Karnataka Politics: ಕಾಂಗ್ರೆಸ್ಗೆ ಆಪರೇಷನ್ ಹಸ್ತದ ಅವಶ್ಯಕತೆ ಇಲ್ಲ: ದಿನೇಶ್ ಗುಂಡೂರಾವ್
Team Udayavani, Oct 18, 2023, 2:44 PM IST
ಮಂಗಳೂರು: ಕಾಂಗ್ರೆಸ್ಗೆ ಆಪರೇಷನ್ ಹಸ್ತ ಮಾಡುವ ಅವಶ್ಯಕತೆ ಇಲ್ಲ. ಬಿಜೆಪಿ ಅಪರೇಷನ್ ಕಮಲದ ಮೂಲಕವೇ ರಾಜಕೀಯ ವ್ಯವಸ್ಥೆಯನ್ನು ಎಷ್ಟು ಹಾಳು ಮಾಡಿದೆ ಎಂಬುದನ್ನು ದೇಶ ನೋಡಿದೆ. ಹಣ ಕೊಟ್ಟು ಬೆದರಿಸಿ ಅಪರೇಷನ್ ಮಾಡುವುದರಲ್ಲಿ ಬಿಜೆಪಿಯವರು ನಿಸ್ಸೀಮರು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಮಂಗಳೂರಿನಲ್ಲಿ ಬುಧವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು ಕಾಂಗ್ರೆಸ್ಗೆ ಸ್ವಯಂ ಪ್ರೇರಣೆಯಿಂದ ಬರುವವರ ಜತೆ ಮಾತನಾಡಬಹುದು. ಆದರೆ, ಯಾವುದೇ ಪಕ್ಷವನ್ನು ಒಡೆಯುವ ಅಥವ ಸೆಳೆಯುವ ಅಗತ್ಯ ನಮಗಿಲ್ಲ ಎಂದರು.
ಜೆಡಿಎಸ್ನಿಂದ ಎಷ್ಟು ಜನ ಬರಲಿದ್ದಾರೆ ಎಂಬುದು ಗೊತ್ತಿಲ್ಲ. ಆ ಪಕ್ಷದಲ್ಲಿ ಆಗುತ್ತಿರುವ ಬೆಳವಣಿಗೆ ಬಗ್ಗೆ ಸಮಾಧಾನ ಇಲ್ಲದಿರಬಹುದು. ರಾಜಕೀಯದಲ್ಲಿ ಈ ರೀತಿಯ ಬೆಳವಣಿಗೆ ಇದ್ದೇ ಇರುತ್ತದೆ. ಅಪರೇಷನ್ ಹಸ್ತ ಮಾಡುವ ಅಗತ್ಯ ನಮಗಿಲ್ಲ ಎಂದವರು ಹೇಳಿದರು.
ಪಂಚ ರಾಜ್ಯಗಳಲ್ಲಿ ಬಿಜೆಪಿಗೆ ಸೋಲಿನ ಭೀತಿ ಕಾಡತೊಡಗಿದೆ. ಆಧಾರ ರಹಿತ ಆರೋಪ ಮಾಡುವುದು ಬಿಜೆಪಿಗೆ ಚಾಳಿಯಾಗಿದೆ ಎಂದವರು ದೂರಿದರು.
ಇದನ್ನೂ ಓದಿ: Siddaramaiah: ಕ್ರೀಡಾಪಟುಗಳಿಗೆ ಎಲ್ಲಾ ಇಲಾಖೆಗಳ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ; ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ
Sandalwood: ದರ್ಶನ್ ʼಡೆವಿಲ್ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್ ಪೋಸ್ಟರ್ ಔಟ್
Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ