Cauvery: ಅ.16ರಿಂದ ಅ.31ರ ವರೆಗೆ ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರು ಬಿಡಲು ಆದೇಶ
Team Udayavani, Oct 13, 2023, 11:24 PM IST
ಬೆಂಗಳೂರು: ಕಾವೇರಿ ವಿಚಾರದಲ್ಲಿ ಮತ್ತೆ ಕರ್ನಾಟಕಕ್ಕೆ ಹಿನ್ನಡೆಯಾಗಿದ್ದು, ಅ.16ರಿಂದ ಅ.31ರ ವರೆಗೆ ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನದಿ ನೀರು ನಿರ್ವಹಣ ಪ್ರಾಧಿಕಾರ ಸೂಚನೆ ನೀಡಿದೆ.
ಕಾವೇರಿ ನದಿ ನಿಯಂತ್ರಣ ಸಮಿತಿಯು ಇತ್ತೀಚೆಗಷ್ಟೇ ಸಭೆ ನಡೆಸಿ, ಮತ್ತೆ 3 ಸಾವಿರ ಕ್ಯುಸೆಕ್ ನೀರು ಬಿಡುವಂತೆ ಶಿಫಾರಸು ಮಾಡಿತ್ತು. ಈ ಶಿಫಾರಸನ್ನು ಒಪ್ಪಿಕೊಂಡಿರುವ ಪ್ರಾಧಿಕಾರ, ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ ಸೂಚನೆ ನೀಡಿದೆ. ಸಭೆಗೂ ಮುನ್ನ ಮಾತನಾಡಿದ್ದ ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈ ಮುರುಗನ್, ಪ್ರತಿದಿನ 16 ಸಾವಿರ ಕ್ಯುಸೆಕ್ ನೀರು ಬಿಡಲು ಆಗ್ರಹಿಸುವುದಾಗಿ ಹೇಳಿದ್ದರು. ಆದರೆ ಪ್ರಾಧಿಕಾರ ತಮಿಳುನಾಡು ಮನವಿಗೆ ಸೊಪ್ಪು ಹಾಕಿಲ್ಲ.