Fraud ನಕಲಿ ಭೂ ದಾಖಲೆ ಪತ್ರ ಸಲ್ಲಿಸಿ ವಂಚನೆ: ಯೂತ್ ಕಾಂಗ್ರೆಸ್ ಮುಖಂಡ ಸೆರೆ
Team Udayavani, Oct 6, 2023, 11:58 PM IST
ಕಾಸರಗೋಡು: ಜಮೀನಿನ ನಕಲಿ ದಾಖಲು ಪತ್ರಗಳನ್ನು ಸಲ್ಲಿಸಿ ಕೆಎಸ್ಎಫ್ಇಯ ಮಾಲಕಲ್ಲು ಶಾಖೆಯಿಂದ 70 ಲಕ್ಷ ರೂ. ಸಾಲ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಯೂತ್ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಹೊಸದುರ್ಗ ಚಿತ್ತಾರಿ ಪಿ.ವಿ. ರಸ್ತೆಯ ಕೆ.ವಿ.ಹೌಸ್ನ ಎಂ. ಇಸ್ಮಾಯಿಲ್ (37)ನನ್ನು ರಾಜಪುರಂ ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣದಲ್ಲಿ ಇಸ್ಮಾಯಿಲ್ ಸಹಿತ 8 ಮಂದಿ ವಿರುದ್ಧ ರಾಜಪುರಂ ಪೊಲೀಸರು ಕೇಸು ದಾಖಲಿಸಿದ್ದಾರೆ. ಉಪ್ಪಳ ಗ್ರಾಮದ ಐದು ಎಕ್ರೆ ಜಮೀನಿನ ದಾಖಲು ಪತ್ರಗಳನ್ನು ನಕಲಿಯಾಗಿ ಸೃಷ್ಟಿಸಿ ಅದಕ್ಕೆ ಗ್ರಾಮಾಧಿಕಾರಿಯ ಡಿಜಿಟಲ್ ಸಹಿ ಹಾಕಿ ನೀಡಿ ಕೆಎಸ್ಎಫ್ಇ ಚಿಟ್ ಫಂಡ್ನಿಂದ ಆರೋಪಿಗಳು 70 ಲಕ್ಷ ರೂ. ಸಾಲ ಪಡೆದು ವಂಚಿಸಿದ್ದಾಗಿ ಪೊಲೀಸರಿಗೆ ದೂರು ನೀಡಲಾಗಿತ್ತು.
ಸಾಲವನ್ನು ಮರುಪಾವತಿಸದೆ ಇದ್ದಾಗ ಆರೋಪಿಗಳು ಸಲ್ಲಿಸಿದ ಭೂದಾಖಲು ಪತ್ರಗಳನ್ನು ಕೂಲಂಕಷವಾಗಿ ಪರಿಶೀಲಿಸಿದಾಗ ಅದು ನಕಲಿ ಎಂಬುದು ತಿಳಿದು ಬಂದಿದೆ ಎಂದು ಕೆಎಸ್ಎಫ್ಇಯ ಶಾಖಾ ಮೆನೇಜರ್ ಪೊಲೀಸರಿಗೆ ದೂರು ನೀಡಿದ್ದರು. ಇದರಂತೆ ಪೊಲೀಸರು ಕೇಸು ದಾಖಲಿಸಿ ಬಂಧಿಸಿದ್ದಾರೆ.
ಇತರ ಆರೋಪಿಗಳ ಬಂಧನಕ್ಕೆ ಶೋಧ ನಡೆಯುತ್ತಿದೆ. ಬಂಧಿತ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು
T20 World Cup: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಒಂದೇ ಪಂದ್ಯ
Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!
Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ
Daily Horoscope: ವಿವಾಹಾಸಕ್ತರಿಗೆ ಯೋಗ್ಯ ಬಾಳ ಸಂಗಾತಿ ಲಭಿಸುವ ಯೋಗ