Mobile Theft Case: ಮೋಜಿಗಾಗಿ ಮೊಬೈಲ್‌ ಅಂಗಡಿಗಳಲ್ಲಿ ಕಳವು


Team Udayavani, Oct 4, 2023, 9:34 AM IST

tdy-5

ಬೆಂಗಳೂರು: ಮೋಜಿನ ಜೀವನಕ್ಕಾಗಿ ಮೊಬೈಲ್‌ ಅಂಗಡಿಯಲ್ಲಿ ಕಳವು ಮಾಡಿದ್ದ ಮೂವರು ವಿದ್ಯಾರ್ಥಿಗಳು ಸಂಜಯನಗರ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಎಚ್‌ಎಸ್‌ಆರ್‌ ಲೇಔಟ್‌ ನಿವಾಸಿಗಳಾದ ಪ್ರಭು(20), ಅಜಯ್‌(19), ಮೌನೇಶ್‌(21) ಬಂಧಿತರು. ಆರೋಪಿಗಳಿಂದ 50 ಲಕ್ಷ ರೂ. ಮೌಲ್ಯದ 29 ಐಫೋನ್‌ ಸೇರಿ ವಿವಿಧ ಕಂಪನಿಗಳ 50 ಮೊಬೈಲ್‌, 202 ಸ್ಮಾರ್ಟ್‌ ವಾಚ್‌, ಹ್ಯಾಂಡಿ ಕ್ಯಾಮೆರಾಗಳು, ಲ್ಯಾಪ್‌ಟಾಪ್‌ಗಳು, ಇತರೆ ಎಲೆಕ್ಟ್ರಾನಿಕ್‌ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಗೂಡ್ಸ್‌ ವಾಹನ, 1 ಬೈಕ್‌, ಕೆಲ ಸಲಕರಣೆಗಳನ್ನು ವಶಕ್ಕೆ ಪಡೆಯಲಾಗಿದೆ.

ಬಂಧಿತರು ಸೆ.28ರಂದು ಠಾಣೆ ವ್ಯಾಪ್ತಿಯ ನ್ಯೂಬಿಇಎಲ್‌ ರಸ್ತೆಯಲ್ಲಿನ ಗ್ಯಾಜೆಟ್‌ ಕ್ಲಬ್‌ ಮೊಬೈಲ್‌ ಅಂಗಡಿಯ ರೋಲಿಂಗ್‌ ಶೆಟರ್‌ ಒಡೆದು ಕಳ್ಳತನ ಮಾಡಿದ್ದರು ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಮೂರು ತಿಂಗಳ ಹಿಂದೆಯೇ ಸಂಚು: ಆರೋಪಿಗಳ ಪೈಕಿ ಪ್ರಭು ಬಿಸಿಎ, ಅಜಯ್‌ ಮತ್ತು ಮೌನೇಶ್‌ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದರು. ಪ್ರಭು ಐಷಾರಾಮಿ ಜೀವನಕ್ಕೆ ಸಾಕಷ್ಟು ಹಣ ವ್ಯಯಿಸಿದ್ದಾನೆ. ಮೂರು ತಿಂಗಳ ಹಿಂದೆ ನ್ಯೂಬಿಇಎಲ್‌ ರಸ್ತೆಯಲ್ಲಿರುವ ಗ್ಯಾಜೆಟ್‌ ಕ್ಲಬ್‌ ಮೊಬೈಲ್‌ ಅಂಗಡಿಯಲ್ಲಿ ಒಂದು ಸ್ಮಾರ್ಟ್‌ ವಾಚ್‌ ಖರೀದಿಸಿದ್ದ. ಈ ವೇಳೆ ಅಂಗಡಿಯಲ್ಲಿದ್ದ ವಾಚ್‌ ಗಳು, ಮೊಬೈಲ್‌ಗ‌ಳನ್ನು ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡಿಂಗ್‌ ಮಾಡಿಕೊಂಡಿದ್ದ. ಬಳಿಕ ಸ್ನೇಹಿತರಾದ ಅಜಯ್‌, ಮೌನೇಶ್‌ ಜೊತೆ ಸೆ.28ರಂದು ತಡರಾತ್ರಿ ಅಂಗಡಿ ರೋಲಿಂಗ್‌ ಶೆಟರ್‌ ಮುರಿದು ಎಲ್ಲ ವಸ್ತುಗಳನ್ನು ಚೀಲ, ಸೂಟ್‌ ಕೇಸ್‌ಗಳಲ್ಲಿ ತುಂಬಿಕೊಂಡು ಅಜಯ್‌ ತಂದಿದ್ದ ತಂದೆಯ ಗೂಡ್ಸ್‌ ವಾಹನದಲ್ಲಿ ತುಂಬಿಕೊಂಡು ಹೋಗಿದ್ದರು ಎಂದು ಆಯುಕ್ತ ತಿಳಿಸಿದರು.

ಮಶ್ರೂಮ್‌ ಗೋಡೌನ್‌ಲ್ಲಿತ್ತು ಕಳವು ವಸ್ತುಗಳು: ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ಆರಂಭಿಸಿದ್ದ ಸಂಜಯನಗರ ಠಾಣಾಧಿಕಾರಿ ಭಾಗ್ಯವತಿ ಜೆ.ಬಂಟಿ ನೇತೃತ್ವದ ತಂಡ ಅಂಗಡಿಯಲ್ಲಿದ್ದ ಸಿಸಿ ಕ್ಯಾಮೆರಾ ದೃಶ್ಯಗಳು, ಗೂಡ್ಸ್‌ ಆಟೋ ಸಂಚರಿಸಿದ್ದ ಎಲ್ಲ ಮಾರ್ಗದ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಸಂಗ್ರಹಿಸಿತ್ತು. ಈ ವೇಳೆ ಆರೋಪಿಗಳು ಒಂದೆರಡು ಕಡೆ ಸಿಗ್ನಲ್‌ ಜಂಪ್‌ ಮಾಡಿದ್ದು, ಸಂಚಾರ ನಿರ್ವಹಣೆ ಕೇಂದ್ರದಲ್ಲಿ ಆಟೋ ನಂಬರ್‌ ದಾಖಲಾಗಿತ್ತು. ಅದರ ಆಧಾ ರದ ಮೇಲೆ ಮಾಲೀಕರ ಹೆಸರು ಪತ್ತೆಯಾಗಿತ್ತು. ಬಳಿಕ ಗೂಡ್ಸ್‌ ಆಟೋ ಯಾವೆಲ್ಲ ಮಾರ್ಗದಲ್ಲಿ ಸಂಚರಿಸಿದೆ ಎಂದು ಶೋಧಿಸಿದಾಗ ಎಚ್‌ಎಸ್‌ ಆರ್‌ ಲೇಔಟ್‌ನಲ್ಲಿರುವ ಮಶ್ರೂಮ್‌ ಗೋಡೌನ್‌ ಮುಂಭಾಗ ನಿಂತಿತ್ತು. ಅದು ಆರೋಪಿ ಅಜಯ್‌ ತಂದೆಗೆ ಸೇರಿದ ಗೋಡೌನ್‌ ಎಂಬುದು ಗೊತ್ತಾಗಿದೆ. ಈ ವೇಳೆ ಆಟೋ ಬಳಿ ನಿಂತಿದ್ದ ಅಜಯ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಘಟನೆ ಸಂಪೂರ್ಣ ವಿಚಾರ ಬಾಯಿಬಿಟ್ಟಿದ್ದಾನೆ. ಬಳಿಕ ಗೋಡೌನ್‌ನಲ್ಲಿದ್ದ ಎಲ್ಲ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಸಾಲ ತೀರಿಸಲು ಕಳವು: ಆರೋಪಿಗಳ ಪೈಕಿ ಪ್ರಭುನ ಮೋಜಿನ ಜೀವ ನಕ್ಕೆ ಆತನ ಪೋಷಕರು ಹಣ ಕೊಡುತ್ತಿರಲಿಲ್ಲ. ಹೀಗಾಗಿ ಸ್ನೇಹಿತರ ಬಳಿ ಸಾಲ ಮಾಡಿಕೊಂಡಿ ದ್ದಾನೆ. ಸಾಲ ತೀರಿಸಲು ಮೊಬೈಲ್‌ ಅಂಗಡಿ ಯಲ್ಲಿ ಕಳವು ಮಾಡುತ್ತಿದ್ದ. ಅದಕ್ಕೆ ಅಜಯ್‌, ಮೌನೇಶ್‌ ಸಹಕಾರ ನೀಡಿದ್ದರು. ಮತ್ತೂಂದೆಡೆ ಆರೋಪಿ ಅಜಯ್‌ ಗೂಡ್ಸ್‌ ಆಟೋ ಕೊಂಡೊಯ್ದಿರುವ ವಿಚಾರ ಆತನ ತಂದೆಗೆ ಗೊತ್ತಿಲ್ಲ ಎಂದು ಆಯುಕ್ತರು ಹೇಳಿದರು.

ಪಿಯುಸಿಯಲ್ಲಿ ರ್‍ಯಾಂಕ್‌: ಆರೋಪಿಗಳ ಪೈಕಿ ಅಜಯ್‌ ಕಳೆದ ವರ್ಷ ಪಿಯುನಲ್ಲಿ ಶೇ.98 ಅಂಕ ಪಡೆದು, ಪೋಷಕ ರಿಗೆ ಉತ್ತಮ ಹೆಸರು ತಂದಿದ್ದ. ಆದರೆ, ಸ್ನೇಹಿತ ಪ್ರಭುನ ಆಮಿಷಕ್ಕೆ ಬಲಿ ಆಗಿ ಕೃತ್ಯದಲ್ಲಿ ಭಾಗಿ ಆಗಿದ್ದಾನೆ. ವಿಚಾರಣೆ ವೇಳೆ, ಪ್ರಕರಣ ಇಷ್ಟು ತೀವ್ರತೆ ಪಡೆದುಕೊಳ್ಳುತ್ತದೆ ಎಂಬುದು ಗೊತ್ತಿರ ಲಿಲ್ಲ. ತಪ್ಪಾಗಿದೆ ಎಂದು ಕಣ್ಣಿರು ಹಾಕಿದ್ದಾನೆ.

 

ಟಾಪ್ ನ್ಯೂಸ್

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.