Laxmeshwar: ಅಂಚೆ ಇಲಾಖೆಗಿದೆ ಅತ್ಯುತ್ತಮ ಸಂಪರ್ಕ ಜಾಲ; ಶಾಸಕ ಲಮಾಣಿ

ಅಂಚೆ ಇಲಾಖೆಯಲ್ಲಿ ಉತ್ತಮ ಸಾಧನೆ ಮಾಡಿದ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.

Team Udayavani, Oct 12, 2023, 5:16 PM IST

Laxmeshwar: ಅಂಚೆ ಇಲಾಖೆಗಿದೆ ಅತ್ಯುತ್ತಮ ಸಂಪರ್ಕ ಜಾಲ

ಲಕ್ಷ್ಮೇಶ್ವರ: ಪ್ರಸ್ತುತ ಆಧುನಿಕ ದಿನಮಾನಗಳಲ್ಲಿ ಅಂಚೆ ಇಲಾಖೆ ವಿಶ್ವದಲ್ಲಿಯೇ ಉತ್ತಮ ಸಂಪರ್ಕ ಜಾಲ ಹೊಂದಿದ್ದು, ಜನರ ವಿಶ್ವಾಸ ಗಳಿಸಿರುವ  ಇಲಾಖೆಯಾಗಿದೆ ಎಂದು ಶಾಸಕ ಡಾ| ಚಂದ್ರು ಲಮಾಣಿ ಅಭಿಪ್ರಾಯಪಟ್ಟರು.

ಪಟ್ಟಣದ ಚನ್ನಮ್ಮನ ವನ ಕಲ್ಯಾಣ ಮಂಟಪದಲ್ಲಿ ಅಂಚೆ ಇಲಾಖೆ ಗದಗ ವಿಭಾಗ, ಗದಗ ಉಪ ವಿಭಾಗಗಳ ವತಿಯಿಂದ ಆಯೋಜಿಸಿದ್ದ ಅಂಚೆ ಜನಸಂಪರ್ಕ ಅಭಿಯಾನ ಉದ್ಘಾಟಿಸಿ ಮಾತನಾಡಿದರು.

ಅಂಚೆ ಅಧಿಕಾರಿಗಳ ಸೇವೆ ಬಹು ದೊಡ್ಡದು. ದಕ್ಷತೆ, ಗೌರವಯುತವಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಭ್ರಷ್ಟಾಚಾರ ರಹಿತ ವ್ಯವಸ್ಥೆ ಅಂಚೆ ಇಲಾಖೆಯಲ್ಲಿ ಮಾತ್ರ ಇದೆ. ಅಂಚೆ ಇಲಾಖೆಯ ಕಾರ್ಯ ಸಮಾಜಮುಖೀಯಾಗಿದೆ. ಸ್ಪರ್ಧಾತ್ಮಕ ಯುಗದ ಪೈಪೋಟಿಯಲ್ಲಿ ಅಂತರ್ಜಾಲ ತಂತ್ರಜ್ಞಾನ ಬಳಸಿಕೊಂಡು ಜನರಿಗೆ ಉತ್ತಮ ರೀತಿಯಲ್ಲಿ ಸೌಲಭ್ಯಗಳನ್ನು ನೀಡುತ್ತಿದೆ. ಅದರಲ್ಲೂ ಅಂದಿನ ಯಾವುದೇ ಸೌಲಭ್ಯಗಳಿಲ್ಲದ ದಿನಗಳಲ್ಲಿ ಅಂಚೆಯಣ್ಣ ಮನೆ ಮನೆಗೆ ಪತ್ರ ತಲುಪಿಸುತ್ತಿದ್ದ ಪ್ರಾಮಾಣಿಕ ಸೇವೆ ಮಹತ್ವದ್ದಾಗಿದೆ. ಹೀಗಾಗಿ, ನೂರಾರು ವರ್ಷಗಳು ಕಳೆದರು ಅದರ ಮೇಲಿನ ವಿಶ್ವಾಸ ಕಡಿಮೆಯಾಗಿಲ್ಲ. ಇದೀಗ ಸಾಕಷ್ಟು ಯೋಜನೆಗಳನ್ನು ತಂದಿರುವ ಅಂಚೆ ಇಲಾಖೆಯ ಪ್ರಯೋಜನ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಗದಗ ಅಂಚೆ ವಿಭಾಗದ ಅಂಚೆ ಅಧಿಧೀಕ್ಷಕ ನಿಂಗನಗೌಡ ಭಂಗಿಗೌಡ್ರ ಮಾತನಾಡಿ, ಅಂಚೆ ಇಲಾಖೆ ಸಿಬ್ಬಂದಿ ಪ್ರಾಮಾಣಿಕವಾಗಿ, ಆದರ್ಶಪ್ರಾಯರಾಗಿ, ನಯ-ವಿನಯದಿಂದ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಸೌಲಭ್ಯಗಳಲ್ಲಿ ಪ್ರಸ್ತುತ ದಿನಮಾನಕ್ಕೆ ತಕ್ಕಂತೆ ಬದಲಾವಣೆ ಅವಶ್ಯವಾಗಿದೆ.

ಅಂಚೆ ಕಚೇರಿಗೆ 250 ವರ್ಷಗಳ ಇತಿಹಾಸವಿದೆ. ವಿಶ್ವಾಸಕ್ಕೆ ಯೋಗ್ಯವಾದದ್ದಾಗಿದೆ. ಶಾಲಾ, ಕಾಲೇಜು ಮಕ್ಕಳಿಗೆ ಅಂಚೆ ಕಚೇರಿ ಸೇವೆ ಇಂದು ತುಂಬಾ ಸಹಾಯಕವಾಗಿದೆ. ಇದೀಗ ಠೇವಣಿ, ವಿಮೆ, ಉಳಿತಾಯ ಖಾತೆ ಇತ್ಯಾದಿಗಳ ಸೌಲಭ್ಯವಿದ್ದು, ಫೋನ್‌ ಮೂಲಕ ತಿಳಿಸಿದರೆ ಖಾತೆಯಲ್ಲಿನ ಹಣವನ್ನು ಮನೆಗೆ ತಲುಪಿಸುವ ಯೋಜನೆ ಸಹ ಇದೆ. ಅಂಚೆ ಇಲಾಖೆಯಲ್ಲಿರುವ ಹೊಸ ಹೊಸ ಯೋಜನೆಗಳ ಬಗ್ಗೆ ಜನರು ತಿಳಿದುಕೊಂಡು ಇಲಾಖೆಯೊಂದಿಗೆ ಕೈಜೋಡಿಸಬೇಕೆಂದರು. ತಹಶೀಲ್ದಾರ್‌ ಕೆ.ಆನಂದಶೀಲ್‌ ಮಾತನಾಡಿದರು.

ಸಹಾಯಕ ಅಂಚೆ ಅಧಿಧೀಕ್ಷಕ ಶ್ರೀಕಾಂತ ಜಾಧವ ಪ್ರಾಸ್ತಾವಿಕವಾಗಿ ಮಾತನಾಡಿ, ರಾಷ್ಟ್ರದಲ್ಲಿ ಅಂಚೆ ಇಲಾಖೆ ಈ ಮೊದಲು ಸಂಪರ್ಕ ಸಾಧನೆಗೆ ಮಾತ್ರ ಮೀಸಲಾಗಿತ್ತು. ಇಲಾಖೆ ಇದೀಗ ನೂರಕ್ಕೂ ಹೆಚ್ಚು ಸೇವೆಗಳನ್ನು ಗ್ರಾಹಕರಿಗೆ ಒದಗಿಸುತ್ತಿರುವುದು
ಜಗತ್ತಿನಲ್ಲಿಯೇ ಹೆಮ್ಮೆಯ ವಿಷಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಸಿ.ಜಿ.ಹಿರೇಮಠ, ಬಿ.ಎಸ್‌.ಬಾಳೇಶ್ವರಮಠ, ಶಕುಂತಲಾ ಹೊರಟ್ಟಿ, ಐಪಿಪಿಬಿ ವ್ಯವಸ್ಥಾಪಕ ಪಿ.ಆನಂದಸಾಗರ, ಪಟ್ಟಣದ ಅಂಚೆ ಪಾಲಕ ದೊಡ್ಡಪ್ಪ ಇಟಗಿ, ನಿವೃತ್ತ ಅಂಚೆ ಪಾಲಕ ಬಸವರಾಜ ಬಳ್ಳೊಳ್ಳಿ ಸೇರಿದಂತೆ ಅನೇಕರಿದ್ದರು.

ಇದೇ ಸಂದರ್ಭದಲ್ಲಿ ಅಂಚೆ ಕಚೇರಿ ಸಂಪರ್ಕ ಅಭಿಯಾನದ ಅಂಗವಾಗಿ ಸ್ಥಳೀಯ ಪುರಸಭೆ ಪೌರಕಾರ್ಮಿಕರು ಹಾಗೂ ಅಂಚೆ ಇಲಾಖೆಯಲ್ಲಿ ಉತ್ತಮ ಸಾಧನೆ ಮಾಡಿದ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ದೊಡ್ಡಪ್ಪ ಇಟಗಿ ಸ್ವಾಗತಿಸಿ, ಈಶ್ವರ ಮೆಡ್ಲೆರಿ ನಿರೂಪಿಸಿದರು.

ಟಾಪ್ ನ್ಯೂಸ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.