Sewage water: ನಿರ್ವಹಣೆಯಿಲ್ಲದೆ ವ್ಯರ್ಥವಾಗುತ್ತಿದೆ ಒಳಚರಂಡಿ ನೀರು


Team Udayavani, Oct 10, 2023, 10:46 AM IST

TDY-1

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಒಳಚರಂಡಿಗಳ ನಿರ್ವಹಣೆ ಇಲ್ಲದೆ ಕೆಲವು ಕಡೆ ಕೊಳಚೆ ನೀರು ವ್ಯರ್ಥವಾಗಿ ಹರಿದು ಹೋಗುತ್ತಿದ್ದು, ಇದಕ್ಕೆ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ಲಕ್ಷ್ಯವೇ ಪ್ರಮುಖ ಕಾರಣ ಎಂದು ನಾಗರಿಕರ ಆರೋಪವಾಗಿದೆ.

ಬೆಂಗಳೂರು ಮಹಾ ನಗರದ ಪ್ರಮುಖ ಕೊರತೆಗಳಲ್ಲಿ ಒಳಚರಂಡಿ ಸಮಸ್ಯೆಯೂ ಒಂದು. ಐಟಿ-ಬಿಟಿ ಸಿಟಿಯ ಪ್ರಮುಖ ರಸ್ತೆಗಳಲ್ಲಿ ಮಳೆ ಬಂದರೆ ಒಳಚರಂಡಿಗಳಿಂದ ನೀರು ಉಕ್ಕಿ ರಸ್ತೆಗೆ ಹರಿದು ವ್ಯರ್ಥವಾಗುತ್ತದೆ. ಉದ್ಯಾನ ನಗರಿಯಲ್ಲಿ ಪ್ರತಿನಿತ್ಯ 1,440 ಎಂಎಲ್‌ ಡಿಗೂ ಹೆಚ್ಚಿನ ಕೊಳಚೆ ನೀರು ಉತ್ಪಾದನೆ ಆಗುತ್ತಿದೆ. ಆದರೆ, ಸಂಸ್ಕರಣಾ ಸಾಮರ್ಥ್ಯ ಇರುವುದು 1,372.5 ಎಂಎಲ್‌ಡಿ ಮಾತ್ರ. ಉಳಿದ ನೀರು ವ್ಯರ್ಥವಾಗಿ ನಗರದ ಹೊರಭಾಗಕ್ಕೆ ಹರಿದು ಹೋಗುತ್ತದೆ. ಈ ನೀರನ್ನು ಶುದ್ಧೀಕರಿಸಿ ಬಳಕೆ ಉಪಯೋಗಿಸಿಕೊಂಡರೆ ಅನುಕೂಲವಾಗುತ್ತದೆ. ವರ್ಷದಿಂದ ವರ್ಷಕ್ಕೆ ಕೊಳಚೆ ನೀರಿನ ಪ್ರಮಾಣ ಹೆಚ್ಚುತ್ತಿದ್ದು, ಇದರ ನಿರ್ವಹಣೆಯೇ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಇನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಇದರ ನಿರ್ವಹಣೆಯಲ್ಲಿ ವೈಫ‌ಲ್ಯ ಹೊಂದಿದೆ ಎಂಬುದು ಸಾರ್ವಜನಿಕರ ಆರೋಪ.

ಶುದ್ಧೀಕರಣ ಘಟಕಕ್ಕೆ ನೀರು ಹೋಗುತ್ತಿಲ್ಲ: ಬೆಂಗಳೂರಿನಲ್ಲಿ ಒಳಚರಂಡಿ ಮೂಲಕ ಕೊಳಚೆ ನೀರು ಸಾಗಿಸಲು 3,300 ಕಿ.ಮೀ. ಉದ್ದದ ಪೈಪ್‌ ಲೈನ್‌ ಹಾಕಲಾಗಿದೆ. ಆದರೆ, ಶುದ್ಧೀಕರಣ ಘಟಕಗಳಿಗೆ ಸಂಪರ್ಕ ಕಲ್ಪಿಸುವ ಪೈಪ್‌ಗ್ಳು 40 ರಿಂದ 50 ವರ್ಷ ಹಳೆಯದಾಗಿವೆ. ಬಹುತೇಕ ಕಡೆಗಳಲ್ಲಿ ಒಳಚರಂಡಿಗಳ ಅತಿಕ್ರಮಣವಾಗಿದೆ. ಜೊತೆಗೆ ನಿರ್ವಹಣೆಯಿಲ್ಲದೇ ಒಳಚರಂಡಿ ಪೈಪ್‌ ಒಡೆದು ಹೋಗಿರುವುದು, ತುಕ್ಕು ಹಿಡಿದಿರು ವುದು ಕಂಡು ಬಂದಿದೆ.

ಮತ್ತೂಂದೆಡೆ ಈ ತ್ಯಾಜ್ಯ ನೀರು ನೇರ ಕೆರೆ ಸೇರಿ ಸಂಪೂರ್ಣ ಕಲ್ಮಶವಾಗುತ್ತಿದೆ. ಬೆಂಗಳೂರಿನ ಮೈಸೂ ರು ರಸ್ತೆ, ತುಮಕೂರು ರಸ್ತೆ, ಹೊಸೂರು ರಸ್ತೆಗಳ ಅಡ್ಡ ರಸ್ತೆಗಳಲ್ಲಿ ಅಲ್ಲಲ್ಲಿ ಒಳಚರಂಡಿ ಮ್ಯಾನ್‌ಹೋಲ್‌ ತೆರೆದಿದ್ದು, ಕೊಳಚೆ ನೀರು ವ್ಯರ್ಥವಾಗಿ ಹರಿಯುತ್ತಿದ್ದು, ದುರ್ನಾತ ಬೀರುತ್ತಿದೆ. ಇನ್ನು ಒಳಚರಂಡಿ ಮಾರ್ಗಕ್ಕೆ ಮಳೆ ನೀರಿನ ಸಂಪರ್ಕ ನಿಷೇಧಿಸಲಾಗಿದೆ. ಆದರೂ, ಕಟ್ಟಡ, ಮನೆಗಳ ಮಳೆನೀರು, ಕಸವನ್ನು ಒಳಚರಂಡಿಗೆ ಹಾಕುತ್ತಿರುವುದು ಮಂಡಳಿ ಗಮನಕ್ಕೆ ಬಂದಿದೆ. ಅಕ್ರಮವಾಗಿ ಮಳೆನೀರು ಒಳಚರಂಡಿಗೆ ಹರಿಯಬಿಡುವುದರಿಂದ ಮ್ಯಾನ್‌ ಹೋಲ್‌ಗ‌ಳಲ್ಲಿ ತ್ಯಾಜ್ಯ ನೀರಿನ ಸಾಮರ್ಥ್ಯ ಹೆಚ್ಚಾಗಿ ಉಕ್ಕಿ ಹರಿದು ರಸ್ತೆಗೆ ಬರುತ್ತಿವೆ. ಇತ್ತೀಚೆಗೆ ಇಂತಹ 9 ಸಾವಿರ ಕಟ್ಟಡಗಳ ಸಂಪರ್ಕ ಕಡಿತಗೊಳಿಸಲಾಗಿದೆ.

1,400 ಎಂಎಲ್‌ಡಿ ವ್ಯರ್ಥ ನೀರು: ಜಲಮಂಡಳಿ ಸಿಬ್ಬಂದಿಗೆ ಇಂತಿಷ್ಟೆ ಸಮಯಕ್ಕೆ ಒಳಚರಂಡಿ ಶುಚಿಗೊಳಿಸಬೇ ಕೆಂಬ ನಿಯ ಮಗಳಿಲ್ಲ. ಹೀಗಾಗಿ ಅವರೂ ಈ ಬಗ್ಗೆ ತಲೆಕೆಡಿಸಿ ಕೊಳ್ಳದೇ ಹಲವು ವರ್ಷಗಳಿಗೊಮ್ಮೆ ನಿರ್ವಹಣೆ ಕೆಲಸಕ್ಕೆ ಕೈ ಹಾಕುತ್ತಿದ್ದಾರೆ. ಇದಲ್ಲದೇ, ಕೋರಮಂಗಲ, ಚಳ್ಳ ಘಟ್ಟ, ಹೆಬ್ಟಾಳ ಮತ್ತು ವೃಷಭಾವತಿ ಕಣಿವೆಗಳಲ್ಲಿ 1,400 ಎಂಎಲ್‌ ಡಿ ವ್ಯರ್ಥ ನೀರು ಹರಿದು ಹೋಗುತ್ತಿದೆ. ಬೆಂಗಳೂರಿ ನಲ್ಲಿ ಸಾಕಷ್ಟು ಕೊಳವೆ ಬಾವಿ ಗಳಿದ್ದು, ಇವುಗಳಿಂದ ಎಷ್ಟು ನೀರು ಪಡೆಯಲಾಗುತ್ತದೆ ಎಂಬ ವೈಜ್ಞಾನಿಕ ಅಂದಾಜು ಇಲ್ಲದಿರುವುದರಿಂದ ಕೊಳಚೆ ನೀರಿನ ಪ್ರಮಾಣ ನಿಖರವಾಗಿ ಅಳತೆಮಾಡಲು ಸಾಧ್ಯವಾ ಗುತ್ತಿಲ್ಲ ಎಂಬುದು ಜಲಮಂಡಳಿ ಅಧಿಕಾರಿಗಳ ವಾದ.

33 ಕೊಳಚೆ ನೀರು ಸಂಸ್ಕರಣ ಘಟಕ : ಬೆಂಗಳೂರಿನಲ್ಲಿ ಒಟ್ಟು 8,387 ಕಿ.ಮೀ.ಉದ್ದದ ಒಳ ಚರಂಡಿ ವ್ಯವಸ್ಥೆ ಇದೆ. 2.69 ಲಕ್ಷ ಮ್ಯಾನ್‌ ಹೋಲ್‌ಗ‌ಳಿವೆ. 10 ಲಕ್ಷ ಮನೆಗಳಿಗೆ ಒಳಚರಂಡಿ ವ್ಯವಸ್ಥೆ ಒದಗಿಸಲಾಗಿದೆ. ವ್ಯವಸ್ಥೆ ನೋಡಿಕೊಳ್ಳುವ 175 ಯಂತ್ರಗಳಿವೆ. 40 ಶೋಧನಾ ಯಂತ್ರ (ಡಿಸ್ಟಿಲಿಂಗ್‌ ಮೆಷಿನ್‌)ಗಳಿವೆ. ಇನ್ನು ಒಳಚರಂಡಿ ವ್ಯವಸ್ಥೆಯ ಲ್ಯಾಟರಲ್‌ಗ‌ಳು (300 ಮಿಲಿ ಮೀ. ವ್ಯಾಸಕ್ಕೂ ಚಿಕ್ಕದಾದ) 6905.7 ಕಿ.ಮೀ. ಇದೆ. 1,481 ಕಿ.ಮೀ.ಒಳಚರಂಡಿ ಕೊಳವೆಗಳು (300 ಮಿ.ಮೀ ವ್ಯಾಸಕ್ಕಿಂತ ಹೆಚ್ಚಿನದ್ದು) ನಿರ್ಮಿಸಲಾಗಿದೆ. ಒಳಚರಂಡಿ ನೀರು ಸಂಸ್ಕರಿಸಲೆಂದೇ 33 ಘಟಕಗಳಿವೆ ಎಂದು ಜಲಮಂಡಳಿ ಮೂಲಗಳು ತಿಳಿಸಿವೆ.

ಅವಿನಾಶ ಮೂಡಂಬಿಕಾನ

ಟಾಪ್ ನ್ಯೂಸ್

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌ !

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌!

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.