Fighter Movie Review; ಮಾಫಿಯಾ ವಿರುದ್ಧ ಭರ್ಜರಿ ಫೈಟ್


Team Udayavani, Oct 7, 2023, 11:01 AM IST

Fighter Movie Review

ಒಂದು ಕಡೆ ರೈತರ ಸಮಸ್ಯೆ, ಮತ್ತೂಂದು ಕಡೆ ಮೆಡಿಕಲ್‌ ಮಾಫಿಯಾ, ಇನ್ನೊಂದು ಕಡೆ ಫ್ಯಾಮಿಲಿ ಸೆಂಟಿಮೆಂಟ್‌…. ಈ ಮೂರು ವಿಷಯಗಳನ್ನಿಟ್ಟು ಕೊಂಡು ತೆರೆಗೆ ಬಂದಿರುವ ಚಿತ್ರ “ಫೈಟರ್‌’. ಇಡೀ ಸಿನಿಮಾದ ಮೂಲಕಥೆ ನಿಂತಿರೋದು ರೈತರ ಸಮಸ್ಯೆ ಸುತ್ತ. ಅದರಲ್ಲೂ ಇವತ್ತು ರಾಸಾಯನಿಕ ಗೊಬ್ಬರ ಬಳಕೆಯಿಂದ ಕೃಷಿ ಭೂಮಿ ಹೇಗೆ ಹಾಳಾಗುತ್ತಿದೆ, ಇದರ ಹಿಂದಿರುವ ಮಾಫಿಯಾ ಯಾವ ರೀತಿ ಕೆಲಸ ಮಾಡುತ್ತದೆ ಎಂಬುದನ್ನು “ಫೈಟರ್‌’ನಲ್ಲಿ ಹೇಳಲಾಗಿದೆ. ಈ ಅಂಶವನ್ನು ಔಟ್‌ ಅಂಡ್‌ ಔಟ್‌ ಕಮರ್ಷಿಯಲ್‌ ಆಗಿ ಹೇಳುವ ಮೂಲಕ ಮಾಸ್‌ ಪ್ರಿಯರನ್ನು ಸೆಳೆಯುವ ಪ್ರಯತ್ನ ಮಾಡಿದೆ ಚಿತ್ರತಂಡ.

ಸಾವಯವ ಕೃಷಿ ಮೂಲಕ ಭೂಮಿಯ ಫ‌ಲವತ್ತತೆ ಕಾಪಾಡಬೇಕೆಂದು ಕನಸು ಕಂಡು ಅದನ್ನು ತನ್ನ ಸುತ್ತಮುತ್ತಲ ರೈತರಿಗೆ ಹೇಳಿ ಜಾಗೃತಿ ಮೂಡಿಸುವ ರೈತ ಮುಖಂಡ ಒಂದು ಕಡೆಯಾದರೆ, ರಾಸಾಯನಿಕ ಗೊಬ್ಬರದ ಮೂಲಕ ಭೂಮಿಯ ಫ‌ಲವತ್ತತೆಯನ್ನು ಕುಂಠಿತಗೊಳಿಸಲು ಪ್ರಯತ್ನಿಸುತ್ತಿರುವ “ಮಾಫಿಯಾ’ ಮತ್ತೂಂದೆಡೆ… ಈ ಮಧ್ಯೆ ನಡೆಯುವ ಒಂದು ಘಟನೆ, ಅಲ್ಲಿಂದ ಚಿತ್ರಕ್ಕೊಂದು ತಿರುವು… ಇದು “ಫೈಟರ್‌’ ಚಿತ್ರದ ಒನ್‌ಲೈನ್‌.

ನಿರ್ದೇಶಕ ನೂತನ್‌ ಉಮೇಶ್‌ ಚಿತ್ರಕಥೆಯಲ್ಲಿ ವೇಗ ಕಾಯ್ದುಕೊಳ್ಳುವ ಮೂಲಕ “ಫೈಟರ್‌’ ಓಟಕ್ಕೆ ಕಾರಣವಾಗಿದ್ದಾರೆ. ಮುಖ್ಯವಾಗಿ ಈ ಚಿತ್ರದ ಹೈಲೈಟ್‌ಗಳಲ್ಲಿ ಡೈಲಾಗ್ಸ್‌ ಕೂಡಾ ಒಂದು. ಪಡ್ಡೆ ಹುಡುಗರು ಶಿಳ್ಳೆ ಹಾಕುವಂತೆ ಡೈಲಾಗ್ಸ್‌ಗಳನ್ನು ನಾಯಕಿ ಬಾಯಿಂದ ಹೇಳಿಸಿದರೆ, ಇನ್ನೊಂದಿಷ್ಟು ಪಂಚಿಂಗ್‌ ಡೈಲಾಗ್ಸ್‌ ನಾಯಕನ ಪಾಲಾಗಿದೆ. ಒಂದು ಕಮರ್ಷಿಯಲ್‌ ಸಿನಿಮಾದಲ್ಲಿ ಇರಬೇಕಾದ ಎಲ್ಲಾ ಅಂಶಗಳು ಈ ಸಿನಿಮಾದಲ್ಲಿ ಇರುವ ಜೊತೆಗೆ ರೈತರ ಕುರಿತಾಗಿ ಒಂದಷ್ಟು ವಿಚಾರವನ್ನು ಹೇಳಿರುವುದು ಪ್ಲಸ್‌. ಸಿನಿಮಾದಲ್ಲಿ ಬರುವ ಒಂದಷ್ಟು ಸಸ್ಪೆನ್ಸ್‌ ಅಂಶವನ್ನು ಕೊನೆಯವರೆಗೆ ಕಾಯ್ದುಕೊಳ್ಳುವ ಮೂಲಕ ಪ್ರೇಕ್ಷಕರಿಗೆ ಅಚ್ಚರಿಗೆ ಕಾರಣವಾಗಿದೆ.

ನಾಯಕ ವಿನೋದ್‌ ಪ್ರಭಾಕರ್‌ ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಹಿಸಿದ್ದಾರೆ. ಅದರಲ್ಲೂ ಆ್ಯಕ್ಷನ್‌ನಲ್ಲಿ ಹೆಚ್ಚು ಗಮನ ಸೆಳೆಯುತ್ತಾರೆ. ಇನ್ನು ನಾಯಕಿ ಲೇಖಾಚಂದ್ರ ಲವಲವಿಕೆಯಿಂದ ನಟಿಸುವ ಮೂಲಕ ಭರವಸೆ ಮೂಡಿಸಿದ್ದಾರೆ. ನಾಯಕಿ ಪಾವನಾ ಇದ್ದಷ್ಟು ಹೊತ್ತು ಚೆಂದ. ಉಳಿದಂತೆ ನಿರೋಷಾ, ಕುರಿ ಪ್ರತಾಪ್‌, ಶರತ್‌ ಲೋಹಿತಾಶ್ವ ನಟಿಸಿದ್ದಾರೆ. ಚಿತ್ರದ ಒಂದು ಹಾಡು ಗುನುಗುವಂತಿದೆ.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.