Moodabidri ಆಳ್ವಾಸ್‌ ಪ್ರಗತಿ:1,871 ಮಂದಿಗೆ ಉದ್ಯೋಗ: 3,259 ಜನರು ಮುಂದಿನ ಹಂತಕ್ಕೆ ಆಯ್ಕೆ


Team Udayavani, Oct 7, 2023, 11:58 PM IST

Moodabidri ಆಳ್ವಾಸ್‌ ಪ್ರಗತಿ:1,871 ಮಂದಿಗೆ ಉದ್ಯೋಗ: 3,259 ಜನರು ಮುಂದಿನ ಹಂತಕ್ಕೆ ಆಯ್ಕೆ

ಮೂಡುಬಿದಿರೆ: ವಿದ್ಯಾಗಿರಿಯಲ್ಲಿ ನಡೆದ ಎರಡು ದಿನಗಳ “ಆಳ್ವಾಸ್‌ ಪ್ರಗತಿ’ಯ 13ನೇ ಆವೃತ್ತಿಯಲ್ಲಿ 1,871 ಮಂದಿ ವಿವಿಧ ಹುದ್ದೆಗಳಿಗೆ ನೇಮಕಗೊಂಡಿದ್ದಾರೆ.

ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಶುಕ್ರವಾರ, ಶನಿವಾರ ನಡೆದ ಮೇಳದಲ್ಲಿ ಪಾಲ್ಗೊಂಡಿದ್ದ 198 ಕಂಪೆನಿಗಳ ಪೈಕಿ 174 ಕಂಪೆನಿಗಳು 3,259 ಜನರನ್ನು ಮುಂದಿನ ಹಂತಕ್ಕೆ ಆಯ್ಕೆ ಮಾಡಿವೆ. ಮೇಳದ ಎರಡನೇ ದಿನ 2,284 ಉದ್ಯೋಗಾರ್ಥಿಗಳ ಸಹಿತ ಒಟ್ಟು ಎರಡು ದಿನಗಳಲ್ಲಿ 10,252 ಅಭ್ಯರ್ಥಿಗಳು ಭಾಗವಹಿಸಿದ್ದರು.

ವಾರ್ಷಿಕ ವೇತನದ ಹುದ್ದೆಗಳಿಗೆ ಆಯ್ಕೆ
ಅಮೆರಿಕ ಮೂಲದ ಫ್ಯಾಕ್ಟ್ಸೆಟ್‌ ಸಿಸ್ಟಮ್ಸ್‌ ಇಂಡಿಯಾ ಪ್ರೈ. ಲಿ. ಕಂಪೆನಿಯು ನಿಟ್ಟೆ ಕೆ.ಎಸ್‌. ಹೆಗ್ಡೆ ಕಾಲೇಜಿನ ಎಂಬಿಎ ಪದವೀಧರ, ಸಿದ್ದಕಟ್ಟೆಯ ಗೌರವ್‌ ಡಿ’ಕೋಸ್ಟ ಅವರನ್ನು ವಾರ್ಷಿಕ 7.1 ಲಕ್ಷ ರೂ. ವೇತನಕ್ಕೆ ಹಾಗೂ 20 ಅಭ್ಯರ್ಥಿಗಳನ್ನು ಸಂಶೋಧನ ವಿಶ್ಲೇಷಕರ ಹುದ್ದೆಗೆ ತಲಾ 3.4 ಲಕ್ಷ ರೂ. ವೇತನಕ್ಕೆ ಆರಿಸಿದೆ.
ಇಎಕ್ಸ್‌ಎಲ್‌ ಕಂಪೆನಿ ಆಯ್ಕೆ ಮಾಡಿರುವ 39 ಅಭ್ಯರ್ಥಿಗಳ ಪೈಕಿ ಒಬ್ಬರಿಗೆ ವಾರ್ಷಿಕ 7 ಲಕ್ಷ ರೂ., 38 ಮಂದಿಗೆ ವಾರ್ಷಿಕ ತ‌ಲಾ4 ಲಕ್ಷ ರೂ. ವೇತನದ ಭರವಸೆ ನೀಡಿದೆ.

ಬ್ಲೂ ಸ್ಟೋನ್‌ ಜುವೆಲರಿ (16 ಮಂದಿ-5 ಲ.ರೂ.), ಆರೋಗ್ಯ ರಂಗದ ಕಲ್ಟ್ಫಿಟ್‌ ಕಂಪೆನಿ (6 ಮಂದಿ- ತಲಾ 4 ಲ.ರೂ.) ಅಜೆಕ್ಸ್‌ ಕಂಪೆನಿ (22 ಮಂದಿ-ತಲಾ 3.5 ಲ.ರೂ. ), ಸ್ವಿಚ್‌ಗಿಯರ್‌ ಕಂಪೆನಿ (36 ಮಂದಿ-ತಲಾ3.2 ಲ.ರೂ.), ಟ್ರಿಪ್‌ ಫ್ಯಾಕ್ಟರಿ (37 ಮಂದಿ – ತಲಾ 3 ಲ.ರೂ.), ಸ್ನೆಡರ್‌ ಎಲೆಕ್ಟ್ರಿಕ್‌ ಇಂಡಿಯಾ ಕಂಪೆನಿ (18 ಮಂದಿ-ತಲಾ 2.5 ಲ.ರೂ.) ವಾರ್ಷಿಕ ವೇತನಕ್ಕೆ ಆಯ್ಕೆ ಮಾಡಿವೆ.

ಆಳ್ವಾಸ್‌ ಪ್ರಗತಿ ಅತ್ಯಂತ ಶಿಸ್ತು ಬದ್ಧವಾಗಿದ್ದು, ಸುವ್ಯವಸ್ಥಿತ. ಕಲರ್‌ ಕೋಡಿಂಗ್‌ ವ್ಯವಸ್ಥೆ, ಸ್ವಯಂಸೇವಕರ ಸಹಕಾರ ಎಲ್ಲವೂ ತುಂಬಾ ಖಷಿ ನೀಡಿತು.
-ಗೌರವ್‌ ಡಿಕೋಸ್ಟಾ , ಸಿದ್ಧಕಟ್ಟೆ

ಮಧ್ಯಮ ವರ್ಗದ, ಕೃಷಿ ಕುಟುಂಬದವಳಾದ ನಾನು ಆಳ್ವಾಸ್‌ ಸೇರಿದಾಗ ಬಾವಿಯಿಂದ ತೆಗೆದು ಸಮುದ್ರಕ್ಕೆ ಹಾಕಿದಂತಾಯಿತು. ಇಲ್ಲಿನ ಗುಣಮಟ್ಟದ ಶಿಕ್ಷಣ, ತರಬೇತಿ ಕಾರ್ಪೊರೆಟ್‌ ವ್ಯವಸ್ಥೆಯ ಕಂಪೆನಿ ಸಂದರ್ಶನ ಎದುರಿಸುವ ಆತ್ಮವಿಶ್ವಾಸ ಗಟ್ಟಿಗೊಳಿಸಿದೆ.
-ಆಶ್ವಿ‌ನಿ, ಆಳ್ವಾಸ್‌ ಎಂಬಿಎ ವಿದ್ಯಾರ್ಥಿನಿ

ಬೆಳಗಾವಿಯ ರಾಯಭಾಗ್‌ನ ನಾನು ಕ್ರೀಡಾ ದತ್ತು ಯೋಜನೆ ಮೂಲಕ ಆಳ್ವಾಸ್‌ಗೆ ಸೇರಿದೆ. ಬಳಿಕ ಮಲ್ಲಕಂಬದಲ್ಲಿ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್‌ ಮಾಡಿದ್ದೇನೆ. ಇಲ್ಲಿನ ಶಿಕ್ಷಣ ಹಾಗೂ ಕ್ರೀಡಾ ತರಬೇತಿ ನಮ್ಮ ವ್ಯಕ್ತಿತ್ವ ಅಭಿವೃದ್ಧಿಗೆ ಸಹಕಾರಿ. ಟ್ರಸ್ಟಿ ವಿವೇಕ್‌ ಆಳ್ವರ ಮಾರ್ಗದರ್ಶನದಲ್ಲಿ ಸಮರ್ಪಕವಾಗಿ ಸಿದ್ಧಗೊಂಡಿದ್ದೆ.
– ವೀರಭದ್ರ ಎನ್‌. ಮುಧೋಳ್‌, ಆಳ್ವಾಸ್‌ ವಿದ್ಯಾರ್ಥಿ

ಟಾಪ್ ನ್ಯೂಸ್

4-Pavagada

Pavagada: ಸಿಡಿಲಿನ ಪರಿಣಾಮ ಹೊತ್ತಿ ಉರಿದ ದನದ ಕೊಟ್ಟಿಗೆ; ಸ್ಥಳದಲ್ಲಿಯೇ ಹಸು ಸಹಜೀವ ದಹನ

Sunil Chhetri

Sunil Chhetri ಸರಿಸಾಟಿಯಿಲ್ಲದ ಆಟಗಾರ; ಭಾರತ ಫುಟ್‌ಬಾಲ್‌ನ ತೆಂಡುಲ್ಕರ್‌ ಚೆಟ್ರಿ

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

7

Miyazaki mango: ಶಂಕರಪುರದಲ್ಲಿ ವಿಶ್ವದ ದುಬಾರಿ ಮಾವಿನಹಣ್ಣು! 

5

ಲಕ್ಷದ್ವೀಪ ಪ್ರವಾಸೋದ್ಯಮದ ಅವಕಾಶ ಬಳಸಿಕೊಳ್ಳುವಲ್ಲಿ ಮಂಗಳೂರು ಹಿನ್ನಡೆ

Anjali Ambigera Case; Girish and Anjali got married 15 days ago!

Anjali Ambigera Case; ಹಂತಕ ಗಿರೀಶ್ ಗೂ ಅಂಜಲಿಗೂ 15 ದಿನಗಳ ಮೊದಲೇ ಮದುವೆಯಾಗಿತ್ತು!

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

ಲಕ್ಷದ್ವೀಪ ಪ್ರವಾಸೋದ್ಯಮದ ಅವಕಾಶ ಬಳಸಿಕೊಳ್ಳುವಲ್ಲಿ ಮಂಗಳೂರು ಹಿನ್ನಡೆ

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

4-Pavagada

Pavagada: ಸಿಡಿಲಿನ ಪರಿಣಾಮ ಹೊತ್ತಿ ಉರಿದ ದನದ ಕೊಟ್ಟಿಗೆ; ಸ್ಥಳದಲ್ಲಿಯೇ ಹಸು ಸಹಜೀವ ದಹನ

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

Sunil Chhetri

Sunil Chhetri ಸರಿಸಾಟಿಯಿಲ್ಲದ ಆಟಗಾರ; ಭಾರತ ಫುಟ್‌ಬಾಲ್‌ನ ತೆಂಡುಲ್ಕರ್‌ ಚೆಟ್ರಿ

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

Kundapur: ಹೇರಿಕೆರೆ ಅಭಿವೃದ್ಧಿಗೊಂಡರೆ ಹತ್ತಾರು ಹಳ್ಳಿಗಳಿಗೆ ನೀರು

Kundapur: ಹೇರಿಕೆರೆ ಅಭಿವೃದ್ಧಿಗೊಂಡರೆ ಹತ್ತಾರು ಹಳ್ಳಿಗಳಿಗೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.