Uttar Pradesh: ತಪ್ಪಾದ ಇಂಜೆಕ್ಷನ್ ನಿಂದ ಬಾಲಕಿ ಸಾವು; ಶವ ಎಸೆದು ವೈದ್ಯ, ಸಿಬಂದಿ ಪರಾರಿ!
ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಗೆ ಬೀಗ ಹಾಕುವಂತೆ ಜಿಲ್ಲಾ ವೈದ್ಯಾಧಿಕಾರಿ ಆದೇಶ ನೀಡಿದ್ದಾರೆ
Team Udayavani, Sep 29, 2023, 6:48 PM IST
ಲಕ್ನೋ: ಖಾಸಗಿ ಆಸ್ಪತ್ರೆಯ ವೈದ್ಯನೊಬ್ಬ 17 ವರ್ಷದ ಹುಡುಗಿಯೊಬ್ಬಳಿಗೆ ಕಾಯಿಲೆಗೆ ಸಂಬಂಧಪಡದ (Wrong) ಇಂಜೆಕ್ಷನ್ ನೀಡಿದ ಪರಿಣಾಮ ಕೊನೆಯುಸಿರೆಳೆದಿರುವ ಘಟನೆ ಉತ್ತರಪ್ರದೇಶದ ಮೈನ್ ಪುರಿಯಲ್ಲಿ ನಡೆದಿದೆ.
ಇದನ್ನೂ ಓದಿ:Illicit ಸಂಬಂಧ; ವಿವಾಹಿತೆಗೆ ಬ್ಲಾಕ್ ಮೇಲ್: ಸುಬ್ರಹ್ಮಣ್ಯ ಗ್ರಾ.ಪಂ.ಮಾಜಿ ಸದಸ್ಯ ಅರೆಸ್ಟ್
“ನಮ್ಮ ಮಗಳು ಸಾವನ್ನಪ್ಪಿದ್ದಾಳೆ ಎಂಬ ವಿಷಯವನ್ನೂ ತಿಳಿಸದೇ ಆಸ್ಪತ್ರೆಯ ಸಿಬಂದಿ ಹೊರಗಿನ ಪಾರ್ಕಿಂಗ್ ಸ್ಥಳದಲ್ಲಿದ್ದ ಮೋಟಾರ್ ಸೈಕಲ್ ಮೇಲೆ ಶವವನ್ನು ಇರಿಸಿ ಪರಾರಿಯಾಗಿದ್ದರು” ಎಂದು ಪೋಷಕರು ಆರೋಪಿಸಿದ್ದಾರೆ.
ಘಟನೆಯ ವಿಷಯ ಬಹಿರಂಗವಾಗುತ್ತಿದ್ದಂತೆಯೇ ಸಾರ್ವಜನಿಕರ ಆಕ್ರೋಶದ ಭಯಕ್ಕೆ ಹೆದರಿ ವೈದ್ಯರು ಮತ್ತು ಆಸ್ಪತ್ರೆಯ ಎಲ್ಲಾ ಸಿಬಂದಿಗಳು ಓಡಿಹೋಗಿರುವುದಾಗಿ ವರದಿ ತಿಳಿಸಿದೆ. ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿದ್ದ ಬೈಕ್ ಮೇಲೆ ಬಾಲಕಿಯ ಶವ ಅನಾಥವಾಗಿರುವಂತೆ ಬಿದ್ದಿರುವುದು ಸಿಸಿಟಿವಿಯಲ್ಲಿ ದಾಖಲಾಗಿರುವುದಾಗಿ ವರದಿ ತಿಳಿಸಿದೆ.
ಜ್ವರದಿಂದ ಬಳಲುತ್ತಿದ್ದ ಭಾರ್ತಿ(17ವರ್ಷ)ಯನ್ನು ಪೋಷಕರು ಘಿರೋರ್ ಪ್ರದೇಶದ ಕರ್ಹಾಲ್ ರಸ್ತೆಯಲ್ಲಿರುವ ರಾಧಾ ಸ್ವಾಮಿ ಆಸ್ಪತ್ರೆಗೆ ದಾಖಲಿಸಿರುವುದಾಗಿ ಆಕೆಯ ಚಿಕ್ಕಮ್ಮ ಮನೀಶಾ ತಿಳಿಸಿದ್ದಾರೆ. ಆಕೆ ಆರೋಗ್ಯವಾಗಿಯೇ ಇದ್ದಳು. ಆಕೆಯನ್ನು ಪರೀಕ್ಷಿಸಿದ ವೈದ್ಯರು ಇಂಜೆಕ್ಷನ್ ನೀಡಿದ್ದರು. ಬಳಿಕ ಆಕೆಯ ಆರೋಗ್ಯ ತೀವ್ರ ಹದಗೆಟ್ಟಿತ್ತು. ನೀವು ಆಕೆಯನ್ನು ಬೇರೆ ಆಸ್ಪತ್ರೆಗೆ ಕರೆದೊಯ್ಯಿರಿ ಎಂದು ವೈದ್ಯ ತಿಳಿಸಿದ್ದ. ಆದರೆ ಆ ಸಮಯಕ್ಕೆ ಭಾರ್ತಿ ಕೊನೆಯುಸಿರೆಳೆದಿದ್ದಳು ಎಂದು ಮನೀಶಾ ವಿವರಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಗೆ ಬೀಗ ಹಾಕುವಂತೆ ಜಿಲ್ಲಾ ವೈದ್ಯಾಧಿಕಾರಿ ಆದೇಶ ನೀಡಿದ್ದಾರೆ. ಆರೋಪಿ ವೈದ್ಯನ ವಿರುದ್ಧ ಎಫ್ ಐಆರ್ ದಾಖಲಿಸಿ, ಆಸ್ಪತ್ರೆಯ ರಿಜಿಸ್ಟ್ರೇಶನ್ ರದ್ದುಪಡಿಸಲಾಗುವುದು ಎಂದು ಸಿಎಂಒ ಗುಪ್ತಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ
Covishield ಲಸಿಕೆಯಿಂದ ಮತ್ತೊಂದು ಸೈಡ್ಎಫೆಕ್ಟ್!
MUST WATCH
ಹೊಸ ಸೇರ್ಪಡೆ
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ
Sandalwood: ದರ್ಶನ್ ʼಡೆವಿಲ್ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್ ಪೋಸ್ಟರ್ ಔಟ್
Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ
Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ