Gaza: ಗಾಜಾ ಪಟ್ಟಿಯಲ್ಲಿನ ಆಸ್ಪತ್ರೆ ಮೇಲಿನ ದಾಳಿ ಖಂಡನೀಯ


Team Udayavani, Oct 18, 2023, 11:31 PM IST

GAZA HOSPITAL

ಇಸ್ರೇಲ್‌ ಮತ್ತು ಹಮಾಸ್‌ ಉಗ್ರರ ನಡುವೆ ನಡೆಯುತ್ತಿರುವ ಯುದ್ಧ, ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮಂಗಳವಾರ ರಾತ್ರಿ ಗಾಜಾಪಟ್ಟಿಯಲ್ಲಿನ ಅಲ್‌ ಅಹ್ಲಿ ಬ್ಯಾಪ್ಟಿಸ್ಟ್‌ ಆಸ್ಪತ್ರೆ ಮೇಲೆ ನಡೆದ ದಾಳಿಯಲ್ಲಿ 500 ಪ್ಯಾಲೆಸ್ತೀನಿಯರು ಸಾವಿಗೀಡಾಗಿದ್ದು. ಇಡೀ ಜಗತ್ತೇ ಮರುಕ ವ್ಯಕ್ತಪಡಿಸಿದೆ. ಆರಂಭದಲ್ಲಿ ಇಸ್ರೇಲ್‌ ನೆಲದಲ್ಲಿ ಹಮಾಸ್‌ ಉಗ್ರರು ನಡೆಸಿದ ನರಮೇಧ, ಅನಂತರದಲ್ಲಿ ಇಸ್ರೇಲ್‌ ನಡೆಸುತ್ತಿರುವ ದಾಳಿಯಿಂದಾಗಿ ಪ್ಯಾಲೆಸ್ತೀನ್‌ನ ಮುಗ್ಧ ಜೀವಗಳು ಬಲಿಯಾಗುತ್ತಲೇ ಇವೆ. ಹಮಾಸ್‌ ಉಗ್ರರು ಮತ್ತು ಇಸ್ರೇಲ್‌ ಸೇನೆಯ ದಾಳಿ-ಪ್ರತಿದಾಳಿಯಿಂದಾಗಿ ಯಾವುದೇ ತಪ್ಪಿರದ ಜೀವಗಳು ಹತ್ಯೆಗೀಡಾಗುತ್ತಿರುವುದು ಮಾತ್ರ ಯುದ್ಧದ ಭೀಕರತೆಯನ್ನು ತೋರಿಸುತ್ತಿದೆ.

ಅ.7ರಂದು ಆರಂಭವಾಗಿರುವ ಈ ಯುದ್ಧ, ಈಗ ಇನ್ನೊಂದು ಮಜಲಿಗೆ ತಲುಪಿದೆ. ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಬೇರೆ ಬೇರೆ ದೇಶಗಳು ಈ ಯುದ್ಧದಲ್ಲಿ ಭಾಗಿಯಾಗುವ ಲಕ್ಷಣಗಳೂ ಗೋಚರಿಸುತ್ತಿವೆ. ಮಂಗಳವಾರವಷ್ಟೇ ಇಸ್ರೇಲ್‌ಗೆ ಭೇಟಿ ನೀಡಿದ್ದ ಜರ್ಮನಿಯ ಛಾನ್ಸರ್‌, ಬೆಂಜಮಿನ್‌ ನೆತನ್ಯಾಹು ಅವರೊಂದಿಗೆ ಮಾತುಕತೆ ನಡೆಸಿ, ನಿಮ್ಮ ಜತೆ ನಾವಿದ್ದೇವೆ ಎಂಬ ಅಭಯ ನೀಡಿ ಬಂದಿದ್ದರು. ಬುಧವಾರ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಅವರು ಇಸ್ರೇಲ್‌ಗೆ ಭೇಟಿ ನೀಡಿದ್ದು, ಇಸ್ರೇಲ್‌ಗೆ ಪೂರ್ಣ ಬೆಂಬಲ ನೀಡುವ ನಿಟ್ಟಿನಲ್ಲಿ ಮಾತನಾಡಿದ್ದಾರೆ.

ಯುದ್ಧದ ಕತೆ ಒಂದು ಕಡೆಯಾದರೆ, ಮತ್ತೂಂದು ಕಡೆ ಗಾಯಾಳುಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರೇ ಬಾಂಬ್‌ ದಾಳಿಗೆ ಸಾವನ್ನಪ್ಪುತ್ತಿರುವುದು ದುರಂತ ಕಥೆಯಾಗಿದೆ. ಮಂಗಳವಾರ ರಾತ್ರಿ ಬ್ಯಾಪ್ಟಿಸ್ಟ್‌ ಆಸ್ಪತ್ರೆ ಮೇಲೆ ದಾಳಿಯಾಗಿದ್ದು, ಈ ಸಂದರ್ಭದಲ್ಲಿ 500 ಪ್ಯಾಲೆಸ್ತೀನಿಯರು ಜೀವತೆತ್ತಿದ್ದಾರೆ. ಈ ಘಟನೆ ಇಡೀ ಜಗತ್ತಿನ ಆಕ್ರೋಶಕ್ಕೂ ಕಾರಣವಾಗಿದೆ.

ಮಂಗಳವಾರ ರಾತ್ರಿಯ ವರದಿಗಳಂತೆ ಈ ದಾಳಿಗೆ ಇಸ್ರೇಲ್‌ ಸೇನೆ ಕಾರಣ ಎಂದು ಹೇಳಲಾಗಿತ್ತು. ಆದರೆ ಇಸ್ರೇಲ್‌ ಸರಕಾರ, ಕೆಲವೊಂದು ವೀಡಿಯೋ ಮತ್ತು ಆಡಿಯೋ ಬಿಡುಗಡೆ ಮಾಡಿ, ನಾವು ಆಸ್ಪತ್ರೆ ಮೇಲೆ ದಾಳಿ ನಡೆಸಿಲ್ಲ. ಇದಕ್ಕೆ ಬದಲಾಗಿ ಹೊಸದಾಗಿ ಹುಟ್ಟಿಕೊಂಡಿರುವ ಉಗ್ರ ಸಂಘಟನೆಯೊಂದು ಇಸ್ರೇಲ್‌ ಮೇಲೆ ದಾಳಿ ಮಾಡಲು ಹೋಗಿ, ತನ್ನದೇ ನೆಲದ ಆಸ್ಪತ್ರೆ ಮೇಲೆ ಬಾಂಬ್‌ ಹಾಕಿದೆ ಎಂದು ಸ್ಪಷ್ಟನೆ ನೀಡಿದೆ. ಇಸ್ರೇಲ್‌ ಸರಕಾರ ಮತ್ತು ಸೇನೆಯ ಹೇಳಿಕೆಯನ್ನು ಆಧರಿಸಿಯೇ, ಅಮೆರಿಕ ಅಧ್ಯಕ್ಷ ಜೋ ಬೈಡೆನ್‌, ಆಸ್ಪತ್ರೆ ಮೇಲಿನ ದಾಳಿ ಹಿಂದೆ ಬೇರೊಂದು ಗುಂಪಿನ ಕೈವಾಡವಿದೆ ಎಂದು ಹೇಳಿದ್ದಾರೆ.

ಆದರೆ ಇಲ್ಲಿ ವಿಶ್ಲೇಷಣೆಯಾಗಬೇಕಿರುವುದು, ಏನೂ ಅರಿಯದ ಮುಗ್ಧರ ಸಾವು. ಇಲ್ಲಿ ಬಾಂಬ್‌ ಹಾಕಿದ್ದು ಯಾರೇ ಆಗಿದ್ದರೂ ಅವರು ಶಿಕ್ಷೆಗೆ ಅರ್ಹರು. ಅಂತಾರಾಷ್ಟ್ರೀಯ ಕಾನೂನಿನ ಅಡಿ ಶಿಕ್ಷೆ ಕೊಡಿಸಲೇಬೇಕು. ಜನವಸತಿ ಕೇಂದ್ರಗಳು, ಆಸ್ಪತ್ರೆಗಳು, ಶಾಲೆಗಳನ್ನು ಗುರಿಯಾಗಿಸಿ ದಾಳಿ ನಡೆಸುವುದು ಅಕ್ಷ್ಯಮ್ಯ ಅಪರಾಧ. ಯುದ್ಧದ ಹೆಸರಿನಲ್ಲಿ ಮುಗ್ಧರ ಹತ್ಯೆ ಸಲ್ಲದು. ಈ ಬಗ್ಗೆ ತನಿಖೆಯಾಗಲೇಬೇಕಾಗಿದೆ. ಜತೆಗೆ ಈಗಿನ ಯುದ್ಧಕ್ಕೆ ಒಂದು ತಾರ್ಕಿಕ ಅಂತ್ಯ ಕೊಡಿಸಬೇಕಾದುದು ಅಂತಾರಾಷ್ಟ್ರೀಯ ಸಮುದಾಯದ ಕರ್ತವ್ಯವಾಗಿದೆ.

ಟಾಪ್ ನ್ಯೂಸ್

GalaxyCI

GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ

BJP is certain to win in 300 constituencies: Prashant Kishore’s future

Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್‌ ಕಿಶೋರ್‌ ಭವಿಷ್ಯ

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

ಪಿಒಕೆ

Editorial; ಪಿಒಕೆ: ಭುಗಿಲೆದ್ದ ಜನಾಕ್ರೋಶ ಇಕ್ಕಟ್ಟಿಗೆ ಸಿಲುಕಿದ ಪಾಕಿಸ್ಥಾನ

1—–ewqeq

Health; ರೋಗಮುಕ್ತ ಸಮಾಜಕ್ಕಾಗಿ ಆರೋಗ್ಯಯುತ ಆಹಾರ ಕ್ರಮ

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

GalaxyCI

GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ

BJP is certain to win in 300 constituencies: Prashant Kishore’s future

Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್‌ ಕಿಶೋರ್‌ ಭವಿಷ್ಯ

47 Lakhs collected for Kanhaiya Campaign!

Kanhaiya Kumar ಕ್ಯಾಂಪೇನ್‌ಗೆ 47 ಲಕ್ಷ ರೂ. ದೇಣಿಗೆ ಸಂಗ್ರಹ!

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Balagopal

Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.