Bangalore: ಟ್ರಾಫಿಕ್‌ ಜಾಮ್‌ಗೆ ಸಿಲಿಕಾನ್‌ ಸಿಟಿ ಹೈರಾಣ!

ಸಾಲು ಸಾಲು ರಜೆ ಹಿನ್ನೆಲೆ: ಊರಿನತ್ತ ಮುಖ ಮಾಡಿದ ಜನ

Team Udayavani, Sep 29, 2023, 3:36 PM IST

6-bangalore

ಬೆಂಗಳೂರು: ಸಿಲಿಕಾನ್‌ ಸಿಟಿಯ ಬಹುತೇಕ ರಸ್ತೆಗಳಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಸಂಚಾರ ದಟ್ಟಣೆ ಉಂಟಾಗಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಸಂಚಾರ ವಿಭಾಗದ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಸೆ.28ರಿಂದ ಅ.2ರವರೆಗೆ ಐದು ದಿನಗಳ ಕಾಲ ಸಾಲು ಸಾಲು ರಜೆಯಿರುವ ಹಿನ್ನೆಲೆಯಲ್ಲಿ ಬಹು ತೇಕರು ಬೆಂಗಳೂರಿನಿಂದ ಊರಿನತ್ತ ಮುಖ ಮಾಡುತ್ತಿದ್ದಾರೆ. ಗಣೇಶ ವಿಸರ್ಜನೆ ಮತ್ತು ಜನ ಸಂಚಾರ ಹೆಚ್ಚಾಗುತ್ತಿದೆ. ಪರಿಣಾಮ ಬುಧವಾರ ಹಾಗೂ ಗುರುವಾರ ಸಂಜೆ, ಬೆಂಗಳೂರು ಟೆಕ್‌ ಕಾರಿಡಾರ್‌ನ ಹೊರ ವರ್ತುಲ ರಸ್ತೆಯು ಭಾರೀ ಸಂಚಾರ ದಟ್ಟಣೆಯಿಂದ ಕೂಡಿತ್ತು.

ಮಹದೇವಪುರ ವಲಯದಲ್ಲಿರುವ ಹೊರ ವರ್ತುಲ ರಸ್ತೆ, ಔಟರ್‌ರಿಂಗ್‌ ರಸ್ತೆಯಲ್ಲಿ ಭಾರೀ ದಟ್ಟಣೆ ಉಂಟಾಗಿತ್ತು. ಬುಧವಾರ ಸಾಯಂಕಾಲ 4ರಿಂದ ರಾತ್ರಿ 8 ಗಂಟೆಯವರೆಗೆ ತೀವ್ರ ಟ್ರಾಫಿಕ್‌ ದಟ್ಟಣೆ ಉಂಟಾಗಿದೆ. ಗುರುವಾರ ಕೊಂಚ ಸಂಚಾರ ದಟ್ಟಣೆ ತಗ್ಗಿದರೂ ವಾಹನ ಸವಾರರ ಪರದಾಟ ಮುಂದುವರಿದಿದೆ. ಮೆಜೆಸ್ಟಿಕ್‌, ತುಮಕೂರು ರಸ್ತೆ, ಬಳ್ಳಾರಿ ರಸ್ತೆ, ಎಂ.ಜಿ.ರಸ್ತೆ, ರೆಸಿಡೆನ್ಸಿ ರಸ್ತೆ, ಎಲೆಕ್ಟ್ರಾನಿಕ್‌ ಸಿಟಿ ಸೇರಿ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ವಾಹನಗಳ ಓಡಾಟ ಹೆಚ್ಚಾಗಿದ್ದವು.

ಒಆರ್‌ಆರ್‌ಸಿಎ ವರದಿಯಲ್ಲೇನಿದೆ?:

ಹೊರ ವರ್ತುಲ ರಸ್ತೆಯಲ್ಲಿ ಸರಾಸರಿ ಪೀಕ್‌ ಅವರ್‌ಗಳಲ್ಲಿ ವಾಹನಗಳ ವೇಗವು 4.4 ಕಿ.ಮೀ. ಇರಲಿದ್ದು, ದಟ್ಟಣೆಯು 3 ಕಿ.ಮೀ. ಗಿಂತ ಹೆಚ್ಚು ವಿಸ್ತರಿಸುತ್ತದೆ ಎಂಬ ಅಂಶಗಳು ಕರ್ನಾಟಕ ಸರ್ಕಾರಕ್ಕೆ ಔಟರ್‌ ರಿಂಗ್‌ ರೋಡ್‌ ಕಂಪನಿಗಳ ಸಂಘ (ಒಆರ್‌ಆರ್‌ ಸಿಎ) ಸಲ್ಲಿಸಿದ ಇತ್ತೀಚಿನ ವರದಿಯಿಂದ ತಿಳಿದು ಬಂದಿದೆ. ‌

ಬೆಂಗಳೂರಿನ ಟೆಕ್‌ ಕಾರಿಡಾರ್‌ನಲ್ಲಿ (17 ಕಿ.ಮೀ. ಕೆ.ಆರ್‌.ಪುರಂ ಮತ್ತು ಸೆಂಟ್ರಲ್‌ ಸಿಲ್ಕ್ ಬೋರ್ಡ್‌) ಸಂಚಾರ ದಟ್ಟಣೆಯಿಂದ ವರ್ಷಕ್ಕೆ 15 ಶತಕೋಟಿ ರೂ. ವೆಚ್ಚ ಬೀಳುತ್ತದೆ. 2022ರಲ್ಲಿ ಒಆರ್‌ಆರ್‌ ಈ 17 ಕಿ.ಮೀ. ವ್ಯಾಪ್ತಿಯನ್ನು ಪ್ರತ್ಯೇಕ ಪುರಸಭೆ ವಲಯವೆಂದು ಘೋಷಿಸಲು ಪ್ರಸ್ತಾಪಿಸಿದೆ. ಪ್ರತ್ಯೇಕ ಪುರಸಭೆಯ ವಲಯವು ಕಾರಿಡಾರ್‌ ಅನ್ನು ವಿಶ್ವದರ್ಜೆಯ ತಂತ್ರಜ್ಞಾನ ಕಾರಿಡಾರ್‌ ಆಗಿ ಪರಿವರ್ತಿಸಲು 5 ವರ್ಷದ ಯೋಜನೆ ಹೊಂದಿರಬೇಕು ಎಂದು ತಿಳಿಸಲಾಗಿತ್ತು. ಕಳೆದ ಹಲವು ವರ್ಷಗಳಿಂದ ಒಆರ್‌ಆರ್‌ ಅಭಿವೃ ದ್ಧಿಯನ್ನು ನಿರ್ಲಕ್ಷಿಸಲಾಗಿದೆ. ಮೂಲಸೌಕರ್ಯ ಒದಗಿಸಲು ಮಾರ್ಗಸೂಚಿ ಹಾಗೂ ಕ್ರಮ ಕೈಗೊಂಡಿಲ್ಲ. ಆಗಾಗ್ಗೆ ಬೆಂಗಳೂರಿನಲ್ಲಿ ನಡೆಯು ತ್ತಿರುವ ಕಾಮಗಾರಿ, ಅಪಘಾತಗಳು, ಪ್ರವಾಹಗಳು ಮತ್ತು ರಸ್ತೆ ಗುಂಡಿಗಳು ಟ್ರಾಫಿಕ್‌ ಸಮಸ್ಯೆಗಳನ್ನು ಇನ್ನಷ್ಟು ಹದಗೆಡಿಸುತ್ತವೆಂದು ವರದಿ ತಿಳಿಸಿದೆ.

ಟೆಕ್‌ ಕಾರಿಡಾರ್‌ನಲ್ಲಿ 9.5 ಲಕ್ಷ ಜನ:

ಟೆಕ್‌ ಕಾರಿಡಾರ್‌ನಲ್ಲಿ 500ಕ್ಕೂ ಹೆಚ್ಚು ಕಂಪನಿಗಳಲ್ಲಿ 9.5 ಲಕ್ಷ ಜನರು ಉದ್ಯೋಗದಲ್ಲಿದ್ದಾರೆ. ಬೆಂಗಳೂರಿನ ಐಟಿ ಆದಾಯದ 36 ಪ್ರತಿಶತವು ವರ್ಷಕ್ಕೆ 32.68 ಶತಕೋಟಿ ವಾವತಿ ಮೊತ್ತವನ್ನು ಹೊಂದಿದೆ. ಇದು ಕೆ.ಆರ್‌. ಪುರಂನಿಂದ ಸಿಲ್ಕ್ ಬೋರ್ಡ್‌ ವಿಭಾಗಕ್ಕೆ ಬರುತ್ತದೆ ಎಂದು ವರದಿ ಹೇಳಿದೆ.

ಸೆಂಟ್ರಲ್‌ ಸಿಲ್ಕ್ ಬೋರ್ಡ್‌ ಮತ್ತು ಕೆ.ಆರ್‌.ಪುರಂ ನಡುವೆ ಪ್ರತಿದಿನ 6.4 ಲಕ್ಷ ಜನರು 3.3 ಲಕ್ಷ ವಾಹನಗಳನ್ನು ಬಳಸುತ್ತಿದ್ದಾ ಎಂಬುದನ್ನು ಟ್ರಾಫಿಕ್‌ ಪೊಲೀಸರಿಗೆ ಒಆರ್‌ಆರ್‌ಸಿಎ ಸಲ್ಲಿಸಿದ ವರದಿಯಲ್ಲಿ ಹೇಳಲಾಗಿದೆ. ಅತಿಯಾದ ಸಂಚಾರ ದಟ್ಟಣೆಯಿಂದ ಉದ್ಯೋಗಿಗಳಿಗೆ ಆರ್ಥಿಕ ನಷ್ಟದ ಜೊತೆಗೆ ಹೆಚ್ಚು ಹೊತ್ತು ಪ್ರಯಾಣ ಮಾಡಬೇಕಾದ ಅನಿವಾರ್ಯ ಸ್ಥಿತಿ ಬಂದೊದಗಿದೆ. ಇದರಿಂದ ಉದ್ಯೋಗಿಗಳ ಮೇಲೆ ಉಂಟಾಗುವ ಒತ್ತಡವು ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಟ್ರಾಫಿಕ್‌ ಜಾಮ್‌ ಸ್ಥಳಕ್ಕೆ ಪಿಜ್ಜಾ ಆರ್ಡರ್‌

ಸಿಲಿಕಾನ್‌ ಸಿಟಿಯ ಔಟರ್‌ ರಿಂಗ್‌ ರಸ್ತೆ, ವೈಟ್‌ ಫೀಲ್ಡ್‌, ಐಟಿಪಿಎಲ್, ಮಾರತಹಳ್ಳಿ, ಬೆಳ್ಳಂದೂರು ಕಡೆಗಳಲ್ಲಿ ಬುಧವಾರ ಸಂಚಾರ ದಟ್ಟಣೆ ಅಧಿಕವಾಗಿತ್ತು. ಆ ವೇಳೆ ಹಸಿವಿನಿಂದ ಕಂಗೆಟ್ಟಿದ್ದ ಕಾರು ಚಾಲಕರೊಬ್ಬರು ಆನ್‌ಲೈನ್‌ನಲ್ಲಿ ಪಿಜ್ಜಾ ಆರ್ಡರ್‌ ಮಾಡಿ ಡೆಲಿವರಿ ಬಾಯ್‌ಗೆ ಲೈವ್‌ ಲೊಕೇಷನ್‌ ಕಳುಹಿಸಿದ್ದರು. ಲೈವ್‌ ಲೊಕೇಷನ್‌ ಕೊಟ್ಟ ಮಾಹಿತಿ ಪ್ರಕಾರ ಸಾಗಿದ ಡೆಲಿವರಿ ಬಾಯ್‌, ಕಾರು ಚಾಲಕ ಸಿಲುಕಿದ್ದ ಸಂಚಾರ ದಟ್ಟಣೆಗೆ ಹೋಗಿ ಪಿಜ್ಜಾಕೊಟ್ಟು ಬಂದಿದ್ದಾನೆ.

ಪಿಜ್ಜಾ ತಂದು ಕೊಡುವ ವಿಡಿಯೋವನ್ನು ಮೊಬೈಲ್‌ನಲ್ಲಿ ಸೆರೆಹಿಡಿದ ಕಾರು ಚಾಲಕ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಇದನ್ನು ಪೋಸ್ಟ್‌ ಮಾಡಿ ಸುದ್ದಿಯಾಗಿದ್ದಾನೆ. ಇದೀಗ ವಿಡಿಯೋ ಎಲ್ಲೆಡೆ ವೈರಲ್‌ ಆಗಿದೆ. 4 ಗಂಟೆಗೂ ಅಧಿಕ ಹೊತ್ತು ಔಟರ್‌ ರಿಂಗ್‌ ರಸ್ತೆಯಲ್ಲಿ ಬುಧವಾರ ಉಂಟಾದ ಭಾರಿ ಸಂಚಾರ ದಟ್ಟಣೆಗೆ ಈ ಸನ್ನಿವೇಶವೂ ಸಾಕ್ಷಿಯಾಗಿದೆ.

ಟಾಪ್ ನ್ಯೂಸ್

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

prahlad-joshi

Congress ಪಕ್ಷದಿಂದ ಅಂಬೇಡ್ಕರ್‌ಗೆ ಅಗೌರವ: ಸಚಿವ ಜೋಶಿ ಆರೋಪ

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.