Drought: ನೀರಿಲ್ಲದೇ 500 ಎಕರೆ ಭತ್ತದ ಬೆಳೆ ನಾಶ ಮಾಡಿದ ರೈತರು

ಜಮೀನಿಗೆ ಕುರಿ ಹಾಯಿಸಿ ಮೇಯಿಸಿದ ಕೃಷಿಕರು

Team Udayavani, Oct 6, 2023, 2:37 PM IST

7-raichur

ರಾಯಚೂರು: ಮುಂಗಾರು ಮಳೆ ನಿರೀಕ್ಷಿತ ಮಟ್ಟದಲ್ಲಿ ಸುರಿಯದೆ ಕಂಗಾಲಾಗಿರುವ ರೈತರು ಸಕಾಲಕ್ಕೆ ನೀರು ಸಿಗದ ಕಾರಣ ಭತ್ತದ ಬೆಳೆಯನ್ನೇ ನಾಶಪಡಿಸುತ್ತಿದ್ದಾರೆ! ತುಂಗಭದ್ರಾ ಜಲಾಶಯ ವ್ಯಾಪ್ತಿಯ ಎಡದಂಡೆ ಕಾಲುವೆ ಕೆಳಭಾಗದ ರಾಯಚೂರು ತಾಲೂಕಿನ ಕೆಲ ಗ್ರಾಮಗಳಲ್ಲಿ ದಯನೀಯ ದೃಶ್ಯಗಳು ಕಂಡು ಬಂದಿವೆ.

ತಾಲೂಕಿನ ದಿನ್ನಿ, ಮಮದಾಪುರ, ಕಸಬೆಕ್ಯಾಂಪ್‌, ವೆಂಕಟೇಶ್ವರ ಕ್ಯಾಂಪ್‌, ಕಲಮಲ ಭಾಗದಲ್ಲಿ ರೈತರು ಸುಮಾರು 500 ಎಕರೆ ಭತ್ತದ ಜಮೀನಿಗೆ ಕುರಿಗಳನ್ನು ಹಾಯಿಸಿ ಮೇಯಿಸುವ ಮೂಲಕ ಬೆಳೆಹಾಳು ಮಾಡುತ್ತಿದ್ದಾರೆ. ಇನ್ನೂ ಕೆಲ ರೈತರು, ಟ್ರ್ಯಾಕ್ಟರ್‌ ಮೂಲಕವೇ ಬೆಳೆ ನಾಶ ಮಾಡುತ್ತಿದ್ದಾರೆ.

ತುಂಗಭದ್ರಾ ಜಲಾಶಯದಲ್ಲಿ ಕೇವಲ 54 ಟಿಎಂಸಿ ಅಡಿ ನೀರು ಲಭ್ಯವಿದ್ದು, ಒಂದು ಬೆಳೆಗೆ ಮಾತ್ರ ನೀರು ಹರಿಸಲು ಐಸಿಸಿ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಅದರಲ್ಲೂ ನಿತ್ಯ 3,900 ಕ್ಯುಸೆಕ್‌ ಹರಿಸಿದರೆ ಮಾತ್ರ ನೀರು ಸಾಕಾಗಲಿದೆ ಎಂದು ಅ ಧಿಕಾರಿಗಳು ತಿಳಿಸಿದ್ದರು. ಆದರೆ, 3,900 ಕ್ಯುಸೆಕ್‌ ಹರಿಸಿದರೆ ಕೊನೆ ಭಾಗಕ್ಕೆ ನೀರು ಬರುವುದೇ ಇಲ್ಲ. ಕನಿಷ್ಠ 4,100 ಕ್ಯುಸೆಕ್‌ ಹರಿಸುವಂತೆ ರೈತರು ಒತ್ತಾಯಿಸಿದ್ದರು. ಅಧಿ ಕಾರಿಗಳು ಹೇಳುವ ಪ್ರಕಾರ, ನಿತ್ಯ 4,100 ಕ್ಯುಸೆಕ್‌ ಹರಿಸಲಾಗುತ್ತಿದೆ. ಆದರೂ ಮಾನ್ವಿ ಮತ್ತು ರಾಯಚೂರು ಭಾಗದ ಕೆಲ ನೀರಾವರಿ ಜಮೀನಿಗೆ ನೀರು ಹರಿದೇ ಇಲ್ಲ. ಇದರಿಂದ ಭತ್ತ ಇಳುವರಿ ಸಂಪೂರ್ಣ ಕುಂಠಿತಗೊಂಡಿದ್ದು, ರೈತರಿಗೆ ನಷ್ಟ ಎದುರಾಗಿದೆ.

ಪ್ರತಿ ಬಾರಿ ತಡವಾಗಿಯಾದರೂ ಕೊನೆ ಭಾಗಕ್ಕೆ ಒಂದು ಬೆಳೆಗೆ ನೀರು ಹರಿಯುತ್ತಿತ್ತು. ಈ ಬಾರಿ ಅಕ್ಟೋಬರ್‌ ಬಂದರೂ ನೀರು ತಲುಪಿಲ್ಲ.

ಇದರಿಂದ ತಾಲೂಕಿನ ದಿನ್ನಿ, ಮಮದಾಪುರ, ಕಲ್ಲೂರು, ಸಿರವಾರದ ಕಲಮಲ ಭಾಗದ ಸಾಕಷ್ಟು ಜಮೀನುಗಳ ಸ್ಥಿತಿ ಇದೇ ಆಗಿದೆ. ಇನ್ನೂ ಕೆಲ ರೈತರು ಮಳೆ ನಂಬಿಯೂ ಭತ್ತ ಬಿತ್ತನೆ ಮಾಡಿದ್ದರು. ಆದರೆ, ಮಳೆಯೂ ಬಾರದೆ ಬೆಳೆ ಚೇತರಿಕೆ ಕಂಡಿಲ್ಲ. ಇದರಿಂದ ಬೇರೆ ದಾರಿಯಿಲ್ಲದೇ ನಾಶಕ್ಕೆ ಮುಂದಾಗಿದ್ದಾರೆ.

ಹಿಂಗಾರಿಯಲ್ಲೂ ಬರ:

ಮುಂಗಾರು ಮಳೆ ಕೈಕೊಟ್ಟ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ತುಂಗಭದ್ರಾ ತೀರ ಪ್ರದೇಶದಲ್ಲಿ ನಿರೀಕ್ಷಿತ ಮಳೆಯಾಗುತ್ತಿಲ್ಲ. ಕಾಲುವೆಗಳಿಗೂ ನೀರು ಇಲ್ಲದ್ದರಿಂದ ಬರಗಾಲ ಎದುರಾಗಿದೆ. ಹೀಗಾಗಿ ನಾಟಿ ಮಾಡಿದ್ದ ಭತ್ತದ ಬೆಳೆ ಒಣಗಿ ಹೋಗುತ್ತಿದೆ. ಹಿಂಗಾರಿಯಲ್ಲೂ ಮಳೆಯಾಗದಿದ್ದರೆ ಬೆಳೆಗೆ ಮಾತ್ರವಲ್ಲ, ಕುಡಿಯುವ ನೀರಿಗೂ ತತ್ವಾರ ಎದುರಾಗುವ ಸಾಧ್ಯತೆ ಇದೆ.

ಲಕ್ಷಾಂತರ ರೂ. ಖರ್ಚು:

ರೈತರು ಭತ್ತ ನಾಟಿ ಮಾಡಿ ಆಗಲೇ ಒಂದೆರಡು ಬಾರಿ ಕ್ರಿಮಿನಾಶಕ, ಗೊಬ್ಬರ ಸಿಂಪಡಿಸಿ ಲಕ್ಷಾಂತರ ರೂ. ಖರ್ಚು ಮಾಡಿಕೊಂಡಿದ್ದಾರೆ. ಎಕರೆಗೆ ಏನಿಲ್ಲವೆಂದರೂ 25-30 ಸಾವಿರ ರೂ. ಖರ್ಚಾಗಿದೆ. ಇನ್ನೂ ಕೆಲ ರೈತರು ಲೀಜ್‌ ಪಡೆದುಕೊಂಡಿದ್ದು, ಜಮೀನು ಮಾಲೀಕರಿಗೆ ಆಗಲೇ ಹಣ ಪಾವತಿ ಮಾಡಿದ್ದಾರೆ. ಅದರ ಜತೆಗೆ ಬೆಳೆಗೂ ಖರ್ಚು ಮಾಡಿದ್ದು, ನಷ್ಟ ಮೈಮೇಲೆ ಎಳೆದುಕೊಳ್ಳುವಂತಾಗಿದೆ.

ಆನ್‌ ಆ್ಯಂಡ್‌ ಆಫ್ ಬದಲು ವಿಷ ಕೊಡಿ!

ಗುರುವಾರ ವಿಕಾಸಸೌಧದಲ್ಲಿ ತುಂಗಭದ್ರಾ ಯೋಜನೆಯ ತುರ್ತು ನೀರಾವರಿ ಸಲಹಾ ಸಮಿತಿ ಸಭೆ ನಡೆಯಿತು. ಈ ವೇಳೆ, ಜಲಾಶಯದಲ್ಲಿನ ನೀರನ್ನು ಬೆಳೆಗೆ ಬಿಡುತ್ತಾ ಹೋದರೆ ಕುಡಿಯುವ ನೀರು ಸೇರಿದಂತೆ ಅನ್ಯ ಬಳಕೆಗೆ ಕಷ್ಟವಾಗ ಲಿದೆ. ಹೀಗಾಗಿ ವಾರಕ್ಕೊಮ್ಮೆ ಆನ್‌ ಅಂಡ್‌ ಆಫ್ ಮಾದರಿಯಲ್ಲಿ ನೀರು ಬಿಡುವುದು ಸೂಕ್ತ ಎಂದು ಅಧಿಕಾರಿಗಳು ಸಭೆಗೆ ಸಲಹೆ ನೀಡಿದರು. ಇದಕ್ಕೆ ರೈತರು ಹಾಗೂ ಸ್ಥಳೀಯ ಶಾಸಕರು ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಕಂಪ್ಲಿ ಶಾಸಕ ಗಣೇಶ್‌, ಆನ್‌ ಅಂಡ್‌ ಆಫ್ ಪದ್ಧತಿಯಲ್ಲಿ ನೀರು ಬಿಡು ವುದು ಬೇಡ. ಅದರ ಬದಲು ನೀರಿಗಿಂತ ವಿಷ ಅಗ್ಗವಾಗಿ ಸಿಗುತ್ತದೆ. ಅದನ್ನೇ ಕೊಟ್ಟುಬಿಡಿ ಎಂದು ಕಿಡಿ ಕಾರಿದರು. ಕೊನೆಗೆ ಆನ್‌ ಅಂಡ್‌ ಆಫ್ ಪದ್ಧತಿಯ ಬದಲು, ಬಿಡುತ್ತಿರುವ ನೀರಿನ ಪ್ರಮಾಣ ತಗ್ಗಿಸಲು ಸಭೆ ಒಮ್ಮತಕ್ಕೆ ಬಂದಿತು. ಇದೇ ವೇಳೆ, ತುಂಗಭದ್ರಾ ಜಲಾಯಶಯದಲ್ಲಿ ಪ್ರಸ್ತುತ 53 ಟಿಎಂಸಿ ನೀರಿನ ಲಭ್ಯತೆ ಇದ್ದು, ಬಲದಂಡೆ ಮೇಲ್ಮಟ್ಟದ ಕಾಲುವೆ ಹೊರತುಪಡಿಸಿ ಉಳಿದೆಲ್ಲಾ ಕಾಲುವೆಗಳಿಗೂ ನ.30ರವರೆಗೆ ನಿತ್ಯ ನೀರು ಹರಿಸಲು ನಿರ್ಧರಿಸಲಾಗಿದೆ ಎಂದು ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್‌ ತಂಗಡಗಿ ಹೇಳಿದರು.

ರಾಯಚೂರು ತಾಲೂಕಿನ ಮಮದಾಪುರ ಸೇರಿ ಕೆಲ ಗ್ರಾಮಗಳಲ್ಲಿ ಭತ್ತ ಬೆಳೆಯನ್ನು ಸಂಪೂರ್ಣ ನಾಶ ಮಾಡಲಾಗಿದೆ. ಭತ್ತದ ಗದ್ದೆಗೆ ನೀರು ಬಂದಿಲ್ಲ. ಇನ್ನೂ ಕಾಯುತ್ತ ಕುಳಿತರೆ ರೈತರಿಗೆ ಮತ್ತಷ್ಟು ನಷ್ಟವಾಗಲಿದೆ. ಸರ್ಕಾರ ಕೂಡಲೇ ನಷ್ಟ ಪರಿಹಾರ ವಿತರಿಸಬೇಕು. ●ಬೂದಯ್ಯ ಸ್ವಾಮಿ ಇಂಗಳದಾಳ, ರೈತ ಸಂಘದ ಮುಖಂಡ

● ಸಿದ್ದಯ್ಯಸ್ವಾಮಿ ಕುಕನೂರು

 

ಟಾಪ್ ನ್ಯೂಸ್

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.