Koratagere : ದಸರಾ ಹಬ್ಬಕ್ಕೆ ಗೊಂಬೆಗಳ ಸಂಭ್ರಮದ ಮೆರುಗು

ಮನೆಯಲ್ಲೇ 1ಸಾವಿರಕ್ಕೂ ಅಧಿಕ ಗೊಂಬೆಗಳ ಪ್ರತಿಷ್ಠಾಪನೆ

Team Udayavani, Oct 22, 2023, 6:58 PM IST

1-ssa-dsa

ಕೊರಟಗೆರೆ:ಕಲ್ಪತರು ಜಿಲ್ಲೆಯಲ್ಲಿ ಮೈಸೂರು ಮತ್ತು ಚನ್ನಪಟ್ಟಣದ ದಸರಾ ಗೊಂಬೆಗಳ ಹಬ್ಬಕ್ಕೆ ವಿಶೇಷ ಸ್ಥಾನವಿದೆ. ನವರಾತ್ರಿ ಹಬ್ಬದ ಪ್ರಯುಕ್ತ ಗ್ರಾಮೀಣ ಸೊಗಡಿನಲ್ಲಿ 9ದಿನ ಗೊಂಬೆಗಳ ಕೂರಿಸಿ ಸಂಭ್ರಮಿಸುವುದೇ ವಿಶೇಷ. ಚೆಂದದ ಗೊಂಬೆಗಳನ್ನು ಕೂರಿಸಿ ಅಲಂಕರಿಸುವ ಮೂಲಕ ಮೈಸೂರು ದಸರಾವನ್ನು ತುಮಕೂರು ಜಿಲ್ಲೆ ಸೇರಿದಂತೆ ಕೊರಟಗೆರೆ ಕ್ಷೇತ್ರದಾದ್ಯಂತ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿದೆ.
ನವರಾತ್ರಿಹಬ್ಬದ ಪ್ರಯುಕ್ತ ಪ್ರತಿವರ್ಷ ಪಾಡ್ಯ ದಿನದಿಂದಲೇ ಗೊಂಬೆಗಳನ್ನು ಜೋಡಿಸಿ ಪೂಜಿಸುತ್ತಾ ಬರುವುದು ಸಂಪ್ರದಾಯ. 150ವರ್ಷದ ಹಿಂದೆಯ ಇತಿಹಾಸವಿರುವ ಕಥೆಗಳು, ಮಹಾಭಾರತ ಮತ್ತು ರಾಮಾಯಣದ ಗೊಂಬೆಗಳೇ ಮಕ್ಕಳ ಕಣ್ಮನ ಸೆಳೆಯಲಿದೆ. ಪ್ರತಿನಿತ್ಯವು ವಿಶೇಷಪೂಜೆ ಮತ್ತು ಭಜನೆ ಕಾರ್ಯಕ್ರಮ ಸೇರಿದಂತೆ ಮಕ್ಕಳಿಗೆ ದಿನಕ್ಕೊಂದು ಸಿಹಿತಿಂಡಿ ನೀಡುವುದು ಸಹ ವಾಡಿಕೆಯಾಗಿದೆ.

50ಬಗೆಯ ಗೊಂಬೆಗಳ ವೈಶಿಷ್ಟತೆ..
ದಸರಾ ಹಬ್ಬದ ಪ್ರಾರಂಭದ ದಿನವೇ ಮನೆಯಲ್ಲಿ ಕೂರಿಸುವ ಒಂದೊಂದು ಬೊಂಬೆಗಳು ಒಂದೊಂದು ರೀತಿಯ ವಿಶೇಷ ಇತಿಹಾಸದ ಕಥೆಗಳನ್ನು ಹೇಳುತ್ತವೆ. ನಮ್ಮ ಸಂಸ್ಕೃತಿ , ಧಾರ್ಮಿಕ ಪರಂಪರೆ, ಸಾಹಿತ್ಯ ಆಚರಣೆ, ವೈಚಾರಿಕತೆ, ವಿಜ್ಞಾನ, ಪೌರಾಣಿಕ ಕಥೆ, ಕೃಷಿ, ಚಂದ್ರಯಾನ-3, ಸನಾತನ ಧರ್ಮ ಹೀಗೆ ವಿಷಯ ಮತ್ತು ಪ್ರಸ್ತುತ ವಿದ್ಯಮಾನಕ್ಕೆ ತಕ್ಕಂತೆ ಗೊಂಬೆಗಳನ್ನು ಸಿದ್ದತೆ ಮಾಡಲಾಗಿದೆ. ಅಲ್ಲದೇ ನಮ್ಮ ನಾಡಿನ ಸಂಸ್ಕೃತಿ ಮತ್ತು ಐತಿಹಾಸಿದ ಇತಿಹಾಸ ಸಾರುವ ಗೊಂಬೆಗಳಿಗೆ ಪ್ರಮುಖ ಸ್ಥಾನ ನೀಡಲಾಗಿದೆ.

ಹೆಣ್ಣು ಮಕ್ಕಳಿಗೆ ದಸರಾವೇ ವಿಶೇಷ
ನವರಾತ್ರಿಯು ಹೆಣ್ಣು ಮಕ್ಕಳಿಗೆ ಇಷ್ಟವಾಗುವ ಹಬ್ಬ. ಮಹಿಳೆಯರು 9ದಿನವು 9ರೀತಿಯ ಬಣ್ಣ ಬಣ್ಣದ ಉಡುಗೆ ತೊಟ್ಟು ಸಂಭ್ರಮಿಸುವ ವಿಶೇಷ ಹಬ್ಬ. ಪ್ರತಿದಿನ ಬನ್ನಿ ಮರ ಸೇರಿದಂತೆ ನಾನಾ ದೇವಾಸ್ಥಾನಗಳಿಗೆ ಬೆಳಗಿನ ಜಾವವೇ ತೆರಳಿ ಪೂಜೆ ಮಾಡುವುದೇ ವಿಶೇಷ. ಮನೆಗಳಲ್ಲಿ ಗೊಂಬೆಕೂರಿಸಿ ಸಿಂಗಾರ ಮಾಡಿ ಹಬ್ಬದ ಸಂಭ್ರಮ ಹೆಚ್ಚಿಸುತ್ತಾರೆ. ಗೃಹಿಣಿಯರು ತವರಿನಿಂದ ತಂದ ಪಟ್ಟದ ಗೊಂಬೆಗಳನ್ನು ಇಟ್ಟು ಪೂಜಿಸುವುದು ವಿಶೇಷವಾಗಿ ಕಾಣಸಿಗಲಿದೆ.

ಕೊರಟಗೆರೆ ತಾಲೂಕು ಹೊಳವನಹಳ್ಳಿ ಲೇ.ರಮಾನಂದ್-ನಾಗಮಣಿ ದಂಪತಿಗಳ ಮನೆಯಲ್ಲಿ 1ಸಾವಿರಕ್ಕೂ ಅಧಿಕ ಗೊಂಬೆಗಳನ್ನು ಪ್ರತಿಷ್ಠಾಪಿಸಲಾಗಿದೆ. ಪಟ್ಟದ ಗೊಂಬೆಗೆ ರಾಜ-ರಾಣಿಯಂತೆ ಅಲಂಕಾರ ಮಾಡಿ ಅಗ್ರಸ್ಥಾನದಲ್ಲಿ ಮಂಟಪ ನಿರ್ಮಿಸಿ ಗೊಂಬೆಗಳನ್ನು ಕೂರಿಸಲಾಗಿದೆ. ಆಧುನಿಕತೆ ಬೆಳೆದಂತೆ ಪ್ರಸ್ತುತ ಪಿಳಿಗೆಯ ಮಕ್ಕಳಿಗೆ ನಮ್ಮ ಸಂಸ್ಕøತಿ ಮತ್ತು ಸಂಪ್ರದಾಯ ಪರಿಚಯ ಮಾಡಬೇಕಿದೆ ಎಂಬುದು ಹಿರಿಯರ ಅಭಿಪ್ರಾಯವಾಗಿದೆ.

1ಸಾವಿರಕ್ಕೂ ಅಧಿಕ ಗೊಂಬೆಗಳ ಪ್ರದರ್ಶನ..
ರಾಮಾಯಣ, ಮಹಾಭಾರತ, ಬ್ರಹ್ಮೋತ್ಸವ, ಶ್ರೀನಿವಾಸ ಪದ್ಮಾವತಿ, ರೈತರ ದಿನಚರಿ, ಮದುವೆ ಸಂಭ್ರಮ, ರಾಮ ಪಟ್ಟಾಭಿಷೇಕ, ಸೀತಾರಾಮ ಕಲ್ಯಾಣ, ಕುಂಬಕರಣ, ಕಲ್ಯಾನೋತ್ಸವ, ಶ್ರೀಸರಸ್ಪತಿ, ಶ್ರೀರಾಮ ಆಂಜನೇಯ ಗುಹೆ, ಶ್ರೀಅಷ್ಟಲಕ್ಷ್ಮೀ, ದಾರ್ಶನಿಕರು, ಮದುವೆ ಸಂಭ್ರಮ, ಘಟೋದ್ಗಜ, ನೃತ್ಯ ಪ್ರದರ್ಶನ, ಉಲಗ ಅಳಂದ ಪೆರುಮಾಳ್, ಶ್ರೀಕೃಷ್ಣಲೀಲೆ, ಗೋವರ್ಧನ ಗಿರಿಧಾಮ, ನಮ್ಮೂರಶಾಲೆ, ಲವಕುಶ, ವರ್ತಕ ಗಣಪತಿ, ನಾಧಮುನಿಗೋಷ್ಟಿ, ಚಂದ್ರಯಾನ-3 ಬಿಂಬಿಸುವ 1ಸಾವಿರಕ್ಕೂ ಅಧಿಕ ಗೊಂಬೆಗಳ ಮುಖ್ಯಶಿಕ್ಷಕ ಲೇ.ರಮಾನಂದ ಅವರ ಮನೆಯಲ್ಲಿ ಅನಾವರಣಗೊಂಡಿವೆ.

ಬ್ರಹೋತ್ಸವ, ಜಾತ್ರೆ, ಹಬ್ಬ, ಸರಕಾರಿ ಶಾಲೆ, ಮಧುವೆ ಸಂಭ್ರಮ, ಇತಿಹಾಸದ ಕಥೆ, ರೈತರ ಜೀವನ, ಕಲಿಯುಗ ಮತ್ತು ಚಂದ್ರಯಾನ-3ರ ಬೊಂಬೆಗಳು ಮಕ್ಕಳಿಗೆ ಪ್ರೀಯಪಾತ್ರ. ರಾಮಾಯಣ-ಮಹಾಭಾರತ ನೆನಪಿಸುವ ಸನಾತನ ಧರ್ಮದ ಪರಂಪರೆಯ ಗೊಂಬೆಗಳ ಪ್ರದರ್ಶನ ಅನಾವರಣ ಆಗಿವೆ. ನಮ್ಮ ದೇಶದ ಸಂಸ್ಕøತಿ ಮತ್ತು ಸನಾತನ ಧರ್ಮದ ಪರಿಚಯಿಸುವುದೇ ಗೊಂಬೆಗಳ ವಿಶೇಷ.
-ದೀಪ್ತಿ. ಶಿಕ್ಷಕಿ, ಹೊಳವನಹಳ್ಳಿ

ನಮ್ಮ ಮನೆಯ ದಸರಾ ಗೊಂಬೆಗಳಿಗೆ 150ವರ್ಷದ ಇತಿಹಾಸವಿದೆ. ನವರಾತ್ರಿ ಪ್ರಯುಕ್ತ ಗೊಂಬೆಗಳ ಪ್ರದರ್ಶನ ಪಾಡ್ಯಮಿಯಲ್ಲಿ ಪ್ರಾರಂಭವಾಗಿ ವಿಜಯದಶಮಿಗೆ ಮುಕ್ತಾಯ ಆಗಲಿದೆ. 9ದಿನಗಳ ಕಾಲ ವಿಶೇಷಪೂಜೆ ಮತ್ತು ಭಜನೆ ಕಾರ್ಯಕ್ರಮ ಜರುಗಲಿದೆ. 1ಸಾವಿರಕ್ಕೂ ಅಧಿಕ ಗೊಂಬೆಗಳ ರಕ್ಷಣೆ ಮತ್ತು ನಿರ್ವಹಣೆಯೇ ನಮಗೇ ದೊಡ್ಡ ಸವಾಲು. ನಮ್ಮ ದೇಶದ ಪರಂಪರೆ ಮತ್ತು ಸಂಸ್ಕøತಿಯು ಗೊಂಬೆಗಳ ಮೂಲಕ ಅನಾವರಣೆ ಗೊಂಡಿವೆ.

-ನಾಗಮಣಿ. ಗೃಹಿಣಿ, ಹೊಳವನಹಳ್ಳಿ.

ಟಾಪ್ ನ್ಯೂಸ್

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

4-Pavagada

Pavagada: ಸಿಡಿಲಿನ ಪರಿಣಾಮ ಹೊತ್ತಿ ಉರಿದ ದನದ ಕೊಟ್ಟಿಗೆ; ಸ್ಥಳದಲ್ಲಿಯೇ ಹಸು ಸಜೀವ ದಹನ

Tumkur: ಕೆರೆ ಹೂಳು ತೆಗೆಯಲು ರೈತರಿಂದ ಮಾಹಿತಿ ಪತ್ರ ಕಡ್ಡಾಯ: ಪ್ರಭು ಜಿ

Tumkur: ಕೆರೆ ಹೂಳು ತೆಗೆಯಲು ರೈತರಿಂದ ಮಾಹಿತಿ ಪತ್ರ ಕಡ್ಡಾಯ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.