Dumping yard issue;ಕುಮಾರಸ್ವಾಮಿ ಬೆಂಗಳೂರು ಬಿಟ್ಟು ಬಿಡದಿಯಲ್ಲಿರಲಿ: ಬಾಲಕೃಷ್ಣ ತಿರುಗೇಟು
Team Udayavani, Oct 17, 2023, 12:20 PM IST
ರಾಮನಗರ: ಬಿಬಿಎಂಪಿ ಕಸ ವಿಲೇವಾರಿ ವಿಚಾರ ಇದೀಗ ರಾಜಕೀಯ ತಿರುವು ಪಡೆಯುತ್ತಿದೆ. ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಮಾಗಡಿಯಲ್ಲಿ ಶಾಸಕ ಹೆಚ್.ಸಿ.ಬಾಲಕೃಷ್ಣ ತಿರುಗೇಟು ನೀಡಿದ್ದು, ಕುಮಾರಸ್ವಾಮಿ ಸಿಎಂ ಆಗಿದ್ದ ವೇಳೆ ಬಿಬಿಎಂಪಿ ಕಸ ವಿಲೇವಾರಿಗೆ ಪರಿಹಾರ ಹುಡುಕಬಹುದಿತ್ತು. ಈಗ ಬೆಂಕಿ ಹಚ್ಚುತ್ತೇನೆಂದರೆ ಹೇಗೆ ಎಂದು ಪ್ರಶ್ನಿಸಿದ್ದರು.
ಎಚ್.ಡಿ ಕುಮಾರಸ್ವಾಮಿ 20 ತಿಂಗಳು ಮುಖ್ಯಮಂತ್ರಿಯಾಗಿದ್ದರು. ಆಗ ಬಿಬಿಎಂಪಿ ಕಸ ವಿಲೇವಾರಿಗೆ ಏನು ಕ್ರಮ ಕೈಗೊಳ್ಳಲಿಲ್ಲ. ಈಗ ನಮ್ಮ ಸರಕಾರ ಬಿಬಿಎಂಪಿ ಕಸವನ್ನು ಬೆಂಗಳೂರು ಸಮೀಪದ ನಾಲ್ಕು ಕಡೆ ವಿಲೆವಾರಿ ಮಾಡಲು ಕ್ರಮ ಕೈಗೊಂಡಿದೆ. ಕಸವನ್ನು ಬಿಡದಿ ಸಮೀಪ ಹಾಕಬಾರದು ಎನ್ನುವುದಾದರೆ ಎಚ್ಡಿಕೆ ಕುಟುಂಬ ಬೆಂಗಳೂರು ಬಿಟ್ಟು ಗ್ರಾಮೀಣ ಪ್ರದೇಶಕ್ಕೆ ಬರಲಿ ಎಂದರು.
ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದವರು. ಅವರಿಗೆ ಕನಿಷ್ಠ ಜ್ಞಾನ ಇದ್ದರೆ ಕಸ ವಿಲೇವಾರಿ ಬಗ್ಗೆ ಸರಕಾರದ ವಿರುದ್ದ ಮಾತನಾಡುತ್ತಿರಲಿಲ್ಲ. ಕಾಂಗ್ರೆಸ್ ಸರ್ಕಾರ ಬಿಬಿಎಂಪಿ ಕಸವನ್ನು ಹೊರಗಡೆ ಸಂಗ್ರಹಿಸಿ ಅದನ್ನು ಸಗ್ರಿಗೇಷನ್ ಮಾಡಿ ಗೊಬ್ಬರವನ್ನಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳಲಿದೆ. ಇದಕ್ಕೆ ಪಕ್ಷಾತೀತವಾಗಿ ಎಚ್.ಡಿ.ಕುಮಾರಸ್ವಾಮಿ ಕೈ ಜೋಡಿಸಲಿ. ಇಲ್ಲದಿದ್ದರೆ ಬೆಂಗಳೂರು ಬಿಟ್ಟು ಬಿಡದಿಯಲ್ಲಿ ವಾಸಮಾಡಲಿ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ತಿರುಗೇಟು ನೀಡಿದರು.
ಗುತ್ತಿಗೆದಾರರ ಮನೆಯಲ್ಲಿ 42 ಕೋಟಿ ಸಿಕ್ಕಿರುವ ವಿಚಾರಕ್ಕೆ ತಿರುಗೇಟು ನೀಡಿರುವ ಅವರು, ನಮ್ಮ ಸರಕಾರದ ವಿರುದ್ಧ ಆರೋಪ ಮಾಡಿರುವುದು ದಾಖಲೆ ಸಮೇತ ಸಾಬೀತುಪಡಿಸಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ
Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು