M.S. Swaminathan: ಹಸುರು ಕ್ರಾಂತಿಯ ಪಿತಾಮಹ ಎಂ.ಎಸ್‌. ಸ್ವಾಮಿನಾಥನ್‌

ಅಪಾರವಾದ ಸವಾಲುಗಳು ನಮ್ಮೆದುರಿಗಿದ್ದವು, ಅವುಗಳಲ್ಲಿ ಆಹಾರದ ಕೊರತೆಯೂ ಒಂದಾಗಿತ್ತು

Team Udayavani, Oct 6, 2023, 11:38 PM IST

m s swaminaathan

ಕೆಲವು ದಿನಗಳ ಹಿಂದಷ್ಟೇ ಪ್ರೊಫೆಸರ್‌ ಎಂ.ಎಸ್‌. ಸ್ವಾಮಿನಾಥನ್‌ ಅವರು ನಮ್ಮನ್ನು ಅಗಲಿದರು. ಕೃಷಿ ವಿಜ್ಞಾನದಲ್ಲಿ ಕ್ರಾಂತಿ ತಂದ ದಾರ್ಶನಿಕರೊಬ್ಬರನ್ನು ನಮ್ಮ ದೇಶವು ಕಳೆದುಕೊಂಡಿತು. ಆದರೂ ಭಾರತಕ್ಕೆ ಅವರ

ಕೊಡುಗೆಯು ಸುವರ್ಣಾಕ್ಷರಗಳಲ್ಲಿ ಅಚ್ಚಳಿಯದೆ ಸದಾ ಅಜರಾಮರವಾಗಲಿದೆ.

ಪ್ರೊ| ಎಂ.ಎಸ್‌. ಸ್ವಾಮಿನಾಥನ್‌ ಅವರು ಭಾರತದ ಬಗ್ಗೆ ಅಪಾರ ಪ್ರೀತಿ ಹೊಂದಿದ್ದರು. ನಮ್ಮ ರಾಷ್ಟ್ರ, ವಿಶೇಷವಾಗಿ ನಮ್ಮ ರೈತರು ಸಮೃದ್ಧಿಯ ಜೀವನವನ್ನು  ನಡೆಸಬೇಕೆಂದು ಬಯಸಿ ದ್ದರು. ಶೈಕ್ಷಣಿಕ ವಾಗಿ ಪ್ರತಿಭಾವಂತರಾಗಿದ್ದ ಅವರಿಗೆ ಯಾವುದೇ ವೃತ್ತಿಯನ್ನು ಬೇಕಾದರೂ ಆಯ್ಕೆ ಮಾಡಿಕೊಳ್ಳುವ ಅವಕಾಶವಿತ್ತು. ಆದರೆ 1943ರ ಬಂಗಾಲದ ಕ್ಷಾಮ ಅವರ ಮೇಲೆ ಎಷ್ಟು ಪ್ರಭಾವ ಬೀರಿತೆಂದರೆ, ತಾವು ಮಾಡುವ ಒಂದೇ ಒಂದು ಕೆಲಸ ಯಾವುದಾದರೂ ಇದ್ದರೆ ಅದು ಕೃಷಿಯ ಅಧ್ಯಯನ ಎಂದು ಸ್ಪಷ್ಟ ಸಂಕಲ್ಪತೊಟ್ಟರು.

ವಯಸ್ಸಿನಲ್ಲಿ ಚಿಕ್ಕವರಾದರೂ ಅವರು ಡಾ| ನಾರ್ಮನ್‌ ಬೋರ್ಲಾಗ್‌ ಅವರೊಂದಿಗೆ ಸಂಪರ್ಕಕ್ಕೆ ಬಂದರು, ಜತೆಗೆ ಅವರ ಕೆಲಸವನ್ನು ಬಹಳ ಆಳವಾಗಿ ಅನುಸರಿಸಿದರು. 1950ರ ದಶಕದಲ್ಲಿ, ಅವರಿಗೆ ಅಮೆರಿಕದಲ್ಲಿ ಬೋಧಕರಾಗುವ ಅವಕಾಶ ಒದಗಿಬಂದಿತು. ಆದರೆ ಅವರು ಭಾರತದಲ್ಲಿ ಮತ್ತು ಭಾರತಕ್ಕಾಗಿ ಕೆಲಸ ಮಾಡಲು ಬಯಸಿದ್ದರಿಂದ ಅದನ್ನು ತಿರಸ್ಕರಿಸಿದರು.

ಸ್ವಾಮಿನಾಥನ್‌ ಅವರು ನಮ್ಮ ರಾಷ್ಟ್ರವನ್ನು ಸ್ವಾವಲಂಬನೆ ಮತ್ತು ಆತ್ಮವಿಶ್ವಾಸದ ಪಥದತ್ತ ಮುನ್ನಡೆಸಿದ ಸವಾಲಿನ ಸಂದರ್ಭಗಳ ಬಗ್ಗೆ ನೀವೆಲ್ಲರೂ ಯೋಚಿಸಬೇಕೆಂದು ನಾನು ಬಯಸುತ್ತೇನೆ. ಸ್ವಾತಂತ್ರ್ಯದ ಅನಂತರದ ಮೊದಲ ಎರಡು ದಶಕಗಳಲ್ಲಿ, ಅಪಾರವಾದ ಸವಾಲುಗಳು ನಮ್ಮೆದುರಿಗಿದ್ದವು, ಅವುಗಳಲ್ಲಿ ಆಹಾರದ ಕೊರತೆಯೂ ಒಂದಾಗಿತ್ತು. 1960ರ ದಶಕದ ಆರಂಭದಲ್ಲಿ ಭಾರತವು ಕ್ಷಾಮದ ಕರಿಛಾಯೆಯೊಂದಿಗೆ ಹೋರಾಡುತ್ತಿತ್ತು. ಸರಿಯಾಗಿ ಇದೇ ಸಮಯದಲ್ಲೇ ಪ್ರೊ| ಸ್ವಾಮಿನಾಥನ್‌ ಅವರ ಅಚಲ ಬದ್ಧತೆ ಮತ್ತು ದೂರದೃಷ್ಟಿಯು ಕೃಷಿ ಸಮೃದ್ಧಿಯ ಹೊಸ ಯುಗಕ್ಕೆ ನಾಂದಿ ಹಾಡಿತು. ಕೃಷಿ ಹಾಗೂ ಗೋಧಿ ತಳಿಯ ಅಭಿವೃದ್ಧಿಯಂತಹ ನಿರ್ದಿಷ್ಟ ಕ್ಷೇತ್ರಗಳಲ್ಲಿ ಸ್ವಾಮಿನಾಥನ್‌ ಅವರ ಮುಂಚೂಣಿ ಕೆಲಸವು ಗೋಧಿ ಉತ್ಪಾದನೆಯಲ್ಲಿ ಗಮನಾರ್ಹ ಹೆಚ್ಚಳಕ್ಕೆ ಕಾರಣವಾಯಿತು. ಇದರಿಂದಾಗಿ ಭಾರತವು ಆಹಾರ ಕೊರತೆಯ ದೇಶದ ಹಂತದಿಂದ ಸ್ವಾವಲಂಬಿ ರಾಷ್ಟ್ರವಾಗಿ ಪರಿವರ್ತನೆಯಾಯಿತು. ಈ ಅದ್ಭುತ ಸಾಧನೆಯು ಸ್ವಾಮಿನಾಥನ್‌ ಅವರಿಗೆ “ಭಾರತೀಯ ಹಸುರು ಕ್ರಾಂತಿಯ ಪಿತಾಮಹ” ಎಂಬ ಬಿರುದನ್ನು ಗಳಿಸಿಕೊಟ್ಟಿತು.

ಭಾರತದಲ್ಲಿ ಅಂತರ್ಗತವಾಗಿದ್ದ “ನಾವು ಸಹ ಮಾಡಬಲ್ಲೆವು’ ಎಂಬ ಮನೋಭಾವದ ಒಂದು ಮುನ್ನೋಟವನ್ನು ಹಸುರು ಕ್ರಾಂತಿ ಯು ಒದಗಿಸಿತು – ನಮಗೆ ಶತಕೋಟಿ ಸವಾಲುಗಳಿದ್ದರೇ ನಂತೆ, ಆ ಸವಾಲುಗಳನ್ನು ಪರಿಹರಿಸಲು ನಾವೀನ್ಯತೆಯ ಜ್ವಾಲೆಯೊಂದಿಗೆ ಶತಕೋಟಿ ಮನಸ್ಸುಗಳೂ ಇಲ್ಲಿವೆ ಎಂಬ ಆಶಾಕಿರಣವನ್ನು ಹೊರ ಹೊಮ್ಮಿಸಿತು. ಹಸುರು ಕ್ರಾಂತಿ ಪ್ರಾರಂಭವಾದ ಐದು ದಶಕಗಳ ಅನಂತರ, ಭಾರತೀಯ ಕೃಷಿಯು ಹೆಚ್ಚು ಆಧುನಿಕ ಮತ್ತು ಪ್ರಗತಿಪರವಾಗಿದೆ. ಆದರೆ ಇದಕ್ಕೆ ಪ್ರೊ| ಸ್ವಾಮಿನಾಥನ್‌ ಅವರು ಹಾಕಿದ ಅಡಿಪಾಯವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ.

ಹಲವು ವರ್ಷಗಳಲ್ಲಿ, ಅವರು ಆಲೂಗಡ್ಡೆ ಬೆಳೆಗಳ ಮೇಲೆ ಪರಿಣಾಮ ಬೀರುವ ಪರಾವಲಂಬಿ ಜೀವಿಗಳನ್ನು ಎದುರಿಸುವ ಕುರಿತು ಸಂಶೋಧನೆಯನ್ನು ಕೈಗೊಂಡರು. ಅವರ ಸಂಶೋಧನೆಯು ಆಲೂಗಡ್ಡೆ ಬೆಳೆಗಳಿಗೆ ಶೀತ ಹವಾಮಾನವನ್ನು ತಡೆದು ಕೊಳ್ಳಲು ಅನುವು ಮಾಡಿಕೊಟ್ಟಿತು. ಇಂದು ಜಗತ್ತು ಸಿರಿಧಾನ್ಯಗಳು ಅಥವಾ “ಶ್ರೀಅನ್ನ’ ಶಕ್ತಿಯುತ ಆಹಾರ (ಸೂಪರ್‌ ಫುಡ್‌) ಎಂದು ಮಾತನಾಡುತ್ತಿದೆ. ಆದರೆ ಪ್ರೊಫೆಸರ್‌ ಸ್ವಾಮಿನಾಥನ್‌ ಅವರು 1990ರ ದಶಕದಿಂದಲೇ ಸಿರಿಧಾನ್ಯಗಳ ಬಗ್ಗೆ ಚರ್ಚೆಯನ್ನು ಪ್ರೋತ್ಸಾಹಿಸಿದ್ದರು.

ಪ್ರೊ| ಸ್ವಾಮಿನಾಥನ್‌ ಅವರೊಂದಿಗಿನ ನನ್ನ ವೈಯಕ್ತಿಕ ಒಡ ನಾಟಗಳು ಬಹಳ ವ್ಯಾಪಕವಾಗಿವೆ. 2001ರಲ್ಲಿ ನಾನು ಗುಜರಾತ್‌ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಅವು ಪ್ರಾರಂಭವಾದವು. ಆ ದಿನಗಳಲ್ಲಿ, ಗುಜರಾತ್‌ ತನ್ನ ಕೃಷಿ ಪರಿಣತಿಗೆ ಅಷ್ಟೊಂದು ಹೆಸರುವಾಸಿಯಾಗಿರಲಿಲ್ಲ. ಸತತ ಬರಗಾಲ, ಪ್ರಚಂಡ ಸೈಕ್ಲೋನ್‌ ಮತ್ತು ಭೂಕಂಪವು ರಾಜ್ಯದ ಬೆಳವಣಿಗೆಯ ಪಥದ ಮೇಲೆ ಪರಿಣಾಮ ಬೀರಿತ್ತು. ನಾವು ಪ್ರಾರಂಭಿಸಿದ ಅನೇಕ ಉಪಕ್ರಮಗಳಲ್ಲಿ, ಮಣ್ಣಿನ ಆರೋಗ್ಯ ಕಾರ್ಡ್‌ ಕೂಡ ಒಂದಾಗಿತ್ತು. ಇದು ಮಣ್ಣನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳಲು ಮತ್ತು ಸಮಸ್ಯೆಗಳು ಉದ್ಭವಿಸಿದರೆ ಅವುಗಳನ್ನು ಪರಿಹರಿಸಲು ನಮಗೆ ಅನುವು ಮಾಡಿಕೊಟ್ಟಿತು. ಈ ಯೋಜನೆಯ ಹಿನ್ನೆಲೆಯಲ್ಲಿ ನಾನು ಪ್ರೊ| ಸ್ವಾಮಿನಾಥನ್‌ ಅವರನ್ನು ಭೇಟಿಯಾಗಿದ್ದೆ. ಅವರು ಯೋಜನೆಯನ್ನು ಶ್ಲಾಸಿದರು. ಜತೆಗೆ ಅದಕ್ಕಾಗಿ ತಮ್ಮ ಅಮೂಲ್ಯವಾದ ಸಲಹೆ-ಸೂಚನೆಗಳನ್ನು ನಮ್ಮೊಂದಿಗೆ ಹಂಚಿಕೊಂಡರು. ಈ ಯೋಜನೆಯ ಬಗ್ಗೆ ಸಂದೇಹ ಹೊಂದಿದ್ದವರಿಗೆ ಮನವರಿಕೆ ಮಾಡಲು ಅವರ ಅನುಮೋದನೆಯೊಂದೇ ಸಾಕಾಗಿತ್ತು. ಇದು ಅಂತಿಮವಾಗಿ ಗುಜರಾತ್‌ ನ ಕೃಷಿ ಯಶಸ್ಸಿಗೆ ವೇದಿಕೆಯನ್ನು ನಿರ್ಮಿಸಿತು.

ಮುಖ್ಯಮಂತ್ರಿಯಾಗಿ ನನ್ನ ಅಧಿಕಾರಾವಧಿಯಲ್ಲಿ ಮತ್ತು ನಾನು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಾಗಲೂ ನಮ್ಮ ಒಡನಾಟ ಮುಂದುವರಿಯಿತು. ನಾನು ಅವರನ್ನು 2016ರಲ್ಲಿ “ಅಂತಾರಾಷ್ಟ್ರೀಯ ಕೃಷಿ-ಜೀವವೈವಿಧ್ಯ ಕಾಂಗ್ರೆಸ್‌’ನಲ್ಲಿ ಭೇಟಿ ಯಾಗಿದ್ದೆ. ಅದರ ಮುಂದಿನ ವರ್ಷ, 2017ರಲ್ಲಿ, ಅವರು ಬರೆದ ಎರಡು ಭಾಗಗಳ ಪುಸ್ತಕ ಸರಣಿಯನ್ನು ನಾನೇ ಲೋಕಾರ್ಪಣೆ ಮಾಡಿದ್ದೆ.

ರೈತರು ಜಗತ್ತನ್ನು ಒಟ್ಟಿಗೆ ಬೆಸೆದು ಹಿಡಿದಿರುವ ಬಂಧಕ ಶಕ್ತಿ ಎಂದು “ಕುರಾಲ್‌’ ಕೃಷಿಕರನ್ನು ಬಣ್ಣಿಸುತ್ತದೆ. ಏಕೆಂದರೆ ಎಲ್ಲರನ್ನೂ ಪೋಷಿಸುವುದು ರೈತರೇ. ಪ್ರೊ| ಸ್ವಾಮಿನಾಥನ್‌ ಅವರು ಈ ತತ್ತ್ವವನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದರು. ಬಹಳಷ್ಟು ಜನರು ಅವರನ್ನು “ಕೃಷಿ ವೈಜ್ಞಾನಿಕ್‌” – ಕೃಷಿ ವಿಜ್ಞಾನಿ ಎಂದು ಕರೆಯುತ್ತಾರೆ. ಆದರೆ ಅವರು ಅದಕ್ಕೂ ಮಿಗಿಲಾದವರಾಗಿದ್ದರು ಎಂದು ನಾನು ಸದಾ ನಂಬುತ್ತೇನೆ.

ಅವರು ನಿಜವಾದ “ಕಿಸಾನ್‌ ವೈಜ್ಞಾನಿಕ್‌’ – ರೈತರ ವಿಜ್ಞಾನಿ ಆಗಿದ್ದರು. ಅವರ ಹೃದಯದಲ್ಲಿ ಒಬ್ಬ ರೈತನಿದ್ದ. ಅವರ ಕಾರ್ಯ ಮತ್ತು ಕೃತಿಗಳ ಯಶಸ್ಸು ಕೇವಲ ಅವರ ಶೈಕ್ಷಣಿಕ ಉತ್ಕೃಷ್ಟತೆಗಷ್ಟೇ ಸೀಮಿತವಾಗಿಲ್ಲ; ಪ್ರಯೋಗಾಲಯಗಳ ಹೊರಗೆ, ಹೊಲ-ಗದ್ದೆಗಳಲ್ಲಿ ಅವುಗಳು ಬೀರಿದ ಪರಿಣಾಮದಲ್ಲಿ ಇದು ಅಡಗಿದೆ. ಸ್ವಾಮಿನಾಥನ್‌ ಅವರು ಕೈಗೊಂಡ ಕಾರ್ಯವು ವೈಜ್ಞಾನಿಕ ಜ್ಞಾನ ಮತ್ತು ಅದರ ಪ್ರಾಯೋಗಿಕ ಅನ್ವಯದ ನಡುವಿನ ಅಂತರವನ್ನು ಕಡಿಮೆ ಮಾಡಿತು. ಮಾನವ ಪ್ರಗತಿ ಮತ್ತು ಪರಿಸರ ಸುಸ್ಥಿರತೆಯ ನಡುವಿನ ಸೂಕ್ಷ್ಮ ಸಮತೋಲನವನ್ನು ಒತ್ತಿಹೇಳುವ ಮೂಲಕ ಅವರು ಸುಸ್ಥಿರ ಕೃಷಿಯನ್ನು ನಿರಂತರವಾಗಿ ಪ್ರತಿಪಾದಿಸಿದರು. ಸಣ್ಣ ರೈತರ ಜೀವನವನ್ನು ಸುಧಾರಿಸಲು ಮತ್ತು ಅಂತಹ ರೈತರು ಸಹ ನಾವೀನ್ಯತೆಯ ಫಲಗಳನ್ನು ಆನಂದಿಸುವುದನ್ನು ಖಾತರಿಪಡಿಸಲು ಪ್ರೊ| ಸ್ವಾಮಿನಾಥನ್‌ ನೀಡಿದ ವಿಶೇಷ ಮಹತ್ವವನ್ನು ನಾನು ಇಲ್ಲಿ ಒತ್ತಿ ಹೇಳಲೇಬೇಕು. ಮಹಿಳಾ ರೈತರ ಜೀವನವನ್ನು ಸುಧಾರಿಸುವ ಬಗ್ಗೆ ಅವರು ವಿಶೇಷವಾಗಿ ಉತ್ಸುಕರಾಗಿದ್ದರು.

ಪ್ರೊ| ಎಂ.ಎಸ್‌. ಸ್ವಾಮಿನಾಥನ್‌ ಅವರ ಬಗ್ಗೆ ಹೇಳಬೇಕಾದ ಮತ್ತೂಂದು ಗಮನಾರ್ಹವಾದ ವಿಷಯವಿದೆ – ಅವರು ನಾವೀ ನ್ಯತೆ ಮತ್ತು ಮಾರ್ಗದರ್ಶನದ ಪರಾಕಾಷ್ಠೆಯಾಗಿ ನಿಂತಿದ್ದಾರೆ. 1987ರಲ್ಲಿ ಅವರು “ವಿಶ್ವ ಆಹಾರ ಪ್ರಶಸ್ತಿ’ಗೆ ಭಾಜನರಾದಾಗ, ಈ ಪ್ರತಿಷ್ಠಿತ ಗೌರವದ ಮೊದಲ ಪುರಸ್ಕೃತರೆನಿಸಿದ ಅವರು ಬಹುಮಾನವಾಗಿ ಬಂದ ಹಣವನ್ನು ಲಾಭರಹಿತ ಸಂಶೋಧನ ಪ್ರತಿಷ್ಠಾನವನ್ನು ಸ್ಥಾಪಿಸಲು ಬಳಸಿದರು. ಇಲ್ಲಿಯವರೆಗೆ ಇದು ವಿವಿಧ ಕ್ಷೇತ್ರಗಳಲ್ಲಿ ವ್ಯಾಪಕವಾದ ಕೆಲಸವನ್ನು ಕೈಗೊಂಡಿದೆ. ಸ್ವಾಮಿನಾಥನ್‌ ಅವರು ಅಸಂಖ್ಯಾತ ಮನಸ್ಸುಗಳನ್ನು ಪೋಷಿಸಿದ್ದಾರೆ, ಅವರಲ್ಲಿ ಕಲಿಕೆ ಮತ್ತು ನಾವೀನ್ಯತೆಯ ಉತ್ಸಾಹವನ್ನು ತುಂಬಿದ್ದಾರೆ. ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ, ಸ್ವಾಮಿನಾಥನ್‌ ಅವರ ಜೀವನವು ಜ್ಞಾನ, ಮಾರ್ಗದರ್ಶನ ಮತ್ತು ನಾವೀನ್ಯತೆಯ ಅನಂತ ಶಕ್ತಿಯನ್ನು ನಮಗೆ ನೆನಪು ಮಾಡುತ್ತದೆ. ಅವರು ವಿವಿಧ ಸಂಸ್ಥೆಗಳ ನಿರ್ಮಾತೃವೂ ಆಗಿದ್ದರು, ಅಗಾಧ ಸಂಶೋಧನೆ ನಡೆಯುವ ಅನೇಕ ಕೇಂದ್ರಗಳನ್ನು ಅವರು ಹೊಂದಿದ್ದರು. ಮನಿಲಾದ “ಅಂತಾರಾಷ್ಟ್ರೀಯ ಭತ್ತ ಸಂಶೋಧನ ಸಂಸ್ಥೆ’ಯ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. 2018ರಲ್ಲಿ ವಾರಾಣಸಿಯಲ್ಲಿ “ಅಂತಾರಾಷ್ಟ್ರೀಯ ಭತ್ತ ಸಂಶೋಧನ ಸಂಸ್ಥೆ’ಯ ದಕ್ಷಿಣ ಏಷ್ಯಾ ಪ್ರಾದೇಶಿಕ ಕೇಂದ್ರವನ್ನು ತೆರೆಯಲಾಯಿತು.

ಡಾ| ಸ್ವಾಮಿನಾಥನ್‌ ಅವರಿಗೆ ಗೌರವ ಸಲ್ಲಿಸಲು ನಾನು ಮತ್ತೆ “ಕುರಲ್‌’ ಅನ್ನು ಉಲ್ಲೇಖಿಸಲು ಬಯಸುತ್ತೇನೆ. “ಯೋಜನೆಯಲ್ಲಿ ದೃಢತೆಯನ್ನು ಹೊಂದಿರುವವರು, ತಾವು ಬಯಸಿದ ರೀತಿಯಲ್ಲಿ ತಾವು ಬಯಸಿದ್ದನ್ನು ಸಾಧಿಸುತ್ತಾರೆ,’ ಎಂಬ ಉಲ್ಲೇಖ ಅದರಲ್ಲಿದೆ. ಕೃಷಿಯನ್ನು ಬಲಪಡಿಸಲು ಮತ್ತು ರೈತರಿಗೆ ಸೇವೆ ಸಲ್ಲಿಸಲು ಬಯಸುತ್ತೇನೆ ಎಂದು ತಮ್ಮ ಜೀವನದ ಆರಂಭದಲ್ಲಿಯೇ ಸಂಕಲ್ಪ ತೊಟ್ಟಿದ್ದ ಒಬ್ಬ ಕಟ್ಟಾಳು ಅವರಾಗಿದ್ದರು. ಅಲ್ಲದೆ ಅವರು ತಾವು ಅಂದು ಕೊಂಡಿದ್ದನ್ನು ಅಸಾಧಾರಣ ರೀತಿಯಲ್ಲಿ, ನವೀನ ರೀತಿಯಲ್ಲಿ ಮತ್ತು ಭಾವೋತ್ಕರ್ಷದಿಂದ ಮಾಡಿದರು. ನಾವು ಕೃಷಿ ನಾವೀನ್ಯತೆ ಮತ್ತು ಸುಸ್ಥಿರತೆಯ ಹಾದಿಯಲ್ಲಿ ಸಾಗುತ್ತಿರುವ ಈ ಹೊತ್ತಿನಲ್ಲಿ ಡಾ|  ಸ್ವಾಮಿನಾಥನ್‌ ಅವರ ಕೊಡುಗೆಗಳು ನಮಗೆ ಸ್ಫೂರ್ತಿ ಮತ್ತು ಮಾರ್ಗದರ್ಶನ ನೀಡುತ್ತಲೇ ಇರುತ್ತವೆ. ಅವರು ಪ್ರೀತಿಸುತ್ತಿದ್ದ ತತ್ತ್ವಗಳಿಗೆ ನಮ್ಮ ಬದ್ಧತೆಯನ್ನು ನಾವು ಪುನರುಚ್ಚರಿಸುತ್ತಲೇ ಇರಬೇಕು, ರೈತರ ಹಿತಕ್ಕಾಗಿ ಹೋರಾಡಬೇಕು ಮತ್ತು ವೈಜ್ಞಾನಿಕ ಆವಿಷ್ಕಾರದ ಫಲಗಳು ನಮ್ಮ ಕೃಷಿ ವಿಸ್ತಾರದ ಬೇರುಗಳನ್ನು ತಲುಪುವಂತೆ ಖಾತರಿಪಡಿಸಬೇಕು. ಮುಂದಿನ ಪೀಳಿಗೆಗಾಗಿ ಬೆಳವಣಿಗೆ, ಸುಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಬೇಕು.

ನರೇಂದ್ರ ಮೋದಿ, ಪ್ರಧಾನ ಮಂತ್ರಿಗಳು

ಟಾಪ್ ನ್ಯೂಸ್

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಘುಪತಿ ಭಟ್‌

ಈಗಿನ ಬಿಜೆಪಿಯಲ್ಲಿ ಚಮಚಾಗಿರಿಗೆ ಟಿಕೆಟ್‌!: ಟಿಕೆಟ್‌ ವಂಚಿತ ರಘುಪತಿ ಭಟ್‌ ಬಿರುನುಡಿ

POK ಆಜಾದಿ ರಣಕಹಳೆ! ಪಾಕಿಸ್ಥಾನ ದೌರ್ಜನ್ಯ ವಿರುದ್ಧ ಬೀದಿಗಿಳಿದ ಪಾಕ್‌ ಆಕ್ರಮಿತ ಕಾಶ್ಮೀರ ಜನ

POK ಆಜಾದಿ ರಣಕಹಳೆ! ಪಾಕಿಸ್ಥಾನ ದೌರ್ಜನ್ಯ ವಿರುದ್ಧ ಬೀದಿಗಿಳಿದ ಪಾಕ್‌ ಆಕ್ರಮಿತ ಕಾಶ್ಮೀರ ಜನ

1-wewqeqwe

Karachi ಭಾರತೀಯ ಮಹಿಳೆಯ ವಡಾಪಾವ್‌, ಪಾವ್‌ಭಾಜಿ ಕಮಾಲ್‌!

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

world mother’s day 2024: ಯುಗಯುಗದಲ್ಲೂ ತಾಯಿ ದೇವತೆ…

World Mother’s Day 2024: ಯುಗಯುಗದಲ್ಲೂ ತಾಯಿ ದೇವತೆ…

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.