Court ಮಾನಹಾನಿ ಹೇಳಿಕೆಗೆ ತಡೆ ನೀಡಿದ ಬಂಟ್ವಾಳ ನ್ಯಾಯಾಲಯ
Team Udayavani, Oct 21, 2023, 12:03 AM IST
ಬಂಟ್ವಾಳ: ವ್ಯಕ್ತಿಯೊಬ್ಬರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿದ್ದ ಮಾನಹಾನಿಕಾರಕ ಸಂದೇಶಗಳ ವಿರುದ್ಧ ಅವರು ಬಂಟ್ವಾಳ ಪ್ರಧಾನ ಸಿವಿಲ್ ನ್ಯಾಯಾಲಯಕ್ಕೆ ನೀಡಿದ ದೂರಿನಂತೆ ನ್ಯಾಯಾಲಯವು ಯಾವುದೇ ಮಾನಹಾನಿ ಹೇಳಿಕೆಗಳನ್ನು ಪ್ರಕಟಿಸದಂತೆ ತಡೆಯಾಜ್ಞೆ ನೀಡಿದೆ.
ಪುಂಜಾಲಕಟ್ಟೆ ನಿವಾಸಿ ಪ್ರಶಾಂತ್ ಎಂ. ಅವರು ತಮ್ಮ ವಿರುದ್ಧ ಪದ್ಮನಾಭ ಸಾಮಂತ ಎಂಬ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿ ಸಂದೇಶ ಹರಡುತ್ತಿದ್ದಾರೆ ಎಂದು ಆರೋಪಿಸಿ ನ್ಯಾಯಾಲಯದಲ್ಲಿ ಮಾನನಷ್ಟ ಪ್ರಕರಣ ದಾಖಲಿಸಿದ್ದರು. ಅವರ ದೂರಿನ ಆಧಾರದಲ್ಲಿ ನ್ಯಾಯಾಲಯವು ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಯಾವುದೇ ರೀತಿಯ ಅವಹೇಳನಕಾರಿ ಅಸಭ್ಯ ಹೇಳಿಕೆಗಳನ್ನು ಪ್ರಕಟಿಸಿದಂತೆ ತಡೆಯಾಜ್ಞೆ ನೀಡಿದೆ. ದೂರುದಾರರ ಪರ ಬಿ.ಸಿ. ರೋಡಿನ ವಕೀಲ ಅಶ್ವಥ್ ಎನ್. ಅವರು ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jayant Sinha: ಬಿಜೆಪಿ ನೀಡಿದ ಶೋಕಾಸ್ ನೋಟಿಸ್ ಗೆ ಸಂಸದ ಜಯಂತ್ ಸಿನ್ಹಾ ಹೇಳಿದ್ದೇನು?
Bidar: ಲಿಂಗಾಯತ ಮಹಾಮಠದ ಪೀಠಾಧ್ಯಕ್ಷರಾದ ಅಕ್ಕ ಅನ್ನಪೂರ್ಣ ತಾಯಿ ನಿಧನ
ಡ್ರಾ ಮಾಡಿದ್ದು 5000 ಬಂದಿದ್ದು 4040; ಇಂಡಿಯಾ ATM ನಲ್ಲಿ ಹಣ ಡ್ರಾ ಮಾಡಿದ ಶಿಕ್ಷಕಿಗೆ ಶಾಕ್
Pawan Singh: ಮಾಜಿ ಸಚಿವ ಉಪೇಂದ್ರ ವಿರುದ್ಧ ಸ್ಪರ್ಧೆ: ಬಿಜೆಪಿ ಮುಖಂಡ ಪವನ್ ವಜಾ
Lok Sabha Polls: ಮೇ 25ರಂದು ಹಂತ 6ರ ಮತದಾನ: ಇಂದು ಬಹಿರಂಗ ಪ್ರಚಾರ ಅಂತ್ಯ