Census: ಜಾತಿಗಣತಿ ಸ್ಲೋಗನ್ನಿಂದ ಹಿಂದೆಸರಿಯಿತೇ ಕಾಂಗ್ರೆಸ್?
Team Udayavani, Oct 24, 2023, 11:00 PM IST
ಬಿಹಾರದಲ್ಲಿ ಜಾತಿ ಗಣತಿ ವರದಿ ಬಿಡುಗಡೆಯಾದ ಬಳಿಕ ಪಂಚರಾಜ್ಯ ಚುನಾವಣೆಗಳು ಹಾಗೂ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಇದನ್ನೇ “ಅಸ್ತ್ರ’ವಾಗಿ ಬಳಸಿಕೊಂಡು ಬಿಜೆಪಿಯನ್ನು ಎದುರಿಸಲು ಮುಂದಾಗಿದ್ದ ಕಾಂಗ್ರೆಸ್, ಈಗ ತನ್ನ ನಡೆಗೆ ತಾನೇ “ಬ್ರೇಕ್” ಹಾಕಿಕೊಂಡಿದೆ. ಅ.9ರಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯ ಬಳಿಕ ಕಾಂಗ್ರೆಸ್ ನಾಯಕರು “ಜಾತಿಗಣತಿ” ಅಸ್ತ್ರದ ಪ್ರಯೋಗವನ್ನು ಕಡಿಮೆ ಮಾಡಿದ್ದಾರೆ.
ಬಿಹಾರ ಗಣತಿ ವರದಿ ಬಿಡುಗಡೆಯಾಗುತ್ತಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು “ಜಿತ್ನಾ ಆಬಾದಿ, ಉತ್ನಾ ಹಕ್” (ಜನಸಂಖ್ಯೆಗೆ ಅನುಗುಣವಾಗಿ ಹಕ್ಕುಗಳು) ಎಂಬ ಉದ್ಘೋಷ ಹೊರಡಿಸಿದ್ದರು. ಅಲ್ಲದೆ ಅನಂತರ ತಾವು ಹೋದ ಕಡೆಯಲ್ಲೆಲ್ಲ ಅವರು ಇದೇ ಸ್ಲೋಗನ್ ಪುನರುಚ್ಚರಿಸುತ್ತಾ, ದೇಶಾದ್ಯಂತ ಜಾತಿಗಣತಿ ನಡೆಸುವ ವಾಗ್ಧಾನವನ್ನೂ ನೀಡುತ್ತಿದ್ದರು. ಆದರೆ “ಜಾತಿಗಣತಿ” ಅಸ್ತ್ರವು ತಮಗೇ ತಿರುಗುಬಾಣವಾಗುವ ಲಕ್ಷಣಗಳು ಗೋಚರಿಸುತ್ತಿದ್ದಂತೆ ಕಾಂಗ್ರೆಸ್ ಉಲ್ಟಾ ಹೊಡೆದಿದೆ. ಅ.9ರ ಸಿಡಬ್ಲ್ಯುಸಿ ಸಭೆಯಲ್ಲಿ ಪಕ್ಷದ ಅನೇಕರು ಈ ಸ್ಲೋಗನ್ ಬಗ್ಗೆ ಆಕ್ಷೇಪವೆತ್ತಿದ್ದಾರೆ ಎನ್ನಲಾಗಿದೆ. ಈ ನಡೆಯು ದಕ್ಷಿಣದ ರಾಜ್ಯಗಳಲ್ಲಿ ಕಾಂಗ್ರೆಸ್ಗೆ ಹೊಡೆತ ನೀಡಬಹುದು ಎಂದು ಕೆಲವು ಹಿರಿಯ ನಾಯಕರು ಅಭಿಪ್ರಾಯಪಟ್ಟಿದ್ದಾರೆ.
ಅಲ್ಲದೇ ಕಾಂಗ್ರೆಸ್ ಈಗ ಜಾತಿಯ ವಿಚಾರವಿಟ್ಟುಕೊಂಡು ಹೋರಾಟ ಆರಂಭಿಸಿದರೆ, ಬಿಜೆಪಿಯು ಧರ್ಮದ ಮಾನದಂಡದಲ್ಲಿ ಹೋರಾಟ ಶುರುವಿಟ್ಟುಕೊಂಡರೆ ಏನು ಮಾಡುವುದು ಎಂಬ ಪ್ರಶ್ನೆಯನ್ನೂ ಕೆಲವರು ಹಾಕಿದ್ದಾರೆ. ಆರಂಭದಲ್ಲೇ ಕಾಂಗ್ರೆಸ್ ಹಿರಿಯ ನಾಯಕ ಅಭಿಷೇಕ್ ಮನು ಸಿಂ Ì ಅವರು ಟ್ವೀಟ್(ಎಕ್ಸ್) ಮಾಡಿ, ಜಾತಿಗಣತಿಯ ಪ್ರತಿಕೂಲ ಪರಿಣಾಮಗಳ ಬಗ್ಗೆ ಎಚ್ಚರಿಸಿ, ಅನಂತರ ಟ್ವೀಟ್ ಡಿಲೀಟ್ ಮಾಡಿದ್ದರು. ಈ ಎಲ್ಲ ಬೆಳವಣಿಗೆಗಳ ಬಳಿಕ ಈ ವಿಚಾರದಲ್ಲಿ ತತ್ಕ್ಷಣ ಮುಂದಡಿ ಇಡದಂತೆ ಹಾಗೂ ಸ್ಲೋಗನ್ ಬಳಕೆ ಕಡಿಮೆಮಾಡುವಂತೆ ಪಕ್ಷದ ನಾಯಕರಿಗೆ ಹೈಕಮಾಂಡ್ನಿಂದ ಸೂಚನೆ ರವಾನೆಯಾಗಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್