Sihi Kumbalakai: ಬರಗಾಲದಲ್ಲಿ ಸಿಹಿ ಕುಂಬಳಕಾಯಿ


Team Udayavani, Oct 9, 2023, 2:26 PM IST

tdy-10

ಮಾಗಡಿ: ಮಾಜಿ ಸಚಿವ ಎಚ್‌.ಎಂ.ರೇವಣ್ಣ ಸಿಹಿ ಕುಂಬಳಕಾಯಿ ಬೆಳೆದು ಕೃಷಿಯಲ್ಲಿಯೂ ಸೈ ಎನಿಸಿ ಕೊಂಡಿದ್ದಾರೆ. ರೇವಣ್ಣ ಬರೀ ರಾಜಕಾರಿಣಿಯಲ್ಲ, ರೈತರೂ ಆಗಿದ್ದಾರೆ. ವಿದ್ಯಾರ್ಥಿ ಜೀವನದಲ್ಲಿ ಕ್ರೀಡಾಪಟುವೂ ಆಗಿದ್ದರು. ಸುಮಾರು 45 ವರ್ಷಗಳ ಸುದೀರ್ಘ‌ ರಾಜಕಾರಣದ ಮಾಡಿಕೊಂಡು ಬಂದಿರುವ ಮಾಜಿ ಸಚಿವ ಎಚ್‌.ಎಂ.ರೇವಣ್ಣ ದಿನನಿತ್ಯದ ರಾಜಕೀಯ ಜಂಜಾಟದಲ್ಲಿ ಕೆಲ ಸಮಯ ವನ್ನು ಕೃಷಿ ಚುಟುವಟಿಕೆಗೆ ಮೀಸಲಿಟ್ಟು, ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದರು. ಹೀಗಾಗಿ ಬರಗಾಲದಲ್ಲಿ ಸಿಹಿ ಕುಂಬಳಕಾಯಿ ಬೆಳೆದಿದ್ದಾರೆ.

ಕೃಷಿ ಬೇಸಾಯದಲ್ಲಿಯೂ ಸಾಧನೆ: ಮಾಗಡಿ ತಾಲೂಕಿನ ಗುಡ್ಡಹಳ್ಳಿ ಗ್ರಾಮದ ನಿವಾಸಿ ಪ್ರಗತಿಪರ ರೈತ ಕುಂಬಳಕಾಯಿ ಗಂಗಣ್ಣ ಅವರು ಮಾಜಿ ಸಚಿವ ಎಚ್‌.ಎಂ.ರೇವಣ್ಣ ಅವರ ಮನೆಗೆ ಹೋದಾಗಲೆಲ್ಲ. ನಾನು ಕುಂಬಳ ಕಾಯಿ ಬೆಳೆದು ಬದುಕು ಕಟ್ಟಿಕೊಂಡಿದ್ದೇನೆ ಎನ್ನುತ್ತಿದ್ದರು. ಮಾಜಿ ಸಚಿವ ಎಚ್‌. ಎಂ. ರೇವಣ್ಣ ಅವರಿಗೆ ಪ್ರೇರೇಪಿಸಿ ನಿಮ್ಮ ಭೂಮಿಯಲ್ಲಿ ಕುಂಬಳಕಾಯಿ ಬೆಳೆಯಬಹುದು ಎಂದು ಆಗಾಗ್ಗೆ ಹೇಳು ತ್ತಿದ್ದರು. ಮಾರುಕಟ್ಟೆ ಮಾಡುವುದು ಹೇಗೆ ಎಂಬುದನ್ನು ಸಹ ತಿಳಿಸುತ್ತಿದ್ದರು. ಸರ್ಕಾರಿ ಜೀಪ್‌ ಡ್ರೈವರ್‌ ಮಗನಾಗಿ ರಾಜಕಾರಣದಲ್ಲಿ ರಾಷ್ಟ್ರಮಟ್ಟದ ರಾಜಕಾರಣದಲ್ಲಿ ಎಚ್‌.ಎಂ.ರೇವಣ್ಣ ಬೆಳೆದಿದ್ದಾರೆ ಎಂದರೆ ಕೃಷಿ ಬೇಸಾಯದಲ್ಲಿಯೂ ಸಾಧನೆ ಮಾಡಿ ತೋರಿಸಿದ್ದಾರೆ.

ಪಿತೃಪಕ್ಷ ಆಚರಣೆ ಹಿನ್ನೆಲೆ ಕುಂಬಳಕಾಯಿಗೆ ಬಹಳ ಬೇಡಿಕೆ: ಹೀಗಾಗಿ ನಾನೂ ಕೂಡ ಇರುವ ಸುಮಾರು 8 ಎಕರೆ ಭೂಮಿಯಲ್ಲಿ ಕುಂಬಳಕಾಯಿ ಬೀಜ ಬಿತ್ತಿ ಬೆಳೆಯೋಣ ಚಿಂತಿಸಿದರು. ಗಂಗಣ್ಣ ಅವರ ಪ್ರೇರಣೆಯಂತೆ ಮಾಗಡಿಯಲ್ಲಿರುವ ತಮ್ಮ ತೋಟದ ಮನೆಯಂಗಳದ ಅಡಿಕೆ ತೋಟದಲ್ಲಿ ಕುಂಬಳಕಾಯಿ ಬೀಜ ಬಿತ್ತನೆ ಮಾಡಿಸಿದರು. ಆಗಾಗ್ಗೆ ಬೀಳುವ ಮಳೆಗೆ ಕುಂಬಳಗಿಡ ಬೆಳೆದು ಉತ್ತಮ ಇಳುವರಿ ಕೊಟ್ಟಿದ್ದು, 15 ಟನ್‌ ಕುಂಬಳಕಾಯಿ ಬೆಳೆದಿದ್ದಾರೆ. ಮಹಾಲಯ ಅಮಾವಾಸ್ಯೆ ಆಗಿರುವುದರಿಂದ ಎಲ್ಲೆಡೆ ಪಿತೃಪಕ್ಷ ಆಚರಣೆ ನಡೆಯುತ್ತಿದ್ದು, ಕುಂಬಳಕಾಯಿಗೆ ಬಹಳ ಬೇಡಿಕೆಯೂ ಬಂದಿದೆ. 5 ಟನ್‌ ಕುಂಬಳ ಕಾಯಿಯನ್ನು ಲಾಲ್‌ಬಾಗ್‌ಗೆ ಹಾಪ್‌ ಕಾಮ್ಸ್‌ ಗೆ ಮಾರಾಟ ಮಾಡಲಾಗಿದೆ. ಇನ್ನೂ ಕಾಯಿ ಕೀಳ ಬೇಕಿದೆ.ಬರಗಾಲದಲ್ಲಿ ಕುಂಬಳಕಾಯಿ ಬೆಳೆದು ಮಾಜಿ ಸಚಿವ ಎಚ್‌.ಎಂ.ರೇವಣ್ಣ ಸೈ ಎನಿಸಿ ಕೊಂಡಿದ್ದಾರೆ. ಇತರೆ ರೈತರಿಗೂ ಸ್ಫೂರ್ತಿಯಾಗಿದ್ದಾರೆ.

ಹೊಸಪೇಟೆ ಚಂದ್ರಯ್ಯ, ಕೆಂಚಪ್ಪ, ರಾಜಣ್ಣ, ನಾಗರಾಜು ಸೇರಿದಂತೆ ಇತರೆ ರೈತರು ಇದ್ದರು.

ಇತರೆ ರೈತರಿಗೂ ಸ್ಫೂರ್ತಿಯಾಗಿದ್ದಾರೆ: ರೈತ ಗಂಗಣ್ಣ: ಎಚ್‌.ಎಂ.ರೇವಣ್ಣ ಅವರ ಅಭಿಮಾನಿ ನಾನು ಅವರೊಂದಿಗೆ ಹೆಚ್ಚಿನ ಒಡನಾಡ ವಿಟ್ಟುತ್ತು. ಅವರು ರಾಜಕಾರಣದಲ್ಲಿ ರಾಷ್ಟ್ರಮಟ್ಟದಲ್ಲಿ ಬೆಳೆದಿದ್ದರೂ ಸಹ ಸ್ನೇಹಜೀವಿ ಎಚ್‌.ಎಂ.ರೇವಣ್ಣ ಅವರು ನಾನು ಎಲ್ಲೇ ಅವರಿಗೆ ಕಂಡರೂ ಕೂಗಿ ಮಾತನಾಡಿಸುವ ಗುಣ ಅವರದು. ಸಿಕ್ಕಾಗಲೆಲ್ಲ ಜಮೀನಿನಲ್ಲಿ ಏನು ಬೆಳೆ ಇಟ್ಟಿದ್ದೀಯಾ ಎಂದು ಯೋಗಕ್ಷೇಮ ವಿಚಾರಿ ಸುತ್ತಿದ್ದರು. ನಾನು ಕುಂಬಳಕಾಯಿ ಬೆಳೆದ ಬಗ್ಗೆ ಪತ್ರಿಕೆಯಲ್ಲಿ ಓದಿದ್ದೇನೆ ಎನ್ನುತ್ತಿದ್ದರು. ನೀವು ಬೆಳೆಯಬಹುದು ಎಂದು ರೇವಣ್ಣ ಅವರಿಗೆ ಆಗಾಗ್ಗೆ ಹೇಳುತ್ತಿದ್ದೆ. ರೇವಣ್ಣ ಅವರೀಗ ಕುಂಬಳಕಾಯಿ ಬೆಳೆದು ತೋರಿಸಿದ್ದಾರೆ. ಇತರೆ ರೈತರಿಗೂ ಸ್ಫೂರ್ತಿಯಾಗಿದ್ದಾರೆ. ನನಗೆ ಖುಷಿಯಾಗಿದೆ ಎಂದು ಪ್ರಗತಿ ಪರ ರೈತ ಕುಂಬಳಕಾಯಿ ಗಂಗಣ್ಣ ತಿಳಿಸಿದ್ದಾರೆ.

ಮಾಗಡಿ ಪಟ್ಟಣದ ಹೊಸಪೇಟೆ ರಸ್ತೆ ಬದಿ 8 ಎಕರೆ ಭೂಮಿಯಲ್ಲಿ 4 ಎಕರೆ ಅಡಕೆ ತೋಟ ಮಾಡಿಕೊಂಡಿದ್ದೇನೆ. ಅದರಲ್ಲಿ ಕಳೆ ತೆಗೆಸಿ, ಗೊಬ್ಬರ ಕೊಡಲಾಗುತ್ತಿತ್ತು. ಇದಕ್ಕೆ ಬಹು ತೇಕ ಖರ್ಚು ಬರುತ್ತಿತ್ತು. ಅಡಕೆ ತೋಟದಲ್ಲಿ ಕುಂಬಳಕಾಯಿ ಬೆಳೆದರೆ ಅದರ ತ್ಯಾಜ್ಯವೆಲ್ಲವೂ ಅಡಕೆ ತೋಟಕ್ಕೆ ಗೊಬ್ಬರವಾಗು ತ್ತದೆ ಎಂದು ಪ್ರಗತಿಪರ ರೈತ ಗಂಗಣ್ಣ ಅವರ ಪ್ರೇರಣೆಯಂತೆ ಕುಂಬಳಕಾಯಿ ಬೆಳೆದಿದ್ದೇನೆ. ಈಗ ಅದರ ತ್ಯಾಜ್ಯ ಅಡಕೆ ತೋಟಕ್ಕೆ ಗೊಬ್ಬರೂ ಆಗುತ್ತಿದೆ.-ಎಚ್‌.ಎಂ.ರೇವಣ್ಣ, ಮಾಜಿ ಸಚಿವ

-ತಿರುಮಲೆ ಶ್ರೀನಿವಾಸ್‌

ಟಾಪ್ ನ್ಯೂಸ್

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

5-

Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್‌ ಚಿಕಿತ್ಸೆ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು

Man finds Rs 9,900 crore in his bank account

Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

swati maliwal

AAP; ಸಂತ್ರಸ್ತೆಯಾದ ಸ್ವಾತಿ ಮಲಿವಾಲ್

5-

Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್‌ ಚಿಕಿತ್ಸೆ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.