Kantaraja’s Report: ನ.2ಕ್ಕೆ ಒಕ್ಕಲಿಗರ ಸಭೆ
Team Udayavani, Oct 19, 2023, 11:24 PM IST
ಬೆಂಗಳೂರು: ಕಾಂತರಾಜ ಆಯೋಗದ ವರದಿ ಜಾರಿ ವಿಚಾರದಲ್ಲಿ ಅಪಸ್ವರ ಎತ್ತಿರುವ ರಾಜ್ಯ ಒಕ್ಕಲಿಗರ ಸಂಘ, ಯಾವುದೇ ಕಾರಣಕ್ಕೂ ವರದಿ ಜಾರಿ ಮಾಡಬಾರದು ಎಂದು ಸರಕಾರದ ಮೇಲೆ ಒತ್ತಡ ಹಾಕುವ ತಂತ್ರರೂಪಿಸಿದೆ. ಒಕ್ಕಲಿಗ ಸಮುದಾಯದ ಸ್ವಾಮೀಜಿಗಳ ಮೂಲಕ ಸರಕಾರಕ್ಕೆ ಸಂದೇಶ ರವಾನಿಸುವ ಆಲೋಚನೆಯಲ್ಲಿದೆ. ಈ ಸಂಬಂಧ ಚರ್ಚಿಸಲು ನ.2ರಂದು ಒಕ್ಕಲಿಗ ಮುಖಂಡರ ಸಭೆ ನಡೆಯಲಿದೆ.
ಈ ವಿಚಾರವಾಗಿಯೇ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸ್ಫಟಿಕಪುರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ| ನಂಜಾವ ಧೂತ ಸ್ವಾಮೀಜಿ ಮತ್ತು ಚಂದ್ರಶೇಖರ ಸ್ವಾಮೀಜಿ ಸಮ್ಮುಖದಲ್ಲಿ ಎಲ್ಲ ರಾಜಕೀಯ ಪಕ್ಷಗಳ ಮುಖಂಡರ ಸಭೆ ಕರೆದು ಕಾಂತರಾಜ ಆಯೋಗದ ವರದಿ ಬಗ್ಗೆ ಚರ್ಚೆ ಹಮ್ಮಿಕೊಂಡಿದೆ. ಈ ಸಭೆಯಲ್ಲಿ ಕಾಂತರಾಜ ಆಯೋಗದ ವರದಿಯ ಸಾಧಕ-ಬಾಧಕಗಳ ಬಗ್ಗೆ ದೊಡ್ಡಮಟ್ಟದ ಚರ್ಚೆ ನಡೆದು ತೀರ್ಮಾನಕ್ಕೆ ಬರುವ ಸಾಧ್ಯತೆ ಇದೆ.
ಶ್ರೀಗಳ ಭೇಟಿ
ರಾಜ್ಯ ಒಕ್ಕಲಿಗ ಮೀಸಲಾತಿ ಹೋರಾಟ ಸಮಿತಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ ಅವರನ್ನು ಗುರುವಾರ ಭೇಟಿ ಮಾಡಿ ಸಮಾಲೋಚಿಸಿತು. ಕಾಂತರಾಜ ಆಯೋಗದ ವಿಚಾರವಾಗಿ ನ.2ರಂದು ಒಕ್ಕಲಿಗ ಸಂಘದಲ್ಲಿ ಹಮ್ಮಿಕೊಂಡಿರುವ ಸಭೆಯ ಸಾನಿಧ್ಯ ವಹಿಸುವಂತೆ ಮನವಿ ಮಾಡಿತು. ಶ್ರೀಗಳು ಸಭೆಯಲ್ಲಿ ಭಾಗವಹಿಸಲು ಸಮ್ಮತಿ ನೀಡಿದ್ದಾರೆ ಎಂದು ಹೋರಾಟ ಸಮಿತಿ ತಿಳಿಸಿದೆ.
ಉಪ ಮುಖ್ಯಮಂತ್ರಿಗಳಿಗೆ ಆಹ್ವಾನ
ಈಗಾಗಲೇ ಒಕ್ಕಲಿಗ ಸಂಘ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂಗಳಾದ ಎಚ್.ಡಿ.ಕುಮಾರಸ್ವಾಮಿ, ಡಿ.ವಿ.ಸದಾನಂದ ಗೌಡ, ಮಾಜಿ ಸಚಿವರಾದ ಆರ್.ಅಶೋಕ್, ಅಶ್ವತ್ಥ ನಾರಾಯಣ, ಗೋಪಾಲಯ್ಯ ಸಹಿತ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಲ್ಲಿರುವ ಒಕ್ಕಲಿಗ ಶಾಸಕರಿಗೆ ಆಹ್ವಾನ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ
PU ಕಂಪ್ಯೂಟರ್ ಸೈನ್ಸ್, ಸೈಕಾಲಜಿಗೂ ಎನ್ಸಿಇಆರ್ಟಿ ಪಠ್ಯ
Bengaluru-Mysuru Expressway; 15 ದಿನಗಳಲ್ಲಿ 12 ಸಾವಿರ ವಾಹನಗಳಿಗೆ ದಂಡ!
Kota ಮೇಲ್ಮನೆ ಸ್ಥಾನ ನಳಿನ್ ಕುಮಾರ್ಗೆ ? ವಿಧಾನಸಭೆ ಮೂಲಕ ಪರಿಷತ್ ಪ್ರವೇಶಿಸಲು ಯತ್ನ
Karnataka ಶಿಕ್ಷಣ ವ್ಯವಸ್ಥೆ ಹಾಳು ಮಾಡಿದ್ದೇ ಸರ್ಕಾರದ ಸಾಧನೆ: ಸುರೇಶ್ ಕುಮಾರ್
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ
Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ
ಇನ್ಸ್ಪೆಕ್ಟರ್ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್ ಸೆರೆ
Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ
Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್ ಮಹಲ್ ಪ್ರತಿಸ್ಪರ್ಧಿ