Uchila Dasara 2023: ವಿದ್ಯುತ್‌ ದೀಪಾಲಂಕಾರ ವ್ಯವಸ್ಥೆ ಉದ್ಘಾಟನೆ


Team Udayavani, Oct 14, 2023, 11:21 PM IST

Uchila Dasara 2023: ವಿದ್ಯುತ್‌ ದೀಪಾಲಂಕಾರ ವ್ಯವಸ್ಥೆ ಉದ್ಘಾಟನೆ

ಕಾಪು: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅ. 15ರಿಂದ ಅ. 24ರ ವರೆಗೆ ಜರಗುವ ಉಚ್ಚಿಲ ದಸರಾ ಉತ್ಸವ-2023ರ ಪ್ರಯುಕ್ತ ದೇಗುಲದ ಪರಿಸರ ಮತ್ತು ಪಡುಬಿದ್ರಿಯಿಂದ ಕಾಪುವಿನವರೆಗೆ ಅಳವಡಿಸಿರುವ ಭವ್ಯವಾದ ವಿದ್ಯುದ್ದೀ ಪಾಲಂಕಾರವನ್ನು ಎಂಆರ್‌ಜಿ ಗ್ರೂಪ್‌ನ ಆಡಳಿತ ನಿರ್ದೇಶಕ ಪ್ರಕಾಶ್‌ ಶೆಟ್ಟಿ ಬಂಜಾರ ಅವರು ಶನಿವಾರ ಉದ್ಘಾಟಿಸಿದರು.

ಈ ಸಂದರ್ಭ ಅವರು ಮಾತನಾಡಿ, ಡಾ| ಜಿ. ಶಂಕರ್‌ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ದಸರಾದಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ಸಂತಸವಾಗಿದೆ. ಅದ್ದೂರಿಯಾಗಿ, ನಾಡಹಬ್ಬದ ರೀತಿ ಯಲ್ಲಿ ಆಯೋಜನೆಗೊಂಡ ಈ ಉತ್ಸವ ರಾಜ್ಯದ ಜನತೆಯ ಹಬ್ಬವಾಗಲಿ ಎಂದು ಹಾರೈಸಿದರು.

ತಾಯಿ ಮಹಾಲಕ್ಷ್ಮೀಯ ಅನು ಗ್ರಹ, ಭಕ್ತರ ಮತ್ತು ಸಮಾಜ ಬಾಂಧ ವರ ಸಹಕಾರದಿಂದ ಉಚ್ಚಿಲ ದಸರಾ ಆಯೋಜನೆಗೊಳ್ಳುತ್ತಿದೆ ಎಂದು ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ಡಾ| ಜಿ. ಶಂಕರ್‌ ಹೇಳಿದರು.

ಕ್ಷೇತ್ರದ ಪ್ರಧಾನ ಅರ್ಚಕ ವೇ| ಮೂ| ರಾಘವೇಂದ್ರ ಉಪಾಧ್ಯಾಯ ಧಾರ್ಮಿಕ ವಿಧಿ ನೆರವೇರಿಸಿದರು. ಶಾಸಕರಾದ ಗುರ್ಮೆ ಸುರೇಶ್‌ ಶೆಟ್ಟಿ, ಯಶ್‌ಪಾಲ್‌ ಸುವರ್ಣ, ಉದ್ಯಮಿ ಆನಂದ ಸಿ. ಕುಂದರ್‌, ದ.ಕ. ಮೊಗ ವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌ ಬೆಳ್ಳಂ ಪಳ್ಳಿ, ಉಪಾಧ್ಯಕ್ಷ ಸುಭಾಶ್ಚಂದ್ರ ಕಾಂಚನ್‌, ಪ್ರಧಾನ ಕಾರ್ಯದರ್ಶಿ ಸುಧಾಕರ ಎ. ಕುಂದರ್‌, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ವಾಸುದೇವ ಸಾಲ್ಯಾನ್‌, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗುಂಡು ಬಿ.ಅಮೀನ್‌, ಸದಸ್ಯರಾದ ಗಂಗಾಧರ ಸುವರ್ಣ ಎರ್ಮಾಳ್‌, ಶ್ರೀಪತಿ ಭಟ್‌ ಉಚ್ಚಿಲ, ಮೋಹನ್‌ ಬೆಂಗ್ರೆ, ರಾಘವೇಂದ್ರ ಬಳ್ಳಾರಿ, ಮಹಿಳಾ ಸಂಘದ ಅಧ್ಯಕ್ಷೆ ಉಷಾ ರಾಣಿ, ಪ್ರಮುಖರಾದ ಸುಗುಣಾ ಕರ್ಕೇರ, ಮನೋಜ್‌ ಕಾಂಚನ್‌, ಮೋಹನ್‌ ಬೇಂಗ್ರೆ, ಶಂಕರ್‌ ಸಾಲ್ಯಾ ನ್‌, ಶಿವಕುಮಾರ್‌ ಮೆಂಡನ್‌, ಮೋಹನ್‌ ಬೆಂಗ್ರೆ, ಮೋಹನ್‌ ಬಂಗೇರ, ಸರ್ವೋತ್ತಮ ಕುಂದರ್‌, ದಿನೇಶ್‌ ಮೂಳೂರು, ರಾಜೇಂದ್ರ ಹಿರಿಯಡ್ಕ, ರವೀಂದ್ರ ಶ್ರೀಯಾನ್‌, ಗೌತಮ್‌ ಕೋಡಿಕಲ್‌, ಶಿವರಾಮ್‌ ಕೆ.ಎಂ., ಸತೀಶ್‌ ಅಮೀನ್‌ ಬಾಕೂì ರು, ಸತೀಶ್‌ ಅಮೀನ್‌ ಪಡುಕೆರೆ ಉಪಸ್ಥಿತರಿದ್ದರು.

ಇಂದು ಚಾಲನೆ
ಅ. 15 ರ ಬೆಳಗ್ಗೆ 9.30ಕ್ಕೆ ಶಾಲಿನಿ ಜಿ. ಶಂಕರ್‌ ತೆರೆದ ಸಭಾಂ ಗಣದಲ್ಲಿ ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹ ಪ್ರತಿಷ್ಠಾಪನೆ ಗೊಳ್ಳಲಿದೆ. ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಉಚ್ಚಿಲ ದಸರಾ ಮತ್ತು ಯುವ ದಸರಾಕ್ಕೆ ಚಾಲನೆ ನೀಡುವರು. ಬಳಿಕ ಮಹಾಲಕ್ಷ್ಮೀ ಅನ್ನಛತ್ರ ಮತ್ತು ಅತಿಥಿಗೃಹ ಲೋಕಾರ್ಪಣೆಗೊಳ್ಳಲಿದೆ.

ಬೂತಾಯಿ ಸರ; ಬೆಳ್ಳಿ ವೀಣೆ, ಕಿರೀಟ ಸಮರ್ಪಣೆ
ಮಲ್ಪೆ ಬೇಸಗೆ ನಾಡದೋಣಿ ಮೀನುಗಾರರ ಸಂಘದ ವತಿಯಿಂದ ಮಹಾಲಕ್ಷ್ಮೀ ದೇವಿಗೆ ಚಿನ್ನದ ಬೂತಾಯಿ ಮೀನಿನ ಹಾರ ಮತ್ತು ಶಾರದಾ ಮಾತೆಗೆ ದ.ಕ. ಮೊಗವೀರ ಮಹಾಜನ ಸಂಘ, ಕ್ಷೇತ್ರಾಡಳಿತ ಮಂಡಳಿ ಸಹಕಾರದೊಂದಿಗೆ ಬೆಳ್ಳಿಯ ವೀಣೆ, ಕಿರೀಟ, ಪುಸ್ತಕ, ಪೆನ್ನು ಸಮರ್ಪಣೆಗೊಳ್ಳಲಿದೆ.

ಟಾಪ್ ನ್ಯೂಸ್

women trafficking

Honnali; ಕೆಲಸಕ್ಕೆಂದು ಕರೆದುಕೊಂಡು ಒಂದು ಲಕ್ಷ ರೂ ಗೆ ಮಹಿಳೆಯ ಮಾರಾಟ!

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಎನ್‌ಇಪಿ ರದ್ದು, ರಾಜಕೀಯ ಪ್ರೇರಿತ: ಬೊಮ್ಮಾಯಿ

Bidar; ಎನ್‌ಇಪಿ ರದ್ದು ರಾಜಕೀಯ ಪ್ರೇರಿತ: ಬೊಮ್ಮಾಯಿ

women trafficking

Honnali; ಕೆಲಸಕ್ಕೆಂದು ಕರೆದುಕೊಂಡು ಒಂದು ಲಕ್ಷ ರೂ ಗೆ ಮಹಿಳೆಯ ಮಾರಾಟ!

Bangla MP who came to Kolkata goes missing

ಕೋಲ್ಕತಾಗೆ ಬಂದ ಬಾಂಗ್ಲಾ ಸಂಸದ ನಾಪತ್ತೆ

Swati Maliwal case: Data destruction on Bibhav’s phone

Swati Maliwal case: ಬಿಭವ್‌ ಫೋನ್‌ನಲ್ಲಿ ದತ್ತಾಂಶ ನಾಶ

Former AAP leader Jagbir Singh joins BJP

New Delhi; ಆಪ್‌ ಮಾಜಿ ನಾಯಕ ಜಗ್ಬೀರ್‌ ಸಿಂಗ್‌ ಬಿಜೆಪಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.