Kerala: 96ನೇ ವಯಸ್ಸಲ್ಲಿ ಅಕ್ಷರ ಕಲಿತ ಕಾತ್ಯಾಯಿನಿ ಅಮ್ಮ ನಿಧನ
Team Udayavani, Oct 11, 2023, 8:22 PM IST
ತಿರುವನಂತಪುರಂ: ಕೇರಳದ ಸಾಕ್ಷರತಾ ಅಭಿಯಾನದ ಮುಖೇನ ವಿದ್ಯಾಭ್ಯಾಸ ಪಡೆದ ರಾಜ್ಯದ ಅತ್ಯಂತ ಹಿರಿಯ ವಿದ್ಯಾರ್ಥಿನಿ ಎಂಬ ಖ್ಯಾತಿಗೆ ಪಾತ್ರರಾಗಿದ್ದ ಕಾತ್ಯಾಯಿನಿ ಅಮ್ಮ ಬುಧವಾರ ಇಹಲೋಕ ತ್ಯಜಿಸಿದ್ದಾರೆ.
ಅಳಪ್ಪುಳ ಜಿಲ್ಲೆಯ ಚೆಪ್ಪಡ್ ಗ್ರಾಮದ ನಿವಾಸಿಯಾಗಿದ್ದ ಕಾತ್ಯಾಯಿನಿ ಅಮ್ಮ, ತಮ್ಮ 96ನೇ ವಯಸ್ಸಿನಲ್ಲಿ ಸಾಕ್ಷರತೆ ಅಭಿಯಾನದ “ಅಕ್ಷರಲಕ್ಷಂ’ ಪರೀಕ್ಷೆ ಬರೆದಿದ್ದರಲ್ಲದೆ, ಈ ಪರೀಕ್ಷೆ ಬರೆದಿರುವ ರಾಜ್ಯದ 43,330 ಅಭ್ಯರ್ಥಿಗಳ ಪೈಕಿ ಇವರೇ ಅತ್ಯಂತ ಹಿರಿಯರಾಗಿದ್ದರು. ಜತೆಗೆ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸುವ ಮೂಲಕ ಪ್ರಖ್ಯಾತಿ ಗಳಿಸಿದ್ದರು. ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಅವರು ಕಳೆದ ಕೆಲ ಸಮಯದಿಂದ ಹಾಸಿಗೆ ಹಿಡಿದಿದ್ದು, ಇದೀಗ ತಮ್ಮ 101ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸಿಎಂ ಪಿಣರಾಯಿ ವಿಜಯನ್ ಈ ಬಗ್ಗೆ ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mehbooba Mufti: ನೀತಿ ಸಂಹಿತೆ ಉಲ್ಲಂಘನೆ ಆರೋಪ… ಮೆಹಬೂಬಾ ಮುಫ್ತಿ ವಿರುದ್ಧ ಕೇಸು
TDS ಹೊರೆ ತಪ್ಪಿಸಬೇಕಂದ್ರೆ ಮೇ. 31ರೊಳಗೆ ಪ್ಯಾನ್ – ಆಧಾರ್ ಲಿಂಕ್ ಮಾಡಿ
Panaji: ಜೂ. 4, 5ಕ್ಕೆ ಗೋವಾ ರಾಜ್ಯಕ್ಕೆ ಮುಂಗಾರು ಪ್ರವೇಶ
School Reopen: ಈ ರಾಜ್ಯದಲ್ಲಿ ಲೋಕಸಭೆ ಚುನಾವಣಾ ಫಲಿತಾಂಶ ದಿನದಂದೇ ಶಾಲಾ ಕಾಲೇಜು ಆರಂಭ…
Panaji: ಗೆಳೆಯರ ಜೊತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು, ಇಬ್ಬರ ರಕ್ಷಣೆ