Bantwal ಸಂಘಟಿತ ಹಿಂದೂ ಸಮಾಜ ಅಗತ್ಯ: ಸಾಧ್ವಿ ದೇವಿ ಸರಸ್ವತಿ

ಬಿ.ಸಿ.ರೋಡ್‌ನ‌ಲ್ಲಿ ಜಾಗೃತ ಹಿಂದೂ ಸಮಾಜೋತ್ಸವ

Team Udayavani, Oct 8, 2023, 11:26 PM IST

ಸಂಘಟಿತ ಹಿಂದೂ ಸಮಾಜ ಅಗತ್ಯ: ಸಾಧ್ವಿ ದೇವಿ ಸರಸ್ವತಿ

ಬಂಟ್ವಾಳ: ದೇಶದಲ್ಲಿ ನಡೆಯುತ್ತಿರುವ ಗೋಹತ್ಯೆ, ಲವ್‌ ಜೆಹಾದ್‌, ಹಿಂದೂ ವಿರೋಧಿಗಳನ್ನು ಮಟ್ಟ ಹಾಕುವ ಜತೆಗೆ ಹಿಂದೂ ಸಮಾಜದ ಸುರಕ್ಷೆಯ ದೃಷ್ಟಿಯಿಂದ ಹಿಂದೂಗಳು ಯಾವುದೇ ಜಾತಿ, ಮತದ ಭೇದವಿಲ್ಲದೆ ಸಂಘಟಿತರಾಗುವಂತೆ ತಮ್ಮಲ್ಲಿ ಸೆರಗೊಡ್ಡಿ ಭಿಕ್ಷೆ ಬೇಡುತ್ತಿದ್ದೇವೆ ಎಂದು ಪ್ರಖರ ವಾಗ್ಮಿ ಸಾಧ್ವಿ ದೇವಿ ಸರಸ್ವತಿ ಜೀ ಹೇಳಿದರು.

ಅವರು ಶೌರ್ಯ ಜಾಗರಣ ರಥಯಾತ್ರೆಯ ಭಾಗವಾಗಿ ಬಂಟ್ವಾಳ ವಿಶ್ವ ಹಿಂದೂ ಪರಿಷತ್‌ – ಬಜರಂಗ ದಳದ ವತಿಯಿಂದ ಬಿ.ಸಿ.ರೋಡಿನ ಬಸ್ತಿಪಡು³ ಶೌರ್ಯ ಮೈದಾನದಲ್ಲಿ ರವಿವಾರ ಆಯೋಜನೆಗೊಂಡಿದ್ದ ಜಾಗೃತ ಹಿಂದೂ ಸಮಾಜೋತ್ಸವದಲ್ಲಿ ದಿಕ್ಸೂಚಿ ಭಾಷಣ ಮಾಡಿದರು.

ಹಿಂದೂ ಸಮಾಜವು ಬೇರೆ ಬೇರೆ ಸಂಘಟನೆಗಳ ಮೂಲಕ ಹರಿದು ಹಂಚಿ ಹೋಗಿದ್ದು, ಇದರಿಂದಾಗಿ ಗೋಹತ್ಯೆ, ಭ್ರಷ್ಟಾಚಾರ, ಲವ್‌ ಜೆಹಾದ್‌ ವಿಜೃಂಭಿಸುತ್ತಿದೆ. ನೀರು, ಗಾಳಿ, ಮಣ್ಣನ್ನು ಪುಣ್ಯವೆಂದು ನಂಬಿ ಸರ್ವರಿಗೂ ಸುಖವನ್ನೇ ಬಯಸುವ ಸನಾತನ ಧರ್ಮವನ್ನು ಉದಯನಿಧಿ ಸ್ಟಾಲಿನ್‌ನಂತಹವರು ನಿಂದಿಸುತ್ತಿರುವುದು ದುರದೃಷ್ಟಕರ ಎಂದರು.

ಮಾತೆಯರು ಶಸ್ತ್ರ
ಧರಿಸುವ ಅನಿವಾರ್ಯ
ಮಿಲಾದ್‌ ಆಚರಣೆ ವೇಳೆ ಶಿವಮೊಗ್ಗ ದಲ್ಲಿ ಟಿಪ್ಪು ಸುಲ್ತಾನ, ಔರಂಗಜೇಬನ ಕಟೌಟ್‌ ಹಾಕಲಾಗಿದ್ದು, ಅಂತಹ ಕೃತ್ಯಗಳನ್ನು ಮಟ್ಟ ಹಾಕಬೇಕಿದೆ. ನಾವು ಅಬ್ದುಲ್‌ ಕಲಾಂರಂತಹ ಮುಸ್ಲಿಮರನ್ನು ಗೌರವಿಸುತ್ತೇವೆಯೇ ವಿನಃ ಟಿಪ್ಪು, ಬಾಬರ್‌, ಔರಂಗಜೇಬನಂತಹವರನ್ನಲ್ಲ. ರಾಜರಾಜೇಶ್ವರಿಯು ಚಂಡಮುಂಡ ರನ್ನು ಚೆಂಡಾಡಿದಂತೆ ಮಾತೆಯರು ಶಸ್ತ್ರಧಾರಿಗಳಾಗಿ ಲವ್‌ ಜೆಹಾದ್‌ನಂತಹ ಕೃತ್ಯಗಳಿಂದ ಹಿಂದೂ ಧರ್ಮವನ್ನು ರಕ್ಷಣೆ ಮಾಡಬೇಕಿದೆ ಎಂದು ಸಾಧ್ವಿ ದೇವಿ ಸರಸ್ವತಿ ಜೀ ಹೇಳಿದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಚಾರಕ ಸು.ರಾಮಣ್ಣ ಮಾತನಾಡಿ, ಆಯೋಧ್ಯೆಯ ಆಂದೋಲನದ ತಾರ್ಕಿಕ ಅಂತ್ಯ ಕಾಲಘಟ್ಟದಲ್ಲಿ ನಾವಿದ್ದೇವೆ. ಹಿಂದೂ ತರುಣರಲ್ಲಿ ಶೌರ್ಯ ವಿಜೃಂಭಿಸಿದಾಗ ಕ್ರೌರ್ಯ ತಾನಾಗಿಯೇ ಬದಿಗೆ ಸರಿಯುತ್ತದೆ. ಈ ನಿಟ್ಟಿನಲ್ಲಿ ಶೌರ್ಯವನ್ನು ಬೆಳೆಸುವ ಕಾರ್ಯ ಬಜರಂಗ ದಳ ಮಾಡುತ್ತಿದೆ ಎಂದು ತಿಳಿಸಿದರು.

ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಕಣಿಯೂರು ಕ್ಷೇತ್ರದ ಶ್ರೀ ಮಹಾಬಲ ಸ್ವಾಮೀಜಿ, ಪೊಳಲಿ ರಾಮಕೃಷ್ಣ ತಪೋವನದ ಸ್ವಾಮಿ ವಿವೇಕ ಚೈತನ್ಯಾನಂದಜಿ, ವಿಹಿಂಪ ದಕ್ಷಿಣ ಪ್ರಾಂತದ ಕಾರ್ಯಾಧ್ಯಕ್ಷ ಡಾ| ಎಂ.ಬಿ. ಪುರಾಣಿಕ್‌, ಸಮಾಜೋತ್ಸವದ ಸ್ವಾಗತ ಸಮಿತಿ ಅಧ್ಯಕ್ಷ ರಘು ಎಲ್‌.ಶೆಟ್ಟಿ ಬೆಳ್ಳೂರು, ವಿಹಿಂಪ ಪುತ್ತೂರು ಜಿಲ್ಲಾ ಅಧ್ಯಕ್ಷ ಡಾ| ಕೃಷ್ಣಪ್ರಸಾದ್‌ ವೇದಿಕೆಯಲ್ಲಿದ್ದರು.

ವಿಹಿಂಪ ಬಂಟ್ವಾಳ ಅಧ್ಯಕ್ಷ ಪ್ರಸಾದ್‌ ಕುಮಾರ್‌ ರೈ ಸ್ವಾಗತಿಸಿ, ಕಲ್ಲಡ್ಕ ಪ್ರಖಂಡದ ಅಧ್ಯಕ್ಷ ಸಚಿನ್‌ ಮೆಲ್ಕಾರ್‌ ವಂದಿಸಿದರು. ನವೀನ್‌ ಕುಲಾಲ್‌ ಹಾಗೂ ಬುಡಾ ಮಾಜಿ ಅಧ್ಯಕ್ಷ ಬಿ. ದೇವದಾಸ್‌ ಶೆಟ್ಟಿ ನಿರ್ವಹಿಸಿದರು. ಗಾಯಕ ಬಿ. ಭಾಸ್ಕರ್‌ ರಾವ್‌ ಪ್ರೇರಣ ಗೀತೆ ಹಾಡಿದರು. ಪ್ರಾರಂಭದಲ್ಲಿ ಕೈಕಂಬ ಪೊಳಲಿ ದ್ವಾರದ ಬಳಿಯಿಂದ ಸಹಸ್ರಾರು ಕಾರ್ಯಕರ್ತರ ಪಾಲ್ಗೊಳ್ಳುವಿಕೆಯಲ್ಲಿ ಬೃಹತ್‌ ಮೆರವಣಿಗೆ ನಡೆಯಿತು.

ತುಳುವಿನಲ್ಲಿ ಮಾತು ಆರಂಭಿಸಿದ ಸಾಧ್ವಿ
“ತುಳುನಾಡ್‌ದ ಸಿಂಹ ಸ್ವರೂಪಿ ಕಾರ್ಯಕರ್ತೆರೆಗ್‌, ಅಬ್ಬಕ್ಕನಂಚಿನ ಅಕ್ಕನಕ್ಲೆಗ್‌ ಎನ್ನ ಸೊಲ್ಮೆಲ್‌’ ಎಂದು ತುಳುವಿನಲ್ಲಿ ಮಾತು ಆರಂಭಿಸಿದ ಸಾಧ್ವಿಯವರು, ಶ್ರೀ ರಾಜರಾಜೇಶ್ವರೀ, ಮಂಜುನಾಥ, ಪರಶುರಾಮ, ಹನುಮಂತನ ಭೂಮಿಗೆ ನಮಸ್ಕರಿಸುವೆ. ಕರ್ನಾಟಕಕ್ಕೆ ಆಗಮಿಸಿದ ಸಂದರ್ಭ ಅತಿ ಹೆಚ್ಚು ಬಾರಿ ಮಂಗಳೂರು, ಉಡುಪಿಗೆ ಭೇಟಿ ನೀಡಿದ್ದು, ನಿಮ್ಮ ಪ್ರೀತಿಗೆ ಪ್ರಣಾಮಗಳು ಎಂದರು.

ಟಾಪ್ ನ್ಯೂಸ್

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

1-asdsad

Bantwal; ರಿಕ್ಷಾ ಪಲ್ಟಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಯುವಕ ಮೃತ್ಯು

1wewqewq

Bantwal; ಮಂಚಿಯಲ್ಲಿ ಹಿಟ್ ಆ್ಯಂಡ್ ರನ್: ಸ್ಕೂಟರ್ ಸವಾರ ಮೃತ್ಯು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.