Elections: ಮಧ್ಯಪ್ರದೇಶ,ತೆಲಂಗಾಣ, ಛತ್ತೀಸ್‌ಗಢ ಚುನಾವಣೆ: ʼಕೈʼ ಮೊದಲ ಪಟ್ಟಿ ಬಿಡುಗಡೆ


Team Udayavani, Oct 15, 2023, 10:01 AM IST

Elections: ಮಧ್ಯಪ್ರದೇಶ,ತೆಲಂಗಾಣ, ಛತ್ತೀಸ್‌ಗಢ ಚುನಾವಣೆ: ʼಕೈʼ ಮೊದಲ ಪಟ್ಟಿ ಬಿಡುಗಡೆ

ನವದೆಹಲಿ: ಇದೇ ವರ್ಷದಲ್ಲಿ ನಡೆಯಲಿರುವ  ಮಧ್ಯಪ್ರದೇಶ, ತೆಲಂಗಾಣ ಮತ್ತು ಛತ್ತೀಸ್‌ಗಢ ವಿಧಾನಸಭಾ ಚುನಾವಣೆಗಳಿಗೆ ಕಾಂಗ್ರೆಸ್‌ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ(ಅ.15 ರಂದು) ಬಿಡುಗಡೆ ಮಾಡಿದೆ.

ಮಧ್ಯಪ್ರದೇಶದ 144 ವಿಧಾನಸಭಾ ಕ್ಷೇತ್ರ, ಛತ್ತೀಸ್‌ಗಢದ 30 ಮತ್ತು ತೆಲಂಗಾಣದಲ್ಲಿ 55 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್‌ ಘೋಷಿಸಿದೆ.

ಕ್ಷೇತ್ರ ಮತ್ತು ಪ್ರಮುಖರ ಹೆಸರು..

ಮಧ್ಯ ಪ್ರದೇಶ: ಮಧ್ಯ ಪ್ರದೇಶದ 230 ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ ಮೊದಲ ಪಟ್ಟಿಯಲ್ಲಿ 144 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ರಿವೀಲ್‌ ಮಾಡಿದೆ. ಮುಖ್ಯವಾಗಿ ಮಧ್ಯಪ್ರದೇಶದಲ್ಲಿ ಛಿಂದ್ವಾರಾ ಕ್ಷೇತ್ರದಿಂದ ಮಾಜಿ ಸಿಎಂ ಕಮಲ್ ನಾಥ್ ಅವರಿಗೆ ಟಿಕೆಟ್‌ ನೀಡಲಾಗಿದೆ. ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಅವರ ಸಹೋದರ ಲಕ್ಷ್ಮಣ್ ಸಿಂಗ್ ಅವರನ್ನು ಚಚೌರಾದಿಂದ ಕಣಕ್ಕಿಳಿಸಲಾಗಿದೆ.  ಮಾಜಿ ಸಿಎಂ ಪುತ್ರ ಜೈವರ್ಧನ್ ಸಿಂಗ್ ರಾಘೋಘರ್ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬಿಜೆಪಿ ಕಣಕ್ಕಿಳಿಸಿರುವ ಬುಧ್ನಿ ಕ್ಷೇತ್ರದಿಂದ ಕಾಂಗ್ರೆಸ್ ವಿಕ್ರಮ್ ಮಸ್ತಲ್ ಅವರನ್ನು ಕಣಕ್ಕಿಳಿಸಿದೆ. ಚುರ್ಹಾತ್ ನಿಂದ ಅಜಯ್ ಸಿಂಗ್ ರಾಹುಲ್, ರೌ ಕ್ಷೇತ್ರದಿಂದ ದಿಂದ ಜಿತು ಪಟ್ವಾರಿ, ಅತೆರ್ ನಿಂದ ಹೇಮಂತ್ ಕಟಾರೆ, ಝಬುವಾ ಕ್ಷೇತ್ರದಿಂದ ವಿಕ್ರಾಂತ್ ಭುರಿಯಾ ಅವರಿಗೆ ಟಿಕೆಟ್‌ ನೀಡಲಾಗಿದೆ.

ಚುನಾವಣೆ ಯಾವಾಗ?:  ನವೆಂಬರ್ 17 ರಂದು ವಿಧಾನಸಭಾ ಚುನಾವಣೆ ಒಂದೇ ಹಂತದಲ್ಲಿ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ.

ಛತ್ತೀಸ್‌ಗಢ: 90 ವಿಧಾನ ಸಭೆ ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ 30 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಛತ್ತೀಸ್‌ಗಢದ ಉಪಮುಖ್ಯಮಂತ್ರಿ ಟಿಎಸ್ ಸಿಂಗ್ ದೇವ್ ಅವರು ತನ್ನ ಬಲಿಷ್ಠ ಕ್ಷೇತ್ರವಾದ ಅಂಬಿಕಾಪುರದಿಂದಲೇ ಈ ಬಾರಿಯೂ ಸ್ಪರ್ಧಿಸಲಿದ್ದಾರೆ. ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಪಟಾನ್‌ನಿಂದ ಸ್ಪರ್ಧಿಸಲಿದ್ದಾರೆ. ವಿಶೇಷವೆಂದರೆ 30 ಅಭ್ಯರ್ಥಿಗಳ ಪೈಕಿ 14 ಮಂದಿ ಎಸ್‌ಟಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ.ಇದಲ್ಲದೆ ಮೊದಲ ಪಟ್ಟಿಯಲ್ಲಿ ಮೂವರು ಮಹಿಳೆಯರಿಗೆ ಟಿಕೆಟ್ ನೀಡಲಾಗಿದೆ.

ಚುನಾವಣೆ ಯಾವಾಗ?:  ಛತ್ತೀಸ್‌ಗಢದಲ್ಲಿ ನವೆಂಬರ್ 7 ಮತ್ತು ನವೆಂಬರ್ 17 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ.

ತೆಲಂಗಾಣ: 119 ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ ಮೊದಲ 55 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಮುಖ್ಯವಾಗಿ ಕೊಡಂಗಲ್‌ ಕ್ಷೇತ್ರದಿಂದ ಅನುಮುಲಾ ರೇವಂತ್‌ ರೆಡ್ಡಿ, ಹುಜೂರ್‌ನಗರದಿಂದ ಉತ್ತಮ್‌ಕುಮಾರ್‌ ರೆಡ್ಡಿ ಅವರಿಗೆ ʼಕೈʼ ಟಿಕೆಟ್‌ ನೀಡಿದೆ. ಇತರೆ ಪ್ರಮುಖ ಹೆಸರುಗಳೆಂದರೆ, ಮುಳುಗು ಕ್ಷೇತ್ರದಿಂದ ದಾಸರಿ ದಾಸರಿ ಸೀತಕ್ಕ ಅವರಿಗೆ ಟಿಕೆಟ್‌ ನೀಡಿದ್ದು, ಮೇದಕ್‌ನಿಂದ ಮೈನಂಪಳ್ಳಿ ರೋಹಿತ್‌ ರಾವ್‌ ಮತ್ತು ಮಲ್ಕಾಜ್‌ಗಿರಿಯಿಂದ ಮೈನಂಪಳ್ಳಿ ಹನುಮಂತರಾವ್‌ ಸ್ಪರ್ಧಿಸಲಿದ್ದಾರೆ.

ಚುನಾವಣೆ ಯಾವಾಗ?:  ತೆಲಂಗಾಣದಲ್ಲಿ ನವೆಂಬರ್ 30 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ.

 

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.