; Side 1 came to OTT

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರು ನಟಿಸಿ, ನಿರ್ಮಿಸಿರುವ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ’ ಪ್ರೇಕ್ಷಕರಿಂದ ಮತ್ತು ವಿಮರ್ಶಕರಿಂದ ಉತ್ತಮ ಸ್ಪಂದನೆ ಪಡೆದಿದೆ. ಕನ್ನಡದಲ್ಲಿ ಸೂಪರ್ ಹಿಟ್ ಆದ ಚಿತ್ರವು ತೆಲುಗಿನಲ್ಲೂ ‘ಸಪ್ತ ಸಾಗರಲೂ ದಾಟಿ’ ಎಂದು ತೆರೆಗೆ ಬಂದು, ಅಲ್ಲೂ ಉತ್ತಮ ಸ್ಕೋರ್ ಪಡೆದಿದೆ.

ಹೇಮಂತ್ ಎಂ ರಾವ್ ಅವರು ನಿರ್ದೇಶಿಸಿರುವ ಚಿತ್ರದ ಎರಡನೇ ಭಾಗವು ಅಕ್ಟೋಬರ್ 20ರಂದು ತೆರೆ ಕಾಣಲಿದೆ ಎಂದು ಈ ಮೊದಲು ಚಿತ್ರತಂಡ ಘೋಷಿಸಿಕೊಂಡಿತ್ತು. ಆದರೆ ಇದೀಗ ಹಲವು ಕಾರಣಗಳಿಂದ ಎರಡನೇ ಪಾರ್ಟ್ ರಿಲೀಸ್ ಡೇಟ್ ಮುಂದಕ್ಕೆ ಹೋಗಿದೆ.

ಹೌದು, ಮನು ಮತ್ತು ಪ್ರಿಯಾರ ಪ್ರೇಮ ಕಥೆಯ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಎರಡನೇ ಪಾರ್ಟ್ ಬಿಡುಗಡೆ ನಿಗದಿತ ದಿನಾಂಕಕ್ಕಿಂತ ಒಂದು ವಾರ ಮುಂದಕ್ಕೆ ಹೋಗಿದೆ. ಚಿತ್ರವು ಅಕ್ಟೋಬರ್ 27ರಂದು ತೆರೆಗೆ ಬರುತ್ತಿದೆ. ಸ್ವತಃ ನಿರ್ಮಾಪಕ ರಕ್ಷಿತ್ ಶೆಟ್ಟಿ ಅವರೇ ಇದನ್ನು ಖಚಿತಪಡಿಸಿದ್ದಾರೆ.

ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ ಸೆಪ್ಟೆಂಬರ್ 1ರಂದು ತೆರೆಕಂಡಿತ್ತು. ಇದರ ತೆಲುವು ವರ್ಷನ್ ಸೆಪ್ಟೆಂಬರ್ 22ರಂದು ತೆರೆಗೆ ಬಂದು ಉತ್ತಮ ಇಂಪಾಕ್ಟ್ ಬೀರಿದೆ. ಮನು ಮತ್ತು ಪ್ರಿಯಾರ ನವಿರಾದ ಲವ್ ಸ್ಟೋರಿಯನ್ನು ಮೊದಲ ಭಾಗದಲ್ಲಿ ಕಂಡಿದ್ದ ಪ್ರೇಕ್ಷಕರು, ಹತ್ತು ವರ್ಷದ ಬಳಿಕ ಮನು ಜೀವನದಲ್ಲಿ ಏನಾಗಲಿದೆ ಎಂದು ನೋಡಲು ಅಕ್ಟೋಬರ್ 27ರವರೆಗೆ ಕಾಯಬೇಕಿದೆ.

ಅಕ್ಟೋಬರ್ 19-20ರಂದು ಹಲವು ಭಾಷೆಗಳಲ್ಲಿ ಹಲವು ದೊಡ್ಡ ಚಿತ್ರಗಳಲ್ಲಿ ತೆರೆಗ ಬರಲಿದೆ. ಕನ್ನಡದಲ್ಲಿ ಶಿವಣ್ಣನ ‘ಘೋಸ್ಟ್’, ತಮಿಳಿನಲ್ಲಿ ವಿಜಯ್- ಲೋಕೇಶ್ ಕಣಗರಾಜ್ ಕಾಂಬಿನೇಶನ್ ನ ‘ಲಿಯೋ’, ತೆಲುಗಿನಲ್ಲಿ ರವಿ ತೇಜ ನಟನೆಯ ‘ಟೈಗರ್ ನಾಗೇಶ್ವರ ರಾವ್’, ಮತ್ತು ನಂದಮೂರಿ ಬಾಲಕೃಷ್ಣ ನಟನೆಯ ‘ಭಗವಂತ್ ಕೇಸರಿ’, ಹಿಂದಿಯಲ್ಲಿ ಟೈಗರ್ ಶ್ರಾಫ್ ನಟನೆಯ ‘ಗಣಪತ್’ ಮುಂತಾದ ಚಿತ್ರಗಳು ತೆರೆಗೆ ಬರಲಿದೆ.

ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಪವಿತ್ರ ಲೋಕೇಶ್, ರಮೇಶ್ ಇಂದಿರಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಎರಡನೇ ಭಾಗದಲ್ಲಿ ಚೈತ್ರಾ ರಾವ್ ಅವರ ಪಾತ್ರವೂ ಇರಲಿದೆ.

ಒಟಿಟಿಗೆ ಬಂತು ಎಸ್ಎಸ್ಇ 1:  ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ ಇದೀಗ ಒಟಿಟಿಗೆ ಎಂಟ್ರಿ ಕೊಟ್ಟಿದೆ. ಅಮೇಜಾನ್ ಪ್ರೈಮ್ ನಲ್ಲಿ ಶುಕ್ರವಾರ (ಸೆ.29) ಚಿತ್ರದ ಪ್ರಸಾರ ಆರಂಭವಾಗಿದೆ.

ಟಾಪ್ ನ್ಯೂಸ್

1-asaaasas

Dalai Lama ವಿರುದ್ಧ ಅವಹೇಳನ: ಕಂಗನಾ ವಿರುದ್ಧ ಕಪ್ಪು ಬಾವುಟ

kejriwal

AAP ವಿದೇಶಿ ದೇಣಿಗೆ: ED ದೂರು ಪಿತೂರಿ ಎಂದ ಕೇಜ್ರಿವಾಲ್‌ ಪಕ್ಷ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sambhavami yuge yuge kannada movie

Kannada Cinema; ರಿಲೀಸ್‌ ಅಖಾಡಕ್ಕೆ ಸಂಭವಾಮಿ ಯುಗೇ ಯುಗೇ..

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Vikasa parva Kannada movie

Kannada Movie; ಸೆನ್ಸಾರ್ ಪಾಸಾದ ‘ವಿಕಾಸ ಪರ್ವ’

Biography of Mother Teresa in web series

Mother Teresa; ವೆಬ್‌ ಸೀರೀಸ್‌ನಲ್ಲಿ ಮದರ್‌ ತೆರೇಸಾ ಜೀವನ ಚರಿತ್ರೆ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rohan Bopanna

Paris Olympics; ಬಾಲಾಜಿ, ಭಾಂಬ್ರಿ: ಜತೆಗಾರನ ಹೆಸರು ಸೂಚಿಸಿದ ಬೋಪಣ್ಣ

1-asaaasas

Dalai Lama ವಿರುದ್ಧ ಅವಹೇಳನ: ಕಂಗನಾ ವಿರುದ್ಧ ಕಪ್ಪು ಬಾವುಟ

kejriwal

AAP ವಿದೇಶಿ ದೇಣಿಗೆ: ED ದೂರು ಪಿತೂರಿ ಎಂದ ಕೇಜ್ರಿವಾಲ್‌ ಪಕ್ಷ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.