Karnataka: ನವೆಂಬರ್‌ನಲ್ಲಿ ಬೆಳಗಾವಿ ಅಧಿವೇಶನ? – ಸಚಿವ ಸಂಪುಟದಲ್ಲಿ ಇಂದು ಚರ್ಚೆ ಸಾಧ್ಯತೆ

- ವಿದೇಶ ಪ್ರವಾಸದಲ್ಲಿರುವ ಸ್ಪೀಕರ್‌, ಸಭಾಪತಿ

Team Udayavani, Oct 4, 2023, 10:23 PM IST

belagavi session

ಬೆಂಗಳೂರು: ಒಟ್ಟು 12 ದಿನಗಳ ಕಾಲ ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಸುವುದಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಗುರುವಾರ ನಡೆಯುವ ಸಚಿವ ಸಂಪುಟ ಸಭೆಯ ಮುಂದೆ ಈ ವಿಚಾರ ಪ್ರಸ್ತಾಪವಾಗುವ ಸಾಧ್ಯತೆಗಳಿವೆ.

ಸದ್ಯಕ್ಕೆ ಸ್ಪೀಕರ್‌ ಯು.ಟಿ. ಖಾದರ್‌, ಮೇಲ್ಮನೆ ಸಭಾಪತಿ ಬಸವರಾಜ ಹೊರಟ್ಟಿ ಅವರು ವಿದೇಶ ಪ್ರವಾಸದಲ್ಲಿದ್ದು, ಅ.19ರ ನಂತರ ರಾಜ್ಯಕ್ಕೆ ಮರಳಲಿದ್ದಾರೆ. ವಿದೇಶ ಪ್ರವಾಸಕ್ಕೆ ತೆರಳುವ ಮುನ್ನ ಸರ್ಕಾರದೊಂದಿಗೆ ಅಧಿವೇಶನದ ಬಗ್ಗೆ ಚರ್ಚೆಗಳು ನಡೆದಿದ್ದು, ಎಷ್ಟು ದಿನ, ಎಲ್ಲಿ ಕಲಾಪ ನಡೆಸಬೇಕೆಂಬ ಮೊದಲ ಹಂತದ ಚರ್ಚೆ ನಡೆದಿತ್ತು.

ನವೆಂಬರ್‌ ಕೊನೇ ವಾರದಲ್ಲಿ ಅಧಿವೇಶನ ಆರಂಭಿಸಿ, ಬೆಂಗಳೂರಿನಲ್ಲಿ 10 ದಿನ ಹಾಗೂ ಬೆಳಗಾವಿಯ ಸುವರ್ಣಸೌಧದಲ್ಲಿ 10 ದಿನ ಕಲಾಪ ನಡೆಸುವ ಬಗ್ಗೆ ಚಿಂತನೆ ನಡೆದಿದ್ದು, ಎರಡು ಕಡೆ ನಡೆಸಬೇಕೇ ಬೇಡವೇ ಎಂಬ ಚರ್ಚೆಗಳಿವೆ. ವರ್ಷದಲ್ಲಿ ಕನಿಷ್ಠ 60 ದಿನ ಕಲಾಪ ನಡೆಸಬೇಕೆನ್ನುವ ಆಶಯದಲ್ಲಿ ಸರ್ಕಾರವಿದೆಯಾದರೂ ಬೆಂಗಳೂರು ಹಾಗೂ ಬೆಳಗಾವಿ ಎರಡೂ ಕಡೆ 20 ದಿನ ನಡೆಸುವುದು ಕಷ್ಟ ಎಂಬುದನ್ನು ಅಧಿಕಾರಿಗಳು ತಿಳಿಸಿದ್ದಾರೆ.

ಎರಡೂ ಕಡೆ ಕಲಾಪ ನಡೆಸುವುದರಿಂದ ಖರ್ಚು ಹೆಚ್ಚಾಗಲಿದೆ. ಇಡೀ ವಿಧಾನಮಂಡಲ ಹಾಗೂ ಸರ್ಕಾರಿ ವ್ಯವಸ್ಥೆಯನ್ನು ಎರಡೂ ಕಡೆ ಬಳಸಿಕೊಳ್ಳುವುದು, ಸ್ಥಳಾಂತರಿಸುವುದು ಸುಲಭವಿಲ್ಲ. ಹೀಗಾಗಿ ಎಲ್ಲಾದರೂ ಒಂದು ಕಡೆ ಮಾಡುವುದು ಸೂಕ್ತ ಮತ್ತು 10-12 ದಿನಗಳಿಗೆ ಇಳಿಸಿದರೆ ಉತ್ತಮ ಎಂಬ ಸಲಹೆಗಳನ್ನು ನೀಡಿದ್ದಾರೆ.

ನವೆಂಬರ್‌ ಕೊನೆಯ ವಾರದಿಂದ ಡಿಸೆಂಬರ್‌ ಮೊದಲ ವಾರದವರೆಗೆ ಚಳಿಗಾಲದ ಅಧಿವೇಶನ ನಡೆದರೆ, ಮತ್ತೆ ಜನವರಿ ತಿಂಗಳಲ್ಲಿ ಜಂಟಿ ಅಧಿವೇಶನ, ಫೆಬ್ರವರಿಯಲ್ಲಿ ಬಜೆಟ್‌ ಅಧಿವೇಶನ ನಡೆಸಬೇಕಾಗುತ್ತದೆ. ಆನಂತರ ಲೋಕಸಭೆ ಚುನಾವಣಾ ತಯಾರಿ ನಡೆಸಬೇಕಿದೆ. ವರ್ಷದ ಕೊನೆಯ ಕಲಾಪವು ನವೆಂಬರ್‌-ಡಿಸೆಂಬರ್‌ನಲ್ಲಿ ನಡೆಯುವುದರಿಂದ ಹೆಚ್ಚು ದಿನ ನಡೆಸಬೇಕೆಂಬ ಚಿಂತನೆ ಸರ್ಕಾರದಲ್ಲಿದೆ. ಎರಡೂ ಕಡೆ ಸದನ ನಡೆದರೆ ಅಷ್ಟು ಸುದೀರ್ಘ‌ ದಿನಗಳು ಚರ್ಚಿಸಬಹುದಾದ ವಿಷಯಗಳ ಪಟ್ಟಿಯನ್ನೂ ನೀಡುವಂತೆ ಅಧಿಕಾರಿಗಳಿಗೆ ಸರ್ಕಾರ ಸೂಚಿಸಿದೆ.
ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮತ್ತೂಮ್ಮೆ ಚರ್ಚಿಸಿ, ಎಲ್ಲಿ, ಎಷ್ಟು ದಿನ ಕಲಾಪ ನಡೆಸಬೇಕೆಂಬುದು ತೀರ್ಮಾನ ಆಗಬಹುದು. ಇಲ್ಲದಿದ್ದರೆ, ಸ್ಪೀಕರ್‌, ಸಭಾಪತಿ ವಿದೇಶ ಪ್ರವಾಸದಿಂದ ಮರಳಿದ ನಂತರ ಮತ್ತೂಮ್ಮೆ ಚರ್ಚಿಸಿ ಸೂಕ್ತ ನಿರ್ಣಯ ತೆಗೆದುಕೊಳ್ಳಬಹುದು ಎಂದು ಮೂಲಗಳು ಹೇಳಿವೆ.

 

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.