Rain ಕರಾವಳಿಯಲ್ಲಿ ಹಿಂಗಾರು ಬಿರುಸು ಸಾಧ್ಯತೆ: ನಿರೀಕ್ಷೆ ಹುಸಿಗೊಳಿಸಿದ ಮುಂಗಾರು


Team Udayavani, Oct 15, 2023, 6:45 AM IST

Rain ಕರಾವಳಿಯಲ್ಲಿ ಹಿಂಗಾರು ಬಿರುಸು ಸಾಧ್ಯತೆ: ನಿರೀಕ್ಷೆ ಹುಸಿಗೊಳಿಸಿದ ಮುಂಗಾರು

ಮಂಗಳೂರು: ಕರಾವಳಿಯಲ್ಲಿ ಈ ಬಾರಿಯ ಮುಂಗಾರು ನಿರೀಕ್ಷೆ ಹುಸಿಗೊಳಿಸಿ ನಿರ್ಗಮಿಸಿದೆ. ಇದೀಗ ಹಿಂಗಾರು ಪ್ರವೇಶ ಪಡೆದುಕೊಳ್ಳುತ್ತಿದ್ದು, ಬಿರುಸಿನ ವಾಡಿಕೆ ಮಳೆ ನಿರೀಕ್ಷಿಸಲಾಗಿದೆ.

ಕರಾವಳಿ ಭಾಗದಲ್ಲಿ ಈ ಬಾರಿ ಮುಂಗಾರು ದುರ್ಬಲಗೊಂಡು ವಾಡಿಕೆಗಿಂತ ಶೇ. 19ರಷ್ಟು ಕಡಿಮೆ ಮಳೆ ಸುರಿದಿತ್ತು. ಇದೀಗ ಹಿಂಗಾರು ಕೆಲವೆಡೆ ಆರಂಭದಲ್ಲಿಯೇ ಬಿರುಸು ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಸಾಮಾನ್ಯವಾಗಿ ಮುಂಗಾರು ಅವಧಿಯಲ್ಲಿ ಕಡಿಮೆ ಪ್ರಮಾಣದಲ್ಲಿ ಮಳೆ ಸುರಿದರೆ, ಹಿಂಗಾರು ವೇಳೆ ವಾಡಿಕೆಯಂತೆ ಅಥವಾ ವಾಡಿಕೆಗಿಂತ ಅಧಿಕ ಮಳೆ ಸುರಿಯುತ್ತದೆ. ಕಳೆದ ಬಾರಿ ಕರಾವಳಿಯಲ್ಲಿ ಮುಂಗಾರು ವಾಡಿಕೆಯ ಮಳೆ ಸುರಿದ ಪರಿಣಾಮ ಹಿಂಗಾರು ವಾಡಿಕೆಗಿಂತ ಶೇ.14ರಷ್ಟು ಕ್ಷೀಣಿಸಿತ್ತು. ಆದರೆ, ಈ ಬಾರಿ ಮಳೆ ಕೊರತೆಯ ಪರಿಣಾಮ ಹಿಂಗಾರು ಅವಧಿಯಲ್ಲಿ ಯಥೇತ್ಛ ಮಳೆ ಸುರಿಯಬಹುದು ಎಂದು ಹವಾಮಾನ ಇಲಾಖೆ ತಜ್ಞರ ಅಭಿಪ್ರಾಯಪಟ್ಟಿದ್ದಾರೆ.

ಸದ್ಯ ಮುಂಗಾರು ಕೊನೆಗೊಂಡು ಹಿಂಗಾರು ಆರಂಭದ ಕಾಲ. ಅಕ್ಟೋಬರ್‌ ಎರಡನೇ ವಾರದಿಂದಲೇ ಈ ಬೆಳವಣಿಗೆ ನಡೆಯುತ್ತದೆ. ಈ ಅವಧಿಯಲ್ಲಿ ಬಂಗಾಲಕೊಲ್ಲಿ ಕಡೆಯಿಂದ ಹಿಂಗಾರು ಮಾರುñ ‌ ಗಳು ಆಗಮಿಸುತ್ತವೆ. ಮುಂಗಾರು ಅವಧಿಯಲ್ಲಿ ಮಳೆ ಸರಾಸರಿ ಗಿಂತ ಕಡಿಮೆ ಬಂದಾಗ ವಾತಾವರಣ ದಲ್ಲಿ, ಭೂಮಿಯಲ್ಲಿ ನೀರಿನ ಅಂಶ ಕಡಿಮೆ ಇರುತ್ತದೆ. ಆಗ ಉಷ್ಣಾಂಶ ತನ್ನಿಂತಾನೇ ಏರಿಕೆಯಾಗುತ್ತದೆ. ಆ ವೇಳೆ ವಾತಾವರಣದಲ್ಲಿ ಒತ್ತಡ ಕಡಿಮೆ ಯಾಗುತ್ತದೆ. ಆಗ ಸುತ್ತಲಿನ ಮೋಡ ಚಲನೆಯಿಂದಾಗಿ ಮಳೆಯಾ ಗುತ್ತದೆ. ಇದೇ ಕಾರಣಕ್ಕೆ ಮುಂಗಾರು ಕಡಿಮೆಯಾದ ವರ್ಷಗಳಲ್ಲಿ ಹಿಂಗಾರು ಜಾಸ್ತಿ ಇರುತ್ತದೆ.

ದ.ಕ.ದಲ್ಲಿ ಮುನ್ನಡೆ, ಉಡುಪಿಯಲ್ಲಿ ಹಿನ್ನಡೆ
ಹಿಂಗಾರು ಆರಂಭದಲ್ಲಿ ತುಸು ಹಿನ್ನಡೆ ಕಂಡರೂ ಸದ್ಯ ಉತ್ತಮ ಮಳೆ ಆರಂಭಗೊಂಡಿದೆ. ಅ.1ರಿಂದ 13ರ ವರೆಗೆ ದ.ಕ. ಜಿಲ್ಲೆಯಲ್ಲಿ ಶೇ.31ರಷ್ಟು ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಉಡುಪಿಯಲ್ಲಿ ಶೇ. 37 ಕಡಿಮೆ ಮಳೆಯಾಗಿದೆ. ಆದರೆ, ಕಳೆದೆರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಬಿರುಸಿನ ಮಳೆ ನಿರೀಕ್ಷೆ ಇದೆ.

ಈ ಬಾರಿ ಚಳಿ ಅವಧಿ ಹೆಚ್ಚಳ
ಕರಾವಳಿ ಭಾಗದಲ್ಲಿ ಸದ್ಯ ಬಿಸಿಲು, ಸೆಕೆ, ಮಳೆ ಇದ್ದು, ಕೆಲವು ಕಡೆ ಬೆಳಗ್ಗಿನ ಜಾವ ತುಸು ಚಳಿಯ ವಾತಾವರಣವೂ ಇದೆ. ಸದ್ಯದ ಮಾಹಿತಿಯ ಪ್ರಕಾರ ನವೆಂಬರ್‌ ಎರಡನೇ ವಾರದಿಂದ ಚಳಿ ಆರಂಭವಾಗಬಹುದು. ಮುಂಗಾರು ಅವಧಿಯಲ್ಲಿ ವಾಡಿಕೆ ಮಳೆ ಬಂದರೆ ಚಳಿ ಅವಧಿ ಮತ್ತು ಪ್ರಮಾಣ ಸಾಮಾನ್ಯವಾಗಿರುತ್ತಿತ್ತು. ಆದರೆ, ಹಿಂಗಾರು ಜಾಸ್ತಿಯಾದರೆ ವಾತಾವರಣದಲ್ಲಿ ನೀರಿನ ಅಂಶ ಹೆಚ್ಚಾಗುತ್ತದೆ. ಕಾರಣ ಚಳಿ ಬೇಗ ಆರಂಭವಾಗಿ, ಚಳಿಯ ಅವಧಿ ಕೂಡ ಜಾಸ್ತಿ ಇರುವ ಸಾಧ್ಯತೆ ಇದೆ ಎನ್ನುತ್ತಾರೆ ಹವಾಮಾನ ಇಲಾಖೆ ಅಧಿಕಾರಿಗಳು.

ಕರಾವಳಿ ಸೇರಿದಂತೆ ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆ ಸುರಿದಿತ್ತು. ಇದೇ ಕಾರಣಕ್ಕೆ ಹಿಂಗಾರು ಅವಧಿಯಲ್ಲಿ ಉತ್ತಮ ಮಳೆ ಸುರಿಯಬಹುದು ಎಂದು ಅಂದಾಜಿಸಲಾಗಿದೆ. ಈ ಹಿಂದೆ ಮುಂಗಾರು ಕಡಿಮೆ ಸುರಿದ ವೇಳೆ ಹಿಂಗಾರು ಯಥೇತ್ಛವಾಗಿತ್ತು. ಹಿಂಗಾರು ಉತ್ತಮವಿದ್ದರೆ ಚಳಿಗಾಲದಲ್ಲಿಯೂ ವ್ಯತ್ಯಾಸವಾಗುವ ಸಾಧ್ಯತೆ ಇದೆ.
– ಡಾ| ರಾಜೇಗೌಡ, ಕೃಷಿ ವಿ.ವಿ. ಬೆಂಗಳೂರು ಹವಾಮಾನ ವಿಜ್ಞಾನಿ

-ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Shimoga; ಕಾಂಗ್ರೆಸ್ ತುಷ್ಟೀಕರಣದಿಂದ ಪೊಲೀಸರ ಮಾನಸಿಕ ಸ್ಥಿತಿ ಹಾಳಾಗಿದೆ: ಆರಗ ಜ್ಞಾನೇಂದ್ರ

Shimoga; ಕಾಂಗ್ರೆಸ್ ತುಷ್ಟೀಕರಣದಿಂದ ಪೊಲೀಸರ ಮಾನಸಿಕ ಸ್ಥಿತಿ ಹಾಳಾಗಿದೆ: ಆರಗ ಜ್ಞಾನೇಂದ್ರ

14-uv-fusion

UV Fusion: ಶಾಂಭವಿಯ ಮಡಿಲಲ್ಲಿ

ಮಹಿಳಾ ಸಿಬ್ಬಂದಿಗೆ ಲೈಂಗಿಕ ದೌರ್ಜನ್ಯದ ಆರೋಪ.. ರಾಜ್ಯಪಾಲರಿಂದ ರಾಜಭವನದ CCTV ದೃಶ್ಯ ಬಹಿರಂಗ

ಲೈಂಗಿಕ ದೌರ್ಜನ್ಯ ಎಸಗಿದ ಆರೋಪ.. ರಾಜ್ಯಪಾಲರಿಂದ ರಾಜಭವನದ CCTV ದೃಶ್ಯ ಬಹಿರಂಗ

Jyothi Rai: ನಟಿ ಜ್ಯೋತಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್; ಮೌನ ಮುರಿದ ನಟಿ

Jyothi Rai: ನಟಿ ಜ್ಯೋತಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್; ಮೌನ ಮುರಿದ ನಟಿ

Two Sandeshkhali women withdraw complaint

Sandeshkhali; ಖಾಲಿ ಪತ್ರಕ್ಕೆ ಸಹಿ ಹಾಕಿಸಿದ್ದರು…: ಅತ್ಯಾಚಾರ ದೂರು ಹಿಂಪಡೆದ 2 ಮಹಿಳೆಯರು

13

UV Fusion: ಅರಿತು ಬಾಳಲು… ಬದುಕು ಬಂಗಾರ…

12-uv-fusion

Water: ನೀರನ್ನು ಮಿತವಾಗಿ ಬಳಸೋಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Prajwal Case; ಬೆಳಗಾವಿಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

Prajwal Case; ಬೆಳಗಾವಿಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

Shimoga; ಕಾಂಗ್ರೆಸ್ ತುಷ್ಟೀಕರಣದಿಂದ ಪೊಲೀಸರ ಮಾನಸಿಕ ಸ್ಥಿತಿ ಹಾಳಾಗಿದೆ: ಆರಗ ಜ್ಞಾನೇಂದ್ರ

Shimoga; ಕಾಂಗ್ರೆಸ್ ತುಷ್ಟೀಕರಣದಿಂದ ಪೊಲೀಸರ ಮಾನಸಿಕ ಸ್ಥಿತಿ ಹಾಳಾಗಿದೆ: ಆರಗ ಜ್ಞಾನೇಂದ್ರ

14-uv-fusion

UV Fusion: ಶಾಂಭವಿಯ ಮಡಿಲಲ್ಲಿ

ಮಹಿಳಾ ಸಿಬ್ಬಂದಿಗೆ ಲೈಂಗಿಕ ದೌರ್ಜನ್ಯದ ಆರೋಪ.. ರಾಜ್ಯಪಾಲರಿಂದ ರಾಜಭವನದ CCTV ದೃಶ್ಯ ಬಹಿರಂಗ

ಲೈಂಗಿಕ ದೌರ್ಜನ್ಯ ಎಸಗಿದ ಆರೋಪ.. ರಾಜ್ಯಪಾಲರಿಂದ ರಾಜಭವನದ CCTV ದೃಶ್ಯ ಬಹಿರಂಗ

Jyothi Rai: ನಟಿ ಜ್ಯೋತಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್; ಮೌನ ಮುರಿದ ನಟಿ

Jyothi Rai: ನಟಿ ಜ್ಯೋತಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್; ಮೌನ ಮುರಿದ ನಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.