BMTC ಬಸ್ ಹರಿದು ಸಿವಿಲ್ ಗುತ್ತಿಗೆದಾರ ಸ್ಥಳದಲ್ಲೇ ಸಾವು
Team Udayavani, Oct 6, 2023, 3:26 PM IST
ಬೆಂಗಳೂರು: ಹಿಂದಿನಿಂದ ಬಂದ ಬಿಎಂಟಿಸಿ ಬಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸಿವಿಲ್ ಕಂಟ್ರ್ಯಾಕ್ಟರ್ ಮೃತಪಟ್ಟಿರುವ ಘಟನೆ ಯಲಹಂಕ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮತ್ತಿಕೆರೆ ನಿವಾಸಿ ಭರತ್ ರೆಡ್ಡಿ(24) ಮೃತ ಸಿವಿಲ್ ಕಂಟ್ರ್ಯಾಕ್ಟರ್.
ಬುಧವಾರ ಸಂಜೆ 5 ಗಂಟೆಗೆ ಅಟ್ಟೂರಿನ ಮದರ್ ಡೇರಿ ಬಳಿ ಘಟನೆ ನಡೆದಿದೆ. ಸಿವಿಲ್ ಗುತ್ತಿಗೆದಾರನಾಗಿರುವ ಭರತ್ ರೆಡ್ಡಿ, ಬುಧವಾರ ಅಟ್ಟೂರಿನಲ್ಲಿ ನಿರ್ಮಿಸುತ್ತಿರುವ ಕಟ್ಟಡ ಪರಿಶೀಲಿಸಲು ಬೈಕ್ನಲ್ಲಿ ಹೋಗಿದ್ದರು. ವಾಪಸ್ ಸಂಜೆ 5 ಗಂಟೆಗೆ ಬರುವಾಗ ಅತಿ ವೇಗವಾಗಿ ಹಿಂದಿನಿಂದ ಬಂದ ಬಿಎಂಟಿಸಿ ಬಸ್ ಭರತ್ ರೆಡ್ಡಿ ಬೈಕ್ಗೆ ಗುದ್ದಿದ್ದು, ಕೆಳಗೆ ಬಿದ್ದ ಆತನ ಮೇಲೆ ಬಸ್ನ ಚಕ್ರಗಳು ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಸಂಚಾರ ಪೊಲೀಸರು ಹೇಳಿದರು.
ಯಲಹಂಕ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bail; ಎಚ್.ಡಿ.ರೇವಣ್ಣ ಅವರಿಗೆ ಷರತ್ತು ಬದ್ದ ಜಾಮೀನು ಮಂಜೂರು
Queen Premier League; ಸಿನಿಮಾ ಸೀರಿಯಲ್ ನಟಿಯರ ಕ್ರಿಕೆಟ್ ಪಂದ್ಯಾವಳಿ
Rahul Gandhi ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಲಿಲ್ಲ: ಶಾ ವಾಗ್ದಾಳಿ
Gangavathi ಖಾಸಗಿ ಶಾಲೆಗಳಿಂದ ಪ್ರವೇಶ ನೆಪದಲ್ಲಿ ಲಕ್ಷಾಂತರ ರೂ.ವಸೂಲಿ ಖಂಡಿಸಿ ಪ್ರತಿಭಟನೆ
Bidar: ಕಳ್ಳತನವಾಗಿದ್ದ 52 ಮೊಬೈಲ್ ಗಳನ್ನು ಪತ್ತೆ ಮಾಡಿದ ಜಿಲ್ಲಾ ಪೊಲೀಸ್