Devanahalli: ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ಮಗು ಸಾವು


Team Udayavani, Oct 10, 2023, 11:46 AM IST

Devanahalli: ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ಮಗು ಸಾವು

ದೇವನಹಳ್ಳಿ: ಗರ್ಭಿಣಿಯೊಬ್ಬರಿಗೆ ಶುಶ್ರೂಷಕಿ ಯರು ಹೆರಿಗೆ ಮಾಡಿಸುವ ಸಂದರ್ಭದಲ್ಲಿ ಮಗು ಸಾವನ್ನಪ್ಪಿದ ಘಟನೆ ತಾಲೂಕಿನ ಸಾರ್ವಜನಿಕ ಆಸ್ಪತ್ರೆಯ ತಾಯಿ-ಮಗು ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯ ದಿಂದಲೇ ಹಸುಗೂಸು ಸಾವನ್ನಪ್ಪಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಮಗುವಿನ ಸಾವು ಕೇಳುತ್ತಿದ್ದಂತೆ ದಂಪತಿ ಹಾಗೂ ಪೋಷಕರು ಆಸ್ಪತ್ರೆ ಮುಂಭಾಗ ಜಮಾಯಿಸಿ, ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಸಾವನ್ನಪ್ಪಿದೆ, ನಮಗೆ ನ್ಯಾಯ ಕೊಡಿಸ ಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ 10 ದಿನಗಳ ಹಿಂದೆ ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ ಲಕ್ಷ್ಮೀ 9 ದಿನಗಳ ಹಿಂದೆ ಹೆರಿಗೆ ನೋವು ಕಾಣಿಸಿಕೊಂಡಿದೆ.

ಅದೇ ದಿನದಲ್ಲಿ ಹೆರಿಗೆ ವೈದ್ಯರಾಗಿರುವ ಡಾ| ಮಮತಾ ರಜೆ ಇದ್ದರು ಎನ್ನಲಾಗುತ್ತಿದ್ದು, ಆಸ್ಪತ್ರೆಯ ನರ್ಸ್‌ಗಳೇ ಹೆರಿಗೆ ಮಾಡಲು ಮುಂದಾಗಿದ್ದಾರೆ. ಮಗುವಿನ ತಂದೆ ಪುನೀತ್‌ ಹಾಗೂ ಸಂಬಂಧಿಕರು ಬೇರೆ ಆಸ್ಪತ್ರೆಗೆ ಬರೆದು ಕೊಡಿ ಎಂದು ಅಂಗಲಾಚಿದರೂ ಕೇಳಲಿಲ್ಲ. “ನಾವೇ ಹೆರಿಗೆ ಮಾಡಿಸುತ್ತೇವೆ. ನೀವೇನೂ ಗಾಬರಿ ಪಡಬೇಡಿ’ ಎಂದು ಹೇಳಿದ್ದಾರೆ.

ಆದರೆ, ಹೆರಿಗೆ ಆಗುತ್ತಿದ್ದಂತೆ, ಮಗುವು ಹೊರಗೆ ಬರದ ಕಾರಣ ಹೆಚ್ಚು ಸಮಯ ತೆಗೆದುಕೊಂಡ ಪರಿಣಾಮ ಮಗುವಿನ ಉಸಿರಾಟದಲ್ಲಿ ವ್ಯತ್ಯಾಸ ಉಂಟಾಗಿದೆ. ಮಗುವಿನ ಮೆದುಳು ನಿಷ್ಕಿಯ ಆಗುತ್ತಿದ್ದಂತೆ ಮಗುವನ್ನು ಸ್ಥಳೀಯ ವಾಗಿ ಬೇರೆ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಕೂಡಲೇ ಪೋಷಕರು ಸ್ಥಳೀಯ ನ್ಯೂ ಮಾನಸ ಆಸ್ಪತ್ರೆಗೆ ದಾಖಲಿಸಿದ್ದರು. ದುರಾದೃಷ್ಟವೆಂದರೆ ಮಗುವಿನ ಹಾರ್ಟ್‌ಬಿಟ್‌ ಇದ್ದರೂ ಸಹ ಮಗುವಿನ ಉಸಿರಾಟ ಇರದ ಕಾರಣ ಮಗು ಸಾವನ್ನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಮಗುವಿನ ತಾಯಿ ಲಕ್ಷ್ಮೀ, “ಇಲ್ಲಿ ಹೆರಿಗೆ ಬೇಡ ಎಂದು ನಾವು ಎಷ್ಟು ಬೇಡಿಕೊಂಡರೂ ಇಲ್ಲಿನ ಸಿಬ್ಬಂದಿ ಬೇರೆಡೆ ಹೋಗಬೇಡಿ, ನಾವು ಹೆರಿಗೆ ಮಾಡಿಸುತ್ತೇವೆ ಎಂದು ಹೇಳಿ ನಿರ್ಲಕ್ಷ್ಯ ತೋರಿ ದ ಪರಿಣಾಮ ಮಗುವಿನ ಸಾವಿಗೆ ಕಾರಣ ರಾಗಿದ್ದಾರೆ’ ಎಂದು ಕಣ್ಣೀರು ಹಾಕಿದರು.

ಸಂಬಂಧಿ ಪದ್ಮಾ ಮಾತನಾಡಿ, ವೈದ್ಯರಿಲ್ಲವೆಂದು ಹೇಳಿದ್ದಾಗ ನಾವು ಬೇರೆ ಕಡೆಗೆ ಹೋಗ್ತಿವಿ ಎಂದು ಹೇಳಿದ್ರೀ, ಆಗ ನೋವು ಕಾಣಿಸಿಕೊಂಡಿರಲಿಲ್ಲ. ನೋವಿನ ಇಂಜೆಕ್ಷನ್‌ ನೀಡಿದ್ರೂ, ನೋವು ಕಾಣಿಸಿಕೊಂಡಿದೆ. ಹೆರಿಗೆ ಮಾಡಿಸುವಾಗಲೂ ಸಹ ನಾನು ಜೊತೆಯಲ್ಲಿಯೇ ಇದ್ದೆ. ರಿರ್ಪೊàಟ್‌ನಲ್ಲಿ ಎಲ್ಲವೂ ನಾರ್ಮಲ್‌ ಇತ್ತು. ಆದರೆ, ಮಗು ಹೊರಗೆ ಬಂದ ಬಳಿಕ ಈ ರೀತಿಯಾಗಿದೆ. ಬೇರೆ ಆಸ್ಪತ್ರೆಗೆ ಹೋದಾಗ ಸ್ವಲ್ಪ ಉಸಿರಾಟವೇನೋ ಬಂದಿತ್ತು. ಇಲ್ಲಿ ಆಕ್ಸಿಜನ್‌ ವ್ಯವಸ್ಥೆ ಇಲ್ಲ. ನಮಗೆ ನ್ಯಾಯಬೇಕಷ್ಟೇ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆಸ್ಪತ್ರೆಯ ಮುಂದೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ, ತಾಲೂಕು ಆರೋಗ್ಯಾಧಿಕಾರಿ ಭೇಟಿ ನೀಡಿ, ಪೋಷಕರಿಗೆ ಸಾಂತ್ವನ ಹೇಳಿದರು.

ವೈದ್ಯೆ ಡಾ.ಮಮತಾ ಮಾತನಾಡಿ, ಗರ್ಭಿಣಿ ಬಂದಾಗ, ಎಲ್ಲವೂ ನಾರ್ಮಲ್‌ ಇತ್ತು. ನಾನು ರಜೆಯಲ್ಲಿದೆ, ಮಕ್ಕಳ ವೈದ್ಯರೊಬ್ಬರು ಇದ್ದರು. ಮಗುವಿನ ಕತ್ತಿಗೆ ಕರಳು ಸುತ್ತಿಕೊಂಡಿದ್ದರಿಂದ ಉಸಿರಾಟದ ತೊಂದರೆಯಾಗಿ ಮಗುವು ಸಾವನ್ನಪ್ಪಿದೆ. ಮಗು ಉಳಿಸಲು ಸಿಬ್ಬಂದಿ ಸಾಕಷ್ಟು ಪ್ರಯತ್ನ ಪಟ್ಟಿದ್ದಾರೆ. ಈ ಕುರಿತು ಮೇಲಧಿಕಾರಿಗಳ ಗಮನಕ್ಕೂ ಸಹ ತರಲಾಗಿದೆ ಎಂದು ತಿಳಿಸಿದರು.

ಮಗು ಸಾವಿಗೆ ಸಂಬಂಧಿಸಿ ದಂತೆ ಪೋಷಕ ರಿಂದ ಮಾಹಿತಿ ಪಡೆಯಲಾಗಿದೆ. ಇವ ರಿಂದ ದೂರು ಬಂದ ಕೂಡಲೇ ಜಿಲ್ಲಾ ಆರೋಗ್ಯಾಧಿಕಾರಿಗಳ ಗಮ ನಕ್ಕೂ ಸಹ ತಂದಿದ್ದೇನೆ. ಸಾವಿಗೆ ಕಾರಣಕ್ಕಾಗಿ ತನಿಖೆ ಕೈಗೊಂಡು ಸೂಕ್ತ ಕ್ರಮವಹಿಸಲಾಗುವುದು. – ಡಾ.ಸಂಜಯ್‌, ತಾಲೂಕು ಆರೋಗ್ಯಾಧಿಕಾರಿ, ದೇವನಹಳ್ಳಿ

ಟಾಪ್ ನ್ಯೂಸ್

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

5-

Doddaballapura: ಹೇಮಂತ್ ಗೌಡ ಹತ್ಯೆ ಪ್ರಕರಣ: ಗುಂಡು ಹಾರಿಸಿ ಆರೋಪಿಯ ಬಂಧನ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.