Agri: ಸಣ್ಣ ರೈತರಿಗೆ ನೀಡುವ ಸಬ್ಸಿಡಿ ಹೆಚ್ಚಳಕ್ಕೆ ಕೇಂದ್ರ ಚಿಂತನೆ
ಲೋಕಸಭೆ ಚುನಾವಣೆ ಮೇಲೆ ಕಣ್ಣು- ನೇರ ನಗದು ಸಬ್ಸಿಡಿ 8 ಸಾವಿರ ರೂ.ಗೆ ಏರಿಕೆಗೆ ಯೋಜನೆ
Team Udayavani, Oct 11, 2023, 7:57 PM IST
ನವದೆಹಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ನಡುವೆಯೇ ಸಣ್ಣ ರೈತರಿಗೆ ಸಹಾಯಕವಾಗಿ ವಾರ್ಷಿಕವಾಗಿ ನೀಡುತ್ತಿರುವ ನೇರ ನಗದು ಸಬ್ಸಿಡಿ(ಕಿಸಾನ್ ಸಮ್ಮಾನ್ ನಿಧಿ)ಯನ್ನು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ.
ಪ್ರಸ್ತುತ ಕೇಂದ್ರ ಸರ್ಕಾರವು ಸಣ್ಣ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆಯಾಗಿ ವಾರ್ಷಿಕ 6,000 ರೂ. ನೀಡುತ್ತಿದೆ. ಈ ಮೊತ್ತವನ್ನು 8,000 ರೂ.ಗಳಿಗೆ ಏರಿಕೆ ಮಾಡಲು ಸರ್ಕಾರ ಯೋಜಿಸುತ್ತಿದೆ.
ಇದಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದಿಸಿದರೆ, ಸರ್ಕಾರಕ್ಕೆ ಹೆಚ್ಚುವರಿಯಾಗಿ 20,000 ಕೋಟಿ ರೂ. ವೆಚ್ಚವಾಗಲಿದೆ. ಪ್ರಸ್ತುತ ಬಜೆಟ್ನಲ್ಲಿ ಸರ್ಕಾರವು ಈ ಯೋಜನೆಗಾಗಿ 60,000 ಕೋಟಿ ರೂ. ಮೀಸಲಿಟ್ಟಿದೆ.
ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಭಾರತದ ಒಟ್ಟು ಜನಸಂಖ್ಯೆಯಲ್ಲಿ ಗ್ರಾಮೀಣ ಭಾಗದವರು ಶೇ.65ರಷ್ಟು ಇದ್ದಾರೆ. ಈ ಹಿನ್ನೆಲೆಯಲ್ಲಿ ಮೂರನೇ ಅವಧಿಗೆ ಅಧಿಕಾರಕ್ಕೆ ಬರಲು ಮುಂದಾಗಿರುವ ಮೋದಿ ನೇತೃತ್ವದ ಎನ್ಡಿಎ ಸರ್ಕಾರವು ರೈತರ ಮತಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡಬೇಕಿರುವುದು ಸಹಜವಾಗಿದೆ.
2018ರ ಡಿಸೆಂಬರ್ನಲ್ಲಿ ರೈತರಿಗೆ ಸಬ್ಸಿಡಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ಆರಂಭಿಸಿತು. ಸದ್ಯ 11 ಕೋಟಿ ಸಣ್ಣ ರೈತರು ಇದರ ಫಲಾನುಭವಿಗಳಾಗಿದ್ದಾರೆ. ಈ ಯೋಜನೆಯ ನಿಯಮಗಳನ್ನು ಸಡಿಲಿಸುವ ನಿಟ್ಟಿನಲ್ಲೂ ಸರ್ಕಾರದ ವಲಯಗಳಲ್ಲಿ ಚರ್ಚೆಗಳು ನಡೆಯುತ್ತಿದೆ. ಇದರಿಂದ ಇನ್ನೂ ಹೆಚ್ಚಿನ ಸಂಖ್ಯೆಯ ರೈತರಿಗೆ ಈ ಯೋಜನೆಯ ಉಪಯೋಗ ಸಿಗಲಿದೆ.
ಕಳೆದ ವಾರ, ಉಜ್ವಲ ಯೋಜನೆಯಡಿ ಅನಿಲ ಸಿಲಿಂಡರ್ಗಳಿಗೆ ಸಬ್ಸಿಡಿಯನ್ನು 100ರೂ. ಹೆಚ್ಚಿಸಿತು. ಇದರಿಂದ ಈ ಹಿಂದೆ 200 ರೂ. ಇದ್ದ ಸಬ್ಸಿಡಿ, ಇದೀಗ 300 ರೂ.ಗೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್