Haveri; ಸರ್ಕಾರಿ ಉದ್ಯೋಗ ತಂತಿ ಮೇಲಿನ ನಡಿಗೆ – ಎಂ.ಕೆ.ಮರಿಗೌಡರ


Team Udayavani, Oct 17, 2023, 6:20 PM IST

Haveri; ಸರ್ಕಾರಿ ಉದ್ಯೋಗ ತಂತಿ ಮೇಲಿನ ನಡಿಗೆ – ಎಂ.ಕೆ.ಮರಿಗೌಡರ

ಹಾನಗಲ್ಲ: ಸರಕಾರಿ ಉದ್ಯೋಗಗಳು ಹೆಚ್ಚು ಒತ್ತಡದ ಹಾಗೂ ಬಹಳಷ್ಟು ಜವಾಬ್ದಾರಿಯಲ್ಲಿ ಕಾರ್ಯ ನಿರ್ವಹಿಸುವ ಹಂತದಲ್ಲಿದ್ದು ತಂತಿಯ ಮೇಲಿನ ನಡಿಗೆಯಂತಾಗಿವೆ ಎಂದು ಕಲಘಟಗಿಯ ನಿವೃತ್ತ ಕ್ಷೇತ್ರ ಶಿಕ್ಷಣಾ ಧಿಕಾರಿ ಎಂ.ಕೆ.ಮರಿಗೌಡರ ಅಭಿಪ್ರಾಯಿಸಿದರು.

ಹಾನಗಲ್ಲಿನಲ್ಲಿ ಶ್ರೀ ಕುಮಾರೇಶ್ವರ ಶಿಕ್ಷಣ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಸಂಘ ಆಯೋಜಿಸಿದ ಗುರುವಂದನಾ
ಸಮಾರಂಭದಲ್ಲಿ ವಿದ್ಯಾರ್ಥಿಗಳಿಂದ ಗುರು ವಂದನೆ ಸ್ವೀಕರಿಸಿ ಮಾತನಾಡಿದ ಅವರು, ವೃತ್ತಿ ಪ್ರವೃತ್ತಿಗಳಲ್ಲಿ ಸಾಮರಸ್ಯ ಉಳಿಸಿಕೊಳ್ಳುವುದೇ ಕಷ್ಟದ ಕೆಲಸವಾಗಿದೆ.

ಅಧಿಕಾರಿಯಾಗಿ ಕೆಲಸ ಮಾಡುವವರಿಗೆ ಅದರ ಆಚೆ ನಿಂತು ನೋಡುವ ಸಮಯಾವಕಾಶವೇ ಇಲ್ಲ. ಇಂಥ ಸಂದಿಗ್ಧ ಸ್ಥಿತಿಯಲ್ಲಿಯೂ ಕೂಡ ವೃತ್ತಿಯನ್ನು ಪ್ರಾಮಾಣಿಕತೆಯಿಂದ ಪೂರ್ಣಗೊಳಿಸುವುದೇ ಹರ ಸಾಹಸದಂತಿದೆ. ಸರಕಾರಿ ಉದ್ಯೋಗಗಳು ಆರ್ಥಿಕ ಭದ್ರತೆ ಒದಗಿಸುತ್ತವೆ. ಅದರೊಂದಿಗೆ ಖಾಸಗಿಯಾಗಿ ಹತ್ತು ಹಲವು ಉದ್ಯಮಗಳಲ್ಲಿ ಸೇವೆ ಸಲ್ಲಿಸಿ ಯಶಸ್ವಿಯಾದ ಸಂದರ್ಭಗಳಿಗೇನೂ ಕಡಿಮೆ ಇಲ್ಲ. ಯಾವ ಉದ್ಯೋಗವೇ ಆಗಿರಲಿ ಅದು ನಿಷ್ಠೆಯಿಂದಿರಲಿ. ಪಾಲಿಗೆ ಬಂದದ್ದನ್ನು ಪ್ರಾಮಾಣಿಕವಾಗಿ ಸ್ವೀಕರಿಸುವ ಮನಸ್ಸು ಬೇಕು ಎಂದರು.

ಸೊರಬದ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಂ. ಸತ್ಯನಾರಾಯಣ ಗುರುವಂದನೆ ಸ್ವೀಕರಿಸಿ ಮಾತನಾಡಿ, ಗುರುಗಳನ್ನು ಗೌರವಿಸುವ ಮನಸ್ಸಿನ ಹಿಂದೆ ಇರುವ ಶ್ರದ್ಧೆ, ಪ್ರೀತಿಗಳಿಗೆ ದೊಡ್ಡ ಶಕ್ತಿ ಇದೆ. ಭಾರತೀಯ ಸಂಸ್ಕೃತಿಯಲ್ಲಿ ಇದಕ್ಕೆ ದೊಡ್ಡ ಮೌಲ್ಯವಿದೆ. ಗುರು ಶಿಷ್ಯರ ಸಂಬಂಧಗಳೇ ಹಳಸುತ್ತಿರುವ ಕಾಲದಲ್ಲಿ ಗುರುವನ್ನು ಗೌರವಿಸುತ್ತಿರುವ ಈ ಕಾರ್ಯಕ್ರಮಕ್ಕೆ ಹೆಚ್ಚು ಮೌಲ್ಯ ಬಂದಿದೆ. ತಿಂಗಳಿಗೆ ಸಾವಿರದೊಳಗಿನ ಗೌರವ ಧನ ಪಡೆದು ಈ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೇವೆ ಸಲ್ಲಿಸಿದಾಗಲೂ ನಮಗೆ ಸಂತೃಪ್ತಿ ಇತ್ತು. ಅದಕ್ಕೆ ಕಾರಣ ಈ ಕ್ಷೇತ್ರದ ಮಹಿಮೆ. ನಮ್ಮೊಳಗೆ ಆಧ್ಯಾತ್ಮಿಕ ಶೈಕ್ಷಣಿಕ ಚಿಂತನೆಗೆ ಲಿಂ.ಹಾನಗಲ್ಲ ಕುಮಾರಶಿವಯೋಗಿಗಳವರ ಆದರ್ಶಗಳು ಪ್ರೇರಣೆಯಾಗಿದ್ದವು ಎಂದರು.

ಗದಗಿನ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ ನಿರ್ದೇಶಕಿ ಮಂಗಳಾ ತಾಪಸ್ಕರ ಗೌರವ ಸಮ್ಮಾನ ಸ್ವೀಕರಿಸಿ ಮಾತನಾಡಿ, ಶಿಷ್ಯರು ನೀಡುವ ಗೌರವದ ಮುಂದೆ ಬೇರಾವ ಗೌರವವೂ ಸಾಟಿ ಅಲ್ಲ. ಪ್ರಶಸ್ತಿಗಳು ನಮ್ಮ ಕೆಲಸಕ್ಕೆ ಸಿಗುವ ಸಮ್ಮಾನಗಳು. ಆದರೆ ಶಿಷ್ಯರು ನೀಡುವ ಗೌರವ ವಿದ್ಯಾರ್ಥಿ ಶಿಷ್ಯರ ನಡುವಿನ ದೀರ್ಘ‌ ಸಂತೃಪ್ತಿಯ ಸಂದೇಶಗಳಾಗಿವೆ.

ವೃತ್ತಿಯಲ್ಲಿನ ಏರುಪೇರುಗಳು ಹಲವು ಬಾರಿ ಒತ್ತಡಕ್ಕೆ ಕಾರಣವಾಗುತ್ತವೆ. ಆದರೆ ಇಂಥ ಸೌಹಾರ್ದ ಪ್ರೀತಿಯ ಸಮಾರಂಭಗಳು ಎಲ್ಲ ಒತ್ತಡಗಳನ್ನು ಕಳೆದು ಹೊಸ ಚೈತನ್ಯ ನೀಡುತ್ತವೆ. ಅಲ್ಲದೇ ಧನ್ಯತಾ ಭಾವ ಜಾಗೃತಗೊಳಿಸುತ್ತವೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ವೈ. ಹೂಗಾರ, ಉಪನ್ಯಾಸಕಿ ತನುಜಾ ನಾಯಕ, ಎಸ್‌.ವೈ. ಬಗಲಿ, ಎಸ್‌.ಎಫ್‌. ಬಂಡಿ, ರವಿರಾಜ ಕೋಪರ್ಡೆ, ಸುರೇಶ ಅರಗಂಜಿ ಗೌರವ ಸ್ವೀಕರಿಸಿ ಮಾತನಾಡಿದರು.

ಸಂಘಟಕರಾದ ಸಿದ್ದಲಿಂಗೇಶ ಒಳಸಂಗದ ಡಾ| ಬಿ.ಎಸ್‌. ರುದ್ರೇಶ, ಆರ್‌.ಎನ್‌.ಪಾಟೀಲ, ಸುನಿತಾ ಉಪ್ಪಿನ ಇದ್ದರು. ಹುಬ್ಬಳ್ಳಿ ಮೂರುಸಾವಿರಮಠದ ಜಗದ್ಗುರು ಗುರುಸಿದ್ಧರಾಜಯೋಗೀಂದ್ರ ಶ್ರೀಗಳು, ಗಣ್ಯರಾದ ಗುರುಸಿದ್ದಪ್ಪ ಕೊಂಡೋಜಿ, ಸಾಹಿತಿ ಪ್ರೊ| ಮಾರುತಿ ಶಿಡ್ಲಾಪೂರ, ಎಸ್‌.ಸಿ.ವಿರಕ್ತಮಠ ಇದ್ದರು.

ಟಾಪ್ ನ್ಯೂಸ್

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Anjali Ambigera case: ABVP protest in Hubli

Anjali Ambigera case: ಹುಬ್ಬಳ್ಳಿಯಲ್ಲಿ ಎಬಿವಿಪಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ: ಚಕ್ರವರ್ತಿ ಸ್ವಾಮೀಜಿ

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ: ಚಕ್ರವರ್ತಿ ಸ್ವಾಮೀಜಿ

ಅಬ್ಬಾ…ತರಕಾರಿ ಬಲು ದುಬಾರಿ..! ಗ್ರಾಹಕರ ಜೇಬಿಗೆ ಕತ್ತರಿ

ಅಬ್ಬಾ…ತರಕಾರಿ ಬಲು ದುಬಾರಿ..! ಗ್ರಾಹಕರ ಜೇಬಿಗೆ ಕತ್ತರಿ

ಬ್ಯಾಡಗಿ- ಮದುವೆ ಮೂಲ ಅರ್ಥ ಕಳೆದುಕೊಳ್ತಿದೆ: ಸ್ವಾಮೀಜಿ

ಬ್ಯಾಡಗಿ- ಮದುವೆ ಮೂಲ ಅರ್ಥ ಕಳೆದುಕೊಳ್ತಿದೆ: ಸ್ವಾಮೀಜಿ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Anjali Ambigera Case; Protest by BJP workers in Hubli

Anjali Ambigera Case; ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

6-bng-crime

Drugs ಮಾರಾಟ: ಮೂವರು ವಿದೇಶಿ ಪ್ರಜೆಗಳು ಸೇರಿ 8 ಮಂದಿ ಬಂಧನ ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.